Homeಕರ್ನಾಟಕಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

- Advertisement -
- Advertisement -

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ ನಸೀರ್ ಅಹಮದ್ ಮತ್ತು ಅಬ್ದುಲ್ ಜಬ್ಬಾರ್ ಅವರ ಮೇಲೆ ಕ್ರಮ ತೆಗೆದುಕೊಂಡಿದೆ. ಅಲ್ಪಸಂಖ್ಯಾತ ನಾಯಕರ ಮೇಲಿನ ಕಾಂಗ್ರೆಸ್‌ ಪಕ್ಷದ ಈ ನಿರ್ದಾಕ್ಷೀಣ್ಯ ಕ್ರಮವು ಸಾರ್ವಜನಿಕವಾಗಿ ಟೀಕೆಗೂ ಕಾರಣವಾಗಿದೆ.

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಎದ್ದೇಳು ಕರ್ನಾಟಕ ಸಂಘಟನೆ, “ದಾವಣಗೆರೆ ರಾಜಕಾರಣವು ಕಾಂಗ್ರೆಸ್‌ ಹಿಡಿದಿರುವ ಅಧಃಪತನ ಹಾದಿಯ ಪ್ರತ್ಯಕ್ಷ ದರ್ಶನವಾಗಿದೆ. ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ ನಡೆಯುತ್ತಿದ್ದು, ಜಾತ್ಯಾತೀತ ಮೌಲ್ಯಗಳಿಗೆ ತಿಲಾಂಜಲಿ ಇಟ್ಟು, ಜಾತಿ ಮತ್ತು ಕುಟುಂಬ ರಾಜಕಾರಣಕ್ಕೆ ರತ್ನಗಂಬಳಿ ಹಾಕಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಎದ್ದೇಳು ಕರ್ನಾಟಕ, “ದಾವಣಗೆರೆ ಉಪಚುನಾವಣೆಗೆ ಟಿಕೆಟ್‌ ನೀಡುವ ವಿಚಾರದಲ್ಲಿ ಕಾಂಗ್ರೆಸ್‌ ನಡೆದುಕೊಂಡ ರೀತಿ ಜಿಗುಪ್ಸೆ ಮೂಡಿಸಿದರೆ, ಅದು ಈಗ ತನ್ನದೇ ಪಕ್ಷದ ಅಲ್ಪಸಂಖ್ಯಾತ ಮುಖಂಡರ ಮೇಲೆ ತೆಗೆದುಕೊಳ್ಳುತ್ತಿರುವ ಸೇಡಿನ ಕ್ರಮಗಳು ಆಕ್ರೋಶ ಹುಟ್ಟಿಸುತ್ತಿವೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಮಾತಿನಲ್ಲಿ ಜಾತ್ಯತೀತತೆ ಇದ್ದರೂ ಅದರ ನಡುವಳಿಕೆ ಕರ್ನಾಟಕ ಜಾತ್ಯಾತೀತ ಶಕ್ತಿಗಳನ್ನು ದುರ್ಬಲಗೊಳಿಸುವ ರೀತಿಯಲ್ಲಿ ಇದೆ ಎಂಬುದನ್ನು ನೇರ ಮಾತುಗಳಲ್ಲಿ ಹೇಳಲೇಬೇಕಾದ ಸಂದರ್ಭ ಎದುರಾಗಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಮುಸ್ಲಿಂ ಸಮುದಾಯ ಅತ್ಯಂತ ಹೆಚ್ಚಿನ ಜನಸಂಖ್ಯಾ ಬಾಹುಳ್ಯವಿದ್ದರೂ ಲಿಂಗಾಯತ ಸಮುದಾಯದ ಶಾಮನೂರು ಶಿವಶಂಕರಪ್ಪ ಅವರೇ ಕಳೆದ 30 ವರ್ಷಗಳಿಂದ ಕಾಂಗ್ರೆಸ್‌ ಶಾಸಕರಾಗಿ ಮುಂದುವರೆಯುತ್ತಾ ಬಂದಿದ್ದಾರೆ. ಅವರ ನಿಧನದ ನಂತರ ಈ ಕ್ಷೇತ್ರವನ್ನು ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತದೆ ಎಂಬ ಭರವಸೆಯನ್ನು ಕಾಂಗ್ರೆಸ್‌ ನಾಯಕತ್ವ ನೀಡಿತ್ತು, ಕೇವಲ ಮುಸ್ಲಿಂ ಮಾತ್ರವಲ್ಲ ಕುಟುಂಬ ರಾಜಕಾರಣವನ್ನು ವಿರೋಧಿಸುವ ಎಲ್ಲ ಜಾತ್ಯತೀತ ಶಕ್ತಿಗಳ ಬಯಕೆಯೂ ಆಗಿತ್ತು. ಆದರೆ ಕುಟುಂಬ, ಜಾತಿ ಹಾಗೂ ಹಣದ ಬಲದ ಮುಂದೆ ಕಾಂಗ್ರೆಸ್ಸಿನ ಹೈಕಮಾಂಡ್‌ ಹಾಗೂ ರಾಜ್ಯ ನಾಯಕತ್ವ ಮಂಡಿಯೂರಿದ ಬಗೆ ಎಲ್ಲರಿಗೂ ಜಿಗುಪ್ಸೆ ಮೂಡಿಸಿತ್ತು. ಕಾಂಗ್ರೆಸ್ಸಿನ ಹಸಿಹಸಿ ಅವಕಾಶವಾದಿ ನಿಲುವಿನಿಂದ ಬೇಸತ್ತು ಕೇವಲ ಮುಸ್ಲಿಂ ಸಮುದಾಯದ ಮುಖಂಡರು ಮಾತ್ರವಲ್ಲ ಯಾವ ಜಾತ್ಯಾತೀತ ಶಕ್ತಿಗಳು ಸಹ ಇಲ್ಲಿನ ಚುನಾವಣಾ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲಿಲ್ಲ” ಎಂದು ಹೇಳಿದ್ದಾರೆ.

“ಎದ್ದೇಳು ಕರ್ನಾಟಕದ ವಿಚಾರಕ್ಕೆ ಬರುವುದಾದರೆ, 2023 ರ ಚುನಾವಣೆಯಲ್ಲಿ ಕರ್ನಾಟಕದ ನಾಗರೀಕ ಸಂಘಟನೆಗಳ ಸಂಯುಕ್ತ ಶಕ್ತಿಯಾಗಿ ಎದ್ದೇಳು ಕರ್ನಾಟಕ ತನ್ನನ್ನು ಸಂಪೂರ್ಣವಾಗಿ ಸಮರ್ಪಿಸಿಕೊಂಡು ಕೆಲಸ ಮಾಡಿ ಸಂವಿಧಾನ ವಿರೋಧಿ ಬಿಜೆಪಿಯನ್ನು ಸೋಲಿಸುವುದರಲ್ಲಿ ಮಹತ್ವದ ಪಾತ್ರ ನಿರ್ವಹಿಸಿತ್ತು. 2025ರಲ್ಲಿ ನಡೆದ ಉಪ ಚುನಾವಣೆಗಳಲ್ಲೂ ಶಿಗ್ಗಾಂವಿ ಹಾಗೂ ಸಂಡೂರು ಕ್ಷೇತ್ರದಲ್ಲಿ ತನ್ನದೇ ರೀತಿಯಲ್ಲಿ ಸಕಾರಾತ್ಮಕ ಕೊಡುಗೆ ನೀಡಿತ್ತು. ಆದರೆ ಕಾಂಗ್ರೆಸ್‌ ನಡೆದುಕೊಂಡ ರೀತಿಯಿಂದಾಗಿ ನಾವು ಈ ಬಾರಿಯ ಉಪ ಚುನಾವಣೆಯಲ್ಲಿ ಮಧ್ಯ ಪ್ರವೇಶಿಸದೇ ಇರಲು ತೀರ್ಮಾನಿಸಿದೆವು. ಇದು ಎದ್ದೇಳು ಕರ್ನಾಟಕದ ಕತೆ ಮಾತ್ರವಲ್ಲ, ಬಹುಪಾಲು ಜನಪರ ಸಂಘಟನೆಗಳ ನಿಲುವು ಸಹ ಇದೇ ಆಗಿತ್ತು” ಎಂದಿದ್ದಾರೆ.

“ದಾವಣಗೆರೆಯ ಜಾತ್ಯಾತೀತ ಶಕ್ತಿಗಳ ಮುಂದೆ ಹಾಗೂ ಅಲ್ಪಸಂಖ್ಯಾತ ಸಮುದಾಯದ ಮುಂದೆ ದೊಡ್ಡ ಇಕ್ಕಟ್ಟು ಸೃಷ್ಟಿಯಾಗಿತ್ತು. ಕಾಂಗ್ರೆಸ್ಸಿನ ನಿಲುವನ್ನಂತೂ ಯಾರೂ ಒಪ್ಪುವ ಮಾತೇ ಇರಲಿಲ್ಲ. ಆದರೆ ಕೆಲವರು ಕಾಂಗ್ರೆಸ್ಸನ್ನು ಬೈದುಕೊಂಡು ಕಾಂಗ್ರೆಸ್ಸಿಗೇ ಮತ ಹಾಕಿದರು. ಕೆಲವರು ಕೋಮುವಾದಿಗಳನ್ನು ಮುಂದೆ ನೋಡಿಕೊಳ್ಳೋಣ, ಈ ಬಾರಿ ಕಾಂಗ್ರೆಸ್ಸಿಗೆ ಪಾಠ ಕಲಿಸಲೇಬೇಕು ಎಂದು ಇತರೆ ಅಭ್ಯರ್ಥಿಗಳಿಗೆ ಓಟು ಹಾಕಿದರು. ಕೆಲವರು ಓಟು ಮಾಡಲಿಕ್ಕೇ ಹೋಗಲಿಲ್ಲ. ಫಲಿತಾಂಶ ಏನೇ ಬರಬಹುದು, ಅಲ್ಪ ಅಂತರದಲ್ಲಿ ಕಾಂಗ್ರೆಸ್‌ ಅಬ್ಯರ್ಥಿ ಹಣ ಬಲದ ಮೇಲೆ ಗೆದ್ದರೂ ಗೆಲ್ಲಬಹುದು, ಆದರೆ ಕಾಂಗ್ರೆಸ್‌ ನೈತಿಕವಾಗಿ ಸೋತಾಗಿದೆ” ಎಂದು ಸಂಘಟನೆ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

“ಕಾಂಗ್ರೆಸ್ಸಿನ ಈ ನೈತಿಕ ಸೋಲಿನ ಹೊಣೆ ಹೊರಬೇಕಾಗಿರುವುದು ಯಾರು? ನಿಸ್ಸಂಶಯವಾಗಿ ಕಾಂಗ್ರೆಸ್ಸಿನ ಹೈಕಮಾಂಡ್‌, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು. ಕಾಂಗ್ರೆಸ್ಸಿನ ಈ ಸ್ಥಿತಿಗೆ ಕಾರಣವಾಗಿರುವ ಈ ನಾಯಕರು ಆತ್ಮಾವಲೋಕನ ಮಾಡಿಕೊಳ್ಳುವ ಬದಲು ನೊಂದಿದ್ದ ದಾವಣಗೆರೆಯ ಅಲ್ಪಸಂಖ್ಯಾತ ಸಮುದಾಯದ ಭಾವನೆಗಳಿಗೆ ಸ್ಪಂದಿಸಿದ ನಾಯಕರ ತಲೆದಂಡಕ್ಕೆ ಹೊರಟಿರುವುದು ಅಕ್ಷಮ್ಯ ಅಪರಾಧ. ಇದನ್ನು ಎದ್ದೇಳು ಕರ್ನಾಟಕ ತೀವ್ರ ರೀತಿಯಲ್ಲಿ ಖಂಡಿಸುತ್ತದೆ. ದಾವಣಗೆರೆಯ ಈ ಬಲಾಢ್ಯ ಕುಟುಂಬದವರು ಜಾತಿ ಕಾರಣಕ್ಕೆ ಬಿಜೆಪಿಯ ರಾಘವೇಂದ್ರ ಅವರನ್ನು ಗೆಲ್ಲಿಸಿ ಎಂದು ಬಹಿರಂಗವಾಗಿ ಕರೆ ಕೊಟ್ಟಾಗಲೂ ಯಾವುದೇ ಕ್ರಮ ತೆಗೆದುಕೊಳ್ಳದೆ ತೆಪ್ಪಗಿದ್ದ ಕಾಂಗ್ರೆಸ್‌ ಮುಖಂಡರು
ಈಗ ಇಲ್ಲದ ಕಾರಣ ಹುಡುಕಿ ಅಲ್ಪಸಂಖ್ಯಾತ ಮುಖಂಡರನ್ನು ದಮನಿಸಲು, ಅಲ್ಪಸಂಖ್ಯಾತ ಮುಖಂಡರ ನಡುವೆ ಒಡಕು ತರಲು ಪ್ರಯತ್ನಿಸುತ್ತಿರುವುದು ನಾಚಿಕೆಗೇಡಿನ ವಿಚಾರವಾಗಿದೆ” ಎಂದು ಆಕ್ರೋಶ ಹೊರಹಾಕಿದ್ದಾರೆ.

“ಕಾಂಗ್ರೆಸ್‌ ಇದೇ ಧೋರಣೆಯನ್ನು ಮುಂದುವರಿಸಿದರೆ ಮುಂದಿನ ಚುನಾವಣೆಯಲ್ಲಿ ಎದ್ದೇಳು ಕರ್ನಾಟಕವನ್ನೂ ಒಳಗೊಂಡಂತೆ ಎಲ್ಲಾ ಜನಪರ ಶಕ್ತಿಗಳ ಬೆಂಬಲ ಕಳೆದುಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಬಯಸುತ್ತೇವೆ. ದಾವಣಗೆರೆ ವಿದ್ಯಮಾನ ಬರಲಿರುವ 2028 ರ ಚುನಾವಣೆಗೆ ಮುನ್ನದ ಎಚ್ಚರಿಕೆ ಗಂಟೆಯಾಗಿದೆ. ಅಲ್ಪಸಂಖ್ಯಾತರನ್ನು, ದಲಿತರನ್ನು, ಜಾತ್ಯಾತೀತ ಜನತೆಯನ್ನು, ಪ್ರಗತಿಪರ ಶಕ್ತಿಯನ್ನು ‘ಟೇಕನ್‌ ಫಾರ್‌ ಗ್ರ್ಯಾಂಟೆಡ್‌’ ಮಾಡಿಕೊಳ್ಳಬೇಡಿ ಎಂದು ದಾವಣಗೆರೆ ಹೇಳುತ್ತಿದೆ. ಕಾಂಗ್ರೆಸ್‌ ನಾಯಕತ್ವ ಈಗಾದರೂ ತನ್ನ ತಪ್ಪನ್ನು ನೋಡಿಕೊಂಡು ಆಗಿರುವ ಅನಾಹುತವನ್ನು ಸರಿಪಡಿಸುವ ದಿಕ್ಕಿನಲ್ಲಿ ಹೆಜ್ಜೆ ಇಡಬೇಕೆಂದು ಒತ್ತಾಯಿಸುತ್ತದೆ” ಎಂದು ಆಗ್ರಹಿಸಿದ್ದಾರೆ.

ಎದ್ದೇಳು ಕರ್ನಾಟಕದ ಪರವಾಗಿ, ತಾರಾ ರಾವ್‌, ಬಸವರಾಜ್‌ ಕೌತಾಳ್‌, ಕಿರಣ್‌ ಕಮಲ್‌ ಪ್ರಸಾದ್‌, ಜೆ.ಎಂ. ವೀರಸಂಗಯ್ಯ, ಅರುಣ್‌ ಲೂಯಿಸ್‌, ಅನುಪಮ ಹೆಗಡೆ, ಕೆ.ಎಲ್‌. ಅಶೋಕ್‌, ಬಿ.ಎಸ್‌. ಶ್ರೀಧರ್‌, ಎನ್‌. ವೆಂಕಟೇಶ್‌, ಮೊಹಮ್ಮದ್‌ ಕುಂಜ್‌ ಸಹಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...