Homeಮುಖಪುಟ6 ವರ್ಷಗಳಲ್ಲಿ 18 ಲಕ್ಷ ಕೋಟಿ ರೂ ಅಬಕಾರಿ ಸುಂಕ ಲೂಟಿ: ಸಿದ್ದರಾಮಯ್ಯ ಆರೋಪ

6 ವರ್ಷಗಳಲ್ಲಿ 18 ಲಕ್ಷ ಕೋಟಿ ರೂ ಅಬಕಾರಿ ಸುಂಕ ಲೂಟಿ: ಸಿದ್ದರಾಮಯ್ಯ ಆರೋಪ

- Advertisement -
- Advertisement -

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದ್ದರೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಕೆ ಮಾಡುತ್ತಲೇ ಇದೆ. ಆರು ವರ್ಷಗಳಲ್ಲಿ 18 ಲಕ್ಷ ಕೋಟಿ ರೂಪಾಯಿ ಅಬಕಾರಿ ಸುಂಕವನ್ನು ಸಂಗ್ರಹ ಮಾಡಿದ್ದಾರೆ. ಇದನ್ನು ನೋಡಿದರೆ ಎಷ್ಟು ಲೂಟಿ ಮಾಡಿದ್ದಾರೆ ಎಂದು ತಿಳಿಯುತ್ತದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.

ತೈಲ ಬೆಲೆ ಏರಿಕೆಯ ವಿರುದ್ಧ ಪ್ರದೇಶ ಕಾಂಗ್ರೆಸ್ ಸಮಿತಿ ಹಮ್ಮಿಕೊಂಡಿದ್ದ ಸೈಕಲ್ ಜಾಥಾ ಮತ್ತು ಸಾಂಕೇತಿಕ ಧರಣಿಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾತೈಲ ಬೆಲೆ ಗಗನಕ್ಕೆ ಏರಿತ್ತು. ಒಂದು ಬ್ಯಾರಲ್ ಬೆಲೆ 120-130 ಅಮೆರಿಕನ್ ಡಾಲರ್ ಇತ್ತು. ಆದರೂ ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೆಲ್ ಬೆಲೆ ಸ್ವಲ್ಪಮಟ್ಟಿಗೆ ಮಾತ್ರ ಹೆಚ್ಚಳ ಮಾಡಿತ್ತು ಎಂದು ತಿಳಿದ್ದಾರೆ.

ಡಾ.ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಅಂದು ಸ್ವಲ್ಪಮಟ್ಟಿನ ಬೆಲೆ ಏರಿಕೆ ಮಾಡಿದ್ದನ್ನೇ ನೆಪ ಮಾಡಿಕೊಂಡು ಬಿಜೆಪಿ ಮುಖಂಡರು ದೇಶದಲ್ಲಿ ಹಾಹಾಕಾರ ಎಬ್ಬಿಸಿದರು. ಪ್ರತಿಭಟನೆ ನಡೆಸಿದರು. ಜನವಿರೋಧಿ ಸರ್ಕಾರ ಎಂದು ಜರೆದರು. ಇಂದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಎಲ್ಲರೂ ಮೌನಕ್ಕೆ ಜಾರಿದ್ದಾರೆ ಎಂದು ಟೀಕಾಪ್ರಹಾರ ನಡೆಸಿದರು.

ಇಂದು ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ಬೆಲೆ 30-40 ಡಾಲರ್ ಗೆ ಇಳಿದಿದೆ. ಆದರೂ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಗೆ ಸಬ್ಸೀಡಿ ಕೊಡುತ್ತಿಲ್ಲ. ಅಂತಾರಾಷ್ಟ್ರೀಯ ಬೆಲೆಯ ಪ್ರಕಾರ ಇಂದು ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಗೆ 25 ರೂಪಾಯಿ ಇರಬೇಕಿತ್ತು. ಆದರೆ 80-82 ರೂಪಾಯಿ ಏರಿಕೆಯಾಗಿದ್ದು ಇದರಿಂದ ರೈತರು, ಬಡವರು ಜನಸಾಮಾನ್ಯರು ಮತ್ತು ಕೆಳವರ್ಗದವರಿಗೆ ಹೊರೆಯಾಗಿದೆ ಎಂದು ದೂರಿದರು.

ಕಳೆದ ಆರು ವರ್ಷಗಳಲ್ಲಿ ಪೆಟ್ರೋಲ್ ಬೆಲೆ 29 ರೂಪಾಯಿ, ಡೀಸೆಲ್ ಬೆಲೆ 25 ರೂಪಾಯಿ ಹೆಚ್ಚಳವಾಗಿದೆ. ಕೊರೊನಾದಂಥ ಕೆಟ್ಟಪರಿಸ್ಥಿತಿಯಲ್ಲೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಗಗನಕ್ಕೆ ಏರಿಕೆಯಾಗಿದೆ. ನಿರುದ್ಯೋಗ ಪ್ರಮಾಣ ಹೆಚ್ಚಿದೆ. ಜನರು ಸಂಕಷ್ಟದಲ್ಲಿರುವ ಸಮಯದಲ್ಲಿ ಮನಬಂದಂತೆ ಹೆಚ್ಚಳ ಸಾಮಾನ್ಯರ ಮೇಲೆ ಬರೆಎಳೆದಂತೆ ಮಾಡಿದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರಿಗೆ ಮನುಷ್ಯತ್ವ, ಮಾನವೀಯತೆಯೇ ಇಲ್ಲ. ಬೆಲೆ ಏರಿಕೆಯಿಂದ ಬಡವರು ಬದುಕಲು ಸಾಧ್ಯವೇ? ಇಂತಹ ಸಮಯದಲ್ಲಿ ನಾವು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ಮಾಡುತ್ತಿಲ್ಲ. ಜನಸಾಮಾನ್ಯರ ಧ್ವನಿಯಾಗಿ ಪ್ರತಿಭಟನೆ ಮಾಡುತ್ತಿದ್ದೇವೆ. ಮುಂದಿನ ದಿನಗಳಲ್ಲಿ ರೈತರು, ಬಡವರಿಗೆ ಸಹಾಯ ಮಾಡದೇ ಹೋದರೆ ಕಾಂಗ್ರೆಸ್ ಪಕ್ಷ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು.

ರಾಜ್ಯಸಭಾ ಸದಸ್ಯ ಎಂ.ಮಲ್ಲಿಕಾರ್ಜುನ ಖರ್ಗೆ ಮಾತನಾಡಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬೆಲೆ ಏರಿಕೆಯನ್ನು ಇಳಿಸಬೇಕೆಂದು ಒತ್ತಾಯಿಸಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ್ ಮೊದಲಾದವರು ಉಪಸ್ಥಿತರಿದ್ದರು.


ಇದನ್ನೂ ಓದಿ: PM CARES ಗೆ ಚೀನಾ ಕಂಪನಿಗಳಿಂದ ದೇಣಿಗೆ ಏಕೆ?: ಕಾಂಗ್ರೆಸ್ ಪ್ರಶ್ನೆ

Also Read: How the RSS leadership bowed to Indira Gandhi: 45th anniv of the Emergency

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...