Homeಕರ್ನಾಟಕಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

- Advertisement -
- Advertisement -

ಸರ್ಕಾರ ಉದ್ದೇಶಪೂರ್ವಕವಾಗಿ ಮತಾಂತರ ನಿಷೇಧ ಮಸೂದೆ ಜಾರಿಗೆ ಸಂಬಂಧಿಸಿದ ವಿಚಾರವನ್ನು ಅಂತಿಮ ಗಳಿಗೆಯಲ್ಲಿ ಚರ್ಚೆಗೆ ತರಲಿದ್ದಾರೆ. ನಾವು ಅದಕ್ಕೆ ಸಿದ್ಧವಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯದೇ ಇದನ್ನು ತರಲು ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಚುನಾವಣೆ ಸಮೀಪಿಸುತ್ತಿದ್ದಂತೆ ವಿಚಾರ ತಿರುಚಲು ಈ ರೀತಿ ಮಾಡುತ್ತಾರೆ. ನಿನ್ನೆ ಕಾನೂನು ಸಚಿವರು ಇದರಲ್ಲಿ ಎಸ್ಸಿ, ಬೌದ್ಧ ಧರ್ಮ ಸೇರಿದಂತೆ ಇತರೆ ವಿಚಾರ ಬರುತ್ತದೆ ಎಂದಿದ್ದಾರೆ. ಹೀಗಾಗಿ ಅವರು ಕೊನೆ ಗಳಿಗೆಯಲ್ಲಿ ತೆಗೆದುಕೊಳ್ಳುತ್ತಾರೆ. ಅವರು ಯಾವಾಗ ಬೇಕಾದರೂ ತೆಗೆದುಕೊಳ್ಳಲಿ, ಕಾಂಗ್ರೆಸ್ ಇದನ್ನು ವಿರೋಧಿಸುತ್ತದೆ. ಸದನದ ಒಳಗೆ ಹಾಗೂ ಹೊರಗೆ ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಕಾನೂನು ಈಗಾಗಲೇ ಇದೆ. ಅದನ್ನು ಪಾಲಿಸುವ ಬದಲು ಈ ವಿಚಾರವನ್ನು ಚುಚ್ಚಿ, ಚುಚ್ಚಿ ಹೇಳುತ್ತಿದ್ದಾರೆ. ಬೌದ್ಧ, ಸಿಖ್, ಜೈನ್, ಕ್ರೈಸ್ತ ಧರ್ಮಗಳಿದ್ದು, ಕೇವಲ ಒಂದನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿಯವರಲ್ಲೇ ಆಂತರಿಕ ಭಿನ್ನಮತ ಇದೆ. ಇದು ರಾಜ್ಯಕ್ಕೆ ಮುಂದೆ ಬರಲಿರುವ ಬಂಡವಾಳ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಕುರಿತು ಮಾತನಾಡಿದ ಅವರು, “ಮೇಕೆದಾಟು ಪಾದಯಾತ್ರೆ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಪಕ್ಷ, ನಾಯಕರು ಹಾಗೂ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದು, ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದಾರೆ.

ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಇಡೀ ದೇಶಕ್ಕೇ ಆಶ್ಚರ್ಯ ಮೂಡಿಸಿರುವ ಪತ್ರ. ಅದು ಕೂಡ ನಮ್ಮ ಹೋರಾಟದ ಆದ್ಯತೆ ವಿಷಯಗಳಲ್ಲಿ ಒಂದು. ಅಧಿವೇಶನದಲ್ಲಿ ನಾವು ಎಲ್ಲ ವಿಚಾರಗಳನ್ನು ಒಂದೇ ದಿನ ತೆಗೆದುಕೊಳ್ಳಲು ಆಗುವುದಿಲ್ಲ. ಭ್ರಷ್ಟಾಚಾರ ಕೂಡ ಒಂದು ಪ್ರಮುಖ ವಿಚಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿತ್ತು ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಒಳಒಪ್ಪಂದವೋ ಅಥವಾ ಬೇರೆ ಏನೋ, ಸಿಎಂ ಏನು ಹೇಳಿದ್ದಾರೆ? ಅವರು ಕಾಂಗ್ರೆಸ್ ರೆಬಲ್ ಅಭ್ಯರ್ಥಿ ಎಂದಿದ್ದಾರೆ. ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರು ಬೇಕಾದರೆ ಸಂಪುಟ ವಿಸ್ತರಣೆ ವೇಳೆ ಲಖನ್ ಅವರನ್ನೇ ಸಚಿವರನ್ನಾಗಿ ಮಾಡಿಕೊಳ್ಳಲಿ’ ಎಂದು ತಿಳಿಸಿದ್ದಾರೆ.

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಹಿಟ್ ಅಂಡ್ ರನ್ ನೀತಿ ಅನುಸರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಪ್ರಶ್ನೆಯೇ ಇಲ್ಲ. ನಾವು ಹಲವು ವಿಚಾರಗಳೊಂದಿಗೆ ಈ ವಿಷಯ ತರುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಮತಾಂತರ ನಿಷೇಧ ಚರ್ಚೆ ಬೆನ್ನಲ್ಲೇ ಹೆಚ್ಚಿದ ಕೋಮುದ್ವೇಷ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ (ಪಿಯುಸಿಎಲ್‌) ಮಂಗಳವಾರ ವರದಿ ಬಿಡುಗಡೆ ಮಾಡಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಅಂಗೀಕರಿಸಲ್ಪಟ್ಟಿರುವ, ಧರ್ಮವನ್ನು ಆಚರಿಸುವ, ಪ್ರತಿಪಾದಿಸುವ ಮತ್ತು ಪ್ರಚಾರ ಮಾಡುವ ಹಕ್ಕಿನ ಮೇಲೆ ದಾಳಿ ನಡೆಸುವುದಕ್ಕೆ ಬಳಸಲಾಗುತ್ತಿರುವ ಮತಾಂತರವೆಂಬ ಸುಳ್ಳು ನೆಪವು ಮಿಥ್ಯೆಯೇ ಆಗಿದೆ ಎಂಬ ಅಂಶವನ್ನು ಈ ವರದಿ ಸಾರಿಹೇಳಿದೆ.

‘ಮತಾಂತರ’ ಎಂಬ ಪರಿಭಾಷೆಯನ್ನು ಬಳಸಿ, ಹೇಗೆ ಕ್ರಿಶ್ಚಿಯನ್ನರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರತಿಪಾದಿಸುವ ಸಾಂವಿಧಾನಿಕ ಹಕ್ಕನ್ನು ಇಂದಿನ ಕರ್ನಾಟಕದಲ್ಲಿ ಮೊಟಕುಗೊಳಿಸಲಾಗುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ವಿಸ್ತೃತವಾಗಿ ವರದಿ ಚರ್ಚಿಸಿದೆ.

ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಅಪರಾಧಗಳು, ಧಾರ್ಮಿಕಾಚರಣೆಯ ಬಗೆಗೆ ಆದೇಶಿಸಲಾಗಿರುವ ಸಮೀಕ್ಷೆಗಳ ಸರಣಿ, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನಿನ ನಿರೀಕ್ಷೆಯ ಸಂದರ್ಭದಲ್ಲಿ ವಿವಿಧ ಸ್ಥರಗಳಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಕೊಡಮಾಡಲಾಗುತ್ತಿರುವ ಕಿರುಕುಳವನ್ನು ದಾಖಲಿಸಲು ಈ ವರದಿಯನ್ನು ತಯಾರಿಸಲಾಗಿದೆ ಎಂದು ಪಿಯುಸಿಎಲ್‌ ಸಂಘಟಕರು ತಿಳಿಸಿದ್ದಾರೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...