Homeಮುಖಪುಟಕಾಂಗ್ರೆಸ್ ಪೋಸ್ಟರ್‌ಗಳಲ್ಲಿ ತಿರುಚಿದ ಭಾರತದ ನಕ್ಷೆ; 'ಮೊಹಬ್ಬತ್ ಕಿ ದುಕಾನ್ ಯಾವಾಗಲೂ ಚೀನಾಕ್ಕೆ ತೆರೆದಿರುತ್ತದೆ' ಎಂದ...

ಕಾಂಗ್ರೆಸ್ ಪೋಸ್ಟರ್‌ಗಳಲ್ಲಿ ತಿರುಚಿದ ಭಾರತದ ನಕ್ಷೆ; ‘ಮೊಹಬ್ಬತ್ ಕಿ ದುಕಾನ್ ಯಾವಾಗಲೂ ಚೀನಾಕ್ಕೆ ತೆರೆದಿರುತ್ತದೆ’ ಎಂದ ಬಿಜೆಪಿ

- Advertisement -
- Advertisement -

ಬೆಳಗಾವಿಯಲ್ಲಿ 1924 ರ ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವದ ಅಂಗವಾಗಿ ಕಾಂಗ್ರೆಸ್ ಪ್ರದರ್ಶಿಸಿದ ಭಾರತದ ನಕ್ಷೆಯನ್ನು ತಪ್ಪಾಗಿ ನಿರೂಪಿಸಲಾಗಿದೆ ಎಂಬ ಆರೋಪದ ಮೇಲೆ ದೊಡ್ಡ ವಿವಾದ ಭುಗಿಲೆದ್ದಿದೆ.

ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಕಾರ್ಯಕ್ರಮವನ್ನು ಪ್ರಚಾರಕ್ಕೆ ಬೆಳಗಾವಿ ಜಿಲ್ಲೆಯಾದ್ಯಂತ ಪೋಸ್ಟರ್‌ಗಳನ್ನು ಹಾಕಿದೆ. ಭಾರತೀಯ ಜನತಾ ಪಕ್ಷ ಮತ್ತು ಅದರ ಎನ್‌ಡಿಎ ಮಿತ್ರ ಪಕ್ಷವಾದ ಜನತಾ ದಳ (ಜಾತ್ಯತೀತ) ಈ ಪೋಸ್ಟರ್‌ಗಳಲ್ಲಿ ಕಾಣಿಸಿಕೊಂಡಿರುವ ಭಾರತದ ನಕ್ಷೆಯು, ಪಾಕ್ ಆಕ್ರಮಿತ ಕಾಶ್ಮೀರದ (ಪಿಒಕೆ) ಗಿಲ್ಗಿಟ್ ಪ್ರದೇಶ, ಜಮ್ಮು ಮತ್ತು ಕಾಶ್ಮೀರ ಅವಿಭಾಜ್ಯ ಭಾಗಗಳಾದ ಅಕ್ಸಾಯ್ ಚಿನ್ ಅನ್ನು ಕೈಬಿಟ್ಟಿದೆ ಎಂದು ಹೇಳಿಕೊಂಡಿದೆ.

“ರಾಗಾ ಅವರ ಮೊಹಬ್ಬತ್ ಕಿ ದುಕಾನ್ ಚೀನಾಕ್ಕೆ ಯಾವಾಗಲೂ ತೆರೆದಿರುತ್ತದೆ! ಅವರು ರಾಷ್ಟ್ರವನ್ನು ಒಡೆಯುತ್ತಾರೆ. ಅವರು ಅದನ್ನು ಒಮ್ಮೆ ಮಾಡಿದ್ದಾರೆ. ಅವರು ಅದನ್ನು ಮತ್ತೆ ಮಾಡುತ್ತಾರೆ” ಎಂದು ಬಿಜೆಪಿ ಎಕ್ಸ್‌ನಲ್ಲಿ ವಾಗ್ದಾಳಿ ನಡೆಸಿದೆ.

ಬಿಜೆಪಿ ಕರ್ನಾಟಕ ಘಟಕವು, ಭಾರತದ ಭೂಪಟದ ‘ತಿರುಚಿದ ಚಿತ್ರಣ’ ತನ್ನ ‘ಮತ ಬ್ಯಾಂಕ್’ ಅನ್ನು ಸಮಾಧಾನಪಡಿಸುವ ಮಾರ್ಗವಾಗಿದೆ ಎಂದು ಆರೋಪಿಸಿದೆ. “@ಕಾಂಗ್ರೆಸ್, ಕಾಶ್ಮೀರವನ್ನು ಪಾಕಿಸ್ತಾನದ ಭಾಗವೆಂದು ಬಿಂಬಿಸುವ ತಮ್ಮ ಬೆಳಗಾವಿ ಕಾರ್ಯಕ್ರಮದಲ್ಲಿ ತಿರುಚಿದ ನಕ್ಷೆಯನ್ನು ಪ್ರದರ್ಶಿಸುವ ಮೂಲಕ ಭಾರತದ ಸಾರ್ವಭೌಮತೆಗೆ ಸಂಪೂರ್ಣ ಅಗೌರವ ತೋರಿಸಿದ್ದಾರೆ. ಇದೆಲ್ಲ ಕೇವಲ ತಮ್ಮ ವೋಟ್ ಬ್ಯಾಂಕ್ ಓಲೈಕೆಗಾಗಿ. ಇದು ನಾಚಿಕೆಗೇಡಿನ ಸಂಗತಿ!” ಎಂದು ಪಕ್ಷವು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ.

ಸಂಘಟಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಬೇಕು ಎಂದು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಗ್ರಹಿಸಿದ್ದಾರೆ.

“ಭಾರತದ ತಪ್ಪಾದ ನಕ್ಷೆಯ ಪ್ರಕಟಣೆಯು ಜಿಯೋಸ್ಪೇಷಿಯಲ್ ಮಾಹಿತಿ ಮಾನದಂಡಗಳ ಉಲ್ಲಂಘನೆಯನ್ನು ಮಾತ್ರವಲ್ಲದೆ ಕಾನೂನನ್ನು ಉಲ್ಲಂಘಿಸುತ್ತದೆ” ಎಂದು ಯತ್ನಾಳ್ ಅವರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅವರ ಪ್ರಕಾರ, ಐಪಿಸಿಯ ಸೆಕ್ಷನ್ 74 ರ ಅಡಿಯಲ್ಲಿ, ಭಾರತದ ತಪ್ಪು ನಕ್ಷೆಯನ್ನು ಪ್ರದರ್ಶಿಸುವುದು ಸ್ಪಷ್ಟ ಅಪರಾಧವಾಗಿದೆ. ಇದು ರಾಷ್ಟ್ರೀಯ ಗೌರವ ಕಾಯಿದೆಯ ಉಲ್ಲಂಘನೆಯೂ ಆಗಿದೆ ಎಂದು ಹೇಳಿದ್ದಾರೆ.

ಕಾಂಗ್ರೆಸ್ ತನ್ನ ಐತಿಹಾಸಿಕ ಸಿಡಬ್ಲ್ಯೂಸಿ ಅಧಿವೇಶನವನ್ನು ಭಾರತದ ಭೂಪಟವನ್ನು ವಿರೂಪಗೊಳಿಸುವ ಮೂಲಕ ಆಚರಿಸುವ ವಿಧಾನ ಇದು, ಭಾರತೀಯ ಭೂಪ್ರದೇಶದ ಭಾಗವಾಗಿ ಪಿಒಕೆ ಅನ್ನು ತೋರಿಸುವುದಿಲ್ಲ. ಕಾಂಗ್ರೆಸ್‌ಗೆ ನಾಚಿಕೆಯಾಗಬೇಕು ಎಂದು ಹೇಳಿದ್ದಾರೆ.

“ಭಾರತದ ನಕ್ಷೆಯನ್ನು ತಪ್ಪಾಗಿ ಚಿತ್ರಿಸಿದ ಸಂಘಟಕರ ವಿರುದ್ಧ ತಕ್ಷಣವೇ ಪ್ರಕರಣ ದಾಖಲಿಸುವಂತೆ ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ನಾನು ಮನವಿ ಮಾಡುತ್ತೇನೆ” ಎಂದು ಅವರು ಹೇಳಿದರು.

ಜೆಡಿ (ಎಸ್) ತನ್ನ ‘ಎಕ್ಸ್’ ಪೋಸ್ಟ್‌ನಲ್ಲಿ, “ಇಟಾಲಿಯನ್ ಕಾಂಗ್ರೆಸ್ ‘ಗಾಂಧಿ ಭಾರತ’ ಎಂಬ ಹೆಸರಿನಲ್ಲಿ ಬೆಳಗಾವಿಯಲ್ಲಿ ಚಿತ್ರಿಸಿದ ಭಾರತದ ನಕ್ಷೆಯಿಂದ ಕಾಶ್ಮೀರ ಪ್ರದೇಶವನ್ನು ಕೈಬಿಟ್ಟಿದೆ. ಭಾರತದ ನಕ್ಷೆಯನ್ನು ವಿರೂಪಗೊಳಿಸುವುದು ಮತ್ತು ಬದಲಾಯಿಸುವುದು ದೇಶದ್ರೋಹದಂತಹ ಗಂಭೀರ ಅಪರಾಧ ಕೃತ್ಯವಾಗಿದೆ” ಎಂದು ಹೇಳಿದೆ.

ತಪ್ಪಾದ ಪೋಸ್ಟರ್ ಗಳನ್ನು ತೆಗೆಯಲಾಗುವುದು ಎಂದು ರಾಜ್ಯ ಪಕ್ಷದ ಮುಖ್ಯಸ್ಥರೂ ಆದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ.

“ಕೆಲವು ನಾಯಕರು ಏನಾದರೂ ತಪ್ಪು ಮಾಡಿರಬಹುದು, ನಾವು ಎಲ್ಲವನ್ನೂ ತೆಗೆದುಹಾಕುತ್ತಿದ್ದೇವೆ, ಮೊಸರಿನಲ್ಲಿ ಸಣ್ಣ ಕಲ್ಲನ್ನು ಆರಿಸಲು ಪ್ರಯತ್ನಿಸಬೇಡಿ.. ನಾವು ಭಾರತೀಯ ಸಂಪ್ರದಾಯ ಮತ್ತು ಅಂದಿನ ಮೌಲ್ಯಗಳ ಪ್ರಕಾರ ಮಾಡಿದ್ದೇವೆ.. ನಮ್ಮ ಮೇಲೆ ದಾಳಿ ಮಾಡಲು ಬಿಜೆಪಿ ಇದೆ. ಅವರು ಅಸೂಯೆಗೆ ಯಾವುದೇ ಔಷಧಿ ಇಲ್ಲ, ಅವರು ಬಯಸಿದ್ದನ್ನು ಮಾಡಲಿ..” ಎಂದು ಅವರು ಹೇಳಿದರು.

ಇದನ್ನೂ ಓದಿ; ಅರ್ಕಾವತಿ ನದಿ ನೀರಿನಲ್ಲಿ ವಿಷಕಾರಿ ಅಂಶ ಪತ್ತೆ; ಕೇಂದ್ರದ ಸಂಸ್ಥೆಗಳಿಗೆ ಎನ್‌ಜಿಟಿಯಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ: ಎರಡು ಗಂಟೆಗಳಲ್ಲಿ 40 ಜನರಿಗೆ ಕಚ್ಚಿದ ಬೀದಿ ನಾಯಿ: ಚಿಕಿತ್ಸೆಗಾಗಿ ಆಸ್ಪತ್ರೆ ಎದುರು ಸರತಿ ಸಾಲಿನಲ್ಲಿ ನಿಂತ ಗಾಯಾಳುಗಳು

ಬೀಡ್: ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೈಜ್ ಪಟ್ಟಣದಲ್ಲಿ ಬೀದಿ ನಾಯಿಯೊಂದು ಎರಡು ಗಂಟೆಗಳಲ್ಲಿ ಕನಿಷ್ಠ 40 ಜನರನ್ನು ಕಚ್ಚಿದ್ದು, ರೇಬೀಸ್ ವಿರುದ್ಧ ಲಸಿಕೆ ಪಡೆಯಲು ಸಂತ್ರಸ್ತರು ಸರ್ಕಾರಿ ಆಸ್ಪತ್ರೆಯಲ್ಲಿ ಸರತಿ ಸಾಲಿನಲ್ಲಿ ನಿಲ್ಲುವಂತೆ...

ಇರಾನ್‌ಗೆ ಶಸ್ತ್ರಾಸ್ತ್ರ ಕಳುಹಿಸುವುದಕ್ಕೆ ಚೀನಾ ಅಧ್ಯಕ್ಷ ಜಿನ್‌ಪಿಂಗ್ ನಿರಾಕರಿಸಿದ್ದಾರೆ: ಡೊನಾಲ್ಡ್‌ ಟ್ರಂಪ್

"ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಇರಾನ್‌ಗೆ ಶಸ್ತ್ರಾಸ್ತ್ರಗಳನ್ನು ಕಳುಹಿಸುವುದನ್ನು ನಿರಾಕರಿಸಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಬುಧವಾರ ಹೇಳಿದ್ದಾರೆ. ಚೀನಾ ಇರಾನ್‌ಗೆ ಯುದ್ಧಕ್ಕಾಗಿ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದೆ ಎಂಬ ವರದಿಗಳ ನಂತರ ಅಮೆರಿಕದ...

‘ಉದ್ದೇಶಿತ ಮಹಿಳಾ ಮೀಸಲಾತಿಯಲ್ಲಿ ಎಸ್‌ಸಿ, ಎಸ್‌ಟಿ, ಒಬಿಸಿ ಮಹಿಳೆಯರಿಗೆ ಪ್ರತ್ಯೇಕ ಕೋಟಾ ನಿಗದಿ ಮಾಡಬೇಕು’: ಮಾಯಾವತಿ

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಉದ್ದೇಶಿತ ಶೇಕಡಾ 33ರಷ್ಟು ಮೀಸಲಾತಿಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಇತರ ಹಿಂದುಳಿದ ವರ್ಗಗಳಿಗೆ ಸೇರಿದ ಮಹಿಳೆಯರಿಗೆ ಪ್ರತ್ಯೇಕ ಕೋಟಾವನ್ನು ನಿಗದಿಪಡಿಸಬೇಕೆಂದು ಬಹುಜನ ಸಮಾಜ...

ಆತ್ಮಾವಲೋಕನಕ್ಕೆ ಸಿದ್ಧವಿಲ್ಲದ ಕಾಂಗ್ರೆಸ್ಸಿನಿಂದ ಅಲ್ಪಸಂಖ್ಯಾತರ ಭಾವನೆಗಳ ಮೇಲೆ ಹಲ್ಲೆ: ಎದ್ದೇಳು ಕರ್ನಾಟಕ

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಉಪ ಚುನಾವಣೆಯು ಕಾಂಗ್ರೆಸ್‌ ಪಕ್ಷದಲ್ಲಿ ಗೊಂದಲ ಮತ್ತು ವಿವಾದ ಉಂಟುಮಾಡಿದೆ. ಮತದಾನ ಮುಗಿದ ಬಳಿಕ, ಕಾಂಗ್ರೆಸ್‌ ಪಕ್ಷವು ಮುಸ್ಲಿಂ ನಾಯಕರಾದ...

ಮಹಿಳಾ ಮೀಸಲಾತಿ, ಕ್ಷೇತ್ರ ಮರುವಿಂಗಡಣೆ ಕುರಿತ ಚರ್ಚೆ: ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ಸಭೆ ಸೇರಿದ ವಿಪಕ್ಷ ನಾಯಕರು

ಸಂಸತ್ತಿನ ಮೂರು ದಿನಗಳ ವಿಶೇಷ ಅಧಿವೇಶನಕ್ಕೂ ಮುನ್ನ, ಮಹಿಳಾ ಮೀಸಲಾತಿ ಕಾನೂನು ಮತ್ತು ಪ್ರಸ್ತಾವಿತ ಕ್ಷೇತ್ರ ಮರುವಿಂಗಡಣೆ ತಿದ್ದುಪಡಿ ಕುರಿತು ಕಾರ್ಯತಂತ್ರವನ್ನು ಚರ್ಚಿಸಲು ವಿರೋಧ ಪಕ್ಷಗಳ ಉನ್ನತ ನಾಯಕರು ಬುಧವಾರ ನವದೆಹಲಿಯಲ್ಲಿರುವ ಕಾಂಗ್ರೆಸ್...

ಯೋಗೀಶ್‌ ಗೌಡ ಕೊಲೆ ಪ್ರಕರಣ : ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ

ಧಾರವಾಡ ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಯೋಗೀಶ್‌ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪು ಹೊರಬಿದ್ದಿದ್ದು, ಹಾಲಿ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ವಿನಯ್‌ ಕುಲಕರ್ಣಿ ಸೇರಿ 19 ಮಂದಿ ಆರೋಪಿಗಳು ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ...

ಉತ್ತರ ಪ್ರದೇಶ| ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣು

ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿದ್ದ 17 ವರ್ಷದ ದಲಿತ ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟ ಜಿಲ್ಲೆಯ ಹಳ್ಳಿಯಲ್ಲಿ ನಡೆದಿದೆ. ಹೋಳಿ ಹಬ್ಬದಂದು ನಡೆದಿತ್ತು ಎನ್ನಲಾದ ಅತ್ಯಾಚಾರ ಪ್ರಕರಣದಲ್ಲಿ ಸ್ಥಳೀಯ ಮೂವರು ಯುವಕರ...

“ತಲೆ ಮೇಲೆ ತೂಗುತ್ತಿದ್ದ ಕತ್ತಿ ಈಗ ಮೈಮೇಲೆ ಎರಗಿದೆ”: ಕ್ಷೇತ್ರ ಮರುವಿಂಗಡನೆ ವಿರುದ್ಧ ಸಮರ ಸಾರಿದ ಸ್ಟಾಲಿನ್; ರಾಜ್ಯಾದ್ಯಂತ ಕಪ್ಪು ಬಾವುಟ ಪ್ರತಿಭಟನೆಗೆ ಕರೆ

ಕೇಂದ್ರ ಸರ್ಕಾರದ ಪ್ರಸ್ತಾವಿತ ಕ್ಷೇತ್ರ ಮರುವಿಂಗಡನೆ ಪ್ರಕ್ರಿಯೆಯ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ತಮ್ಮ ಟೀಕೆಯನ್ನು ತೀವ್ರಗೊಳಿಸಿದ್ದು, ಇದನ್ನು ದಕ್ಷಿಣ ರಾಜ್ಯಗಳ ವಿರುದ್ಧದ 'ಐತಿಹಾಸಿಕ ಅನ್ಯಾಯ' ಎಂದು ಕರೆದಿದ್ದಾರೆ ಮತ್ತು ಗುರುವಾರ...

ಶಿಕೋಪುರ ಭೂ ವ್ಯವಹಾರದ ಹಣ ವರ್ಗಾವಣೆ ಪ್ರಕರಣ; ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

ಹರಿಯಾಣದ ಶಿಕೋಪುರದಲ್ಲಿ ನಡೆದ ವಿವಾದಾತ್ಮಕ ಭೂ ವ್ಯವಹಾರಕ್ಕೆ ಸಂಬಂಧಿಸಿದ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿದಂತೆ ಉದ್ಯಮಿ ರಾಬರ್ಟ್ ವಾದ್ರಾ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ಸಲ್ಲಿಸಿದ್ದ ಆರೋಪಪಟ್ಟಿಯನ್ನು ಬುಧವಾರ ದೆಹಲಿ ನ್ಯಾಯಾಲಯವು ಪರಿಗಣಿಸಿದೆ....

ಕಾಂಗ್ರೆಸ್‌ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ‌ ಎಂಎಲ್‌ಸಿ ಅಬ್ದುಲ್ ಜಬ್ಬಾರ್ ಅಮಾನತು

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಬಳಿಕ ರಾಜ್ಯ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಆಂತರಿಕ ಭಿನ್ನತೆ ಸದ್ಯಕ್ಕೆ ಶಮನಗೊಳ್ಳುವ ಸಾಧ್ಯತೆ ಕಾಣುತ್ತಿಲ್ಲ. ಕಾಂಗ್ರೆಸ್‌ನ ರಾಜ್ಯ ಮತ್ತು ಹೈಕಮಾಂಡ್‌ ನಾಯಕರ ನಡೆ ಗಾಯಕ್ಕೆ ಮುಲಾಮು...