Homeಕರ್ನಾಟಕಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ ಢೋಂಗಿ ರೈತನಾಯಕ - ಸಿದ್ದರಾಮಯ್ಯ

ಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ ಢೋಂಗಿ ರೈತನಾಯಕ – ಸಿದ್ದರಾಮಯ್ಯ

ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದ ರೈತರಿಗಷ್ಟೇ ಅಲ್ಲ ಗ್ರಾಹಕರಿಗೂ ಭವಿಷ್ಯದಲ್ಲಿ ದೊಡ್ಡ ನಷ್ಟ ಕಾದಿದೆ. ಖಾಸಗಿ ಕಂಪನಿಗಳು ರೈತರಿಂದ ಕಡಿಮೆ ಬೆಲೆಗೆ ಕೃಷಿ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚು ಬೆಲೆಗೆ ಮಾರಿ ಜನರ ಸುಲಿಗೆಗೆ ಇಳಿಯಲಿವೆ.

- Advertisement -
- Advertisement -

ರಾಜ್ಯ ಸರ್ಕಾರ ನಿಜವಾಗಿ ರೈತರು, ಕಾರ್ಮಿಕರು, ಬಡವರ ಪರವಾಗಿದ್ದರೆ ಎಪಿಎಂಸಿ ಕಾಯಿದೆ, ಭೂ ಸುಧಾರಣಾ ಕಾಯಿದೆ, ಕಾರ್ಮಿಕ ಕಾಯ್ದೆಗಳಿಗೆ ತಿದ್ದುಪಡಿ ತರುವ ತಪ್ಪನ್ನು ಮಾಡುತ್ತಲೇ ಇರಲಿಲ್ಲ. ಯಡಿಯೂರಪ್ಪ ಹಸಿರು ಶಾಲು ಹೊದ್ದಿರುವ ಒಬ್ಬ “ಢೋಂಗಿ ರೈತನಾಯಕ” ಎಂದು ವಿರೋಧ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಕೇಂದ್ರ ಹಾಗೂ ರಾಜ್ಯ ಸರಕಾರದ ರೈತ ವಿರೋಧಿ ಮಸೂದೆಗಳ ವಿರುದ್ಧ ರೈತ ಸಂಘಟನೆಗಳು ನಡೆಸುತ್ತಿರುವ ಕರ್ನಾಟಕ ಬಂದ್‌ ಹೋರಾಟ ಬೆಂಬಲಿಸಿ ಪಕ್ಷದ ವತಿಯಿಂದ ಬೆಂಗಳೂರಿನ ಕಾಂಗ್ರೆಸ್ ಭವನದ ಆವರಣದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಅವರು, ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದ ರೈತರಿಗಷ್ಟೇ ಅಲ್ಲ ಗ್ರಾಹಕರಿಗೂ ಭವಿಷ್ಯದಲ್ಲಿ ದೊಡ್ಡ ನಷ್ಟ ಕಾದಿದೆ. ಖಾಸಗಿ ಕಂಪನಿಗಳು ರೈತರಿಂದ ಕಡಿಮೆ ಬೆಲೆಗೆ ಕೃಷಿ ಉತ್ಪನ್ನಗಳನ್ನು ಖರೀದಿಸಿ, ಹೆಚ್ಚು ಬೆಲೆಗೆ ಮಾರಿ ಜನರ ಸುಲಿಗೆಗೆ ಇಳಿಯಲಿವೆ ಎಂದು ಆತಂಕ ವ್ಯಕ್ತಪಡಿಸಿದರು.

ಉಳುವವನನ್ನು ಭೂಮಿಯ ಒಡೆಯನಾಗಿಸಿದ್ದು ದೇವರಾಜ ಅರಸು ಅವರ ನಾಯಕತ್ವದ ಕಾಂಗ್ರೆಸ್ ಸರ್ಕಾರ. ಈಗ ಬಡವರ ಭೂಮಿಯನ್ನು ಉಳ್ಳವರ ಪಾಲು ಮಾಡಲು ಹೊರಟಿರುವುದು ಬಿಜೆಪಿ ಸರ್ಕಾರ. ಹಾಗಾದರೆ ನಿಜವಾಗಿ ಯಾರು ರೈತರ ಪರ ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಭೂ ಸುಧಾರಣಾ ಕಾಯಿದೆ ತಿದ್ದುಪಡಿಯಿಂದ ಕೃಷಿಕನಲ್ಲದವನು ಕೃಷಿ ಭೂಮಿ ಖರೀದಿಸುವಂತಿಲ್ಲ ಎಂಬ ನಿಯಮ ಹೋಗಿ, ಧನಿಕರು ಕೂಡ ಕೃಷಿ ಭೂಮಿ ಖರೀದಿ ಮಾಡಲಿದ್ದಾರೆ. ನಂತರ ಆ ಭೂಮಿಯಲ್ಲಿ ಫಾರ್ಮ್‌ಹೌಸ್‌ಗಳು, ಕಾರ್ಖಾನೆಗಳು ತಲೆಯೆತ್ತಲಿವೆ. ಅಲ್ಲಿಗೆ ಕೃಷಿ ಕ್ಷೇತ್ರ ಸರ್ವನಾಶವಾಗಲಿದೆ. ದೇಶದ ಒಟ್ಟು ರೈತರಲ್ಲಿ ಸಣ್ಣ ಹಿಡುವಳಿದಾರರ ಪ್ರಮಾಣ ಶೇ.86 ಇದೆ. ಈ ರೈತರೆಲ್ಲಾ ಧನಿಕರಿಗೆ ತಮ್ಮ ಭೂಮಿ ಮಾರಿ, ದುಡಿಮೆಗಾಗಿ ಪಟ್ಟಣ ಸೇರುತ್ತಾರೆ. ಕೃಷಿ ಬಿಟ್ಟು ಬೇರೆ ಉದ್ಯೋಗ ಗೊತ್ತಿಲ್ಲದ ಅಮಾಯಕ ಮಂದಿ ನಗರಗಳಲ್ಲಿ ಕೂಲಿ ಮಾಡಬೇಕಾಗುತ್ತದೆ ಎಂದು ಅವರು ತಿಳಿಸಿದರು.

ಈ ಕಾಯಿದೆಗಳ ಜಾರಿ ಹಿಂದೆ ಕೇಂದ್ರ ಸರ್ಕಾರದ ಸ್ಪಷ್ಟ ಸೂಚನೆಯಿದೆ. ಆತ್ಮಸಾಕ್ಷಿ ಇಲ್ಲದ ಯಡಿಯೂರಪ್ಪನವರು ಕೇಂದ್ರದ ತಾಳಕ್ಕೆ ತಕ್ಕಂತೆ ಕುಣಿಯುತ್ತಾ ನಾಡನ್ನು ಗುಲಾಮಗಿರಿಗೆ ತಳ್ಳಲು ಹೊರಟಿದ್ದಾರೆ. ನಾಚಿಕೆಯಾಗಬೇಕು ಈ ಸರ್ಕಾರಕ್ಕೆ ಎಂದು ಸಿದ್ದು ಕಿಡಿಕಾರಿದ್ದಾರೆ.

ಧರಣಿಯಲ್ಲಿ ಕರ್ನಾಟಕದ ಪಕ್ಷದ ಉಸ್ತುವಾರಿ ಹೊತ್ತಿರುವ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಅಲೀಂ ಅಹಮದ್ ಮತ್ತಿತರರು ಭಾಗವಹಿಸಿದ್ದರು.


ಇದನ್ನೂ ಓದಿ: ರಾಜ್ಯಾದ್ಯಂತ ಸಿಡಿದೆದ್ದ ರೈತರು: ಕರ್ನಾಟಕ ಬಂದ್ ಯಶಸ್ವಿ. ಹಲವು ಜಿಲ್ಲೆ ತಾಲ್ಲೂಕುಗಳಲ್ಲಿ ನಡೆದ ಹೋರಾಟದ ಫೋಟೊ ಗ್ಯಾಲರಿ ಇಲ್ಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...