Homeಮುಖಪುಟಲೋಕಸಭಾ ಚುನಾವಣೆ: ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಲೋಕಸಭಾ ಚುನಾವಣೆ: ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

- Advertisement -
- Advertisement -

ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿರುವ ಬೆನ್ನಲ್ಲೇ ಇದೀಗ ರಾಜ್ಯ ಕಾಂಗ್ರೆಸ್‌ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಸ್ಟಾರ್​ ಪ್ರಚಾರಕರ ಪಟ್ಟಿಯಲ್ಲಿದ್ದಾರೆ.

ಕಾಂಗ್ರೆಸ್‌ನ ಸ್ಟಾರ್‌ ಪ್ರಚಾರಕರ ಪಟ್ಟಿ:

ಮಲ್ಲಿಕಾರ್ಜುನ ಖರ್ಗೆ , ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ ವೇಣುಗೋಪಾಲ್‌ , ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌,  ಸುರ್ಜೆವಾಲ, ಜೈರಾಮ್‌ ರಮೇಶ್‌, ವೀರಪ್ಪ ಮೊಯ್ಲಿ, ಲಕ್ಷಣ ಸವದಿ, ಬಿವಿ ಶ್ರೀನಿವಾಸ್‌, ಕೆಜೆ ಜಾರ್ಜ್‌, ವಿನಯ್‌ ಕುಮಾರ್‌ ಸೊರಕೆ, ಬಿಕೆ ಹರಿಪ್ರಸಾದ್‌, ಆರ್.ವಿ ದೇಶಪಾಂಡೆ, ಜಿ.ಪರಮೇಶ್ವರ್‌, ಎಂ.ಬಿ ಪಾಟೀಲ್‌, ದಿನೇಶ್‌ ಗುಂಡೂರಾವ್‌, ಕೃಷ್ಣ ಭೈರೇಗೌಡ, ಎಚ್.ಎಂ ರೇವಣ್ಣ, ಪಿಜಿಆರ್ ಸಿಂಧ್ಯಾ, ಬಿ. ಶೋಮಶೇಖರ್‌, ಎಲ್‌. ಹನುಮಂತಯ್ಯ, ಜಿ.ಸಿ ಚಂದ್ರಶೇಖರ್‌, ನಸೀರ್‌ ಹುಸೈನ್‌ ಅಭಿಶೇಕ್‌ ದತ್‌, ರೋಜಿ ಜಾನ್‌, ಮಯೂರ್‌ ಜಯಕುಮಾರ್‌, ಝಮೀರ್‌ ಅಹ್ಮದ್‌ , ಮಧು ಬಂಗಾರಪ್ಪ, ಉಗ್ರಪ್ಪ, ಪಿ.ಟಿ ಪರಮೇಶ್ವರ್‌ ನಾಯಕ್‌, ಸತೀಶ್‌ ಜಾರಕಿಹೊಳಿ, ತನ್ವೀರ್‌ ಸೇಠ್‌, ಪುಷ್ಪಾ ಅಮರ್‌ ನಾಥ್‌, ಉಮಾಶ್ರಿ, ಅಂಬಣ್ಣ ಆರೋಲಿಕರ್ ​ಗೆ ಸ್ಟಾರ್ ​ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ.

ದೇಶದ 543 ಲೋಕಸಭೆ ಸ್ಥಾನಗಳಿಗೆ ಏಳು ಹಂತಗಳಲ್ಲಿ ಚುನಾವಣೆ ನಡೆದರೆ, ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳಿಗೆ ಎರಡು ಹಂತದಲ್ಲಿ ಮತದಾನ ನಡೆಯಲಿದೆ. 28 ಕ್ಷೇತ್ರಗಳ ಪೈಕಿ 14 ಕ್ಷೇತ್ರಗಳಿಗೆ ಒಂದನೇ ಹಂತದಲ್ಲಿ, ಇನ್ನುಳಿದ 14 ಕ್ಷೇತ್ರಗಳಿಗೆ 2ನೇ ಹಂತದಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದ ಚುನಾವಣೆ ಏಪ್ರಿಲ್ 26, ಶುಕ್ರವಾರದಂದು ನಡೆಯಲಿದ್ದು, ಎರಡನೇ ಹಂತದ ಚುನಾವಣೆ ಮೇ 7, ಮಂಗಳವಾರ ನಡೆಯಲಿದೆ.

ಮೊದಲ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಗೆ ಕೊನೆ ದಿನ ಏ.4 ಇರಲಿದೆ. ನಾಮಪತ್ರ ಹಿಂಪಡೆಯುವ ಕೊನೆ ದಿನ ಏ.8 ಆಗಿದೆ. ಎರಡನೇ ಹಂತದ ಮತದಾನ ಮೇ 7ರಂದು ನಡೆಯಲಿದೆ. ನಾಮಪತ್ರ ಸಲ್ಲಿಕೆಗೆ ಏಪ್ರಿಲ್‌ 19 ಕೊನೆಯ ದಿನವಾಗಿರುತ್ತದೆ. ಏಪ್ರಿಲ್‌ 20ರಂದು ನಾಮಪತ್ರ ಪರಿಶೀಲನೆ ನಡೆದರೆ, ನಾಮಪತ್ರ ವಾಪಸ್‌ ತೆಗೆದುಕೊಳ್ಳಲು ಏಪ್ರಿಲ್‌ 22 ಕೊನೆಯ ದಿನವಾಗಿರುತ್ತದೆ. ಜೂನ್‌.4ರಂದು ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ.

ಇದನ್ನು ಓದಿ: ದೆಹಲಿ: ರಾಮಲೀಲಾ ಮೈದಾನದಲ್ಲಿ ಪ್ರತಿಪಕ್ಷಗಳ ‘ಲೋಕತಂತ್ರ ಬಚಾವೋ’ ರ್‍ಯಾಲಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಬೃಹತ್ ಪ್ರತಿಭಟನೆ

ಈ ವರ್ಷದ ಬಜೆಟ್ ಅಧಿವೇಶನದಲ್ಲಿ ಬಹುಕಾಲದ ಸಂಪೂರ್ಣ ಒಳಮೀಸಲಾತಿ ಜಾರಿಗೆ ಆಗ್ರಹಿಸಿ ಪರಿಶಿಷ್ಟ ಜಾತಿ (ಎಸ್‌ಸಿ) ಎಡಗೈ ಸಂಬಂಧಿತ ಜಾತಿ ಮುಖಂಡರು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮೆರವಣಿಗೆ ನಡೆಸಿ, ಜಿಲ್ಲಾಧಿಕಾರಿಗಳು ಮತ್ತು...

“ಇಲ್ಲಿ 60 ವರ್ಷ ವಾಸಿಸಿದ್ದೆವು, ಒಂದೇ ದಿನದಲ್ಲಿ ನಿರಾಶ್ರಿತರಾದೆವು”: ಅಜಿ ನದಿ ದಡದ ಅಕ್ರಮ ಅತಿಕ್ರಮಣ ತೆರವಿನಲ್ಲಿ ಮನೆ ಕಳೆದುಕೊಂಡವರ ಮಾತು

ಗುಜರಾತ್‌ನ ರಾಜ್‌ಕೋಟ್ ಮುನ್ಸಿಪಲ್ ಕಾರ್ಪೊರೇಷನ್ (ಆರ್‌ಎಂಸಿ) ಜಂಗಲೇಶ್ವರದಲ್ಲಿ ನೂರಾರು ವಸತಿ ರಚನೆಗಳನ್ನು ನೆಲಸಮಗೊಳಿಸಿ ಹಲವಾರು ಕುಟುಂಬಗಳನ್ನು ನಿರಾಶ್ರಿತರನ್ನಾಗಿ ಮಾಡಿರುವ ಅಜಿ ನದಿಯ ದಡದಲ್ಲಿ ಅಕ್ರಮ ಅತಿಕ್ರಮಣಗಳನ್ನು ತೆಗೆದುಹಾಕಲು ದೊಡ್ಡ ಪ್ರಮಾಣದ ನೆಲಸಮ ಕಾರ್ಯಾಚರಣೆಯ...

ಇಂಡಿಯಾ ಬಣದ ಸಂಚಾಲಕರಾಗಲು ಸ್ಟಾಲಿನ್ ಸೂಕ್ತ: ಮಣಿಶಂಕರ್ ಅಯ್ಯರ್

"ಡಿಎಂಕೆ ಮುಖ್ಯಸ್ಥ ಎಂಕೆ ಸ್ಟಾಲಿನ್ ಅವರು ಇಂಡಿಯಾ ಬಣದ ಸಂಚಾಲಕರಾಗಲು ಸೂಕ್ತ" ಎಂದು ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ಪ್ರತಿಪಾದಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅಯ್ಯರ್, ತಮಿಳುನಾಡು ಮುಖ್ಯಮಂತ್ರಿ ಇಂಡಿಯಾ ಬಣದ ಸಂಚಾಲಕರಾಗಲು ಉತ್ತಮ...

ಬೆಂಗಳೂರು: ಮತ್ತು ಬೆರೆಸಿದ ಪಾನೀಯ ನೀಡಿ ಗೆಳೆಯ ಮತ್ತು ಆತನ ಸ್ನೇಹಿತನಿಂದ ಅತ್ಯಾಚಾರ, ಬೆದರಿಕೆ: ಕಾಲೇಜು ವಿದ್ಯಾರ್ಥಿನಿಯಿಂದ ದೂರು

19 ವರ್ಷದ ಖಾಸಗಿ ಕಾಲೇಜು ವಿದ್ಯಾರ್ಥಿನಿಯೊಬ್ಬಳು ತನ್ನ ಗೆಳೆಯ ಮತ್ತು ಅವನ ಸ್ನೇಹಿತನ ವಿರುದ್ಧ ಮಾದಕ ದ್ರವ್ಯ ಸೇವಿಸಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ದೂರು ದಾಖಲಿಸಿದ್ದಾಳೆ. ಜಕ್ಕೂರಿನಲ್ಲಿ ಈ ಘಟನೆ ನಡೆದಿದ್ದು, ವಿದ್ಯಾರ್ಥಿನಿಗೆ...

ಮಕ್ಕಳಲ್ಲಿ ಹಿಂಸಾತ್ಮಕ ಪ್ರವೃತ್ತಿ ತಡೆಯಲು ಮೀನು-ಮಾಂಸ ಮಾರಾಟ ನಿಷೇಧ: ಬಿಹಾರ ಉಪಮುಖ್ಯಮಂತ್ರಿ

ಮಕ್ಕಳಲ್ಲಿ 'ಹಿಂಸಾತ್ಮಕ ಪ್ರವೃತ್ತಿ'ಗಳನ್ನು ನಿಲ್ಲಿಸುವ ಪ್ರಯತ್ನದಲ್ಲಿ ಧಾರ್ಮಿಕ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಅಥವಾ ಜನದಟ್ಟಣೆಯ ಸ್ಥಳಗಳ ಬಳಿ ಮಾಂಸ ಮತ್ತು ಮೀನು ಮಾರಾಟವನ್ನು ನಿಷೇಧಿಸುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಬಿಹಾರ ಉಪಮುಖ್ಯಮಂತ್ರಿ ವಿಜಯ್...

ದೆಹಲಿಯಲ್ಲಿ ಅರುಣಾಚಲದ ಮಹಿಳೆಯರಿಗೆ ಜನಾಂಗೀಯ ನಿಂದನೆ : ಪ್ರಕರಣ ದಾಖಲು

ದೆಹಲಿಯ ಮಾಳವೀಯ ನಗರದಲ್ಲಿ ಅರುಣಾಚಲ ಪ್ರದೇಶದ ಮೂವರು ಮಹಿಳೆಯರಿಗೆ ಜನಾಂಗೀಯ ನಿಂದನೆ ಮಾಡಿ, ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. ಫೆಬ್ರವರಿ 20 ಎಸಿ ದುರಸ್ತಿ ಸಂದರ್ಭದಲ್ಲಿ ಉಂಟಾದ ಸಣ್ಣ ಜಗಳವೊಂದು ಜನಾಂಗೀಯ ನಿಂದನೆಗೆ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿಯನ್ನು ರಕ್ಷಿಸಿದ್ದ ಜಿಮ್ ಟ್ರೈನರ್ ‘ಮೊಹಮ್ಮದ್ ದೀಪಕ್’ ಅವರನ್ನು ಭೇಟಿಯಾದ ರಾಹುಲ್ ಗಾಂಧಿ 

ನವದೆಹಲಿ: ಕಳೆದ ತಿಂಗಳು ಕೋಟ್ದ್ವಾರದಲ್ಲಿರುವ ಅಹ್ಮದ್ ಅವರ ಬಾಬಾ ಸ್ಕೂಲ್ ಡ್ರೆಸ್ & ಮ್ಯಾಚಿಂಗ್ ಸೆಂಟರ್‌ನ ರಕ್ಷಣೆಗೆ ಬಂದು ಸುದ್ದಿಯಲ್ಲಿದ್ದ ಜಿಮ್ ತರಬೇತುದಾರ ದೀಪಕ್ ಅವರನ್ನು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್...

‘ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ..’; ಛಲವಾದಿಗೆ ಸಚಿವ ಪ್ರಿಯಾಂಕ್‌ ತಿರುಗೇಟು

"ಸಂವಿಧಾನ ವಿರೋಧಿಸಿ ಕರಡು ಪ್ರತಿಯನ್ನು ಸುಟ್ಟಿದ್ದ ಸಂಘದವರ ಚಡ್ಡಿಗಳನ್ನು ತಲೆ ಮೇಲೆ ಹೊರುವುದು ದಲಿತತ್ವವಲ್ಲ" ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರಿಗೆ ಸಚಿವ ಪ್ರಿಯಾಂಕ್‌ ಖರ್ಗೆ ತಿರುಗೇಟು ನೀಡಿದ್ದಾರೆ. ಈ ಬಗ್ಗೆ...

ಅಮೆರಿಕದಿಂದ ದಾಳಿ ಬೆದರಿಕೆ : ಇರಾನ್ ತೊರೆಯುವಂತೆ ಭಾರತೀಯ ಪ್ರಜೆಗಳಿಗೆ ಸೂಚನೆ

ಅಮೆರಿಕದ ದಾಳಿ ಬೆದರಿಕೆ ಹಾಗೂ ಮತ್ತೆ ಪ್ರತಿಭಟನೆಗಳು ಭುಗಿಲೆದ್ದಿರುವ ಕಾರಣ, ಇರಾನ್‌ನಲ್ಲಿರುವ ಎಲ್ಲಾ ಭಾರತೀಯರು ವಾಣಿಜ್ಯ ವಿಮಾನಗಳು ಸೇರಿದಂತೆ ಲಭ್ಯವಿರುವ ಸಾರಿಗೆ ವ್ಯವಸ್ಥೆಯ ಮೂಲಕ ತಕ್ಷಣ ದೇಶ ತೊರೆಯುವಂತೆ ತೆಹ್ರಾನ್‌ನಲ್ಲಿರುವ ಭಾರತೀಯ ರಾಯಭಾರ...

ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

ಕೇಂದ್ರ ಅಪರಾಧ ಶಾಖೆ (ಸಿಸಿಬಿ) ವಶಕ್ಕೆ ಪಡೆದು ವಿಚಾರಣೆ ನಡೆಸಿದ ಕೆಲವು ದಿನಗಳ ನಂತರ, ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ.  ಪವಿತ್ರಾ ಬಿ.ಎನ್ ಸಲ್ಲಿಸಿದ ದೂರಿನ ಆಧಾರದ ಮೇಲೆ...