Homeಮುಖಪುಟಮೋದಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಕಾಂಗ್ರೆಸ್‌: 'ಶ್ವೇತಪತ್ರ' ಕ್ಕೆ ಪ್ರತಿಯಾಗಿ 'ಕಪ್ಪು ಪತ್ರ'!

ಮೋದಿ ಸರ್ಕಾರಕ್ಕೆ ಸೆಡ್ಡು ಹೊಡೆಯಲು ಮುಂದಾದ ಕಾಂಗ್ರೆಸ್‌: ‘ಶ್ವೇತಪತ್ರ’ ಕ್ಕೆ ಪ್ರತಿಯಾಗಿ ‘ಕಪ್ಪು ಪತ್ರ’!

- Advertisement -
- Advertisement -

ಹಿಂದಿನ ಯುಪಿಎ ಸರ್ಕಾರದ ಹತ್ತು ವರ್ಷಗಳ ಅಧಿಕಾರದ ವಿರುದ್ಧ ಕೇಂದ್ರ ಸರ್ಕಾರ ಮಂಡಿಸಲು ಉದ್ದೇಶಿಸಿರುವ ‘ಶ್ವೇತಪತ್ರ’ಕ್ಕೆ ಪ್ರತಿಯಾಗಿ ಕಾಂಗ್ರೆಸ್ ಮೋದಿ ಸರ್ಕಾರದ ಹತ್ತು ವರ್ಷಗಳ ಅಧಿಕಾರದ ಕುರಿತು ‘ಕಪ್ಪು ಪತ್ರ’ವನ್ನು ತರುವ ಸಾಧ್ಯತೆಯಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಎಎನ್‌ಐ ವರದಿ ಮಾಡಿದೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು  ಕೇಂದ್ರ ಸರಕಾರದ ‘ಶ್ವೇತಪತ್ರ’ಕ್ಕೆ ಪ್ರತಿಯಾಗಿ ಕಪ್ಪು ಕಾಗದವನ್ನು ತರುವ ಸಾಧ್ಯತೆಯಿದೆ ಎಂದು  ವರದಿಯಾಗಿದ್ದು, ಬಿಜೆಪಿಯ ತಂತ್ರಕ್ಕೆ ಪ್ರತಿತಂತ್ರ ಹೂಡಿ ಕಾಂಗ್ರೆಸ್‌ ಸೆಡ್ಡು ಹೊಡೆಯಲು ಮುಂದಾಗಿದೆ ಎನ್ನಲಾಗಿದೆ.

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಧ್ಯಂತರ ಬಜೆಟ್ ಮಂಡಿಸುವಾಗ, ಯುಪಿಎ ಆಡಳಿತ ಮತ್ತು ಎನ್‌ಡಿಎ ಅವಧಿಯಲ್ಲಿ 2014ರ ಮೊದಲು ಮತ್ತು ನಂತರದ ಭಾರತೀಯ ಆರ್ಥಿಕತೆಯ ಸ್ಥಿತಿಯನ್ನು ಹೋಲಿಸುವ ‘ಶ್ವೇತಪತ್ರ’ವನ್ನು ತಮ್ಮ ಸರ್ಕಾರ ಮಂಡಿಸಲಿದೆ ಎಂದು ಹೇಳಿದ್ದಾರೆ.

ಗಮನಾರ್ಹವೆಂದರೆ, ಲೋಕಸಭೆ ಚುನಾವಣೆಗೂ ಮುನ್ನ ನಡೆಯುತ್ತಿರುವ ಸದನದ ಕೊನೆಯ ಅಧಿವೇಶನ ಇದಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಈಗಾಗಲೇ ಲೋಕಸಭೆ ಮತ್ತು ರಾಜ್ಯಸಭೆ ಎರಡರಲ್ಲೂ ಮಾತನಾಡಿದ್ದಾರೆ. ದ್ವಿಸದನದಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದ ವೇಳೆ ದೇಶದ ಆರ್ಥಿಕ ಸ್ಥಿತಿಯ ಎಷ್ಟು ಕಳಪೆಯಾಗಿತ್ತು ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದಾಗ ಎಷ್ಟು ಬದಲಾವಣೆ ಆಗಿದೆ ಎಂದು ತಾನು ಶ್ವೇತಪತ್ರವನ್ನು ಮಂಡಿಸುತ್ತೇನೆ ಎಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದರು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಸಭೆ ಮತ್ತು ಲೋಕಸಭೆಯ ಉಭಯ ಸದನಗಳಲ್ಲಿ ಇದನ್ನು ಮಂಡಿಸಲಿದ್ದಾರೆ. 2024ರ ಮಧ್ಯಂತರ ಬಜೆಟ್ ಭಾಷಣದಲ್ಲಿ, ಸೀತಾರಾಮನ್ ಕೇಂದ್ರ ಸರ್ಕಾರವು ‘ಶ್ವೇತಪತ್ರ’ವನ್ನು ಮಂಡಿಸಲಿದೆ ಎಂದು ಹೇಳಿದ್ದರು.
ಯುಪಿಎ ಅವಧಿಯ ಹಣಕಾಸಿನ ಬಿಕ್ಕಟ್ಟನ್ನು ನಿವಾರಿಸಲಾಗಿದೆ ಮತ್ತು ಸರ್ವತೋಮುಖ ಅಭಿವೃದ್ಧಿಯೊಂದಿಗೆ ಆರ್ಥಿಕತೆ ಉನ್ನತ ಸುಸ್ಥಿರ ಬೆಳವಣಿಗೆಯ ಹಾದಿಯಲ್ಲಿ ದೃಢವಾಗಿದೆ. 2014ರವರೆಗೆ ನಾವು ಎಲ್ಲಿದ್ದೇವೆ, ಈಗ ಎಲ್ಲಿದ್ದೇವೆ ಎಂದು ನೋಡುವುದು ಈಗ ಸೂಕ್ತವಾಗಿದೆ ಮತ್ತು ‘ಶ್ವೇತಪತ್ರ’ ವನ್ನು ಮಂಡಿಸಲಿದ್ದೇವೆ ಎಂದು ನಿರ್ಮಲಾ ಸೀತಾರಾಮನ್‌ ಹೇಳಿದ್ದಾರೆ.

ಕಾಂಗ್ರೆಸ್‌ನ್ನು ಸೋಲಿಸಿ ಬಿಜೆಪಿ ಅಧಿಕಾರಕ್ಕೆ ಬಂದ 2014ರ ಮೊದಲು ಮತ್ತು ನಂತರ ಭಾರತದ ಆರ್ಥಿಕ ಸ್ಥಿತಿಯನ್ನು ಹೋಲಿಸಿ ಸರ್ಕಾರ ಶ್ವೇತಪತ್ರವನ್ನು ಮಂಡಿಸಲಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಜನವರಿ 31ರಂದು ಆರಂಭವಾದ ಲೋಕಸಭೆ ಅಧಿವೇಶನವು ಫೆಬ್ರುವರಿ 9ರಂದು ಕೊನೆಗೊಳ್ಳಲಿದೆ.

ಲೋಕಸಭೆಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಸರ್ಕಾರವು ಸದನಕ್ಕೆ ತರುವ ಯಾವುದೇ ಪತ್ರಗಳ ಬಗ್ಗೆ ಉತ್ತರಿಸಲು ತಮ್ಮ ಪಕ್ಷ ಸಿದ್ಧವಾಗಿದೆ. ನರೇಂದ್ರ ಮೋದಿಗೆ ಕಾಂಗ್ರೆಸ್ ಫೋಬಿಯಾ ಇದೆ. ನಾವು ಹೋರಾಟಕ್ಕೆ ಸಿದ್ಧರಿದ್ದೇವೆ. ಸರ್ಕಾರವು ಶ್ವೇತಪತ್ರ, ಕೆಂಪು ಪತ್ರ, ಕಪ್ಪು ಪತ್ರವನ್ನು ತರಬಹುದು, ನಮಗೆ ಯಾವುದೇ ತೊಂದರೆ ಇಲ್ಲ. ಆದರೆ ಮೆಹುಲ್ ಚೋಕ್ಸಿ ಅವರ ಪತ್ರಗಳನ್ನು ಕೂಡ ಸದನದಲ್ಲಿ ಮಂಡಿಸಬೇಕು ಎಂದು ಚೌಧರಿ ಹೇಳಿದ್ದಾರೆ.

ಇದನ್ನು ಓದಿ: ಬಿಜೆಪಿಯ ಮುಂದಿನ ಟಾರ್ಗೆಟ್‌ ಕಾಶಿ, ಮಥುರಾ! ಯೋಗಿ ಆದಿತ್ಯನಾಥ್‌ ಹೇಳಿಕೆಯಲ್ಲೇನಿದೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...