Homeಕರ್ನಾಟಕಕಾಂಗ್ರೆಸ್‌ಗೆ ಯಾರೂ ದೇಶ ಪ್ರೇಮದ ಪಾಠ ಹೇಳಿ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್

ಕಾಂಗ್ರೆಸ್‌ಗೆ ಯಾರೂ ದೇಶ ಪ್ರೇಮದ ಪಾಠ ಹೇಳಿ ಕೊಡುವ ಅಗತ್ಯವಿಲ್ಲ: ಸಚಿವ ಪರಮೇಶ್ವರ್

- Advertisement -
- Advertisement -

ರಾಜ್ಯಸಭೆ ಚುನಾವಣೆಯ ಗೆಲುವಿನ ಸಂಭ್ರಮಾಚರಣೆ ವೇಳೆ ನಾಸಿರ್ ಹುಸೇನ್ ಬೆಂಬಲಿಗರು ‘ಪಾಕಿಸ್ತಾನ್ ಝಿಂದಾಬಾದ್’ ಘೋಷಣೆ ಕೂಗಿದ್ದಾರೆ ಎಂಬ ಆರೋಪದ ಕುರಿತು ಗೃಹ ಸಚಿವ ಡಾ.ಜಿ ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿಗೆ ತಿರುಗೇಟು ಕೊಟ್ಟಿದ್ದಾರೆ.

ಇಂದು (ಫೆ.28) ವಿಧಾನಸಭೆಯಲ್ಲಿ ಮಾತನಾಡಿದ ಅವರು, “ನಾವು ದೇಶ ಪ್ರೇಮದ ಬಗ್ಗೆ ಮಾತನಾಡುತ್ತಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ ದೇಶ ಪ್ರೇಮ ಹೇಳಿಕೊಡಬೇಕಾ? ಕಾಂಗ್ರೆಸ್‌ನವರು ಇತರರಿಂದ ದೇಶ ಪ್ರೇಮದ ಪಾಠ ಕಲಿಯಬೇಕಾ? ಈ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಕಾಂಗ್ರೆಸ್‌ ಪಕ್ಷ ಎಷ್ಟು ಜನರನ್ನು ತ್ಯಾಗ ಮಾಡಿದೆ. ದೇಶ ಪ್ರೇಮ ಅಲ್ಲಿಂದ ಬರಲಿಲ್ವಾ ನಮಗೆ?. ಸ್ವಾತಂತ್ಯಕ್ಕೆ ಎಷ್ಟು ಜನರನ್ನು ಬಲಿ ಕೊಟ್ಟಿದ್ದೇವೆ ನಾವು, ಅದನ್ನು ಮರೆತಿಲ್ಲ ಎಂದರು.

“ಬಿಜೆಪಿಯ ಸುನಿಲ್ ಕುಮಾರ್ ಹೇಳಿದಂತೆ ಈಗಿನ ಕಾಂಗ್ರೆಸ್‌ ಬೇರೆ ಎಂಬುವುದನ್ನು ಒಪ್ಪಿಕೊಳ್ಳುತ್ತೇನೆ. ಆದರೆ, ನಮ್ಮ ಭದ್ಧತೆ, ಧ್ಯೇಯ ಯಾವುದೂ ಬದಲಾಗಿಲ್ಲ. 1885ರಲ್ಲಿ ಪ್ರಾರಂಭವಾದ ಕಾಂಗ್ರೆಸ್‌ನ ಭದ್ಧತೆ ಇವತ್ತಿಗೂ ಕೂಡ ಬದಲಾಗಿಲ್ಲ. ನಮ್ಮ ಧ್ಯೇಯದ ಒಂದೇ ಒಂದು ಶಬ್ಧ ನಾವು ಬದಲಾಯಿಸಿಲ್ಲ. ದೇಶ ಪ್ರೇಮ ಕಾಂಗ್ರೆಸ್‌ನವರಿಗೆ ರಕ್ತಗತವಾಗಿ ಬಂದಿದೆ. ಹಾಗಂತ ಬಿಜೆಪಿಯವರಿಗೆ ಬಂದಿಲ್ಲ ಎನ್ನುತ್ತಿಲ್ಲ. ಆದರೆ, ಕಾಂಗ್ರೆಸ್‌ನವರಿಗೆ ದೇಶ ಪ್ರೇಮ ಹೇಳಿ ಕೊಡುವುದು ಅಷ್ಟು ಸಮಂಜಸವಲ್ಲ. ಕಾಂಗ್ರೆಸ್‌ಗೆ ಯಾರೂ ದೇಶ ಪ್ರೇಮದ ಪಾಠ ಹೇಳಿಕೊಡುವ ಅಗತ್ಯ ಇಲ್ಲ” ಎಂದು ಖಾರವಾಗಿ ನುಡಿದರು.

“ಪಾಕಿಸ್ತಾನಕ್ಕೆ ಬೆಂಬಲ ಕೊಡುತ್ತೀರಿ, ಪಾಕಿಸ್ತಾನದ ಬಾವುಟ ಹಾರಿಸುವವರಿಗೆ ಮತ್ತು ಪಾಕಿಸ್ತಾನ್ ಝಿಂದಾಬಾದ್ ಕೂಗುವವರಿಗೆ ನೀವು ಸಹಕಾರ ಕೊಡುತ್ತೀರಿ ಎಂಬ ಆರೋಪ ನಮ್ಮ ಮೇಲೆ ಮಾಡುತ್ತೀದ್ದೀರಿ. 1972ರಲ್ಲಿ ನಾವು ಪಾಕಿಸ್ತಾನದ ಮೇಲೆ ಯುದ್ಧ ಮಾಡಿದ್ದೆವು. ಇನ್ನೇನು ಪಾಕಿಸ್ತಾನವನ್ನೇ ನಾವು ಮುಗಿಸುತ್ತಿದ್ದೆವು. ಇಸ್ಲಾಮಾಬಾದ್‌ವರೆಗೆ ನಾವು ಹೋಗಿದ್ದೆವು. ಅಂತಹ ನಮಗೆ ಪಾಕಿಸ್ತಾನದ ಮೇಲೆ ಅಭಿಮಾನವಿದೆ, ನಾವು ಪಾಕಿಸ್ತಾನದ ಪರ ಜೈಕಾರ ಕೂಗಿದವರನ್ನು ಬೆಂಬಲಿಸುತ್ತಿದ್ದೇವೆ ಎನ್ನುತ್ತಿದ್ದೀರಲ್ಲ” ಎಂದು ಹೇಳಿದರು.

ಇದನ್ನೂ ಓದಿ : ಪಾಕಿಸ್ತಾನ ಪರ ಘೋಷಣೆ ಆರೋಪ ಸಾಬೀತಾದರೆ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

16 ಲಕ್ಷಕ್ಕೂ ಹೆಚ್ಚು ಕಾರ್ಮಿಕರನ್ನು ‘ಮನರೇಗಾ’ ಪಟ್ಟಿಯಿಂದ ಕೈಬಿಟ್ಟ ಕೇಂದ್ರ ಸರ್ಕಾರ: ವರದಿ

ಯುಪಿಎ ಸರ್ಕಾರದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (ಮನರೇಗಾ) ಹೆಸರನ್ನು ಬದಲಿಸಲು ಪ್ರಯತ್ನಿಸುವ 'ವಿಕ್ಷಿತ್ ಭಾರತ್ - ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) (ವಿಬಿ–ಜಿ...

ಅಮೆರಿಕದ ಬಹು ನಿರೀಕ್ಷಿತ ‘ಎಪ್‌ಸ್ಟೀನ್ ಫೈಲ್ಸ್’ ಬಿಡುಗಡೆ : ಬಿಲ್ ಕ್ಲಿಂಟನ್, ಮೈಕಲ್ ಜಾಕ್ಸನ್ ಸೇರಿದಂತೆ ಪ್ರಮುಖರ ಫೋಟೋಗಳು ಬಹಿರಂಗ

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ(ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಕೆಲ ದಾಖಲೆಗಳನ್ನು...

ಕೋಮು ಸಾಮರಸ್ಯಕ್ಕಾಗಿ ಭಾರತದ ಮುಸ್ಲಿಮರು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು: ಜಮಾಅತ್ ಅಧ್ಯಕ್ಷ

'ಭಾರತದ ಮುಸ್ಲಿಮರು, ದೇಶದಲ್ಲಿ ಕೋಮು ಸಾಮರಸ್ಯಕ್ಕಾಗಿ ವೈಯಕ್ತಿಕ ಮತ್ತು ಸಾಮೂಹಿಕ ಪ್ರಯತ್ನಗಳೊಂದಿಗೆ ಮುಂದೆ ಬರಬೇಕು' ಎಂದು ಜಮಾಅತೆ-ಇ-ಇಸ್ಲಾಮಿ ಹಿಂದ್ ಅಧ್ಯಕ್ಷ ಸೈಯದ್ ಸಾದತುಲ್ಲಾ ಹುಸೈನಿ ಅವರು ಒತ್ತಾಯಿಸಿದರು. ಕೋಮು ಸಾಮರಸ್ಯ ಇಲಾಖೆಯು ಆಯೋಜಿಸಿದ್ದ 'ಅಖಿಲ...

3 ವರ್ಷಗಳಲ್ಲಿ ರಷ್ಯಾ ಸೇನೆ ಸೇರಿದ 200 ಕ್ಕೂ ಹೆಚ್ಚು ಭಾರತೀಯರು; 26 ಮಂದಿ ಸಾವು: ವಿದೇಶಾಂಗ ಸಚಿವಾಲಯ

2022 ರಿಂದ ಕನಿಷ್ಠ 202 ಭಾರತೀಯ ಪ್ರಜೆಗಳು ರಷ್ಯಾದ ಸಶಸ್ತ್ರ ಪಡೆಗಳಿಗೆ ಸೇರಿದ್ದಾರೆ ಎಂದು ವರದಿಯಾಗಿದೆ. ಇದರಲ್ಲಿ 26 ಮಂದಿ ಸಾವನ್ನಪ್ಪಿದ್ದು, ಇಬ್ಬರನ್ನು ರಷ್ಯಾದಲ್ಲಿ ಅಂತ್ಯಕ್ರಿಯೆ ಮಾಡಲಾಗಿದೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ)...

ಎಸ್‌ಐಆರ್‌ ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ : ತಮಿಳುನಾಡಿನಲ್ಲಿ 97 ಲಕ್ಷ, ಗುಜರಾತ್‌ನಲ್ಲಿ 73 ಲಕ್ಷ ಹೆಸರು ಡಿಲೀಟ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ ತಮಿಳುನಾಡು ಮತ್ತು ಗುಜರಾತ್‌ನ ಕರಡು ಮತದಾರರ ಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗ (ಇಸಿಐ) ಪ್ರಕಟಿಸಿದ್ದು, ಕ್ರಮವಾಗಿ 97.3 ಮತ್ತು 73.7 ಲಕ್ಷ ಮತದಾರರ...

ಅಸ್ಸಾಂ | ರಾಜಧಾನಿ ಎಕ್ಸ್ ಪ್ರೆಸ್ ರೈಲು ಢಿಕ್ಕಿ : 8 ಆನೆಗಳು ಸಾವು

ಶನಿವಾರ (ಡಿಸೆಂಬರ್ 20, 2025) ಬೆಳಗಿನ ಜಾವ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ಸಾಯಿರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದ ಪರಿಣಾಮ ಎಂಟು ಆನೆಗಳು ಸಾವನ್ನಪ್ಪಿದ್ದು, ಒಂದು ಗಾಯಗೊಂಡಿದೆ ಎಂದು ವರದಿಯಾಗಿದೆ. ಘಟನೆಯಲ್ಲಿ ಐದು...

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...