Homeಕರ್ನಾಟಕಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

- Advertisement -
- Advertisement -

ಸರ್ಕಾರ ಉದ್ದೇಶಪೂರ್ವಕವಾಗಿ ಮತಾಂತರ ನಿಷೇಧ ಮಸೂದೆ ಜಾರಿಗೆ ಸಂಬಂಧಿಸಿದ ವಿಚಾರವನ್ನು ಅಂತಿಮ ಗಳಿಗೆಯಲ್ಲಿ ಚರ್ಚೆಗೆ ತರಲಿದ್ದಾರೆ. ನಾವು ಅದಕ್ಕೆ ಸಿದ್ಧವಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯದೇ ಇದನ್ನು ತರಲು ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಚುನಾವಣೆ ಸಮೀಪಿಸುತ್ತಿದ್ದಂತೆ ವಿಚಾರ ತಿರುಚಲು ಈ ರೀತಿ ಮಾಡುತ್ತಾರೆ. ನಿನ್ನೆ ಕಾನೂನು ಸಚಿವರು ಇದರಲ್ಲಿ ಎಸ್ಸಿ, ಬೌದ್ಧ ಧರ್ಮ ಸೇರಿದಂತೆ ಇತರೆ ವಿಚಾರ ಬರುತ್ತದೆ ಎಂದಿದ್ದಾರೆ. ಹೀಗಾಗಿ ಅವರು ಕೊನೆ ಗಳಿಗೆಯಲ್ಲಿ ತೆಗೆದುಕೊಳ್ಳುತ್ತಾರೆ. ಅವರು ಯಾವಾಗ ಬೇಕಾದರೂ ತೆಗೆದುಕೊಳ್ಳಲಿ, ಕಾಂಗ್ರೆಸ್ ಇದನ್ನು ವಿರೋಧಿಸುತ್ತದೆ. ಸದನದ ಒಳಗೆ ಹಾಗೂ ಹೊರಗೆ ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಕಾನೂನು ಈಗಾಗಲೇ ಇದೆ. ಅದನ್ನು ಪಾಲಿಸುವ ಬದಲು ಈ ವಿಚಾರವನ್ನು ಚುಚ್ಚಿ, ಚುಚ್ಚಿ ಹೇಳುತ್ತಿದ್ದಾರೆ. ಬೌದ್ಧ, ಸಿಖ್, ಜೈನ್, ಕ್ರೈಸ್ತ ಧರ್ಮಗಳಿದ್ದು, ಕೇವಲ ಒಂದನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿಯವರಲ್ಲೇ ಆಂತರಿಕ ಭಿನ್ನಮತ ಇದೆ. ಇದು ರಾಜ್ಯಕ್ಕೆ ಮುಂದೆ ಬರಲಿರುವ ಬಂಡವಾಳ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಕುರಿತು ಮಾತನಾಡಿದ ಅವರು, “ಮೇಕೆದಾಟು ಪಾದಯಾತ್ರೆ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಪಕ್ಷ, ನಾಯಕರು ಹಾಗೂ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದು, ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದಾರೆ.

ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಇಡೀ ದೇಶಕ್ಕೇ ಆಶ್ಚರ್ಯ ಮೂಡಿಸಿರುವ ಪತ್ರ. ಅದು ಕೂಡ ನಮ್ಮ ಹೋರಾಟದ ಆದ್ಯತೆ ವಿಷಯಗಳಲ್ಲಿ ಒಂದು. ಅಧಿವೇಶನದಲ್ಲಿ ನಾವು ಎಲ್ಲ ವಿಚಾರಗಳನ್ನು ಒಂದೇ ದಿನ ತೆಗೆದುಕೊಳ್ಳಲು ಆಗುವುದಿಲ್ಲ. ಭ್ರಷ್ಟಾಚಾರ ಕೂಡ ಒಂದು ಪ್ರಮುಖ ವಿಚಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿತ್ತು ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಒಳಒಪ್ಪಂದವೋ ಅಥವಾ ಬೇರೆ ಏನೋ, ಸಿಎಂ ಏನು ಹೇಳಿದ್ದಾರೆ? ಅವರು ಕಾಂಗ್ರೆಸ್ ರೆಬಲ್ ಅಭ್ಯರ್ಥಿ ಎಂದಿದ್ದಾರೆ. ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರು ಬೇಕಾದರೆ ಸಂಪುಟ ವಿಸ್ತರಣೆ ವೇಳೆ ಲಖನ್ ಅವರನ್ನೇ ಸಚಿವರನ್ನಾಗಿ ಮಾಡಿಕೊಳ್ಳಲಿ’ ಎಂದು ತಿಳಿಸಿದ್ದಾರೆ.

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಹಿಟ್ ಅಂಡ್ ರನ್ ನೀತಿ ಅನುಸರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಪ್ರಶ್ನೆಯೇ ಇಲ್ಲ. ನಾವು ಹಲವು ವಿಚಾರಗಳೊಂದಿಗೆ ಈ ವಿಷಯ ತರುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಮತಾಂತರ ನಿಷೇಧ ಚರ್ಚೆ ಬೆನ್ನಲ್ಲೇ ಹೆಚ್ಚಿದ ಕೋಮುದ್ವೇಷ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ (ಪಿಯುಸಿಎಲ್‌) ಮಂಗಳವಾರ ವರದಿ ಬಿಡುಗಡೆ ಮಾಡಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಅಂಗೀಕರಿಸಲ್ಪಟ್ಟಿರುವ, ಧರ್ಮವನ್ನು ಆಚರಿಸುವ, ಪ್ರತಿಪಾದಿಸುವ ಮತ್ತು ಪ್ರಚಾರ ಮಾಡುವ ಹಕ್ಕಿನ ಮೇಲೆ ದಾಳಿ ನಡೆಸುವುದಕ್ಕೆ ಬಳಸಲಾಗುತ್ತಿರುವ ಮತಾಂತರವೆಂಬ ಸುಳ್ಳು ನೆಪವು ಮಿಥ್ಯೆಯೇ ಆಗಿದೆ ಎಂಬ ಅಂಶವನ್ನು ಈ ವರದಿ ಸಾರಿಹೇಳಿದೆ.

‘ಮತಾಂತರ’ ಎಂಬ ಪರಿಭಾಷೆಯನ್ನು ಬಳಸಿ, ಹೇಗೆ ಕ್ರಿಶ್ಚಿಯನ್ನರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರತಿಪಾದಿಸುವ ಸಾಂವಿಧಾನಿಕ ಹಕ್ಕನ್ನು ಇಂದಿನ ಕರ್ನಾಟಕದಲ್ಲಿ ಮೊಟಕುಗೊಳಿಸಲಾಗುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ವಿಸ್ತೃತವಾಗಿ ವರದಿ ಚರ್ಚಿಸಿದೆ.

ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಅಪರಾಧಗಳು, ಧಾರ್ಮಿಕಾಚರಣೆಯ ಬಗೆಗೆ ಆದೇಶಿಸಲಾಗಿರುವ ಸಮೀಕ್ಷೆಗಳ ಸರಣಿ, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನಿನ ನಿರೀಕ್ಷೆಯ ಸಂದರ್ಭದಲ್ಲಿ ವಿವಿಧ ಸ್ಥರಗಳಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಕೊಡಮಾಡಲಾಗುತ್ತಿರುವ ಕಿರುಕುಳವನ್ನು ದಾಖಲಿಸಲು ಈ ವರದಿಯನ್ನು ತಯಾರಿಸಲಾಗಿದೆ ಎಂದು ಪಿಯುಸಿಎಲ್‌ ಸಂಘಟಕರು ತಿಳಿಸಿದ್ದಾರೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...