Homeಮುಖಪುಟಛತ್ತೀಸ್‌ಗಢ: ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 15,000ರೂ. ಘೋಷಿಸಿದ ಕಾಂಗ್ರೆಸ್

ಛತ್ತೀಸ್‌ಗಢ: ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ 15,000ರೂ. ಘೋಷಿಸಿದ ಕಾಂಗ್ರೆಸ್

- Advertisement -
- Advertisement -

ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಗೃಹಲಕ್ಷ್ಮೀ ಯೋಜನೆಯನ್ನು ಘೋಷಿಸಿದ್ದು, ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯ ಖಾತೆಗೆ ವರ್ಷಕ್ಕೆ 15,000 ರೂ.ಗಳನ್ನು ನೀಡುವುದಾಗಿ ಘೋಷಿಸಿದೆ.

ಈ ಕುರಿತು ಘೋಷಣೆಯನ್ನು ಮಾಡಿದ  ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ದೀಪಾವಳಿಯ ಶುಭ ಸಂದರ್ಭದಲ್ಲಿ ತಾಯಿ ಲಕ್ಷ್ಮಿ ದೇವಿಯ ಕೃಪೆ ಮತ್ತು ಛತ್ತೀಸ್‌ಗಢ ಮಹಾ ತಾಯಿಯಂದಿರ ಆಶೀರ್ವಾದದೊಂದಿಗೆ ರಾಜ್ಯದ ಸ್ತ್ರೀಗಳ ಬಲವರ್ಧನೆಗೆ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕಾಂಗ್ರೆಸ್ ಸರ್ಕಾರ ರಚನೆಯಾದ ತಕ್ಷಣ ರಾಜ್ಯದ ಮಹಿಳೆಯರಿಗೆ ಛತ್ತೀಸ್‌ಗಢ ಗೃಹ ಲಕ್ಷ್ಮಿ ಯೋಜನೆಯಡಿಯಲ್ಲಿ ಅವರ ಖಾತೆಗಳಿಗೆ ನೇರವಾಗಿ ವರ್ಷಕ್ಕೆ 15,000ರೂ.ಗಳನ್ನು ನೀಡಲಾಗುವುದು ಎಂದು ಘೋಷಿಸಿದ್ದಾರೆ.

ಸಾಮಾಜಿಕ ವೆಲ್ಪೇರ್‌ ಸ್ಕೀಂನ ಭಾಗವಾಗಿ ಛತ್ತೀಸ್‌ಗಢದ ಪ್ರತಿ ಮಹಿಳೆಗೆ ವರ್ಷಕ್ಕೆ 15,000ರೂಗಳನ್ನು ಛತ್ತೀಸ್‌ಗಢ ಗೃಹಲಕ್ಷ್ಮಿ ಯೋಜನೆಯ ಭಾಗವಾಗಿ ನೀಡಲಾಗುವುದು. ದೀಪಾವಳಿಯ ಸಂದರ್ಭದಲ್ಲಿ ನಾನು ಇದನ್ನು ಘೋಷಿಸಲು ಬಯಸುತ್ತೇನೆ. ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಮತ್ತೆ ಸರಕಾರವನ್ನು ರಚಿಸಿದರೆ ಎಲ್ಲಾ ತಾಯಿಯಂದಿರು ಮತ್ತು ಸಹೋದರಿಯರಿಗೆ 15,000ರೂ. ವರ್ಷಕ್ಕೆ ಅವರ ಖಾತೆಗೆ ಜಮೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಇದಕ್ಕೂ ಮೊದಲು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದ ಛತ್ತೀಸ್‌ಗಢದ ಸಿಎಂ ಭೂಪೇಶ್ ಬಘೇಲ್, ದೀಪಾವಳಿಯ ಸಂದರ್ಭದಲ್ಲಿ ರಾಜ್ಯದಲ್ಲಿ ಮಹಿಳೆಯರನ್ನು ಶಕ್ತಿಗೊಳಿಸಲು ಮಹತ್ವದ ನಿರ್ಧಾರ ತೆಗೆದುಕೊಳ್ಳುವುದಾಗಿ ಹೇಳಿದ್ದರು.

ನ.5ರಂದು ಕಾಂಗ್ರೆಸ್‌ ಛತ್ತೀಸ್‌ಗಢ ಚುನಾವಣೆಯ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದ್ದು, ಪ್ರಣಾಳಿಕೆಯಲ್ಲಿ ಜಾತಿಗಣತಿ, ಕೃಷಿ ಸಾಲ ಮನ್ನಾ, ಭತ್ತದ ಖರೀದಿ ಬೆಲೆಯಲ್ಲಿ ಹೆಚ್ಚಳ, 200 ಯುನಿಟ್‌ವರೆಗೆ ಉಚಿತ ವಿದ್ಯುತ್‌, 400ರವರೆಗಿನ ವಿದ್ಯುತ್‌ ಬಿಲ್‌ಗಳಲ್ಲಿ 50% ರಿಯಾಯಿತಿ, ಗ್ಯಾಸ್‌ ಸಿಲಿಂಡರ್‌ಗಳಲ್ಲಿ 500ರೂ. ಸಬ್ಸಿಡಿ ಸೇರಿ ಹಲವು ಘೋಷಣೆಗಳನ್ನು ಮಾಡಿದೆ.

90 ವಿಧಾನಸಭಾ ಕ್ಷೇತ್ರಗಳಿರುವ ಛತ್ತೀಸ್‌ಗಢ ವಿಧಾನಸಭಾ ಚುನಾವಣೆ ಎರಡು ಹಂತಗಳಲ್ಲಿ ನಡೆಯಲಿದೆ. ಈಗಾಗಲೇ ಮೊದಲ ಹಂತದ ಚುನಾವಣೆ ನ.7ರಂದು ನಡೆದಿದೆ. ಎರಡನೆ ಹಂತದ ಚುನಾವಣೆ ನ.17ರಂದು ನಡೆಯಲಿದೆ. ಡಿ.3ರಂದು ಇತರ ರಾಜ್ಯಗಳ ಜೊತೆ ಚುನಾವಣಾ ಫಲಿತಾಂಶ ಹೊರ ಬರಲಿದೆ.

ಇನ್ನು ಛತ್ತೀಸ್‌ಗಢ ವಿಧಾನಸಭಾ ಚುನಾವಣೆಗೆ ಶುಕ್ರವಾರ ಬಿಜೆಪಿ ಬಿಡುಗಡೆ ಮಾಡಿದ ಪ್ರಣಾಳಿಕೆಯನ್ನು ಕಾಂಗ್ರೆಸ್ ‘ನಕಲು’ ಎಂದು ಕರೆದಿದೆ. ಕಾಂಗ್ರೆಸ್‌ನ ಚುನಾವಣಾ ಗ್ಯಾರೆಂಟಿಗಳನ್ನು ‘ಬಿಟ್ಟಿ’ ಎಂದು ಟೀಕಿಸುವವರು ಈಗ ಚುನಾವಣೆಯಲ್ಲಿ ಗೆಲ್ಲಲು ಗ್ಯಾರೆಂಟಿಗಳನ್ನು ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಇನ್ನು ಕಾಂಗ್ರೆಸ್‌ ಗ್ಯಾರೆಂಟಿ ಘೋಷಣೆ ಬೆನ್ನಲ್ಲೇ ಬಿಜೆಪಿಯು ಛತ್ತೀಸ್‌ಗಢದಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಘೋಷಿಸಿದೆ. 2 ವರ್ಷಗಳಲ್ಲಿ ಛತ್ತೀಸ್‌ಗಢದಲ್ಲಿ ಖಾಲಿ ಇರುವ 1 ಲಕ್ಷ ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡುವುದು. ಬಡ ಕುಟುಂಬದ ಮಹಿಳೆಯರಿಗೆ ತಲಾ  500ರ ದರದಲ್ಲಿ ಅಡುಗೆ ಅನಿಲ ಸಿಲಿಂಡರ್ ನೀಡುವುದು, ಘರ್ ಘರ್ ನಿರ್ಮಲ್ ಜಲ ಅಭಿಯಾನ, ಭೂರಹಿತ ಕೃಷಿ ಕಾರ್ಮಿಕರಿಗೆ ವರ್ಷಕ್ಕೆ 10,000ರೂ. ಸೇರಿ ಹಲವು ಭರವಸೆಗಳನ್ನು ಘೋಷಿಸಿದೆ.

ಇದನ್ನು ಓದಿ:ಗುಜರಾತ್‌: ಹಝರತ್ ಶಹೀದ್ ದರ್ಗಾ ತೆರವಿಗೆ ಹೈಕೋರ್ಟ್‌ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...