Homeಮುಖಪುಟಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ವಾಪಸ್ ಪಡೆದಿದ್ದಕ್ಕೆ ಕಾಂಗ್ರೆಸ್ ಆಕ್ರೋಶ, ಪ್ರತಿಭಟನೆ

ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ವಾಪಸ್ ಪಡೆದಿದ್ದಕ್ಕೆ ಕಾಂಗ್ರೆಸ್ ಆಕ್ರೋಶ, ಪ್ರತಿಭಟನೆ

- Advertisement -
- Advertisement -

ಕೆಲ ದಿನಗಳ ಹಿಂದಷ್ಟೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್ ಪಿ ಜಿ ( ವಿಶೇಷ ಭದ್ರತೆ)ಯನ್ನು ಹಿಂದಕ್ಕೆ ಪಡೆಯಲಾಗಿತ್ತು. ಲೋಕಸಭೆಯಲ್ಲಿ ಇಂದು ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್.ಪಿ.ಜಿ ಭದ್ರತೆಯನ್ನು ವಾಪಸ್ ಪಡೆದಿರುವುದನ್ನು ವಿರೋಧಿಸಿ, ಕಾಂಗ್ರೆಸ್ ನಾಯಕರು ಗದ್ದಲ ಎಬ್ಬಿಸಿದರು. ಬಿಜೆಪಿ ನಾಯಕರು ಮತ್ತು ಕೇಂದ್ರದ ವಿರುದ್ಧ ಘೋಷಣೆ ಕೂಗಿದರು.

ಗಾಂಧಿ ಕುಟುಂಬಕ್ಕೆ ನೀಡಿದ್ದ ಎಸ್.ಪಿ.ಜಿ ಭದ್ರತೆ ವಾಪಸ್ ತೆಗೆದುಕೊಂಡಿದ್ದು ಏಕೆ..? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.  ಅಲ್ಲದೇ ಪ್ರಧಾನಿ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಇದಕ್ಕೆ ಉತ್ತರ ನೀಡಬೇಕು ಎಂದು ಪಟ್ಟು ಹಿಡಿಯಿತು. ಕಾಂಗ್ರೆಸ್ ನಾಯಕರು ಗಲಾಟೆ ಮಾಡುತ್ತಿದ್ದಂತೆಯೇ, ಏನೊಂದು ಪ್ರತಿಕ್ರಿಯಿಸದೇ ಗೃಹ ಸಚಿವ ಅಮಿತ್ ಶಾ ಹೊರ ನಡೆದರು.

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ನೀಡಿದ್ದ ಎಸ್.ಪಿ.ಜಿ ಭದ್ರತೆಯನ್ನು ಹಿಂಪಡೆದಿದ್ದೇಕೆ ಎಂದು ಕಾಂಗ್ರೆಸ್ ಮುಖಂಡರು ಪ್ರಶ್ನಿಸಿ, ಆಕ್ರೋಶ ವ್ಯಕ್ತಪಡಿಸಿದರು. ಝಡ್ ಪ್ಲಸ್ ವಿಭಾಗದಲ್ಲಿ ಸೆಂಟ್ರಲ್ ರಿಸರ್ವ್ ಪೊಲೀಸ್ ಫೋರ್ಸ್ 100 ಸಿಬ್ಬಂದಿಯಿಂದ ಭದ್ರತಾ ರಕ್ಷಣೆಯನ್ನು ಖಾತ್ರಿ ಮಾಡಿದೆ.

ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ, ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ಭದ್ರತೆ ಹಿಂಪಡೆಯುವ ನಿರ್ಧಾರವನ್ನು ವಿರೋಧಿಸಿ, ನೋಟಿಸ್ ನೀಡಿದ್ದಾರೆ. ಇದನ್ನು ಪರಿಶೀಲಿಸುವಂತೆ ಮಾಡಿದ ಮನವಿಯನ್ನು ಸ್ಪೀಕರ್ ತಿರಸ್ಕರಿಸಿದರು.

ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರು ಸಾಮಾನ್ಯ ವ್ಯಕ್ತಿಗಳಲ್ಲ. 1991ರಲ್ಲಿ ಎನ್.ಡಿ.ಎ ಸರ್ಕಾರ ಜಾರಿಯಾದಾಗ ಮತ್ತು 2019ರವರೆಗೆ ಗಾಂಧಿ ಕುಟುಂಬಕ್ಕೆ ನೀಡಿದ ಎಸ್.ಪಿ.ಜಿ ಭದ್ರತೆಯನ್ನು ಹಿಂಪಡೆದಿರಲಿಲ್ಲ. ಆದರೆ ಈಗ ಯಾಕೆ ಭದ್ರತೆ ಹಿಂಪಡೆದಿದ್ದೀರಿ ಎಂದು ಪ್ರಶ್ನಿಸಿ 20ಕ್ಕೂ ಹೆಚ್ಚು ನಾಯಕರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಆಗ ಸ್ಪೀಕರ್ ಓಂ ಬಿರ್ಲಾ ತಮ್ಮ ಸ್ಥಾನಗಳಿಗೆ ಮರಳುವಂತೆ ನಾಯಕರಲ್ಲಿ ಮನವಿ ಮಾಡಿದರು. ಆದರೆ ನಾಯಕರು ಪ್ರತಿಭಟನೆ ಮುಂದುವರೆಸಿದರು.

ಪ್ರಧಾನಿ ಉತ್ತರ ನೀಡಲೇಬೇಕು. ದಯವಿಟ್ಟು ಪ್ರತೀಕಾರದ ರಾಜಕೀಯ ನಿಲ್ಲಿಸಿ. ಸರ್ವಾಧಿಕಾರತ್ವವನ್ನು ಕೊನೆಗೊಳಿಸಿ, ನಮಗೆ ನ್ಯಾಯ ಬೇಕು ಎಂದು ಕಾಂಗ್ರೆಸ್ ನಾಯಕರು ಘೋಷಣೆ ಕೂಗಿದರು ಎಂದು ಮೂಲಗಳು ತಿಳಿಸಿವೆ.

ಇನ್ನು 1991 ರ ಮೇ ತಿಂಗಳಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಯಾದ ನಂತರ ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ  ವ್ಯಾಪ್ತಿಗೆ ಒಳಪಡಿಸಿ, ಭದ್ರತೆ ನೀಡಲಾಗಿತ್ತು. 2019ರ ನವೆಂಬರ್ 8 ರಂದು ಗಾಂಧಿ ಕುಟುಂಬಕ್ಕೆ ಎಸ್‌ಪಿಜಿ ರಕ್ಷಣೆಯನ್ನು ತೆಗೆದುಹಾಕಲಾಯಿತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...