Homeಮುಖಪುಟಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

ಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ನಡೆದಿರುವ ಹಲವು ಅಕ್ರಮಗಳ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿ ಹೇಳಿರುವುದನ್ನು ಉಲ್ಲೇಖಿಸಿ, ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ತರಾಟೆ ತಗೆದುಕೊಂಡಿದೆ.

ನೂರಾರು ಕೋಟಿ ಮೊತ್ತದ ಏಳು ಹಗರಣಗಳಲ್ಲಿ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ವಿರೋಧ ಪಕ್ಷ ಆರೋಪಿಸಿದೆ.

ಭಾರತ್‌ಮಾಲಾ ಯೋಜನೆಯಲ್ಲಿನ ಅಕ್ರಮಗಳಗಳ ಬಗ್ಗೆ ಸಿಎಜಿ ನೀಡಿದ ವರದಿಯನ್ನು ಎತ್ತಿ ತೋರಿಸಿರುವ ಕಾಂಗ್ರೆಸ್, ದ್ವಾರಕಾ ಎಕ್ಸ್‌ಪ್ರೆಸ್‌ವೇ ನಿರ್ಮಾಣ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ನಿಯಮಗಳ ಉಲ್ಲಂಘನೆ, ಆಯುಷ್ಮಾನ್ ಭಾರತ್ ಯೋಜನೆ ಮತ್ತು ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಅನಗತ್ಯ ಲಾಭ ಮಾಡಲಾಗಿದೆ ಎಂದು ಆರೋಪಿಸಿದೆ.

”ಸಿಎಜಿ ನಿಮ್ಮ ಮೂಗಿನ ನೇರಕ್ಕೆ ಬಯಲಿಗೆಳೆಯುತ್ತಿರುವ ಹಗರಣಗಳ ಬಗ್ಗೆ ನೀವು [ಮೋದಿ] ಮೌನ ಮುರಿಯುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಪ್ರಶ್ನಿಸಿದ್ದಾರೆ.

”ನೀವು CCEA [ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ] ಅಧ್ಯಕ್ಷರಾಗಿರುವಿರಿ, ನೀವು ಭಾರತಮಾಲಾ ಯೋಜನೆಯ ಬಗ್ಗೆ ನಿಮ್ಮ ಬಾಯಿ ಮುಚ್ಚಿಕೊಂಡಿದ್ದೀರಾ ಏಕೆ? ಅಲ್ಲಿ ನಿರ್ಮಾಣ ವೆಚ್ಚವು ಕಿಮೀಗೆ 15.37 ಕೋಟಿಯಿಂದ 32 ಕೋಟಿಗೆ ದ್ವಿಗುಣಗೊಂಡಿದೆ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಪ್ರಮುಖ ರಸ್ತೆ ಅಭಿವೃದ್ಧಿ ಯೋಜನೆಯಾದ ಭಾರತಮಾಲಾ ಯೋಜನೆಯಲ್ಲಿ, ಟೆಂಡರ್ ಪ್ರಕ್ರಿಯೆಯೂ ದೋಷಪೂರಿತವಾಗಿದೆ ಎಂದು ಶ್ರೀನಾಟೆ ಆರೋಪಿಸಿದರು.

”ಸಲ್ಲಿಕೆಯಾದ ವಿವರವಾದ ಯೋಜನಾ ವರದಿ ಇಲ್ಲ.. ಎಸ್ಕ್ರೊ ಖಾತೆಯಿಂದ 3,500 ಕೋಟಿ ರೂಪಾಯಿಗಳ ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಸುರಕ್ಷತಾ ಸಲಹೆಗಾರರನ್ನು ನೇಮಿಸಲಾಗಿಲ್ಲ” ಎಂದು ಹೇಳಿದ್ದಾರೆ.

ದೆಹಲಿ-ಗುರುಗ್ರಾಮ್ ಗಡಿಯಲ್ಲಿನ ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮಗಳು ನಡೆದಿವೆ. CCEA ಅನುಮೋದನೆ ಮಾಡಿದ ಪ್ರತಿ ಕಿಮೀ ವೆಚ್ಚ  18.20 ಕೋಟಿ ವೆಚ್ಚಕ್ಕೆ ಬದಲಾಗಿ ಎಕ್ಸ್‌ಪ್ರೆಸ್‌ವೇ ನ್ನು ಪ್ರತಿ ಕಿಮೀಗೆ 250.77 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಅವರು ಆರೋಪಿಸಿದರು.

ಸಿಎಜಿಯ ಎಕ್ಸ್‌ಪ್ರೆಸ್‌ವೇಯ ಆಡಿಟ್ ವರದಿಯಲ್ಲಿ, ಭಾರತ ಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಹೆದ್ದಾರಿಯ ವೆಚ್ಚವು 2017ರಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅನುಮೋದಿಸಿದ ಮೊತ್ತವನ್ನು 14 ಪಟ್ಟು ಮೀರಿದೆ ಎಂದು ತಿಳಿಸಿದೆ.

”500 ಕೋಟಿ ರೂ. ವೆಚ್ಚದಲ್ಲಿ ಮಂಗಳಯಾನ [ಮಾರ್ಸ್ ಆರ್ಬಿಟರ್ ಮಿಷನ್] ಹೋಗಬಹುದಿತ್ತು… NHAIನ [ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ] ಐದು ಟೋಲ್ ಪ್ಲಾಜಾಗಳನ್ನು ಮಾತ್ರ ಆಡಿಟ್ ಮಾಡಿದಾಗ ದೇಶದ ಸಾಮಾನ್ಯ ನಾಗರಿಕರನ್ನು 132 ಕೋಟಿ ರೂಪಾಯಿ ಲೂಟಿ ಮಾಡಿರುವುದು ಗೊತ್ತಾಗಿದೆ. ಒಂದು ವೇಳೆ ಇಡೀ ದೇಶದ ಪ್ರತಿಯೊಂದು ಟೋಲ್ ಪ್ಲಾಜಾವನ್ನು ಲೆಕ್ಕಪರಿಶೋಧನೆ ಮಾಡಿದರೆ, ಈ ಹಗರಣದ ಮೊತ್ತ ಎಷ್ಟಾಗಬಹುದು?” ಎಂದು ಶ್ರೀನಾಟೆ ಪ್ರಶ್ನೆ ಮಾಡಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ ಸುಮಾರು 7.5 ಲಕ್ಷ ಫಲಾನುಭವಿಗಳು ಒಂದೇ ಸೆಲ್‌ಫೋನ್ ಸಂಖ್ಯೆ – 9999999999 ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿ ಹೇಳಿರುವುದನ್ನು ಕಾಂಗ್ರೆಸ್ ಉಲ್ಲೇಖಿಸಿದೆ.

ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ಬಡ ಜನರಿಗೆ ಆರೋಗ್ಯ ವಿಮೆಗಾಗಿ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ.

”ಏಳೂವರೆ ಲಕ್ಷ ಫಲಾನುಭವಿಗಳು, ಒಂದು ಫೋನ್ ಸಂಖ್ಯೆಯೊಂದಿಗೆ ನೋಂದಾಯಿಸಲಾಗಿದೆ, ಆದರೆ ಅಷ್ಟೆ ಅಲ್ಲ, ಸಾವನ್ನಪ್ಪಿದ 88,000ಕ್ಕೂ ಹೆಚ್ಚು ಜನರಿಗೂ ಹಣ ನೀಡಲಾಗಿದೆ. ಹಾಗಾದರೆ ಆ ಹಣ ಯಾರಿಗೆ ಹೋಗಿದೆ..? ಇದೊಂದು ದೊಡ್ಡ ಪ್ರಶ್ನೆಯಾಗಿದೆ” ಎಂದು ಶ್ರೀನಾಟೆ ಹೇಳಿದ್ದಾರೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಉತ್ತರ ಪ್ರದೇಶದ ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಹೇಳುವುದಾದರೆ ಅಲ್ಲಿ ನೋಂದಾಯಿತವಲ್ಲದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ ಎಂದು ಹೇಳಿದೆ.

”ನೋಂದಣಿ ಮಾಡದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ. ಆ ಜನರು ಯಾರು? ಅವರು ಏನು ಮಾಡುತ್ತಿದ್ದಾರೆ? ಟೆಂಡರ್ ಪ್ರಕ್ರಿಯೆಯು ದೋಷಪೂರಿತವಾಗಿದ್ದು ಹೇಗೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು 19 ರಾಜ್ಯಗಳಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಪ್ರಚಾರ ಮಾಡುವ ಹೋರ್ಡಿಂಗ್‌ಗಳನ್ನು ಹಾಕಲು ಬಡವರು, ದೈಹಿಕವಾಗಿ ಅಂಗವಿಕಲರು, ವಿಧವೆಯರು ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ ಹಣವನ್ನು ಬಳಸಲಾಗಿದೆ ಎಂದು ಶ್ರೀನಾಟೆ ಹೇಳಿದ್ದಾರೆ.

”ದೋಷಪೂರಿತ ಎಂಜಿನ್ ವಿನ್ಯಾಸಕ್ಕಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅನ್ನು ಸಹ ಎಳೆಯಲಾಗಿದೆ, ಇದು ಸುಮಾರು 154 ಕೋಟಿ ರೂಪಾಯಿಗಳ ನಷ್ಟಕ್ಕೆ ಕಾರಣವಾಗಿದೆ” ಎಂದು ಅವರು ಹೇಳಿದರು.

”ಇದು ಬೊಕ್ಕಸವನ್ನು ಲೂಟಿ ಮಾಡುತ್ತಿದೆ; ಇದು ಭಾರತದ ಜನರನ್ನು ಲೂಟಿ ಮಾಡುತ್ತಿದೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಆದರೆ ಕ್ರಮ ಕೈಗೊಳ್ಳುವ ಮೊದಲು, ಪ್ರಧಾನಿಯವರು ಈ ದೇಶಕ್ಕೆ ಹೇಳಬೇಕಾಗಿದೆ, ಬಡವರಿಗೆ, ದೈಹಿಕವಾಗಿ ವಿಕಲಚೇತನರಿಗೆ, ವೃದ್ಧರಿಗೆ ಮತ್ತು ವಿಧವೆಯರಿಗೆ ಉದ್ದೇಶಿಸಲಾದ ಯೋಜನೆಗಳ ಹಣವನ್ನು ಅನಗತ್ಯವಾಗಿ ಬಳಸಲು ಏಕೆ ಅನುಮತಿಸುತ್ತಿದ್ದಾರೆ?” ಎನ್ನುವುದನ್ನು ಎಂದು ಪ್ರಧಾನಿಗೆ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ತರಾಟೆ ತೆಗೆದುಕೊಮಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...

ಒಳಮೀಸಲಾತಿ ಜಾರಿ ಸರ್ಕಾರದ ಹೊಸ ಸೂತ್ರ

ಕರ್ನಾಟಕದಲ್ಲಿ ಒಳಮೀಸಲಾತಿಯ ’ಸದ್ದು-ಗುದ್ದು’ ಅವಿಭಜಿತ ಆಂಧ್ರಪ್ರದೇಶಕ್ಕಿಂತಲೂ ಹೆಚ್ಚಾಗಿದೆ. ಇದಕ್ಕೆ ಕಾರಣ ಪರಿಶಿಷ್ಟ ಜಾತಿಗಳೊಳಗಿನ ಮೇಲಾಟವೂ ಹೌದು, ಸರ್ಕಾರದ ಬೇಜವಾಬ್ದಾರಿ ನಡೆಗಳೂ ಹೌದು. ಆದರೆ ದಿನಾಂಕ: 24.04.2026ರಂದು ನಡೆದ ಸಚಿವ ಸಂಪುಟ ಸಭೆಯು ಒಳಮೀಸಲಾತಿ...

ಕೊರೋನಾ ಲಸಿಕೆ ಒಳಹೊರಗುಗಳ ಪರಾಮರ್ಶೆಯ ನೋಟ

ಮನುಷ್ಯನ ನೆನಪಿನ ಶಕ್ತಿ ಕಡಿಮೆ ಎಂದು ರಾಜಕಾರಣಿಗಳು, ಅಧಿಕಾರಿಗಳು ಸದಾ ಗುನುಗುತ್ತಿರುತ್ತಾರೆ. ಅದು ಜೀವ ಮತ್ತು ಜೀವನ ಕಳೆದುಕೊಂಡ ವಿಚಾರವನ್ನು ಕೂಡ ಬಹಳ ಬೇಗ ಮರೆವಿನ ತೊಟ್ಟಿಗೆ ತಳ್ಳಿ ಬಿಡುತ್ತದೆ.ಆದರೂ, ಮನುಷ್ಯ ಭೂಮಿಯ...

‘ಮಾವಿನ ಮರ’ ಕಂಡ ಕನಸು

ಪುಸ್ತಕ ಪರಿಚಯ ಸವಾಲಿನ ವಿಷಯ. ಅದರಲ್ಲೂ ಕವಿತೆಗಳ ಕುರಿತು ಮಾತನಾಡುವುದು ಇನ್ನೂ ಸವಾಲು. ಪ್ರತಿಯೊಂದು ಕವಿತೆಯೂ ತನ್ನ ಓದುಗರೊಂದಿಗೆ ಸಂವಾದಿಸುವ ಬಗೆ ವಿಭಿನ್ನವಾಗಿರುತ್ತದೆ. ಅದನ್ನು ಏಕರೂಪೀ ಪರಿಭಾಷೆಯಲ್ಲಿ ಮಂಡಿಸುವುದು ಸರಿಯಲ್ಲ. ’ಮಿಥಿಲೆಯ ಮಾವಿನ...

NEET ರದ್ದು : ಖಿನ್ನತೆ, ಆತಂಕಕ್ಕೆ ಒಳಗಾದ ವಿದ್ಯಾರ್ಥಿಗಳು; ನಾಲ್ಕು ದಿನದಲ್ಲಿ ನಾಲ್ವರು ಸಾವಿಗೆ ಶರಣು

ಈ ವರ್ಷದ (2026) ನೀಟ್-ಯುಜಿ (NEET-UG) ಪರೀಕ್ಷೆ ರದ್ದಾದ ಬಳಿಕ ದೇಶದಾದ್ಯಂತ ಕನಿಷ್ಠ ನಾಲ್ವರು ವಿದ್ಯಾರ್ಥಿಗಳು ತೀವ್ರ ಮಾನಸಿಕ ಒತ್ತಡ ಹಾಗೂ ಹತಾಶೆಯಿಂದ ಸಾವಿಗೆ ಶರಣಾಗಿದ್ದಾರೆ. ರಾಜಸ್ಥಾನದ ಝುಂಜುನು ಜಿಲ್ಲೆಯ 23 ವರ್ಷದ ಪ್ರದೀಪ್...

ಪ್ಯಾಲೆಸ್ಟೀನಿಯನ್ ಕೈದಿಗಳ ಮೇಲೆ ಲೈಂಗಿಕ ದೌರ್ಜನ್ಯ ವರದಿ: ನ್ಯೂಯಾರ್ಕ್ ಟೈಮ್ ವಿರುದ್ಧ ಮೊಕದ್ದಮೆ ದಾಖಲಿಸಿದ ಇಸ್ರೇಲ್ ಕ್ರಮಕ್ಕೆ ಆರ್‌ಎಸ್‌ಎಫ್ ಖಂಡನೆ

ಪ್ಯಾಲೆಸ್ಟೀನಿಯನ್ ಕೈದಿಗಳನ್ನು ಗುರಿಯಾಗಿಸಿಕೊಂಡು ವ್ಯಾಪಕವಾದ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ನಿಕೋಲಸ್ ಕ್ರಿಸ್ಟೋಫ್ ಅವರ  ಅಭಿಪ್ರಾಯ ಅಂಕಣವನ್ನು ಪ್ರಕಟಿಸಿದ ನ್ಯೂಯಾರ್ಕ್ ಟೈಮ್ಸ್ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಿರುವ ಇಸ್ರೇಲಿ ಸರ್ಕಾರದ ನಿರ್ಧಾರವನ್ನು ರಿಪೋರ್ಟರ್ಸ್ ವಿದೌಟ್...

“ಮುಸ್ಲಿಮರಿಗೆ ಯಾವುದೇ ಕೆಲಸ ಮಾಡಲ್ಲ” ಎಂದು ವಿವಾದಾತ್ಮಕ ಶಪಥ ಮಾಡಿದ ಪಶ್ಚಿಮ ಬಂಗಾಳದ ಬಿಜೆಪಿ ಶಾಸಕ ರಿತೇಶ್ ತಿವಾರಿ

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಬಿಜೆಪಿ ತನ್ನ ಮೊದಲ ಸರ್ಕಾರವನ್ನು ರಚಿಸಿದ ಕೆಲವೇ ದಿನಗಳಲ್ಲಿ, ಪಕ್ಷದ ಶಾಸಕ ರಿತೇಶ್ ತಿವಾರಿ ಅವರು ಮಾಡಿರುವ ಭಾಷಣವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. "ಪಶ್ಚಿಮ...

’ಎಸ್‌ಐಆರ್’ ವಿರುದ್ಧ ಜನಪರ ಸಂಘಟನೆಗಳಿಂದ ಜನಾಂದೋಲನ ಬಂಗಾಳದ ಜನರ ಜೊತೆಗೆ ನಿಂತ ಕರ್ನಾಟಕ

ಮತದಾರರ ಪಟ್ಟಿ ತೀವ್ರ ಪರಿಷ್ಕರಣೆ (ಎಸ್‌ಐಆರ್) ಮೂಲಕ ವಿರೋಧ ಪಕ್ಷಗಳ ಮತದಾರರು ಮತ್ತು ಅಲ್ಪಸಂಖ್ಯಾತ ಸಮುದಾಯದ ಲಕ್ಷಾಂತರ ಮತದಾರರನ್ನು ಪಟ್ಟಿಯಿಂದ ಕೈಬಿಡುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಕುತಂತ್ರ ಈಗಾಗಲೇ ಬಿಹಾರದಲ್ಲಿ ಜಗಜ್ಜಾಹೀರಾಗಿದೆ....

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...