- Advertisement -
- Advertisement -
ಕರ್ನಾಟಕ ವಿಧಾನಸಭಾ ಚುನಾವಣೆಯ ಮತ ಎಣಿಕೆ ಅಂತಿಮ ಹಂತದತ್ತ ತಲುಪಿದ್ದು, ಕಾಂಗ್ರೆಸ್ ಸ್ಪಷ್ಟ ಬಹುಮತದತ್ತ ಸಾಗಿದೆ. 127 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲುವಿನ ಸನಿಹದಲ್ಲಿದ್ದು ನೂತನ ಸರ್ಕಾರ ರಚಿಸುವ ತವಕದಲ್ಲಿದೆ.
ಆಡಳಿತರೂಢ ಬಿಜೆಪಿ ಪಕ್ಷ ತೀವ್ರ ಮುಖಭಂಗ ಅನುಭವಿಸಿದೆ. 67 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದ್ದು ತೀವ್ರ ಸೋಲಿನತ್ತ ಮುಖ ಮಾಡಿದೆ. ಬಿಜೆಪಿ ಸರ್ಕಾರದ ಹಲವಾರು ಸಚಿವರು ಹೀನಾಯ ಸೋಲು ಕಂಡಿದ್ದಾರೆ. ವಿ.ಸೋಮಣ್ಣ ಚಾಮರಾಜನಗರ ಮತ್ತು ವರುಣ ಎರಡೂ ಕಡೆ ಸೋಲಿನತ್ತ ಹೊರಟಿದ್ದಾರೆ.
ಜೆಡಿಎಸ್ ಪಕ್ಷವು ಕಳೆದ ಚುನಾವಣೆಗಿಂತಲೂ ಹೀನಾಯ ಸೋಲು ಕಂಡಿದೆ. ಕೇವಲ 23 ಕ್ಷೇತ್ರಗಳಲ್ಲಿ ಮಾತ್ರ ಮುನ್ನಡೆ ಅನುಭವಿಸಿದೆ. ಇತರ ಪಕ್ಷಗಳ ಮತ್ತು ಪಕ್ಷೇತರ ಅಭ್ಯರ್ಥಿಗಳು 07 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದಾರೆ.
ಸ್ಪಷ್ಟ ಬಹುಮತ ಪಡೆಯುತ್ತಿರುವ ಕಾಂಗ್ರೆಸ್ ಪಕ್ಷ ನಾಳೆ ಶಾಸಕಾಂಗ ಪಕ್ಷದ ಸಭೆ ಇಟ್ಟುಕೊಂಡಿದೆ.
ಇದನ್ನೂ ಓದಿ: ರಾಮನಗರ: ಸೋಲಿನತ್ತ ಮುಖ ಮಾಡಿದ ನಿಖಿಲ್ ಕುಮಾರ ಸ್ವಾಮಿ