Homeಕರ್ನಾಟಕಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

- Advertisement -
- Advertisement -

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ ನಸೀರ್ ಅಹಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ಮೇಲೆ ಕ್ರಮ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ನಾಯಕರ ಮೇಲಿನ ಕಾಂಗ್ರೆಸ್‌ ಪಕ್ಷದ ಈ ನಿರ್ದಾಕ್ಷೀಣ್ಯ ಕ್ರಮವು ಸಾರ್ವಜನಿಕವಾಗಿ ಟೀಕೆಗೂ ಕಾರಣವಾಗಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಎದ್ದೇಳು ಕರ್ನಾಟಕ ಸಂಘಟನೆ, “ದಾವಣಗೆರೆ ರಾಜಕಾರಣವು ಕಾಂಗ್ರೆಸ್‌ ಹಿಡಿದಿರುವ ಅಧಃಪತನ ಹಾದಿಯ ಪ್ರತ್ಯಕ್ಷ ದರ್ಶನವಾಗಿದೆ. ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ ನಡೆಯುತ್ತಿದ್ದು, ಜಾತ್ಯಾತೀತ ಮೌಲ್ಯಗಳಿಗೆ ತಿಲಾಂಜಲಿ ಇಟ್ಟು, ಜಾತಿ ಮತ್ತು ಕುಟುಂಬ ರಾಜಕಾರಣಕ್ಕೆ ರತ್ನಗಂಬಳಿ ಹಾಕಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎದ್ದೇಳು ಕರ್ನಾಟಕ, “ದಾವಣಗೆರೆ ಉಪಚುನಾವಣೆಗೆ ಟಿಕೆಟ್‌ ನೀಡುವ ವಿಚಾರದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಜಿಗುಪ್ಸೆ ಮೂಡಿಸಿದರೆ, ಅದು ಈಗ ತನ್ನದೇ ಪಕ್ಷದ ಅಲ್ಪಸಂಖ್ಯಾತ ಮುಖಂಡರ ಮೇಲೆ ತೆಗೆದುಕೊಳ್ಳುತ್ತಿರುವ ಸೇಡಿನ ಕ್ರಮಗಳು ಆಕ್ರೋಶ ಹುಟ್ಟಿಸುತ್ತಿವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಮಾತಿನಲ್ಲಿ ಜಾತ್ಯತೀತತೆ ಇದ್ದರೂ ಅದರ ನಡುವಳಿಕೆ ಕರ್ನಾಟಕ ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ರೀತಿಯಲ್ಲಿ ಇದೆ ಎಂಬುದನ್ನು ನೇರ ಮಾತುಗಳಲ್ಲಿ ಹೇಳಲೇಬೇಕಾದ ಸಂದರ್ಭ ಎದುರಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಅತ್ಯಂತ ಹೆಚ್ಚಿನ ಜನಸಂಖ್ಯಾ ಬಾಹುಳ್ಯವಿದ್ದರೂ ಲಿಂಗಾಯತ ಸಮುದಾಯದ ಶಾಮನೂರು ಶಿವಶಂಕರಪ್ಪ ಅವರೇ ಕಳೆದ 30 ವರ್ಷಗಳಿಂದ ಕಾಂಗ್ರೆಸ್‌ ಶಾಸಕರಾಗಿ ಮುಂದುವರೆಯುತ್ತಾ ಬಂದಿದ್ದಾರೆ. ಅವರ ನಿಧನದ ನಂತರ ಈ ಕ್ಷೇತ್ರವನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತದೆ ಎಂಬ ಭರವಸೆಯನ್ನು ಕಾಂಗ್ರೆಸ್‌ ನಾಯಕತ್ವ ನೀಡಿತ್ತು, ಕೇವಲ ಮುಸ್ಲಿಂ ಮಾತ್ರವಲ್ಲ ಕುಟುಂಬ ರಾಜಕಾರಣವನ್ನು ವಿರೋಧಿಸುವ ಎಲ್ಲ ಜಾತ್ಯತೀತ ಶಕ್ತಿಗಳ ಬಯಕೆಯೂ ಆಗಿತ್ತು. ಆದರೆ ಕುಟುಂಬ, ಜಾತಿ ಹಾಗೂ ಹಣದ ಬಲದ ಮುಂದೆ ಕಾಂಗ್ರೆಸ್ಸಿನ ಹೈಕಮಾಂಡ್‌ ಹಾಗೂ ರಾಜ್ಯ ನಾಯಕತ್ವ ಮಂಡಿಯೂರಿದ ಬಗೆ ಎಲ್ಲರಿಗೂ ಜಿಗುಪ್ಸೆ ಮೂಡಿಸಿತ್ತು. ಕಾಂಗ್ರೆಸ್ಸಿನ ಹಸಿಹಸಿ ಅವಕಾಶವಾದಿ ನಿಲುವಿನಿಂದ ಬೇಸತ್ತು ಕೇವಲ ಮುಸ್ಲಿಂ ಸಮುದಾಯದ ಮುಖಂಡರು ಮಾತ್ರವಲ್ಲ ಯಾವ ಜಾತ್ಯಾತೀತ ಶಕ್ತಿಗಳು ಸಹ ಇಲ್ಲಿನ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಿಲ್ಲ” ಎಂದು ಹೇಳಿದ್ದಾರೆ.

“ಎದ್ದೇಳು ಕರ್ನಾಟಕದ ವಿಚಾರಕ್ಕೆ ಬರುವುದಾದರೆ, 2023 ರ ಚುನಾವಣೆಯಲ್ಲಿ ಕರ್ನಾಟಕದ ನಾಗರೀಕ ಸಂಘಟನೆಗಳ ಸಂಯುಕ್ತ ಶಕ್ತಿಯಾಗಿ ಎದ್ದೇಳು ಕರ್ನಾಟಕ ತನ್ನನ್ನು ಸಂಪೂರ್ಣವಾಗಿ ಸಮರ್ಪಿಸಿಕೊಂಡು ಕೆಲಸ ಮಾಡಿ ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸುವುದರಲ್ಲಿ ಮಹತ್ವದ ಪಾತ್ರ ನಿರ್ವಹಿಸಿತ್ತು. 2025ರಲ್ಲಿ ನಡೆದ ಉಪ ಚುನಾವಣೆಗಳಲ್ಲೂ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದಲ್ಲಿ ತನ್ನದೇ ರೀತಿಯಲ್ಲಿ ಸಕಾರಾತ್ಮಕ ಕೊಡುಗೆ ನೀಡಿತ್ತು. ಆದರೆ ಕಾಂಗ್ರೆಸ್‌ ನಡೆದುಕೊಂಡ ರೀತಿಯಿಂದಾಗಿ ನಾವು ಈ ಬಾರಿಯ ಉಪ ಚುನಾವಣೆಯಲ್ಲಿ ಮಧ್ಯ ಪ್ರವೇಶಿಸದೇ ಇರಲು ತೀರ್ಮಾನಿಸಿದೆವು. ಇದು ಎದ್ದೇಳು ಕರ್ನಾಟಕದ ಕತೆ ಮಾತ್ರವಲ್ಲ, ಬಹುಪಾಲು ಜನಪರ ಸಂಘಟನೆಗಳ ನಿಲುವು ಸಹ ಇದೇ ಆಗಿತ್ತು” ಎಂದಿದ್ದಾರೆ.

“ದಾವಣಗೆರೆಯ ಜಾತ್ಯಾತೀತ ಶಕ್ತಿಗಳ ಮುಂದೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಂದೆ ದೊಡ್ಡ ಇಕ್ಕಟ್ಟು ಸೃಷ್ಟಿಯಾಗಿತ್ತು. ಕಾಂಗ್ರೆಸ್ಸಿನ ನಿಲುವನ್ನಂತೂ ಯಾರೂ ಒಪ್ಪುವ ಮಾತೇ ಇರಲಿಲ್ಲ. ಆದರೆ ಕೆಲವರು ಕಾಂಗ್ರೆಸ್ಸನ್ನು ಬೈದುಕೊಂಡು ಕಾಂಗ್ರೆಸ್ಸಿಗೇ ಮತ ಹಾಕಿದರು. ಕೆಲವರು ಕೋಮುವಾದಿಗಳನ್ನು ಮುಂದೆ ನೋಡಿಕೊಳ್ಳೋಣ, ಈ ಬಾರಿ ಕಾಂಗ್ರೆಸ್ಸಿಗೆ ಪಾಠ ಕಲಿಸಲೇಬೇಕು ಎಂದು ಇತರೆ ಅಭ್ಯರ್ಥಿಗಳಿಗೆ ಓಟು ಹಾಕಿದರು. ಕೆಲವರು ಓಟು ಮಾಡಲಿಕ್ಕೇ ಹೋಗಲಿಲ್ಲ. ಫಲಿತಾಂಶ ಏನೇ ಬರಬಹುದು, ಅಲ್ಪ ಅಂತರದಲ್ಲಿ ಕಾಂಗ್ರೆಸ್‌ ಅಬ್ಯರ್ಥಿ ಹಣ ಬಲದ ಮೇಲೆ ಗೆದ್ದರೂ ಗೆಲ್ಲಬಹುದು, ಆದರೆ ಕಾಂಗ್ರೆಸ್‌ ನೈತಿಕವಾಗಿ ಸೋತಾಗಿದೆ” ಎಂದು ಸಂಘಟನೆ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

“ಕಾಂಗ್ರೆಸ್ಸಿನ ಈ ನೈತಿಕ ಸೋಲಿನ ಹೊಣೆ ಹೊರಬೇಕಾಗಿರುವುದು ಯಾರು? ನಿಸ್ಸಂಶಯವಾಗಿ ಕಾಂಗ್ರೆಸ್ಸಿನ ಹೈಕಮಾಂಡ್‌, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು. ಕಾಂಗ್ರೆಸ್ಸಿನ ಈ ಸ್ಥಿತಿಗೆ ಕಾರಣವಾಗಿರುವ ಈ ನಾಯಕರು ಆತ್ಮಾವಲೋಕನ ಮಾಡಿಕೊಳ್ಳುವ ಬದಲು ನೊಂದಿದ್ದ ದಾವಣಗೆರೆಯ ಅಲ್ಪಸಂಖ್ಯಾತ ಸಮುದಾಯದ ಭಾವನೆಗಳಿಗೆ ಸ್ಪಂದಿಸಿದ ನಾಯಕರ ತಲೆದಂಡಕ್ಕೆ ಹೊರಟಿರುವುದು ಅಕ್ಷಮ್ಯ ಅಪರಾಧ. ಇದನ್ನು ಎದ್ದೇಳು ಕರ್ನಾಟಕ ತೀವ್ರ ರೀತಿಯಲ್ಲಿ ಖಂಡಿಸುತ್ತದೆ. ದಾವಣಗೆರೆಯ ಈ ಬಲಾಢ್ಯ ಕುಟುಂಬದವರು ಜಾತಿ ಕಾರಣಕ್ಕೆ ಬಿಜೆಪಿಯ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಬಹಿರಂಗವಾಗಿ ಕರೆ ಕೊಟ್ಟಾಗಲೂ ಯಾವುದೇ ಕ್ರಮ ತೆಗೆದುಕೊಳ್ಳದೆ ತೆಪ್ಪಗಿದ್ದ ಕಾಂಗ್ರೆಸ್‌ ಮುಖಂಡರು
ಈಗ ಇಲ್ಲದ ಕಾರಣ ಹುಡುಕಿ ಅಲ್ಪಸಂಖ್ಯಾತ ಮುಖಂಡರನ್ನು ದಮನಿಸಲು, ಅಲ್ಪಸಂಖ್ಯಾತ ಮುಖಂಡರ ನಡುವೆ ಒಡಕು ತರಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ವಿಚಾರವಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಕಾಂಗ್ರೆಸ್‌ ಇದೇ ಧೋರಣೆಯನ್ನು ಮುಂದುವರಿಸಿದರೆ ಮುಂದಿನ ಚುನಾವಣೆಯಲ್ಲಿ ಎದ್ದೇಳು ಕರ್ನಾಟಕವನ್ನೂ ಒಳಗೊಂಡಂತೆ ಎಲ್ಲಾ ಜನಪರ ಶಕ್ತಿಗಳ ಬೆಂಬಲ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಬಯಸುತ್ತೇವೆ. ದಾವಣಗೆರೆ ವಿದ್ಯಮಾನ ಬರಲಿರುವ 2028 ರ ಚುನಾವಣೆಗೆ ಮುನ್ನದ ಎಚ್ಚರಿಕೆ ಗಂಟೆಯಾಗಿದೆ. ಅಲ್ಪಸಂಖ್ಯಾತರನ್ನು, ದಲಿತರನ್ನು, ಜಾತ್ಯಾತೀತ ಜನತೆಯನ್ನು, ಪ್ರಗತಿಪರ ಶಕ್ತಿಯನ್ನು ‘ಟೇಕನ್‌ ಫಾರ್‌ ಗ್ರ್ಯಾಂಟೆಡ್‌’ ಮಾಡಿಕೊಳ್ಳಬೇಡಿ ಎಂದು ದಾವಣಗೆರೆ ಹೇಳುತ್ತಿದೆ. ಕಾಂಗ್ರೆಸ್‌ ನಾಯಕತ್ವ ಈಗಾದರೂ ತನ್ನ ತಪ್ಪನ್ನು ನೋಡಿಕೊಂಡು ಆಗಿರುವ ಅನಾಹುತವನ್ನು ಸರಿಪಡಿಸುವ ದಿಕ್ಕಿನಲ್ಲಿ ಹೆಜ್ಜೆ ಇಡಬೇಕೆಂದು ಒತ್ತಾಯಿಸುತ್ತದೆ” ಎಂದು ಆಗ್ರಹಿಸಿದ್ದಾರೆ.

ಎದ್ದೇಳು ಕರ್ನಾಟಕದ ಪರವಾಗಿ, ತಾರಾ ರಾವ್‌, ಬಸವರಾಜ್‌ ಕೌತಾಳ್‌, ಕಿರಣ್‌ ಕಮಲ್‌ ಪ್ರಸಾದ್‌, ಜೆ.ಎಂ. ವೀರಸಂಗಯ್ಯ, ಅರುಣ್‌ ಲೂಯಿಸ್‌, ಅನುಪಮ ಹೆಗಡೆ, ಕೆ.ಎಲ್‌. ಅಶೋಕ್‌, ಬಿ.ಎಸ್‌. ಶ್ರೀಧರ್‌, ಎನ್‌. ವೆಂಕಟೇಶ್‌, ಮೊಹಮ್ಮದ್‌ ಕುಂಜ್‌ ಸಹಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...