Homeಎಕಾನಮಿಆರ್ಥಿಕ ಕುಸಿತ: ಮೋದಿ ಸರ್ಕಾರದ ವಿರುದ್ಧದ 10 ದಿನಗಳ ಮಹಾಪ್ರತಿಭಟನೆಗೆ ಪ್ರತಿಪಕ್ಷಗಳ ಬೆಂಬಲಕೋರಿದ ಕಾಂಗ್ರೆಸ್

ಆರ್ಥಿಕ ಕುಸಿತ: ಮೋದಿ ಸರ್ಕಾರದ ವಿರುದ್ಧದ 10 ದಿನಗಳ ಮಹಾಪ್ರತಿಭಟನೆಗೆ ಪ್ರತಿಪಕ್ಷಗಳ ಬೆಂಬಲಕೋರಿದ ಕಾಂಗ್ರೆಸ್

- Advertisement -
- Advertisement -

“ಆರ್ಥಿಕ ಕುಸಿತ, ಕೃಷಿ ಸಂಕಟ, ನಿರುದ್ಯೋಗ ಮತ್ತು ಉದ್ದೇಶಿತ ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಒಪ್ಪಂದ”ಕ್ಕೆ ಕಾರಣವಾಗಿರುವ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್‌ 10 ದಿನಗಳ ಕಾಲದ ಮಹಾಪ್ರತಿಭಟನೆ ನಡೆಸಲು ಉದ್ದೇಶಿಸಿದೆ. ಈ ಹೋರಾಟಕ್ಕೆ ಎಲ್ಲಾ ವಿರೋಧ ಪಕ್ಷಗಳು ಬೆಂಬಲ ನೀಡಬೇಕೆಂದು ಕೋರಿ ನವೆಂಬರ್‌ 04ರಂದು ಪ್ರತಿಪಕ್ಷಗಳೊಂದಿಗೆ ಕಾಂಗ್ರೆಸ್‌ ಸಭೆ ನಡೆಸಲಿದೆ.

10 ದಿನಗಳ ಕಾಲ ನಿರಂತರವಾಗಿ ದೇಶಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದ್ದು ಇದಕ್ಕೆ ಬೆಂಬಲ, ಒಗ್ಗಟ್ಟು ಮತ್ತು ಸಲಹೆ-ಸೂಚನೆ ಪಡೆಯಲು ನವೆಂಬರ್‌ 04 ಸಭೆಗೆ ವಿಪಕ್ಷಗಳಿಗೆ ಆಹ್ವಾನ ನೀಡಿದೆ.

ಆರ್ಥಿಕ ಕುಸಿತದಿಂದ ಜನತೆ ಕಂಗೆಟ್ಟಿದ್ದಾರೆ. ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿನ ಜನರು ತೀವ್ರ ಸಮಸ್ಯೆ ಎದುರಿಸುತ್ತಿದ್ದಾರೆ. ಮಹಾರಾಷ್ಟ್ರ ಮತ್ತು ಹರಿಯಾಣದಲ್ಲಿ ಇತ್ತೀಚೆಗೆ ನಡೆದ ರಾಜ್ಯ ಚುನಾವಣೆಗಳಲ್ಲಿ ಈ ವಿಷಯವು ಕೆಲವು ಕ್ಷೇತ್ರಗಳಲ್ಲಿ ಪರಿಣಾಮ ಬೀರಿದೆ. ಇಂತಹ ಸಂದರ್ಭದಲ್ಲಿ ಆರ್‌ಸಿಇಪಿಯಂತಹ ಅಪಾಯಕಾರಿ ಒಪ್ಪಂದಕ್ಕೆ ಸಹಿ ಹಾಕುವುದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಲಿದೆ. ಈ ಕುರಿತು ಸರ್ಕಾರಕ್ಕೆ ಎಚ್ಚರಿಕೆ ರವಾನಿಸಲು ಪ್ರತಿಭಟನೆ ಆಯೋಜಿಸಲಾಗುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

ಪ್ರಾದೇಶಿಕ ಸಮಗ್ರ ಆರ್ಥಿಕ ಸಹಭಾಗಿತ್ವ (ಆರ್‌ಸಿಇಪಿ) ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಥೈಲ್ಯಾಂಡ್‌ಗೆ ಆಗಮಿಸಿದ ದಿನವೇ ಆರ್ಥಿಕ ಕುಸಿತದ ವಿರೋಧಿಸಿ ಕಾಂಗ್ರೆಸ್ ಏಕತೆಯ ನಡೆ ಆಯೋಜಿಸುತ್ತಿದ್ದು, ಒಪ್ಪಂದಕ್ಕೆ ಸಹಿ ಹಾಕದಂತೆ ಒತ್ತಡ ತರಲು ಮುಂದಾಗಿದೆ.

ಆರ್‌ಸಿಇಪಿ ಒಪ್ಪಂದವು ನಮ್ಮ ಆರ್ಥಿಕತೆಗೆ ಹೊಸ ಬೆದರಿಕೆಯಾಗಿದೆ ಹಾಗಾಗಿ ಕಾಂಗ್ರೆಸ್ ಅದನ್ನು ವಿರೋಧಿಸುತ್ತದೆ. “ಆರ್‌ಸಿಇಪಿ 16 ದೇಶಗಳ ನಡುವಿನ ಮುಕ್ತ-ವ್ಯಾಪಾರದ ಪ್ರಯತ್ನವಾಗಿದೆ. ಈ ಒಪ್ಪಂದವನ್ನು ದೇಶೀಯ ಉದ್ಯಮ, ರೈತ ಗುಂಪುಗಳು, ನಾಗರಿಕ ಸಮಾಜ ಸಂಸ್ಥೆಗಳು ಮತ್ತು ವಿರೋಧ ಪಕ್ಷಗಳು ಬಲವಾಗಿ ವಿರೋಧಿಸುತ್ತಿವೆ. ಆರ್‌ಸಿಇಪಿ ಶಸ್ತ್ರಸಜ್ಜಿತವಾದ ಚೀನಾವು ಅಗ್ಗದ ಸರಕುಗಳನ್ನು ಭಾರತಕ್ಕೆ ತುರುಕುತ್ತದೆ ಎಂದು ಪಕ್ಷದ ವಕ್ತಾರ ಪ್ರೊ. ಗೌರವ್ ವಲ್ಲಭ್ ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಸ್ತಾವಿತ ಆರ್‌ಸಿಇಪಿ ಒಪ್ಪಂದದ ವಿರುದ್ಧ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಕೇಂದ್ರ ಪಶುಸಂಗೋಪನೆ, ಹೈನುಗಾರಿಕೆ ಮತ್ತು ಮೀನುಗಾರಿಕೆ ಸಚಿವ ಗಿರಿರಾಜ್ ಸಿಂಗ್ ಅವರ ಮನೆಯ ಹೊರಗೆ ಪ್ರತಿಭಟನೆ ನಡೆಸುತ್ತಿದ್ದಾರೆ.

ಈ ಒಪ್ಪಂದವು ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್‌ನಂತಹ ದೇಶಗಳಿಂದ ಅಗ್ಗದ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಆಮದು ಮಾಡಿಕೊಳ್ಳುವುದರಿಂದ ಅದು ‘ದೇಶದ 50 ದಶಲಕ್ಷಕ್ಕೂ ಹೆಚ್ಚು ದೇಶೀಯ ಹಾಲು ಉತ್ಪಾದಕರ ಜೀವನೋಪಾಯವನ್ನು ಕಿತ್ತುಕೊಳ್ಳಲ್ಲಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...