Homeಮುಖಪುಟಕಾಂಗ್ರೆಸ್‌ಗೆ ನ್ಯಾಯಯುತ, ವಾಸ್ತವಿಕ ನೆಲೆಗಟ್ಟಿನ ಅಧ್ಯಕ್ಷರ ಅಗತ್ಯವಿದೆ: ಕಪಿಲ್ ಸಿಬಲ್

ಕಾಂಗ್ರೆಸ್‌ಗೆ ನ್ಯಾಯಯುತ, ವಾಸ್ತವಿಕ ನೆಲೆಗಟ್ಟಿನ ಅಧ್ಯಕ್ಷರ ಅಗತ್ಯವಿದೆ: ಕಪಿಲ್ ಸಿಬಲ್

ಕಾಂಗ್ರೆಸ್ ಪಕ್ಷಕ್ಕೆ ಈಗ ನ್ಯಾಯಯುತವಾದ ಮತ್ತು ವಾಸ್ತವಿಕ ನೆಲೆಗಟ್ಟಿನ ಆಧಾರದಲ್ಲಿ ಅಧ್ಯಕ್ಷರ ಅಗತ್ಯವಿದೆ" ಎಂದು ಉಲ್ಲೇಖಿಸುತ್ತಾ, ಪತ್ರದಲ್ಲಿ ಪಟ್ಟಿಮಾಡಲಾಗಿರುವ ಅಂಶಗಳನ್ನು ಚರ್ಚಿಸಿ, ಆದಷ್ಟು ಬೇಗ ಪರಿಹರಿಸಬೇಕು.

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷರು ಮತ್ತು ಪಕ್ಷದೊಳಗೆ ಆಮೂಲಾಗ್ರ ಬದಲಾವಣೆಯಾಗಬೇಕೆಂದು 23 ಜನ ಮುಖಂಡರು ಬರೆದಿರುವ ಪತ್ರದ ಬಗ್ಗೆ ಯಾರಿಗೂ ಎಳ್ಳಷ್ಟೂ ಕಾಳಜಿಯಿಲ್ಲ ಎಂದು ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಕಳವಳ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ (ಸಿಡಬ್ಲ್ಯುಸಿ) ಪತ್ರ ಬರೆದವರ ಮೇಲೆ ವಾಗ್ದಾಳಿ ಮಾಡಿದಾಗ, ಯಾವುದೇ ನಾಯಕರು ಒಂದು ಹೆಜ್ಜೆ ಮುಂದೆ ಬಂದು ಮಾತನಾಡಲಿಲ್ಲ ಎಂದು ಭಿನ್ನಮತೀಯ ಪತ್ರ ಬರೆದವರಲ್ಲಿ ಪ್ರಮುಖರಾದ ಕಪಿಲ್ ಸಿಬಲ್ ಹೇಳಿದ್ದಾರೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

“ಕಾಂಗ್ರೆಸ್ ಪಕ್ಷಕ್ಕೆ ಈಗ ನ್ಯಾಯಯುತವಾದ ಮತ್ತು ವಾಸ್ತವಿಕ ನೆಲೆಗಟ್ಟಿನ ಆಧಾರದಲ್ಲಿ ಅಧ್ಯಕ್ಷರ ಅಗತ್ಯವಿದೆ” ಎಂದು ಉಲ್ಲೇಖಿಸುತ್ತಾ, ಪತ್ರದಲ್ಲಿ ಪಟ್ಟಿಮಾಡಲಾಗಿರುವ ಅಂಶಗಳನ್ನು ಚರ್ಚಿಸಿ, ಆದಷ್ಟು ಬೇಗ ಪರಿಹರಿಸಬೇಕು ಎಂದು ಹೇಳಿದರು.

“ಬಿಜೆಪಿ ಸಂವಿಧಾನವನ್ನು ಛಿದ್ರಗೊಳಿಸುತ್ತಿದೆ ಮತ್ತು ಪ್ರಜಾಪ್ರಭುತ್ವದ ಅಡಿಪಾಯವನ್ನು ನಾಶಪಡಿಸುತ್ತಿದೆ ಎಂದು ಆರೋಪಿಸುವ ಕಾಂಗ್ರೆಸ್ ಪಕ್ಷವು ತನ್ನ ಸಂವಿಧಾನಕ್ಕೇ ಬದ್ದವಾಗಿಲ್ಲ. ನಮಗೆ ಬೇರೇನೂ ಬೇಡ, ನಮ್ಮ ಪಕ್ಷದ ಸಂವಿಧಾನವನ್ನು ಪಾಲಿಸಿದರೆ ಅಷ್ಟೇ ಸಾಕು” ಎಂದು ಸ್ಪಷ್ಟವಾದ ವಿರೋಧವನ್ನು ವ್ಯಕ್ತಪಡಿಸಿದರು.

ಇದನ್ನೂ ಓದಿ: ಆಂತರಿಕ ಚುನಾವಣೆ ನಡೆಯದಿದ್ದರೆ, ಕಾಂಗ್ರೆಸ್ ಗೆ ಇನ್ನೂ 50 ವರ್ಷ ವಿರೋಧಪಕ್ಷದ ಸ್ಥಾನವೇ ಗತಿ!: ಗುಲಾಮ್ ನಬೀ

“ಪ್ರಸ್ತುತ ದೇಶದ ರಾಜಕಾರಣವು ನಿಷ್ಠೆಯ(loyalty) ಮೇಲೆ ಆಧರಿಸಿದೆ. ಹಾಗಾಗಿ ಈಗ ‘loyalty plus’ ಬೇಕಾಗಿದೆ. ಪ್ಲಸ್ ಎಂದರೆ, ಅರ್ಹತೆ, ಒಳಗೊಳ್ಳುವಿಕೆ, ಸ್ಪಷ್ಟ ಉದ್ದೇಶಕ್ಕೆ ಬದ್ಧತೆ ಮತ್ತು ಒಬ್ಬರ ಮಾತನ್ನು ಕೇಳಿಸಿಕೊಳ್ಳುವುದೇ ಆಗಿದೆ. ರಾಜಕೀಯ ಎಂದರೆ ಹೀಗಿರಬೇಕು” ಎಂದು ಕಪಿಲ್ ಸಿಬಲ್ ವಿವರಿಸಿದರು.

ಪತ್ರಕ್ಕೆ ಸಹಿ ಮಾಡಿದವರನ್ನು ಕೆಲವರು ‘ದೇಶದ್ರೋಹಿಗಳು’ ಎಂದು ಕರೆಯಲಾಗುತ್ತಿದೆ. ಆದರೆ ಪತ್ರದ ಭಾಷೆಯ ಉನ್ನತವಾಗಿದೆ. ಹಾಗಾಗಿ, ಕಾಂಗ್ರೆಸ್ ಪಕ್ಷವನ್ನು ಪುನಶ್ಚೇತನಗೊಳಿಸುವ ಬಯಕೆಯನ್ನು ದೇಶದ ಹಲವು ಜನರು ಶ್ಲಾಘಿಸಿದ್ದಾರೆ ಎಂದು ಕಪಿಲ್ ಸಿಬಲ್ ಹೇಳಿದರು.

ಆಗಸ್ಟ್ 24 ರಂದು, ಸಂಸದರು ಮತ್ತು ಮಾಜಿ ಮಂತ್ರಿಗಳು ಸೇರಿದಂತೆ 23 ಕಾಂಗ್ರೆಸ್ ಮುಖಂಡರು ಪಕ್ಷದ ಹಂಗಾಮಿ ಮುಖ್ಯಸ್ಥೆ ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ, ‘ವ್ಯಾಪಕ ಸುಧಾರಣೆ, ನ್ಯಾಯಯುತ ಆಂತರಿಕ ಚುನಾವಣೆ, ಸಾಮೂಹಿಕ ನಿರ್ಧಾರ ತೆಗೆದುಕೊಳ್ಳುವಿಕೆ ಮತ್ತು ಪೂರ್ಣಕಾಲಿಕ ನಾಯಕತ್ವ’ದ ಬಗ್ಗೆ ಬೇಡಿಕೆ ಇಟ್ಟಿದ್ದರು.

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ (ಸಿಡಬ್ಲ್ಯುಸಿ) ಸಭೆಯಲ್ಲಿ ಪತ್ರ ಬರೆದಿರುವವರ ಮೇಲೆ ವಾಗ್ದಾಳಿ ಮಾಡಲಾಯಿತು. ಈ ಸಭೆಯಲ್ಲಿ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಇಬ್ಬರೂ ಹಾಜರಿದ್ದರು. ಪತ್ರ ಬರೆದಿರುವವರನ್ನು ಖಂಡಿಸಿದ್ದನ್ನು ಬಿಟ್ಟರೆ, ಪತ್ರದಲ್ಲಿನ ವಿಷಯಗಳ ಚರ್ಚೆ ಮುನ್ನೆಲೆಗೆ ಬರಲೇ ಇಲ್ಲ. ಭಿನ್ನಮತೀಯ ಪತ್ರಕ್ಕೆ ದೇಶದಾದ್ಯಂತ ಪರ-ವಿರೋಧದ ಚರ್ಚೆಗಳು ನಡೆಯುತ್ತಿವೆ.

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಅಧಿವೇಶನ ನಡೆಯುವವರೆಗೂ ಸೋನಿಯಾ ಗಾಂಧಿ ಮಧ್ಯಂತರ ಮುಖ್ಯಸ್ಥರಾಗಿ ಉಳಿಯುತ್ತಾರೆ ಎಂದು ಘೋಷಿಸುವುದರೊಂದಿಗೆ ಅಂದಿನ ಸಭೆ ಕೊನೆಗೊಂಡಿತ್ತು.


ಇದನ್ನೂ ಓದಿ: ಕಾಂಗ್ರೆಸ್‌ ಕಾರ್ಯಕಾರಿ ಸಮಿತಿ ಸಭೆ; ’ಭಿನ್ನಮತೀಯ’ ಪತ್ರದ ಬಗ್ಗೆ ಭಾರಿ ಚರ್ಚೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...