Homeಮುಖಪುಟಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಶಶಿ ತರೂರು v/s ಮಲ್ಲಿಕಾರ್ಜುನ ಖರ್ಗೆ; ದಿಗ್ವಿಜಯ್ ಸಿಂಗ್ ಕಣದಿಂದ ಹೊರಕ್ಕೆ

- Advertisement -
- Advertisement -

ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಪಕ್ಷದ ಹಿರಿಯ ನಾಯಕ ದಿಗ್ವಿಜಯ ಸಿಂಗ್ ಅವರು ಸ್ಪರ್ಧಿಸುವುದಿಲ್ಲ ಎಂದು ಹೇಳಿದ್ದು ಬದಲಿಗೆ ತಮ್ಮ ಹಿರಿಯ ಸಹೋದ್ಯೋಗಿ ಮಲ್ಲಿಕಾರ್ಜುನ ಖರ್ಗೆ ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸುವುದಾಗಿ ಶುಕ್ರವಾರ ಘೋಷಿಸಿದ್ದಾರೆ. ತಾನು ಜೀವನದುದ್ದಕ್ಕೂ ಕಾಂಗ್ರೆಸ್‌ಗಾಗಿ ದುಡಿದಿದ್ದು, ಅದನ್ನು ಮುಂದುವರಿಸುವುದಾಗಿ ಹೇಳಿದ್ದಾರೆ.

ದಿಗ್ವಿಜಯ್ ಸಿಂಗ್ ಸ್ಪರ್ಧೆಯಿಂದ ಹೊರ ಸರಿಯುವುದರೊಂದಿಗೆ ಕೇರಳ ಸಂಸದ ಶಶಿ ತರೂರ್‌ ಮತ್ತು ರಾಜ್ಯಸಭಾ ವಿಪಕ್ಷ ನಾಯಕ ಮಲ್ಲಿಕಾರ್ಜು ಖರ್ಗೆ ಅವರು ಪಕ್ಷದ ಅಧ್ಯಕ್ಷೀಯ ಚುನಾವಣೆಯಲ್ಲಿ ಮುಖಾಮುಖಿಯಾಗಲಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ಮಲ್ಲಿಕಾರ್ಜುನ ಖರ್ಗೆ ಅವರು ನನ್ನ ನಾಯಕರಾಗಿದ್ದು, ನನ್ನ ಸೀನಿಯರ್‌ ಆಗಿದ್ದಾರೆ. ನೀವು ಸ್ಪರ್ಧಿಸಲು ಬಯಸುತ್ತೀರಾ ಎಂದು ನಿನ್ನೆಯೇ ಕೇಳಿದ್ದೆ. ಇಲ್ಲ ಎಂದರು. ನಾನು ಇಂದು ಅವರನ್ನು ಮತ್ತೆ ಭೇಟಿಯಾದೆ. ನೀವು ಸ್ಪರ್ಧಿಸುವುದಾದರೆ ನಾನು ಸಂಪೂರ್ಣವಾಗಿ ನಿಮ್ಮೊಂದಿಗಿದ್ದೇನೆ ಎಂದು ತಿಳಿಸಿದ್ದೇನೆ” ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆ: ಕೊನೆಯ ಕ್ಷಣದಲ್ಲಿ ಮಲ್ಲಿಕಾರ್ಜುನ ಖರ್ಗೆ ಎಂಟ್ರಿ!

“ನಾನು ಅವರ ವಿರುದ್ಧ ಸ್ಪರ್ಧಿಸುವ ಬಗ್ಗೆ ಯೋಚಿಸಲು ಸಾಧ್ಯವಿಲ್ಲ. ಅವರು ತಮ್ಮ ನಾಮಪತ್ರವನ್ನು ಸಲ್ಲಿಸುತ್ತಿದ್ದಾರೆ. ನಾನು ಅವರ ಉಮೇದುವಾರಿಕೆಯನ್ನು ಪ್ರಸ್ತಾಪಿಸುತ್ತೇನೆ” ಎಂದು ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.

“ದಲಿತರು, ಆದಿವಾಸಿಗಳು ಮತ್ತು ಒಬಿಸಿಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ನಾನು ರಾಜಿ ಮಾಡಿಕೊಳ್ಳುವುದಿಲ್ಲ; ಕೋಮು ಸೌಹಾರ್ದವನ್ನು ಹಾಳು ಮಾಡುವವರೊಂದಿಗೆ ನಾನು ರಾಜಿ ಮಾಡಿಕೊಳ್ಳುವುದಿಲ್ಲ ಮತ್ತು ಗಾಂಧಿ ಕುಟುಂಬಕ್ಕೆ ನನ್ನ ಬದ್ಧತೆಯನ್ನು ನಾನು ರಾಜಿ ಮಾಡಿಕೊಳ್ಳುವುದಿಲ್ಲ” ಎಂದು ಅವರು ಹೇಳಿದ್ದಾರೆ. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅಧ್ಯಕ್ಷೀಯ ಸ್ಪರ್ಧೆಯಿಂದ ಹೊರಗುಳಿದ ನಂತರ ದಿಗ್ವಿಜಯ್ ಸಿಂಗ್ ಅವರು ಪಕ್ಷದ ಉನ್ನತ ಹುದ್ದೆಗೆ ಸ್ಪರ್ಧಿಸುವ ಒಲವನ್ನು ವ್ಯಕ್ತಪಡಿಸಿದ್ದರು.

ಶುಕ್ರವಾರ ತಿರುವನಂತಪುರಂ ಸಂಸದ ಶಶಿ ತರೂರ್ ಕೂಡ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸುವ ಮುನ್ನ ತರೂರ್ ರಾಜ್‌ಘಾಟ್‌ಗೆ ಭೇಟಿ ನೀಡಿ ಮಹಾತ್ಮ ಗಾಂಧಿ ಅವರಿಗೆ ನಮನ ಸಲ್ಲಿಸಿದರು. “21 ನೇ ಶತಮಾನಕ್ಕೆ ಭಾರತದ ಸೇತುವೆಯನ್ನು ನಿರ್ಮಿಸಿದ ವ್ಯಕ್ತಿಗೆ ಇಂದು ಬೆಳಿಗ್ಗೆ ಗೌರವ ಸಲ್ಲಿಸಿದೆ” ಎಂದು ತರೂರ್ ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರಾಜಸ್ಥಾನ ರಾಜಕೀಯ ಬಿಕ್ಕಟ್ಟು: ಕಾಂಗ್ರೆಸ್ ಅಧ್ಯಕ್ಷೀಯ ರೇಸ್‌ನಿಂದ ಅಶೋಕ್ ಗೆಹ್ಲೋಟ್‌ ಔಟ್‌‌

ರಾಜ್ಯಸಭಾದ ವಿಪಕ್ಷ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ಕೂಡ ಮಧ್ಯಾಹ್ನದ ಸುಮಾರಿಗೆ ಪಕ್ಷದ ಉನ್ನತ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದಾರೆ. ಖರ್ಗೆ ಅವರನ್ನು ಕಣಕ್ಕಿಳಿಸಲು ಪಕ್ಷದ ನಾಯಕಿ ಸೋನಿಯಾ ಗಾಂಧಿ ಉತ್ಸುಕರಾಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.

2019 ರಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸಾಧನೆಯ ನೈತಿಕ ಹೊಣೆಗಾರಿಕೆಯನ್ನು ಒಪ್ಪಿಕೊಂಡ ನಂತರ ರಾಹುಲ್ ಗಾಂಧಿ ಪಕ್ಷ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದರ ನಂತರ ಅಧ್ಯಕ್ಷ ಸ್ಥಾನಕ್ಕೆ ಖರ್ಗೆ ಅವರ ಹೆಸರು ಕೇಳಿಬರುತ್ತಲೆ ಇತ್ತು.

ಅಕ್ಟೋಬರ್ 17 ರಂದು ಮತದಾನ ನಡೆಯಲಿದ್ದು, ಅಕ್ಟೋಬರ್ 19 ರಂದು ಫಲಿತಾಂಶ ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...