Homeಕರ್ನಾಟಕಕಾಂಗ್ರೆಸ್‌ಗೆ ಯಾರೂ ದೇಶ ಪ್ರೇಮದ ಪಾಠ ಹೇಳಿ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್

ಕಾಂಗ್ರೆಸ್‌ಗೆ ಯಾರೂ ದೇಶ ಪ್ರೇಮದ ಪಾಠ ಹೇಳಿ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್

- Advertisement -
- Advertisement -

ರಾಜ್ಯಸಭೆ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಕುರಿತು ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ತಿರುಗೇಟು ಕೊಟ್ಟಿದ್ದಾರೆ.

ಇಂದು (ಫೆ.28) ವಿಧಾನಸಭೆಯಲ್ಲಿ ಮಾತನಾಡಿದ ಅವರು, “ನಾವು ದೇಶ ಪ್ರೇಮದ ಬಗ್ಗೆ ಮಾತನಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ದೇಶ ಪ್ರೇಮ ಹೇಳಿಕೊಡಬೇಕಾ? ಕಾಂಗ್ರೆಸ್‌ನವರು ಇತರರಿಂದ ದೇಶ ಪ್ರೇಮದ ಪಾಠ ಕಲಿಯಬೇಕಾ? ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್‌ ಪಕ್ಷ ಎಷ್ಟು ಜನರನ್ನು ತ್ಯಾಗ ಮಾಡಿದೆ. ದೇಶ ಪ್ರೇಮ ಅಲ್ಲಿಂದ ಬರಲಿಲ್ವಾ ನಮಗೆ?. ಸ್ವಾತಂತ್ಯಕ್ಕೆ ಎಷ್ಟು ಜನರನ್ನು ಬಲಿ ಕೊಟ್ಟಿದ್ದೇವೆ ನಾವು, ಅದನ್ನು ಮರೆತಿಲ್ಲ ಎಂದರು.

“ಬಿಜೆಪಿಯ ಸುನಿಲ್ ಕುಮಾರ್ ಹೇಳಿದಂತೆ ಈಗಿನ ಕಾಂಗ್ರೆಸ್‌ ಬೇರೆ ಎಂಬುವುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ, ನಮ್ಮ ಭದ್ಧತೆ, ಧ್ಯೇಯ ಯಾವುದೂ ಬದಲಾಗಿಲ್ಲ. 1885ರಲ್ಲಿ ಪ್ರಾರಂಭವಾದ ಕಾಂಗ್ರೆಸ್‌ನ ಭದ್ಧತೆ ಇವತ್ತಿಗೂ ಕೂಡ ಬದಲಾಗಿಲ್ಲ. ನಮ್ಮ ಧ್ಯೇಯದ ಒಂದೇ ಒಂದು ಶಬ್ಧ ನಾವು ಬದಲಾಯಿಸಿಲ್ಲ. ದೇಶ ಪ್ರೇಮ ಕಾಂಗ್ರೆಸ್‌ನವರಿಗೆ ರಕ್ತಗತವಾಗಿ ಬಂದಿದೆ. ಹಾಗಂತ ಬಿಜೆಪಿಯವರಿಗೆ ಬಂದಿಲ್ಲ ಎನ್ನುತ್ತಿಲ್ಲ. ಆದರೆ, ಕಾಂಗ್ರೆಸ್‌ನವರಿಗೆ ದೇಶ ಪ್ರೇಮ ಹೇಳಿ ಕೊಡುವುದು ಅಷ್ಟು ಸಮಂಜಸವಲ್ಲ. ಕಾಂಗ್ರೆಸ್‌ಗೆ ಯಾರೂ ದೇಶ ಪ್ರೇಮದ ಪಾಠ ಹೇಳಿಕೊಡುವ ಅಗತ್ಯ ಇಲ್ಲ” ಎಂದು ಖಾರವಾಗಿ ನುಡಿದರು.

“ಪಾಕಿಸ್ತಾನಕ್ಕೆ ಬೆಂಬಲ ಕೊಡುತ್ತೀರಿ, ಪಾಕಿಸ್ತಾನದ ಬಾವುಟ ಹಾರಿಸುವವರಿಗೆ ಮತ್ತು ಪಾಕಿಸ್ತಾನ್ ಝಿಂದಾಬಾದ್ ಕೂಗುವವರಿಗೆ ನೀವು ಸಹಕಾರ ಕೊಡುತ್ತೀರಿ ಎಂಬ ಆರೋಪ ನಮ್ಮ ಮೇಲೆ ಮಾಡುತ್ತೀದ್ದೀರಿ. 1972ರಲ್ಲಿ ನಾವು ಪಾಕಿಸ್ತಾನದ ಮೇಲೆ ಯುದ್ಧ ಮಾಡಿದ್ದೆವು. ಇನ್ನೇನು ಪಾಕಿಸ್ತಾನವನ್ನೇ ನಾವು ಮುಗಿಸುತ್ತಿದ್ದೆವು. ಇಸ್ಲಾಮಾಬಾದ್‌ವರೆಗೆ ನಾವು ಹೋಗಿದ್ದೆವು. ಅಂತಹ ನಮಗೆ ಪಾಕಿಸ್ತಾನದ ಮೇಲೆ ಅಭಿಮಾನವಿದೆ, ನಾವು ಪಾಕಿಸ್ತಾನದ ಪರ ಜೈಕಾರ ಕೂಗಿದವರನ್ನು ಬೆಂಬಲಿಸುತ್ತಿದ್ದೇವೆ ಎನ್ನುತ್ತಿದ್ದೀರಲ್ಲ” ಎಂದು ಹೇಳಿದರು.

ಇದನ್ನೂ ಓದಿ : ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...