Homeಮುಖಪುಟಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದು ಬದಲಿಗೆ ತಮ್ಮ ಹಿರಿಯ ಸಹೋದ್ಯೋಗಿ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ತಾನು ಜೀವನದುದ್ದಕ್ಕೂ ಕಾಂಗ್ರೆಸ್‌ಗಾಗಿ ದುಡಿದಿದ್ದು, ಅದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹೊರ ಸರಿಯುವುದರೊಂದಿಗೆ ಕೇರಳ ಸಂಸದ ಶಶಿ ತರೂರ್‌ ಮತ್ತು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜು ಖರ್ಗೆ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಖಾಮುಖಿಯಾಗಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರಾಗಿದ್ದು, ನನ್ನ ಸೀನಿಯರ್‌ ಆಗಿದ್ದಾರೆ. ನೀವು ಸ್ಪರ್ಧಿಸಲು ಬಯಸುತ್ತೀರಾ ಎಂದು ನಿನ್ನೆಯೇ ಕೇಳಿದ್ದೆ. ಇಲ್ಲ ಎಂದರು. ನಾನು ಇಂದು ಅವರನ್ನು ಮತ್ತೆ ಭೇಟಿಯಾದೆ. ನೀವು ಸ್ಪರ್ಧಿಸುವುದಾದರೆ ನಾನು ಸಂಪೂರ್ಣವಾಗಿ ನಿಮ್ಮೊಂದಿಗಿದ್ದೇನೆ ಎಂದು ತಿಳಿಸಿದ್ದೇನೆ” ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೊನೆಯ ಕ್ಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ!

“ನಾನು ಅವರ ವಿರುದ್ಧ ಸ್ಪರ್ಧಿಸುವ ಬಗ್ಗೆ ಯೋಚಿಸಲು ಸಾಧ್ಯವಿಲ್ಲ. ಅವರು ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ನಾನು ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸುತ್ತೇನೆ” ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

“ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ನಾನು ರಾಜಿ ಮಾಡಿಕೊಳ್ಳುವುದಿಲ್ಲ; ಕೋಮು ಸೌಹಾರ್ದವನ್ನು ಹಾಳು ಮಾಡುವವರೊಂದಿಗೆ ನಾನು ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಗಾಂಧಿ ಕುಟುಂಬಕ್ಕೆ ನನ್ನ ಬದ್ಧತೆಯನ್ನು ನಾನು ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿದ ನಂತರ ದಿಗ್ವಿಜಯ್ ಸಿಂಗ್ ಅವರು ಪಕ್ಷದ ಉನ್ನತ ಹುದ್ದೆಗೆ ಸ್ಪರ್ಧಿಸುವ ಒಲವನ್ನು ವ್ಯಕ್ತಪಡಿಸಿದ್ದರು.

ಶುಕ್ರವಾರ ತಿರುವನಂತಪುರಂ ಸಂಸದ ಶಶಿ ತರೂರ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ತರೂರ್ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. “21 ನೇ ಶತಮಾನಕ್ಕೆ ಭಾರತದ ಸೇತುವೆಯನ್ನು ನಿರ್ಮಿಸಿದ ವ್ಯಕ್ತಿಗೆ ಇಂದು ಬೆಳಿಗ್ಗೆ ಗೌರವ ಸಲ್ಲಿಸಿದೆ” ಎಂದು ತರೂರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

ರಾಜ್ಯಸಭಾದ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಕೂಡ ಮಧ್ಯಾಹ್ನದ ಸುಮಾರಿಗೆ ಪಕ್ಷದ ಉನ್ನತ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಖರ್ಗೆ ಅವರನ್ನು ಕಣಕ್ಕಿಳಿಸಲು ಪಕ್ಷದ ನಾಯಕಿ ಸೋನಿಯಾ ಗಾಂಧಿ ಉತ್ಸುಕರಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

2019 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಯ ನೈತಿಕ ಹೊಣೆಗಾರಿಕೆಯನ್ನು ಒಪ್ಪಿಕೊಂಡ ನಂತರ ರಾಹುಲ್ ಗಾಂಧಿ ಪಕ್ಷ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಅವರ ಹೆಸರು ಕೇಳಿಬರುತ್ತಲೆ ಇತ್ತು.

ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...