Homeಕರ್ನಾಟಕಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

- Advertisement -
- Advertisement -

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ ನಸೀರ್ ಅಹಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ಮೇಲೆ ಕ್ರಮ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ನಾಯಕರ ಮೇಲಿನ ಕಾಂಗ್ರೆಸ್‌ ಪಕ್ಷದ ಈ ನಿರ್ದಾಕ್ಷೀಣ್ಯ ಕ್ರಮವು ಸಾರ್ವಜನಿಕವಾಗಿ ಟೀಕೆಗೂ ಕಾರಣವಾಗಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಎದ್ದೇಳು ಕರ್ನಾಟಕ ಸಂಘಟನೆ, “ದಾವಣಗೆರೆ ರಾಜಕಾರಣವು ಕಾಂಗ್ರೆಸ್‌ ಹಿಡಿದಿರುವ ಅಧಃಪತನ ಹಾದಿಯ ಪ್ರತ್ಯಕ್ಷ ದರ್ಶನವಾಗಿದೆ. ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ ನಡೆಯುತ್ತಿದ್ದು, ಜಾತ್ಯಾತೀತ ಮೌಲ್ಯಗಳಿಗೆ ತಿಲಾಂಜಲಿ ಇಟ್ಟು, ಜಾತಿ ಮತ್ತು ಕುಟುಂಬ ರಾಜಕಾರಣಕ್ಕೆ ರತ್ನಗಂಬಳಿ ಹಾಕಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎದ್ದೇಳು ಕರ್ನಾಟಕ, “ದಾವಣಗೆರೆ ಉಪಚುನಾವಣೆಗೆ ಟಿಕೆಟ್‌ ನೀಡುವ ವಿಚಾರದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಜಿಗುಪ್ಸೆ ಮೂಡಿಸಿದರೆ, ಅದು ಈಗ ತನ್ನದೇ ಪಕ್ಷದ ಅಲ್ಪಸಂಖ್ಯಾತ ಮುಖಂಡರ ಮೇಲೆ ತೆಗೆದುಕೊಳ್ಳುತ್ತಿರುವ ಸೇಡಿನ ಕ್ರಮಗಳು ಆಕ್ರೋಶ ಹುಟ್ಟಿಸುತ್ತಿವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಮಾತಿನಲ್ಲಿ ಜಾತ್ಯತೀತತೆ ಇದ್ದರೂ ಅದರ ನಡುವಳಿಕೆ ಕರ್ನಾಟಕ ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ರೀತಿಯಲ್ಲಿ ಇದೆ ಎಂಬುದನ್ನು ನೇರ ಮಾತುಗಳಲ್ಲಿ ಹೇಳಲೇಬೇಕಾದ ಸಂದರ್ಭ ಎದುರಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಅತ್ಯಂತ ಹೆಚ್ಚಿನ ಜನಸಂಖ್ಯಾ ಬಾಹುಳ್ಯವಿದ್ದರೂ ಲಿಂಗಾಯತ ಸಮುದಾಯದ ಶಾಮನೂರು ಶಿವಶಂಕರಪ್ಪ ಅವರೇ ಕಳೆದ 30 ವರ್ಷಗಳಿಂದ ಕಾಂಗ್ರೆಸ್‌ ಶಾಸಕರಾಗಿ ಮುಂದುವರೆಯುತ್ತಾ ಬಂದಿದ್ದಾರೆ. ಅವರ ನಿಧನದ ನಂತರ ಈ ಕ್ಷೇತ್ರವನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತದೆ ಎಂಬ ಭರವಸೆಯನ್ನು ಕಾಂಗ್ರೆಸ್‌ ನಾಯಕತ್ವ ನೀಡಿತ್ತು, ಕೇವಲ ಮುಸ್ಲಿಂ ಮಾತ್ರವಲ್ಲ ಕುಟುಂಬ ರಾಜಕಾರಣವನ್ನು ವಿರೋಧಿಸುವ ಎಲ್ಲ ಜಾತ್ಯತೀತ ಶಕ್ತಿಗಳ ಬಯಕೆಯೂ ಆಗಿತ್ತು. ಆದರೆ ಕುಟುಂಬ, ಜಾತಿ ಹಾಗೂ ಹಣದ ಬಲದ ಮುಂದೆ ಕಾಂಗ್ರೆಸ್ಸಿನ ಹೈಕಮಾಂಡ್‌ ಹಾಗೂ ರಾಜ್ಯ ನಾಯಕತ್ವ ಮಂಡಿಯೂರಿದ ಬಗೆ ಎಲ್ಲರಿಗೂ ಜಿಗುಪ್ಸೆ ಮೂಡಿಸಿತ್ತು. ಕಾಂಗ್ರೆಸ್ಸಿನ ಹಸಿಹಸಿ ಅವಕಾಶವಾದಿ ನಿಲುವಿನಿಂದ ಬೇಸತ್ತು ಕೇವಲ ಮುಸ್ಲಿಂ ಸಮುದಾಯದ ಮುಖಂಡರು ಮಾತ್ರವಲ್ಲ ಯಾವ ಜಾತ್ಯಾತೀತ ಶಕ್ತಿಗಳು ಸಹ ಇಲ್ಲಿನ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಿಲ್ಲ” ಎಂದು ಹೇಳಿದ್ದಾರೆ.

“ಎದ್ದೇಳು ಕರ್ನಾಟಕದ ವಿಚಾರಕ್ಕೆ ಬರುವುದಾದರೆ, 2023 ರ ಚುನಾವಣೆಯಲ್ಲಿ ಕರ್ನಾಟಕದ ನಾಗರೀಕ ಸಂಘಟನೆಗಳ ಸಂಯುಕ್ತ ಶಕ್ತಿಯಾಗಿ ಎದ್ದೇಳು ಕರ್ನಾಟಕ ತನ್ನನ್ನು ಸಂಪೂರ್ಣವಾಗಿ ಸಮರ್ಪಿಸಿಕೊಂಡು ಕೆಲಸ ಮಾಡಿ ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸುವುದರಲ್ಲಿ ಮಹತ್ವದ ಪಾತ್ರ ನಿರ್ವಹಿಸಿತ್ತು. 2025ರಲ್ಲಿ ನಡೆದ ಉಪ ಚುನಾವಣೆಗಳಲ್ಲೂ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದಲ್ಲಿ ತನ್ನದೇ ರೀತಿಯಲ್ಲಿ ಸಕಾರಾತ್ಮಕ ಕೊಡುಗೆ ನೀಡಿತ್ತು. ಆದರೆ ಕಾಂಗ್ರೆಸ್‌ ನಡೆದುಕೊಂಡ ರೀತಿಯಿಂದಾಗಿ ನಾವು ಈ ಬಾರಿಯ ಉಪ ಚುನಾವಣೆಯಲ್ಲಿ ಮಧ್ಯ ಪ್ರವೇಶಿಸದೇ ಇರಲು ತೀರ್ಮಾನಿಸಿದೆವು. ಇದು ಎದ್ದೇಳು ಕರ್ನಾಟಕದ ಕತೆ ಮಾತ್ರವಲ್ಲ, ಬಹುಪಾಲು ಜನಪರ ಸಂಘಟನೆಗಳ ನಿಲುವು ಸಹ ಇದೇ ಆಗಿತ್ತು” ಎಂದಿದ್ದಾರೆ.

“ದಾವಣಗೆರೆಯ ಜಾತ್ಯಾತೀತ ಶಕ್ತಿಗಳ ಮುಂದೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಂದೆ ದೊಡ್ಡ ಇಕ್ಕಟ್ಟು ಸೃಷ್ಟಿಯಾಗಿತ್ತು. ಕಾಂಗ್ರೆಸ್ಸಿನ ನಿಲುವನ್ನಂತೂ ಯಾರೂ ಒಪ್ಪುವ ಮಾತೇ ಇರಲಿಲ್ಲ. ಆದರೆ ಕೆಲವರು ಕಾಂಗ್ರೆಸ್ಸನ್ನು ಬೈದುಕೊಂಡು ಕಾಂಗ್ರೆಸ್ಸಿಗೇ ಮತ ಹಾಕಿದರು. ಕೆಲವರು ಕೋಮುವಾದಿಗಳನ್ನು ಮುಂದೆ ನೋಡಿಕೊಳ್ಳೋಣ, ಈ ಬಾರಿ ಕಾಂಗ್ರೆಸ್ಸಿಗೆ ಪಾಠ ಕಲಿಸಲೇಬೇಕು ಎಂದು ಇತರೆ ಅಭ್ಯರ್ಥಿಗಳಿಗೆ ಓಟು ಹಾಕಿದರು. ಕೆಲವರು ಓಟು ಮಾಡಲಿಕ್ಕೇ ಹೋಗಲಿಲ್ಲ. ಫಲಿತಾಂಶ ಏನೇ ಬರಬಹುದು, ಅಲ್ಪ ಅಂತರದಲ್ಲಿ ಕಾಂಗ್ರೆಸ್‌ ಅಬ್ಯರ್ಥಿ ಹಣ ಬಲದ ಮೇಲೆ ಗೆದ್ದರೂ ಗೆಲ್ಲಬಹುದು, ಆದರೆ ಕಾಂಗ್ರೆಸ್‌ ನೈತಿಕವಾಗಿ ಸೋತಾಗಿದೆ” ಎಂದು ಸಂಘಟನೆ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

“ಕಾಂಗ್ರೆಸ್ಸಿನ ಈ ನೈತಿಕ ಸೋಲಿನ ಹೊಣೆ ಹೊರಬೇಕಾಗಿರುವುದು ಯಾರು? ನಿಸ್ಸಂಶಯವಾಗಿ ಕಾಂಗ್ರೆಸ್ಸಿನ ಹೈಕಮಾಂಡ್‌, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು. ಕಾಂಗ್ರೆಸ್ಸಿನ ಈ ಸ್ಥಿತಿಗೆ ಕಾರಣವಾಗಿರುವ ಈ ನಾಯಕರು ಆತ್ಮಾವಲೋಕನ ಮಾಡಿಕೊಳ್ಳುವ ಬದಲು ನೊಂದಿದ್ದ ದಾವಣಗೆರೆಯ ಅಲ್ಪಸಂಖ್ಯಾತ ಸಮುದಾಯದ ಭಾವನೆಗಳಿಗೆ ಸ್ಪಂದಿಸಿದ ನಾಯಕರ ತಲೆದಂಡಕ್ಕೆ ಹೊರಟಿರುವುದು ಅಕ್ಷಮ್ಯ ಅಪರಾಧ. ಇದನ್ನು ಎದ್ದೇಳು ಕರ್ನಾಟಕ ತೀವ್ರ ರೀತಿಯಲ್ಲಿ ಖಂಡಿಸುತ್ತದೆ. ದಾವಣಗೆರೆಯ ಈ ಬಲಾಢ್ಯ ಕುಟುಂಬದವರು ಜಾತಿ ಕಾರಣಕ್ಕೆ ಬಿಜೆಪಿಯ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಬಹಿರಂಗವಾಗಿ ಕರೆ ಕೊಟ್ಟಾಗಲೂ ಯಾವುದೇ ಕ್ರಮ ತೆಗೆದುಕೊಳ್ಳದೆ ತೆಪ್ಪಗಿದ್ದ ಕಾಂಗ್ರೆಸ್‌ ಮುಖಂಡರು
ಈಗ ಇಲ್ಲದ ಕಾರಣ ಹುಡುಕಿ ಅಲ್ಪಸಂಖ್ಯಾತ ಮುಖಂಡರನ್ನು ದಮನಿಸಲು, ಅಲ್ಪಸಂಖ್ಯಾತ ಮುಖಂಡರ ನಡುವೆ ಒಡಕು ತರಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ವಿಚಾರವಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಕಾಂಗ್ರೆಸ್‌ ಇದೇ ಧೋರಣೆಯನ್ನು ಮುಂದುವರಿಸಿದರೆ ಮುಂದಿನ ಚುನಾವಣೆಯಲ್ಲಿ ಎದ್ದೇಳು ಕರ್ನಾಟಕವನ್ನೂ ಒಳಗೊಂಡಂತೆ ಎಲ್ಲಾ ಜನಪರ ಶಕ್ತಿಗಳ ಬೆಂಬಲ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಬಯಸುತ್ತೇವೆ. ದಾವಣಗೆರೆ ವಿದ್ಯಮಾನ ಬರಲಿರುವ 2028 ರ ಚುನಾವಣೆಗೆ ಮುನ್ನದ ಎಚ್ಚರಿಕೆ ಗಂಟೆಯಾಗಿದೆ. ಅಲ್ಪಸಂಖ್ಯಾತರನ್ನು, ದಲಿತರನ್ನು, ಜಾತ್ಯಾತೀತ ಜನತೆಯನ್ನು, ಪ್ರಗತಿಪರ ಶಕ್ತಿಯನ್ನು ‘ಟೇಕನ್‌ ಫಾರ್‌ ಗ್ರ್ಯಾಂಟೆಡ್‌’ ಮಾಡಿಕೊಳ್ಳಬೇಡಿ ಎಂದು ದಾವಣಗೆರೆ ಹೇಳುತ್ತಿದೆ. ಕಾಂಗ್ರೆಸ್‌ ನಾಯಕತ್ವ ಈಗಾದರೂ ತನ್ನ ತಪ್ಪನ್ನು ನೋಡಿಕೊಂಡು ಆಗಿರುವ ಅನಾಹುತವನ್ನು ಸರಿಪಡಿಸುವ ದಿಕ್ಕಿನಲ್ಲಿ ಹೆಜ್ಜೆ ಇಡಬೇಕೆಂದು ಒತ್ತಾಯಿಸುತ್ತದೆ” ಎಂದು ಆಗ್ರಹಿಸಿದ್ದಾರೆ.

ಎದ್ದೇಳು ಕರ್ನಾಟಕದ ಪರವಾಗಿ, ತಾರಾ ರಾವ್‌, ಬಸವರಾಜ್‌ ಕೌತಾಳ್‌, ಕಿರಣ್‌ ಕಮಲ್‌ ಪ್ರಸಾದ್‌, ಜೆ.ಎಂ. ವೀರಸಂಗಯ್ಯ, ಅರುಣ್‌ ಲೂಯಿಸ್‌, ಅನುಪಮ ಹೆಗಡೆ, ಕೆ.ಎಲ್‌. ಅಶೋಕ್‌, ಬಿ.ಎಸ್‌. ಶ್ರೀಧರ್‌, ಎನ್‌. ವೆಂಕಟೇಶ್‌, ಮೊಹಮ್ಮದ್‌ ಕುಂಜ್‌ ಸಹಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...