Homeಮುಖಪುಟಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

ಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ನಡೆದಿರುವ ಹಲವು ಅಕ್ರಮಗಳ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿ ಹೇಳಿರುವುದನ್ನು ಉಲ್ಲೇಖಿಸಿ, ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ತರಾಟೆ ತಗೆದುಕೊಂಡಿದೆ.

ನೂರಾರು ಕೋಟಿ ಮೊತ್ತದ ಏಳು ಹಗರಣಗಳಲ್ಲಿ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ವಿರೋಧ ಪಕ್ಷ ಆರೋಪಿಸಿದೆ.

ಭಾರತ್‌ಮಾಲಾ ಯೋಜನೆಯಲ್ಲಿನ ಅಕ್ರಮಗಳಗಳ ಬಗ್ಗೆ ಸಿಎಜಿ ನೀಡಿದ ವರದಿಯನ್ನು ಎತ್ತಿ ತೋರಿಸಿರುವ ಕಾಂಗ್ರೆಸ್, ದ್ವಾರಕಾ ಎಕ್ಸ್‌ಪ್ರೆಸ್‌ವೇ ನಿರ್ಮಾಣ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ನಿಯಮಗಳ ಉಲ್ಲಂಘನೆ, ಆಯುಷ್ಮಾನ್ ಭಾರತ್ ಯೋಜನೆ ಮತ್ತು ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಅನಗತ್ಯ ಲಾಭ ಮಾಡಲಾಗಿದೆ ಎಂದು ಆರೋಪಿಸಿದೆ.

”ಸಿಎಜಿ ನಿಮ್ಮ ಮೂಗಿನ ನೇರಕ್ಕೆ ಬಯಲಿಗೆಳೆಯುತ್ತಿರುವ ಹಗರಣಗಳ ಬಗ್ಗೆ ನೀವು [ಮೋದಿ] ಮೌನ ಮುರಿಯುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಪ್ರಶ್ನಿಸಿದ್ದಾರೆ.

”ನೀವು CCEA [ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ] ಅಧ್ಯಕ್ಷರಾಗಿರುವಿರಿ, ನೀವು ಭಾರತಮಾಲಾ ಯೋಜನೆಯ ಬಗ್ಗೆ ನಿಮ್ಮ ಬಾಯಿ ಮುಚ್ಚಿಕೊಂಡಿದ್ದೀರಾ ಏಕೆ? ಅಲ್ಲಿ ನಿರ್ಮಾಣ ವೆಚ್ಚವು ಕಿಮೀಗೆ 15.37 ಕೋಟಿಯಿಂದ 32 ಕೋಟಿಗೆ ದ್ವಿಗುಣಗೊಂಡಿದೆ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಪ್ರಮುಖ ರಸ್ತೆ ಅಭಿವೃದ್ಧಿ ಯೋಜನೆಯಾದ ಭಾರತಮಾಲಾ ಯೋಜನೆಯಲ್ಲಿ, ಟೆಂಡರ್ ಪ್ರಕ್ರಿಯೆಯೂ ದೋಷಪೂರಿತವಾಗಿದೆ ಎಂದು ಶ್ರೀನಾಟೆ ಆರೋಪಿಸಿದರು.

”ಸಲ್ಲಿಕೆಯಾದ ವಿವರವಾದ ಯೋಜನಾ ವರದಿ ಇಲ್ಲ.. ಎಸ್ಕ್ರೊ ಖಾತೆಯಿಂದ 3,500 ಕೋಟಿ ರೂಪಾಯಿಗಳ ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಸುರಕ್ಷತಾ ಸಲಹೆಗಾರರನ್ನು ನೇಮಿಸಲಾಗಿಲ್ಲ” ಎಂದು ಹೇಳಿದ್ದಾರೆ.

ದೆಹಲಿ-ಗುರುಗ್ರಾಮ್ ಗಡಿಯಲ್ಲಿನ ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮಗಳು ನಡೆದಿವೆ. CCEA ಅನುಮೋದನೆ ಮಾಡಿದ ಪ್ರತಿ ಕಿಮೀ ವೆಚ್ಚ  18.20 ಕೋಟಿ ವೆಚ್ಚಕ್ಕೆ ಬದಲಾಗಿ ಎಕ್ಸ್‌ಪ್ರೆಸ್‌ವೇ ನ್ನು ಪ್ರತಿ ಕಿಮೀಗೆ 250.77 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಅವರು ಆರೋಪಿಸಿದರು.

ಸಿಎಜಿಯ ಎಕ್ಸ್‌ಪ್ರೆಸ್‌ವೇಯ ಆಡಿಟ್ ವರದಿಯಲ್ಲಿ, ಭಾರತ ಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಹೆದ್ದಾರಿಯ ವೆಚ್ಚವು 2017ರಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅನುಮೋದಿಸಿದ ಮೊತ್ತವನ್ನು 14 ಪಟ್ಟು ಮೀರಿದೆ ಎಂದು ತಿಳಿಸಿದೆ.

”500 ಕೋಟಿ ರೂ. ವೆಚ್ಚದಲ್ಲಿ ಮಂಗಳಯಾನ [ಮಾರ್ಸ್ ಆರ್ಬಿಟರ್ ಮಿಷನ್] ಹೋಗಬಹುದಿತ್ತು… NHAIನ [ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ] ಐದು ಟೋಲ್ ಪ್ಲಾಜಾಗಳನ್ನು ಮಾತ್ರ ಆಡಿಟ್ ಮಾಡಿದಾಗ ದೇಶದ ಸಾಮಾನ್ಯ ನಾಗರಿಕರನ್ನು 132 ಕೋಟಿ ರೂಪಾಯಿ ಲೂಟಿ ಮಾಡಿರುವುದು ಗೊತ್ತಾಗಿದೆ. ಒಂದು ವೇಳೆ ಇಡೀ ದೇಶದ ಪ್ರತಿಯೊಂದು ಟೋಲ್ ಪ್ಲಾಜಾವನ್ನು ಲೆಕ್ಕಪರಿಶೋಧನೆ ಮಾಡಿದರೆ, ಈ ಹಗರಣದ ಮೊತ್ತ ಎಷ್ಟಾಗಬಹುದು?” ಎಂದು ಶ್ರೀನಾಟೆ ಪ್ರಶ್ನೆ ಮಾಡಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ ಸುಮಾರು 7.5 ಲಕ್ಷ ಫಲಾನುಭವಿಗಳು ಒಂದೇ ಸೆಲ್‌ಫೋನ್ ಸಂಖ್ಯೆ – 9999999999 ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿ ಹೇಳಿರುವುದನ್ನು ಕಾಂಗ್ರೆಸ್ ಉಲ್ಲೇಖಿಸಿದೆ.

ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ಬಡ ಜನರಿಗೆ ಆರೋಗ್ಯ ವಿಮೆಗಾಗಿ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ.

”ಏಳೂವರೆ ಲಕ್ಷ ಫಲಾನುಭವಿಗಳು, ಒಂದು ಫೋನ್ ಸಂಖ್ಯೆಯೊಂದಿಗೆ ನೋಂದಾಯಿಸಲಾಗಿದೆ, ಆದರೆ ಅಷ್ಟೆ ಅಲ್ಲ, ಸಾವನ್ನಪ್ಪಿದ 88,000ಕ್ಕೂ ಹೆಚ್ಚು ಜನರಿಗೂ ಹಣ ನೀಡಲಾಗಿದೆ. ಹಾಗಾದರೆ ಆ ಹಣ ಯಾರಿಗೆ ಹೋಗಿದೆ..? ಇದೊಂದು ದೊಡ್ಡ ಪ್ರಶ್ನೆಯಾಗಿದೆ” ಎಂದು ಶ್ರೀನಾಟೆ ಹೇಳಿದ್ದಾರೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಉತ್ತರ ಪ್ರದೇಶದ ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಹೇಳುವುದಾದರೆ ಅಲ್ಲಿ ನೋಂದಾಯಿತವಲ್ಲದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ ಎಂದು ಹೇಳಿದೆ.

”ನೋಂದಣಿ ಮಾಡದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ. ಆ ಜನರು ಯಾರು? ಅವರು ಏನು ಮಾಡುತ್ತಿದ್ದಾರೆ? ಟೆಂಡರ್ ಪ್ರಕ್ರಿಯೆಯು ದೋಷಪೂರಿತವಾಗಿದ್ದು ಹೇಗೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು 19 ರಾಜ್ಯಗಳಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಪ್ರಚಾರ ಮಾಡುವ ಹೋರ್ಡಿಂಗ್‌ಗಳನ್ನು ಹಾಕಲು ಬಡವರು, ದೈಹಿಕವಾಗಿ ಅಂಗವಿಕಲರು, ವಿಧವೆಯರು ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ ಹಣವನ್ನು ಬಳಸಲಾಗಿದೆ ಎಂದು ಶ್ರೀನಾಟೆ ಹೇಳಿದ್ದಾರೆ.

”ದೋಷಪೂರಿತ ಎಂಜಿನ್ ವಿನ್ಯಾಸಕ್ಕಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅನ್ನು ಸಹ ಎಳೆಯಲಾಗಿದೆ, ಇದು ಸುಮಾರು 154 ಕೋಟಿ ರೂಪಾಯಿಗಳ ನಷ್ಟಕ್ಕೆ ಕಾರಣವಾಗಿದೆ” ಎಂದು ಅವರು ಹೇಳಿದರು.

”ಇದು ಬೊಕ್ಕಸವನ್ನು ಲೂಟಿ ಮಾಡುತ್ತಿದೆ; ಇದು ಭಾರತದ ಜನರನ್ನು ಲೂಟಿ ಮಾಡುತ್ತಿದೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಆದರೆ ಕ್ರಮ ಕೈಗೊಳ್ಳುವ ಮೊದಲು, ಪ್ರಧಾನಿಯವರು ಈ ದೇಶಕ್ಕೆ ಹೇಳಬೇಕಾಗಿದೆ, ಬಡವರಿಗೆ, ದೈಹಿಕವಾಗಿ ವಿಕಲಚೇತನರಿಗೆ, ವೃದ್ಧರಿಗೆ ಮತ್ತು ವಿಧವೆಯರಿಗೆ ಉದ್ದೇಶಿಸಲಾದ ಯೋಜನೆಗಳ ಹಣವನ್ನು ಅನಗತ್ಯವಾಗಿ ಬಳಸಲು ಏಕೆ ಅನುಮತಿಸುತ್ತಿದ್ದಾರೆ?” ಎನ್ನುವುದನ್ನು ಎಂದು ಪ್ರಧಾನಿಗೆ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ತರಾಟೆ ತೆಗೆದುಕೊಮಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...