Homeಕರ್ನಾಟಕಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

ಮತಾಂತರ ನಿಷೇಧ ಮಸೂದೆಗೆ ಕಾಂಗ್ರೆಸ್‌ ವಿರೋಧ ಇರಲಿದೆ: ಡಿ.ಕೆ.ಶಿವಕುಮಾರ್‌‌

- Advertisement -
- Advertisement -

ಸರ್ಕಾರ ಉದ್ದೇಶಪೂರ್ವಕವಾಗಿ ಮತಾಂತರ ನಿಷೇಧ ಮಸೂದೆ ಜಾರಿಗೆ ಸಂಬಂಧಿಸಿದ ವಿಚಾರವನ್ನು ಅಂತಿಮ ಗಳಿಗೆಯಲ್ಲಿ ಚರ್ಚೆಗೆ ತರಲಿದ್ದಾರೆ. ನಾವು ಅದಕ್ಕೆ ಸಿದ್ಧವಾಗಿದ್ದು, ಸಂಪುಟದಲ್ಲಿ ಅನುಮೋದನೆ ಪಡೆಯದೇ ಇದನ್ನು ತರಲು ಸಾಧ್ಯವಿಲ್ಲ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, “ಚುನಾವಣೆ ಸಮೀಪಿಸುತ್ತಿದ್ದಂತೆ ವಿಚಾರ ತಿರುಚಲು ಈ ರೀತಿ ಮಾಡುತ್ತಾರೆ. ನಿನ್ನೆ ಕಾನೂನು ಸಚಿವರು ಇದರಲ್ಲಿ ಎಸ್ಸಿ, ಬೌದ್ಧ ಧರ್ಮ ಸೇರಿದಂತೆ ಇತರೆ ವಿಚಾರ ಬರುತ್ತದೆ ಎಂದಿದ್ದಾರೆ. ಹೀಗಾಗಿ ಅವರು ಕೊನೆ ಗಳಿಗೆಯಲ್ಲಿ ತೆಗೆದುಕೊಳ್ಳುತ್ತಾರೆ. ಅವರು ಯಾವಾಗ ಬೇಕಾದರೂ ತೆಗೆದುಕೊಳ್ಳಲಿ, ಕಾಂಗ್ರೆಸ್ ಇದನ್ನು ವಿರೋಧಿಸುತ್ತದೆ. ಸದನದ ಒಳಗೆ ಹಾಗೂ ಹೊರಗೆ ನಾವು ಇದರ ವಿರುದ್ಧ ಹೋರಾಟ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಕಾನೂನು ಈಗಾಗಲೇ ಇದೆ. ಅದನ್ನು ಪಾಲಿಸುವ ಬದಲು ಈ ವಿಚಾರವನ್ನು ಚುಚ್ಚಿ, ಚುಚ್ಚಿ ಹೇಳುತ್ತಿದ್ದಾರೆ. ಬೌದ್ಧ, ಸಿಖ್, ಜೈನ್, ಕ್ರೈಸ್ತ ಧರ್ಮಗಳಿದ್ದು, ಕೇವಲ ಒಂದನ್ನು ಗಮನದಲ್ಲಿಟ್ಟುಕೊಂಡು ಇದನ್ನು ಜಾರಿಗೆ ತರಲು ಸಾಧ್ಯವಿಲ್ಲ. ಈ ವಿಚಾರವಾಗಿ ಬಿಜೆಪಿಯವರಲ್ಲೇ ಆಂತರಿಕ ಭಿನ್ನಮತ ಇದೆ. ಇದು ರಾಜ್ಯಕ್ಕೆ ಮುಂದೆ ಬರಲಿರುವ ಬಂಡವಾಳ ಹೂಡಿಕೆ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಮೇಕೆದಾಟು ಪಾದಯಾತ್ರೆ ಕುರಿತು ಮಾತನಾಡಿದ ಅವರು, “ಮೇಕೆದಾಟು ಪಾದಯಾತ್ರೆ ಬಗ್ಗೆ ನಾವು ಚರ್ಚೆ ಮಾಡಿದ್ದೇವೆ. ಪಕ್ಷ, ನಾಯಕರು ಹಾಗೂ ಕಾರ್ಯಕರ್ತರು ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದು, ಎಲ್ಲರಿಗೂ ಅಭಿನಂದನೆ ಸಲ್ಲಿಸುತ್ತೇನೆ” ಎಂದಿದ್ದಾರೆ.

ಗುತ್ತಿಗೆದಾರರ ಸಂಘವು ಪ್ರಧಾನಿಯವರಿಗೆ ಬರೆದಿರುವ ಪತ್ರದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಅದು ಇಡೀ ದೇಶಕ್ಕೇ ಆಶ್ಚರ್ಯ ಮೂಡಿಸಿರುವ ಪತ್ರ. ಅದು ಕೂಡ ನಮ್ಮ ಹೋರಾಟದ ಆದ್ಯತೆ ವಿಷಯಗಳಲ್ಲಿ ಒಂದು. ಅಧಿವೇಶನದಲ್ಲಿ ನಾವು ಎಲ್ಲ ವಿಚಾರಗಳನ್ನು ಒಂದೇ ದಿನ ತೆಗೆದುಕೊಳ್ಳಲು ಆಗುವುದಿಲ್ಲ. ಭ್ರಷ್ಟಾಚಾರ ಕೂಡ ಒಂದು ಪ್ರಮುಖ ವಿಚಾರ ಎಂದು ಪ್ರತಿಕ್ರಿಯಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಒಳ ಒಪ್ಪಂದ ಮಾಡಿಕೊಂಡಿತ್ತು ಎಂಬ ಲಖನ್ ಜಾರಕಿಹೊಳಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ‘ಒಳಒಪ್ಪಂದವೋ ಅಥವಾ ಬೇರೆ ಏನೋ, ಸಿಎಂ ಏನು ಹೇಳಿದ್ದಾರೆ? ಅವರು ಕಾಂಗ್ರೆಸ್ ರೆಬಲ್ ಅಭ್ಯರ್ಥಿ ಎಂದಿದ್ದಾರೆ. ಯಾರು ಏನು ಬೇಕಾದರೂ ಹೇಳಿಕೊಳ್ಳಲಿ. ಅವರು ಬೇಕಾದರೆ ಸಂಪುಟ ವಿಸ್ತರಣೆ ವೇಳೆ ಲಖನ್ ಅವರನ್ನೇ ಸಚಿವರನ್ನಾಗಿ ಮಾಡಿಕೊಳ್ಳಲಿ’ ಎಂದು ತಿಳಿಸಿದ್ದಾರೆ.

ಬಿಟ್ ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಹಿಟ್ ಅಂಡ್ ರನ್ ನೀತಿ ಅನುಸರಿಸುತ್ತಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ‘ಈ ವಿಚಾರದಲ್ಲಿ ಹಿಟ್ ಅಂಡ್ ರನ್ ಪ್ರಶ್ನೆಯೇ ಇಲ್ಲ. ನಾವು ಹಲವು ವಿಚಾರಗಳೊಂದಿಗೆ ಈ ವಿಷಯ ತರುತ್ತೇವೆ’ ಎಂದಿದ್ದಾರೆ.

ಇದನ್ನೂ ಓದಿರಿ: ನೆಲಮಂಗಲ: ತಮಟೆ ಬಾರಿಸಿದ್ದಕ್ಕೆ ದಲಿತನಿಗೆ ಥಳಿತ; ಪ್ರಕರಣ ದಾಖಲು

ಮತಾಂತರ ನಿಷೇಧ ಚರ್ಚೆ ಬೆನ್ನಲ್ಲೇ ಹೆಚ್ಚಿದ ಕೋಮುದ್ವೇಷ

ಧರ್ಮಾಚರಣೆಯ ಅಪರಾಧೀಕರಣ, ಕರ್ನಾಟಕದಲ್ಲಿ ಕ್ರಿಶ್ಚಿಯನ್ನರ ಮೇಲಿನ ದ್ವೇಷದ ಅಪರಾಧಗಳ ಕುರಿತು ಪೀಪಲ್ಸ್ ಯೂನಿಯನ್ ಫಾರ್ ಸಿವಿಲ್ ಲಿಬರ್ಟೀಸ್ – ಕರ್ನಾಟಕ (ಪಿಯುಸಿಎಲ್‌) ಮಂಗಳವಾರ ವರದಿ ಬಿಡುಗಡೆ ಮಾಡಿದೆ. ಜನವರಿಯಿಂದ ನವೆಂಬರ್‌‌ವರೆಗೆ ಒಟ್ಟು 39 ಕ್ರಿಶ್ಚಿಯನ್ನರ ಮೇಲಿನ ದ್ವೇಷ ಪ್ರಕರಣಗಳು ಕರ್ನಾಟಕದಲ್ಲಿ ದಾಖಲಾಗಿವೆ ಎಂದು ವರದಿ ಹೇಳಿದೆ.

ಸಂವಿಧಾನದ 25ನೇ ವಿಧಿಯ ಅಡಿಯಲ್ಲಿ ಅಂಗೀಕರಿಸಲ್ಪಟ್ಟಿರುವ, ಧರ್ಮವನ್ನು ಆಚರಿಸುವ, ಪ್ರತಿಪಾದಿಸುವ ಮತ್ತು ಪ್ರಚಾರ ಮಾಡುವ ಹಕ್ಕಿನ ಮೇಲೆ ದಾಳಿ ನಡೆಸುವುದಕ್ಕೆ ಬಳಸಲಾಗುತ್ತಿರುವ ಮತಾಂತರವೆಂಬ ಸುಳ್ಳು ನೆಪವು ಮಿಥ್ಯೆಯೇ ಆಗಿದೆ ಎಂಬ ಅಂಶವನ್ನು ಈ ವರದಿ ಸಾರಿಹೇಳಿದೆ.

‘ಮತಾಂತರ’ ಎಂಬ ಪರಿಭಾಷೆಯನ್ನು ಬಳಸಿ, ಹೇಗೆ ಕ್ರಿಶ್ಚಿಯನ್ನರು ತಮ್ಮ ಧರ್ಮವನ್ನು ಆಚರಿಸುವ ಮತ್ತು ಪ್ರತಿಪಾದಿಸುವ ಸಾಂವಿಧಾನಿಕ ಹಕ್ಕನ್ನು ಇಂದಿನ ಕರ್ನಾಟಕದಲ್ಲಿ ಮೊಟಕುಗೊಳಿಸಲಾಗುತ್ತಿದೆ ಎಂಬ ಆಘಾತಕಾರಿ ವಿಷಯವನ್ನು ವಿಸ್ತೃತವಾಗಿ ವರದಿ ಚರ್ಚಿಸಿದೆ.

ಕ್ರಿಶ್ಚಿಯನ್ನರ ವಿರುದ್ಧ ಹೆಚ್ಚುತ್ತಿರುವ ದ್ವೇಷದ ಅಪರಾಧಗಳು, ಧಾರ್ಮಿಕಾಚರಣೆಯ ಬಗೆಗೆ ಆದೇಶಿಸಲಾಗಿರುವ ಸಮೀಕ್ಷೆಗಳ ಸರಣಿ, ರಾಜ್ಯದಲ್ಲಿ ಮತಾಂತರ ನಿಷೇಧ ಕಾನೂನಿನ ನಿರೀಕ್ಷೆಯ ಸಂದರ್ಭದಲ್ಲಿ ವಿವಿಧ ಸ್ಥರಗಳಲ್ಲಿ ಕ್ರಿಶ್ಚಿಯನ್ ಸಮುದಾಯಕ್ಕೆ ಕೊಡಮಾಡಲಾಗುತ್ತಿರುವ ಕಿರುಕುಳವನ್ನು ದಾಖಲಿಸಲು ಈ ವರದಿಯನ್ನು ತಯಾರಿಸಲಾಗಿದೆ ಎಂದು ಪಿಯುಸಿಎಲ್‌ ಸಂಘಟಕರು ತಿಳಿಸಿದ್ದಾರೆ.

ಬಹುತೇಕ ಪ್ರಕರಣಗಳಲ್ಲಿ ಕ್ರಿಶ್ಚಿಯನ್ನರು ತಮ್ಮ ಪೂಜಾ ಸ್ಥಳಗಳನ್ನು ಮುಚ್ಚುವಂತೆ ಒತ್ತಾಯಿಸಲಾಗುತ್ತಿದೆ ಮತ್ತು ಅವರ ಭಾನುವಾರದ ಪ್ರಾರ್ಥನೆಗಾಗಿ ಒಟ್ಟುಗೂಡುವುದನ್ನು ನಿಲ್ಲಿಸಲಾಗುತ್ತಿದೆ. ಹಿಂದುತ್ವ ಗುಂಪುಗಳು ರಾಜ್ಯದ ಸಹಭಾಗಿತ್ವದೊಂದಿಗೆ ಸಾಮೂಹಿಕವಾಗಿ ಧಾರ್ಮಿಕ ಸಮುದಾಯವಾಗಿ ಪ್ರಾರ್ಥಿಸುವುದರ ಮೇಲಿನ ಈ ದಾಳಿಗಳು ಧರ್ಮವನ್ನು ಆಚರಿಸುವ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿ ಕಾರ್ಯನಿರ್ವಹಿಸುತ್ತವೆ. ಇಂದು ಕರ್ನಾಟಕದಲ್ಲಿ ನಡೆಯುತ್ತಿರುವ ದಾಳಿಗಳು ಧರ್ಮವನ್ನು ಪ್ರಚಾರಮಾಡುವ ಪ್ರಚಾರದ ಹಕ್ಕಿಗೆ ಸಂಬಂಧಿಸಿರುವುದಿಲ್ಲ. ಬದಲಿಗೆ, ಧರ್ಮವನ್ನು ಮುಕ್ತವಾಗಿ ಪ್ರತಿಪಾದಿಸುವ ಮತ್ತು ಆಚರಣೆ ಮಾಡುವ ಹಕ್ಕಿನ ಮೇಲಿನ ದಾಳಿಗಳಾಗಿವೆ ಎಂದು ವರದಿ ಹೇಳುತ್ತದೆ.


ಇದನ್ನೂ ಓದಿರಿ: ರಾಜ್ಯದಲ್ಲಿ ಕ್ರಿಶ್ಚಿಯನ್ನರ ಮೇಲೆ ದಾಳಿ: ಕಳೆದ 11 ತಿಂಗಳಲ್ಲಿ 39 ಪ್ರಕರಣ ದಾಖಲು- ಪಿಯುಸಿಎಲ್‌ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...