Homeಕರ್ನಾಟಕಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

- Advertisement -
- Advertisement -

ಸರ್ಕಾರ ಉದ್ದೇಶಪೂರ್ವಕವಾಗಿ ಮತಾಂತರ ನಿಷೇಧ ಮಸೂದೆ ಜಾರಿಗೆ ಸಂಬಂಧಿಸಿದ ವಿಚಾರವನ್ನು ಅಂತಿಮ ಗಳಿಗೆಯಲ್ಲಿ ಚರ್ಚೆಗೆ ತರಲಿದ್ದಾರೆ. ನಾವು ಅದಕ್ಕೆ ಸಿದ್ಧವಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯದೇ ಇದನ್ನು ತರಲು ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಚುನಾವಣೆ ಸಮೀಪಿಸುತ್ತಿದ್ದಂತೆ ವಿಚಾರ ತಿರುಚಲು ಈ ರೀತಿ ಮಾಡುತ್ತಾರೆ. ನಿನ್ನೆ ಕಾನೂನು ಸಚಿವರು ಇದರಲ್ಲಿ ಎಸ್ಸಿ, ಬೌದ್ಧ ಧರ್ಮ ಸೇರಿದಂತೆ ಇತರೆ ವಿಚಾರ ಬರುತ್ತದೆ ಎಂದಿದ್ದಾರೆ. ಹೀಗಾಗಿ ಅವರು ಕೊನೆ ಗಳಿಗೆಯಲ್ಲಿ ತೆಗೆದುಕೊಳ್ಳುತ್ತಾರೆ. ಅವರು ಯಾವಾಗ ಬೇಕಾದರೂ ತೆಗೆದುಕೊಳ್ಳಲಿ, ಕಾಂಗ್ರೆಸ್ ಇದನ್ನು ವಿರೋಧಿಸುತ್ತದೆ. ಸದನದ ಒಳಗೆ ಹಾಗೂ ಹೊರಗೆ ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಕಾನೂನು ಈಗಾಗಲೇ ಇದೆ. ಅದನ್ನು ಪಾಲಿಸುವ ಬದಲು ಈ ವಿಚಾರವನ್ನು ಚುಚ್ಚಿ, ಚುಚ್ಚಿ ಹೇಳುತ್ತಿದ್ದಾರೆ. ಬೌದ್ಧ, ಸಿಖ್, ಜೈನ್, ಕ್ರೈಸ್ತ ಧರ್ಮಗಳಿದ್ದು, ಕೇವಲ ಒಂದನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿಯವರಲ್ಲೇ ಆಂತರಿಕ ಭಿನ್ನಮತ ಇದೆ. ಇದು ರಾಜ್ಯಕ್ಕೆ ಮುಂದೆ ಬರಲಿರುವ ಬಂಡವಾಳ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಕುರಿತು ಮಾತನಾಡಿದ ಅವರು, “ಮೇಕೆದಾಟು ಪಾದಯಾತ್ರೆ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಪಕ್ಷ, ನಾಯಕರು ಹಾಗೂ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದು, ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದಾರೆ.

ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಇಡೀ ದೇಶಕ್ಕೇ ಆಶ್ಚರ್ಯ ಮೂಡಿಸಿರುವ ಪತ್ರ. ಅದು ಕೂಡ ನಮ್ಮ ಹೋರಾಟದ ಆದ್ಯತೆ ವಿಷಯಗಳಲ್ಲಿ ಒಂದು. ಅಧಿವೇಶನದಲ್ಲಿ ನಾವು ಎಲ್ಲ ವಿಚಾರಗಳನ್ನು ಒಂದೇ ದಿನ ತೆಗೆದುಕೊಳ್ಳಲು ಆಗುವುದಿಲ್ಲ. ಭ್ರಷ್ಟಾಚಾರ ಕೂಡ ಒಂದು ಪ್ರಮುಖ ವಿಚಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿತ್ತು ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಒಳಒಪ್ಪಂದವೋ ಅಥವಾ ಬೇರೆ ಏನೋ, ಸಿಎಂ ಏನು ಹೇಳಿದ್ದಾರೆ? ಅವರು ಕಾಂಗ್ರೆಸ್ ರೆಬಲ್ ಅಭ್ಯರ್ಥಿ ಎಂದಿದ್ದಾರೆ. ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರು ಬೇಕಾದರೆ ಸಂಪುಟ ವಿಸ್ತರಣೆ ವೇಳೆ ಲಖನ್ ಅವರನ್ನೇ ಸಚಿವರನ್ನಾಗಿ ಮಾಡಿಕೊಳ್ಳಲಿ’ ಎಂದು ತಿಳಿಸಿದ್ದಾರೆ.

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಹಿಟ್ ಅಂಡ್ ರನ್ ನೀತಿ ಅನುಸರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಪ್ರಶ್ನೆಯೇ ಇಲ್ಲ. ನಾವು ಹಲವು ವಿಚಾರಗಳೊಂದಿಗೆ ಈ ವಿಷಯ ತರುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಮತಾಂತರ ನಿಷೇಧ ಚರ್ಚೆ ಬೆನ್ನಲ್ಲೇ ಹೆಚ್ಚಿದ ಕೋಮುದ್ವೇಷ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ (ಪಿಯುಸಿಎಲ್‌) ಮಂಗಳವಾರ ವರದಿ ಬಿಡುಗಡೆ ಮಾಡಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಅಂಗೀಕರಿಸಲ್ಪಟ್ಟಿರುವ, ಧರ್ಮವನ್ನು ಆಚರಿಸುವ, ಪ್ರತಿಪಾದಿಸುವ ಮತ್ತು ಪ್ರಚಾರ ಮಾಡುವ ಹಕ್ಕಿನ ಮೇಲೆ ದಾಳಿ ನಡೆಸುವುದಕ್ಕೆ ಬಳಸಲಾಗುತ್ತಿರುವ ಮತಾಂತರವೆಂಬ ಸುಳ್ಳು ನೆಪವು ಮಿಥ್ಯೆಯೇ ಆಗಿದೆ ಎಂಬ ಅಂಶವನ್ನು ಈ ವರದಿ ಸಾರಿಹೇಳಿದೆ.

‘ಮತಾಂತರ’ ಎಂಬ ಪರಿಭಾಷೆಯನ್ನು ಬಳಸಿ, ಹೇಗೆ ಕ್ರಿಶ್ಚಿಯನ್ನರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರತಿಪಾದಿಸುವ ಸಾಂವಿಧಾನಿಕ ಹಕ್ಕನ್ನು ಇಂದಿನ ಕರ್ನಾಟಕದಲ್ಲಿ ಮೊಟಕುಗೊಳಿಸಲಾಗುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ವಿಸ್ತೃತವಾಗಿ ವರದಿ ಚರ್ಚಿಸಿದೆ.

ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಅಪರಾಧಗಳು, ಧಾರ್ಮಿಕಾಚರಣೆಯ ಬಗೆಗೆ ಆದೇಶಿಸಲಾಗಿರುವ ಸಮೀಕ್ಷೆಗಳ ಸರಣಿ, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನಿನ ನಿರೀಕ್ಷೆಯ ಸಂದರ್ಭದಲ್ಲಿ ವಿವಿಧ ಸ್ಥರಗಳಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಕೊಡಮಾಡಲಾಗುತ್ತಿರುವ ಕಿರುಕುಳವನ್ನು ದಾಖಲಿಸಲು ಈ ವರದಿಯನ್ನು ತಯಾರಿಸಲಾಗಿದೆ ಎಂದು ಪಿಯುಸಿಎಲ್‌ ಸಂಘಟಕರು ತಿಳಿಸಿದ್ದಾರೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...