Homeಮುಖಪುಟವೈದ್ಯ ಕಫಿಲ್‌ ಖಾನ್‌ ಬಿಡುಗಡೆಗೆ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನಾ ಅಭಿಯಾನ

ವೈದ್ಯ ಕಫಿಲ್‌ ಖಾನ್‌ ಬಿಡುಗಡೆಗೆ ಒತ್ತಾಯಿಸಿ ಕಾಂಗ್ರೆಸ್‌ ಪ್ರತಿಭಟನಾ ಅಭಿಯಾನ

ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆಯ ಪ್ರತಿಭಟನೆಯಲ್ಲಿ ಧ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ವೈದ್ಯ ಕಫಿಲ್ ಖಾನ್ ಅವರನ್ನು ಜನವರಿ 29 ರಂದು ಬಂಧಿಸಲಾಗಿತ್ತು.

- Advertisement -
- Advertisement -

ಬಂಧನಕ್ಕೊಳಗಾಗಿರುವ ಗೋರಖ್‌ಪುರದ ವೈದ್ಯ ಕಫೀಲ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಕಾಂಗ್ರೆಸ್ ಪ್ರತಿಭಟನಾ ಅಭಿಯಾನವನ್ನು ಪ್ರಾರಂಭಿಸಿದ್ದು, ಇದರಲ್ಲಿ ಸಹಿ ಸಂಗ್ರಹ, ಉಪವಾಸ ಸತ್ಯಾಗ್ರಹ, ಸಾಮಾಜಿಕ ಜಾಲತಾಣ ಅಭಿಯಾನಗಳು ಮತ್ತು ದರ್ಗಾಗಳಿಗೆ ಭೇಟಿ ನೀಡುವುದು ಮುಂತಾದವುಗಳು ಸೇರಿದೆ.

ಕಳೆದ ಡಿಸೆಂಬರ್‌ನಲ್ಲಿ ಅಲಿಗಡ್‌ ಮುಸ್ಲಿಂ ವಿಶ್ವವಿದ್ಯಾಲಯದ (ಎಎಂಯು) ಪೌರತ್ವ ವಿರೋಧಿ ತಿದ್ದುಪಡಿ ಕಾಯ್ದೆಯ ಪ್ರತಿಭಟನೆಯಲ್ಲಿ ಧ್ವೇಷ ಭಾಷಣ ಮಾಡಿದ್ದಾರೆಂದು ಆರೋಪಿಸಿ ವೈದ್ಯ ಕಫಿಲ್ ಖಾನ್ ಅವರನ್ನು ಜನವರಿ 29 ರಂದು ಬಂಧಿಸಲಾಗಿತ್ತು.

“ಸಿಎಎ-ಎನ್‌ಆರ್‌ಸಿ ನೆಪದಲ್ಲಿ ಪೊಲೀಸರು ರಾಜ್ಯದ ಮುಸ್ಲಿಮರನ್ನು ಬಂಧಿಸುತ್ತಿದ್ದಾರೆ. ವೈದ್ಯ ಕಫೀಲ್ ಖಾನ್ ಅವರ ಬಂಧನ ವಿರೋಧಿಸಿ ಹೋರಾಡಲು ನಾವು ನಿರ್ಧರಿಸಿದ್ದೇವೆ” ಎಂದು ಕಾಂಗ್ರೆಸ್‌ ಅಲ್ಪಸಂಖ್ಯಾತ ಘಟಕದ ರಾಷ್ಟ್ರೀಯ ಸಂಯೋಜರಾದ ಮಿನ್ನತ್ ರಹಮಾಣಿ ಹೇಳಿದ್ದಾರೆ.

ಪಕ್ಷದ ಅಲ್ಪಸಂಖ್ಯಾತ ಘಟಕವು ಕಫಿಲ್ ಖಾನ್ ಅವರನ್ನು ಬಿಡುಗಡೆ ಮಾಡುವಂತೆ ಒತ್ತಾಯಿಸಿ ಈಗಾಗಲೇ ಉತ್ತರ ಪ್ರದೇಶದ ವಿವಿಧ ಜಿಲ್ಲೆಗಳಿಂದ ಸಹಿಯನ್ನು ಸಂಗ್ರಹಿಸಲು ಪ್ರಾರಂಭಿಸಿದೆ ಎಂದು ಅವರು ಹೇಳಿದ್ದಾರೆ.

ಮೀರತ್, ಮುಜಫರ್‌ನಗರ ಮತ್ತು ಸಂಭಾಲ್ ಸೇರಿದಂತೆ ಹೆಚ್ಚಿನ ಮುಸ್ಲಿಂ ಬಾಹುಲ್ಯವಿರುವ ಜಿಲ್ಲೆಗಳಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

“ನಾವು ಪ್ರತಿ ಜಿಲ್ಲೆಯಿಂದ ಸುಮಾರು 10,000 ಸಹಿಯನ್ನು ಸಂಗ್ರಹಿಸಿ ಮುಂದಿನ ಕೆಲವು ವಾರಗಳಲ್ಲಿ ಅವುಗಳನ್ನು ರಾಜ್ಯಪಾಲರಿಗೆ ಸಲ್ಲಿಸಲಿದ್ದೇವೆ” ಎಂದು ಕಾಂಗ್ರೆಸ್ ಉತ್ತರ ಪ್ರದೇಶ ಅಲ್ಪಸಂಖ್ಯಾತ ಘಟಕದ ಮುಖ್ಯಸ್ಥ ಶಹನವಾಜ್ ಆಲಮ್ ತಿಳಿಸಿದ್ದಾರೆ.

ಸಿಎಎ ವಿರೋಧಿ ಪ್ರತಿಭಟನೆಯ ನಂತರ ಡಿಸೆಂಬರ್‌ನಲ್ಲಿ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಶಹನವಾಜ್‌ ಆಲಂ ಅವರನ್ನು ಜೂನ್ 30 ರಂದು ಯುಪಿ ಪೊಲೀಸರು ಬಂಧಿಸಿದ್ದರು. ಜುಲೈ 14 ರಂದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು.

ಈ ಹಿಂದೆ ಗೋರಖ್‌ಪುರದ ಬಿಆರ್‌ಡಿ ಆಸ್ಪತ್ರೆಯ ಮಕ್ಕಳ ಸಾವಿನ ಪ್ರಕರಣದಲ್ಲಿ ಭ್ರಷ್ಟಾಚಾರದ ಆರೋಪದಲ್ಲಿ ಕಫಿಲ್  ಖಾನ್‌ನನ್ನು ಆಗಸ್ಟ್ 2017 ರಲ್ಲಿ ಬಂಧಿಸಲಾಗಿತ್ತು. ತರುವಾಯ 2018 ರ ಏಪ್ರಿಲ್‌ನಲ್ಲಿ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಇದರ ನಂತರ ಆದಿತ್ಯನಾಥ್ ಸರ್ಕಾರವು ನಿಯೋಜಿಸಿದ ಇಲಾಖಾ ವಿಚಾರಣೆಯು 2019 ರ ಸೆಪ್ಟೆಂಬರ್‌ನಲ್ಲಿ ಅವರನ್ನು ಆರೋಪಗಳಿಂದ ಮುಕ್ತಗೊಳಿಸಿತು.


ಓದಿ: ಡಾ.ಕಫೀಲ್ ಖಾನ್ ಜೀವಕ್ಕೆ ಅಪಾಯವಿದೆ : ಖಾನ್‌ ಪತ್ನಿಯ ಆರೋಪ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...

ಪಶ್ಚಿಮ ಬಂಗಾಳ ಎಸ್‌ಐಆರ್ : ಬಿಎಲ್‌ಒ ಸೇರಿದಂತೆ ಒಂದೇ ಬೂತ್‌ನ 340 ಮುಸ್ಲಿಂ ಮತದಾರರ ಹೆಸರು ಡಿಲೀಟ್!

ಪಶ್ಚಿಮ ಬಂಗಾಳದಲ್ಲಿ ಎಸ್‌ಐಆರ್ ಬಳಿಕ ಪ್ರಕಟಗೊಂಡ ಮತದಾರರ ಪೂರಕ ಪಟ್ಟಿಯಲ್ಲಿ, ಒಂದೇ ಬೂತ್‌ನ 340 ಜನರ ಹೆಸರುಗಳನ್ನು ತೆಗೆದು ಹಾಕಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಬಸಿರ್ಹತ್ ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ಈ ಬೆಳವಣಿಗೆ...

ಹಾರ್ಮುಜ್ ಮಾರ್ಗದ ಅನುಮತಿ: ಭಾರತ ನಮ್ಮ ‘ಸ್ನೇಹಪರ ರಾಷ್ಟ್ರ’ಗಳ ಸಾಲಿನಲ್ಲಿ ಸೇರಿದೆ: ಇರಾನ್ ವಿದೇಶಾಂಗ ಸಚಿವ 

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಇತರರಿಗೆ ನಿರ್ಬಂಧಗಳು ಮುಂದುವರಿದಿದ್ದರೂ, ಭಾರತ ಸೇರಿದಂತೆ ಆಯ್ದ "ಸ್ನೇಹಪರ ರಾಷ್ಟ್ರಗಳ" ಹಡಗುಗಳಿಗೆ ಆಯಕಟ್ಟಿನ ನಿರ್ಣಾಯಕ ಹಾರ್ಮುಜ್ ಜಲಸಂಧಿಯ ಮೂಲಕ ಸಾಗಲು ಅನುಮತಿ ನೀಡುತ್ತಿರುವುದಾಗಿ ಇರಾನ್ ಹೇಳಿದೆ. ಚೀನಾ, ರಷ್ಯಾ,...

ʼಜಾತಿ ಗೋಡೆʼ ವಿರುದ್ಧ ಕ್ರಮ ಕೈಗೊಳ್ಳದ ಆಡಳಿತ : ಚುನಾವಣೆ ಬಹಿಷ್ಕರಿಸಿದ ತಮಿಳುನಾಡಿನ ಶಂಕರಲಿಂಗಪುರಂನ ದಲಿತರು

ಗೋಡೆ ನಿರ್ಮಿಸಿ ಚರ್ಚ್‌ಗೆ ಹೋಗುವ ದಾರಿಯನ್ನು ತಡೆದಿರುವ ಭೂ ವಿವಾದದ ಬಗ್ಗೆ ಜಿಲ್ಲಾಡಳಿತ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿರುವ ತಮಿಳುನಾಡಿನ ಶಂಕರಲಿಂಗಪುರಂ ಗ್ರಾಮದ ಪರಿಶಿಷ್ಟ ಜಾತಿಯ ನಿವಾಸಿಗಳು, ಮುಂಬರುವ ವಿಧಾನಸಭಾ ಚುನಾವಣೆಯನ್ನು...

ಬಂಗಾಳ ಚುನಾವಣೆ : ಆರ್‌ಜಿ ಕರ್ ಸಂತ್ರಸ್ತೆಯ ತಾಯಿಯನ್ನು ಕಣಕ್ಕಿಳಿಸಿದ ಬಿಜೆಪಿ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೋಲ್ಕತ್ತಾದ ಆರ್‌ಜಿ ಕರ್‌ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದ ಅತ್ಯಾಚಾರ, ಕೊಲೆ ಪ್ರಕರಣದ ಸಂತ್ರಸ್ತೆಯ ತಾಯಿಯನ್ನು ಅಭ್ಯರ್ಥಿಯಾಗಿ ಬಿಜೆಪಿ ಕಣಕ್ಕಿಳಿಸಿದೆ. ಬುಧವಾರ (ಮಾ.25) ಬಿಜೆಪಿ...

ಆಂಧ್ರ ಪ್ರದೇಶ | ಟಿಪ್ಪರ್‌ಗೆ ಡಿಕ್ಕಿಯಾಗಿ ಹೊತ್ತಿ ಉರಿದ ಬಸ್ : 14 ಮಂದಿ ಸಜೀವ ದಹನ

ಖಾಸಗಿ ಬಸ್ ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಬೆಂಕಿ ಹೊತ್ತಿಕೊಂಡ ಪರಿಣಾಮ 14 ಜನರು ಸಜೀವ ದಹನವಾದ ಘಟನೆ ಆಂಧ್ರ ಪ್ರದೇಶದ ಮಾರ್ಕಪುರಂ ಜಿಲ್ಲೆಯಲ್ಲಿ ಗುರುವಾರ (ಮಾ.26) ಸಂಭವಿಸಿದೆ ಎಂದು...

ಒಳಮೀಸಲಾತಿ ಜಾರಿ ಮಾಡದಿದ್ದರೆ ಉಪಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧ ಮತ: ಮಾದಿಗ ಸಮುದಾಯದ ನಿರ್ಣಯ

ಮಾ.27 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯಲಿರುವ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಾದಿಗ ಸಮುದಾಯಕ್ಕೆ ಸರ್ಕಾರಿ ನೇಮಕಾತಿಯಲ್ಲಿ ಶೇ.6 ಒಳಮೀಸಲಾತಿಯನ್ನು ಹಂಚಿಕೆ ಮಾಡದಿದ್ದರೆ ದಾವಣಗೆರೆ ಹಾಗೂ ಬಾಗಲಕೋಟೆ ಉಪ ಚುನಾವಣೆಯಲ್ಲಿ...

ಗುರುಗ್ರಾಮ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣ: ಮೂವರು ಮಹಿಳಾ ಐಪಿಎಸ್ ಒಳಗೊಂಡ ವಿಶೇಷ ತನಿಖಾ ತಂಡ ರಚಿಸಿದ ಸುಪ್ರೀಂ

ಗುರುಗ್ರಾಮ ಅಪ್ರಾಪ್ತ ಬಾಲಕಿಯ ಮೇಲಿನ ಅತ್ಯಾಚಾರ ಪ್ರಕರಣದ ತನಿಖೆಗಾಗಿ ಸುಪ್ರೀಂ ಕೋರ್ಟ್ ಬುಧವಾರ ಮೂವರು ಮಹಿಳಾ ಐಪಿಎಸ್ ಅಧಿಕಾರಿಗಳನ್ನು ಒಳಗೊಂಡ ವಿಶೇಷ ತನಿಖಾ ತಂಡವನ್ನು ರಚಿಸಿದೆ.  ಸಿಜೆಐ ಸೂರ್ಯ ಕಾಂತ್ ನೇತೃತ್ವದ ಮೂವರು ನ್ಯಾಯಾಧೀಶರ...