Homeಮುಖಪುಟಎರಡು ಭರವಸೆಗಳೊಂದಿಗೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಥತೆ

ಎರಡು ಭರವಸೆಗಳೊಂದಿಗೆ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಥತೆ

- Advertisement -
- Advertisement -

ಲೋಕಸಭೆ ಚುನಾವಣೆಗೆ ಧುಮುಕಲು ಪ್ರಮುಖವಾಗಿ ಎರಡು ಭರವಸೆಗಳೊಂದಿಗೆ ಕಾಂಗ್ರೆಸ್ ಸಿದ್ದತೆ ಮಾಡಿಕೊಳ್ಳುತ್ತಿದೆ. ಪಕ್ಷದ 139ನೇ ಸಂಸ್ಥಾಪನಾ ದಿನದ ಅಂಗವಾಗಿ ಮಹಾರಾಷ್ಟ್ರದ ನಾಗ್ಪುರದಲ್ಲಿ ಗುರುವಾರ ನಡೆದ ಮೆಗಾ ರ್‍ಯಾಲಿಯಲ್ಲಿ ‘ಜಾತಿ ಗಣತಿ ಮತ್ತು ಕನಿಷ್ಠ ಆದಾಯ ಖಾತರಿ’ ಈ ಎರಡು ವಿಷಯಗಳನ್ನು ಕೈ ನಾಯಕರು ತಮ್ಮ ಭಾಷಣಗಳಲ್ಲಿ ಪ್ರಮುಖವಾಗಿ ಉಲ್ಲೇಖಿಸಿದ್ದಾರೆ.

ಆರೆಸ್ಸೆಸ್‌ನ ಭದ್ರಕೋಟೆ ನಾಗ್ಪುರದ ಆಜಾದ್ ಮೈದಾನದಲ್ಲಿ ನಡೆದ ಕಾಂಗ್ರೆಸ್‌ನ ‘ಹೈನ್ ತೈಯಾರ್ ಹಮ್’ ರ್‍ಯಾಲಿಯಲ್ಲಿ ದೇಶದ ವಿವಿಧ ಭಾಗಗಳಿಂದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರು ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್‌ನ ಸೋಲಿನ ಕುರಿತು ಪರಾಮರ್ಶೆ ನಡೆಸಿದ್ದಾರೆ. ಜಾತಿ ಗಣತಿ ವಿಚಾರದಲ್ಲಿ ಪಕ್ಷ ಮರುಚಿಂತನೆ ನಡೆಸಲಿದೆ ಎಂದು ಹೇಳಿದ್ದಾರೆ.

ಪಂಚರಾಜ್ಯ ಚುನಾವಣೆಗಳಲ್ಲಿ ಕಾಂಗ್ರೆಸ್‌ ಜಾತಿ ಗಣತಿಯನ್ನು ಪ್ರಮುಖ ವಿಷಯವಾಗಿ ಮುನ್ನಲೆಗೆ ತಂದಿತ್ತು. ಹಿಂದಿ ಭಾಷಿಕ ರಾಜ್ಯಗಳಲ್ಲಿ ಹೆಚ್ಚಿನ ಸಂಖ್ಯೆಗಳಲ್ಲಿ ಇರುವ ಹಿಂದುಳಿದ ವರ್ಗಗಳ ಮತಗಳನ್ನು ಜಾತಿ ಗಣತಿ ಅಸ್ತ್ರದ ಮೂಲಕ ಸೆಳೆಯುವ ಪ್ರಯತ್ನ ನಡೆಸಿತ್ತು. ಆದರೆ, ಕಾಂಗ್ರೆಸ್ ಲೆಕ್ಕಾಚಾರಗಳು ತಲೆ ಕೆಳಗಾಗಿವೆ. ಹಿಂದಿ ಭಾಷಿಕ ರಾಜ್ಯಗಳಾದ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಹಾಗಾಗಿ, ಕಾಂಗ್ರೆಸ್‌ನ ಜಾತಿ ಗಣತಿ ಅಸ್ತ್ರ ಲೋಕಸಭೆ ಚುನಾವಣೆಯಲ್ಲಿ ಸಹಕಾರಿಯಾಗುತ್ತಾ? ಎಂಬ ಅನುಮಾನ ಮೂಡಿದೆ.

ಆದರೆ, ಗುರುವಾರ ರ್‍ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತುರ್ತಾಗಿ ಜಾತಿ ಗಣತಿ ನಡೆಸುವುದಾಗಿ ಘೋಷಿಸಿದ್ದಾರೆ. ಒಬಿಸಿ, ಪರಿಶಿಷ್ಟ ಜಾತಿ ಅಥವಾ ಬುಡಕಟ್ಟು ಸಮುದಾಯಗಳ ಜನರು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರೂ, ಕಾನೂನು ರೂಪಿಸುವವರಲ್ಲಿ ಈ ಸಮುದಾಯದವರ ಪ್ರಾತಿನಿಧ್ಯ ಬಹಳ ಕಡಿಮೆಯಿದೆ ಎಂದು ಹೇಳಿದ್ದಾರೆ.

ಕರ್ನಾಟಕದ ವಿಧಾನಸಭಾ ಚುನಾವಣೆಗೂ ಮುನ್ನ ‘ಜಿತ್ನಿ ಅಬಾದಿ, ಉತ್ನಾ ಹಕ್’ (ಪ್ರಮಾಣಾನುಗುಣ ಮೀಸಲಾತಿ) ಎಂಬ ಘೋಷಣೆಯನ್ನು ರಾಹುಲ್ ಗಾಂಧಿ ಮಾಡಿದ್ದರು. ಇದೇ ವಿಚಾರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರಚಾರದ ಪ್ರಮುಖ ಅಂಶವಾಗಲಿದೆ ಎಂದು ವರದಿಗಳು ಹೇಳಿವೆ. ಪಂಚರಾಜ್ಯ ಚುನಾವಣೆಗಳ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ನಡೆದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆಯಲ್ಲೂ ಜಾತಿಗಣತಿಯನ್ನು ಬಲವಾಗಿ ಬೆಂಬಲಿಸುವ ನಿರ್ಧಾರವನ್ನು ಕಾಂಗ್ರೆಸ್ ಕಾರ್ಯಕಾರಿಣಿ ತೆಗೆದುಕೊಂಡಿತ್ತು. ಈ ವಿಷಯವನ್ನು ಸಿಡಬ್ಲ್ಯುಸಿ ಸಭೆ ಬಳಿಕ ನಡೆದ ಸುದ್ದಿಗೋಷ್ಠಿಯಲ್ಲಿ ರಾಹುಲ್ ಗಾಂಧಿ ತಿಳಿಸಿದ್ದರು.

ಗುರುವಾರದ ರ್‍ಯಾಲಿಯಲ್ಲಿ ಮಾತನಾಡಿದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ‘ನ್ಯಾಯ್ ಯೋಜನೆ’ ಅಥವಾ ಬಡವರಿಗೆ ಕನಿಷ್ಠ ಆದಾಯವನ್ನು ಒದಗಿಸುವ ಯೋಜನೆಯನ್ನು ಜಾರಿಗೆ ತರಲು ಪಕ್ಷ ಬದ್ಧವಾಗಿದೆ ಎಂದು ಹೇಳಿದ್ದಾರೆ. 2019ರ ಲೋಕಸಭೆ ಚುನಾವಣೆಗೆ ಮುಂಚಿತವಾಗಿ ನೀಡಿದ್ದ ಪಕ್ಷದ ಚುನಾವಣಾ ಭರವಸೆಯನ್ನು ನೆನಪಿಸಿಕೊಂಡ ಖರ್ಗೆ, ಈ ಬಾರಿ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬಂದರೆ ಬಡ ಕುಟುಂಬಗಳ ಯಜಮಾನಿಗೆ ವಾರ್ಷಿಕವಾಗಿ ಕನಿಷ್ಠ 70,000 ರೂ.ಗಳನ್ನು ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.

ಲೋಕಸಭೆ ಚುನಾವಣೆಗೆ ಅಯೋಧ್ಯೆ ರಾಮ ಮಂದಿರ ಉದ್ಘಾಟನೆ ಬಿಜೆಪಿಗೆ ದೊಡ್ಡ ಲಾಭವಾಗಿ ಮಾರ್ಪಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ವಿಚಾರವನ್ನು ಉಲ್ಲೇಖಿಸಿದ ಮಲ್ಲಿಕಾರ್ಜುನ ಖರ್ಗೆ, ದೇವಸ್ಥಾನದ ವಿಚಾರದಲ್ಲಿ ಬಿಜೆಪಿ ನಾಯಕರು ನಾಟಕವಾಡುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸುವ ಬದಲು, ಸಂಪೂರ್ಣವಾಗಿ ದೇವರ ಭಕ್ತಿಯಲ್ಲಿ ಮುಳುಗಿದ್ದಾರೆ ಎಂದು ಟೀಕಿಸಿದ್ದಾರೆ.

ರಾಹುಲ್ ಗಾಂಧಿ ಕಾಂಗ್ರೆಸ್‌ನ ಸಿದ್ದಾಂತದ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್‌ ದ್ವೇಷದ ಮಾರುಕಟ್ಟೆಯಲ್ಲಿ ಪ್ರೀತಿಯ ಅಂಗಡಿ ತೆರೆಯುತ್ತಿದೆ ಎಂದು ಭಾರತ್ ಜೋಡೋ ಯಾತ್ರೆ ವೇಳೆ ಅವರು ಹೇಳಿದ್ದ ಘೋಷವಾಕ್ಯವನ್ನು ಮತ್ತೊಮ್ಮೆ ಉಲ್ಲೇಖಿಸಿ ವಿಶ್ಲೇಷಿಸಿದ್ದಾರೆ.

ವಿಪಕ್ಷಗಳ ಮೈತ್ರಿಕೂಟ ಇಂಡಿಯಾ ಒಕ್ಕೂಟದಲ್ಲಿ ಕಾಂಗ್ರೆಸ್ ಬಲವಾಗಿ ನಿಲ್ಲಲಿದೆ ಎಂದು ಈರ್ವರು ನಾಯಕರು ಪುನರುಚ್ಚರಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ : ಲೋಕಸಭೆ ಚುನಾವಣೆಗೆ ಮುನ್ನ ಇವಿಎಂ ಸರಿಪಡಿಸದಿದ್ದರೆ ಬಿಜೆಪಿ 400 ಸ್ಥಾನಗಳನ್ನು ಗೆಲ್ಲಬಹುದು: ಸ್ಯಾಮ್ ಪಿತ್ರೋಡಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...