Homeಮುಖಪುಟಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

ಬಿಜೆಪಿಯ ಬೃಹತ್ ಹಗರಣ ಸಿಎಜಿ ವರದಿಯಿಂದ ಬಹಿರಂಗ: ಪ್ರಧಾನಿಯ ಮೌನ ಪ್ರಶ್ನಿಸಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಆಡಳಿತದಲ್ಲಿ ನಡೆದಿರುವ ಹಲವು ಅಕ್ರಮಗಳ ಕುರಿತು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ (ಸಿಎಜಿ) ವರದಿ ಹೇಳಿರುವುದನ್ನು ಉಲ್ಲೇಖಿಸಿ, ಪ್ರಧಾನಿ ನರೇಂದ್ರ ಮೋದಿಯವರು ಯಾಕೆ ಮೌನವಾಗಿದ್ದಾರೆ ಎಂದು ಕಾಂಗ್ರೆಸ್ ಬುಧವಾರ ತರಾಟೆ ತಗೆದುಕೊಂಡಿದೆ.

ನೂರಾರು ಕೋಟಿ ಮೊತ್ತದ ಏಳು ಹಗರಣಗಳಲ್ಲಿ ಮೋದಿ ಸರ್ಕಾರ ಭಾಗಿಯಾಗಿದೆ ಎಂದು ವಿರೋಧ ಪಕ್ಷ ಆರೋಪಿಸಿದೆ.

ಭಾರತ್‌ಮಾಲಾ ಯೋಜನೆಯಲ್ಲಿನ ಅಕ್ರಮಗಳಗಳ ಬಗ್ಗೆ ಸಿಎಜಿ ನೀಡಿದ ವರದಿಯನ್ನು ಎತ್ತಿ ತೋರಿಸಿರುವ ಕಾಂಗ್ರೆಸ್, ದ್ವಾರಕಾ ಎಕ್ಸ್‌ಪ್ರೆಸ್‌ವೇ ನಿರ್ಮಾಣ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಟೋಲ್ ನಿಯಮಗಳ ಉಲ್ಲಂಘನೆ, ಆಯುಷ್ಮಾನ್ ಭಾರತ್ ಯೋಜನೆ ಮತ್ತು ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿ ಗುತ್ತಿಗೆದಾರರಿಗೆ ಅನಗತ್ಯ ಲಾಭ ಮಾಡಲಾಗಿದೆ ಎಂದು ಆರೋಪಿಸಿದೆ.

”ಸಿಎಜಿ ನಿಮ್ಮ ಮೂಗಿನ ನೇರಕ್ಕೆ ಬಯಲಿಗೆಳೆಯುತ್ತಿರುವ ಹಗರಣಗಳ ಬಗ್ಗೆ ನೀವು [ಮೋದಿ] ಮೌನ ಮುರಿಯುತ್ತೀರಾ?” ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ಪ್ರಶ್ನಿಸಿದ್ದಾರೆ.

”ನೀವು CCEA [ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ] ಅಧ್ಯಕ್ಷರಾಗಿರುವಿರಿ, ನೀವು ಭಾರತಮಾಲಾ ಯೋಜನೆಯ ಬಗ್ಗೆ ನಿಮ್ಮ ಬಾಯಿ ಮುಚ್ಚಿಕೊಂಡಿದ್ದೀರಾ ಏಕೆ? ಅಲ್ಲಿ ನಿರ್ಮಾಣ ವೆಚ್ಚವು ಕಿಮೀಗೆ 15.37 ಕೋಟಿಯಿಂದ 32 ಕೋಟಿಗೆ ದ್ವಿಗುಣಗೊಂಡಿದೆ” ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಕೇಂದ್ರದ ಪ್ರಮುಖ ರಸ್ತೆ ಅಭಿವೃದ್ಧಿ ಯೋಜನೆಯಾದ ಭಾರತಮಾಲಾ ಯೋಜನೆಯಲ್ಲಿ, ಟೆಂಡರ್ ಪ್ರಕ್ರಿಯೆಯೂ ದೋಷಪೂರಿತವಾಗಿದೆ ಎಂದು ಶ್ರೀನಾಟೆ ಆರೋಪಿಸಿದರು.

”ಸಲ್ಲಿಕೆಯಾದ ವಿವರವಾದ ಯೋಜನಾ ವರದಿ ಇಲ್ಲ.. ಎಸ್ಕ್ರೊ ಖಾತೆಯಿಂದ 3,500 ಕೋಟಿ ರೂಪಾಯಿಗಳ ಹಣವನ್ನು ಬೇರೆಡೆಗೆ ವರ್ಗಾಯಿಸಲಾಗಿದೆ. ಎಲ್ಲಕ್ಕಿಂತ ಹೆಚ್ಚಾಗಿ, ಸುರಕ್ಷತಾ ಸಲಹೆಗಾರರನ್ನು ನೇಮಿಸಲಾಗಿಲ್ಲ” ಎಂದು ಹೇಳಿದ್ದಾರೆ.

ದೆಹಲಿ-ಗುರುಗ್ರಾಮ್ ಗಡಿಯಲ್ಲಿನ ದ್ವಾರಕಾ ಎಕ್ಸ್‌ಪ್ರೆಸ್‌ವೇ ಯೋಜನೆಯಲ್ಲಿ ಅಕ್ರಮಗಳು ನಡೆದಿವೆ. CCEA ಅನುಮೋದನೆ ಮಾಡಿದ ಪ್ರತಿ ಕಿಮೀ ವೆಚ್ಚ  18.20 ಕೋಟಿ ವೆಚ್ಚಕ್ಕೆ ಬದಲಾಗಿ ಎಕ್ಸ್‌ಪ್ರೆಸ್‌ವೇ ನ್ನು ಪ್ರತಿ ಕಿಮೀಗೆ 250.77 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ ಎಂದು ಅವರು ಆರೋಪಿಸಿದರು.

ಸಿಎಜಿಯ ಎಕ್ಸ್‌ಪ್ರೆಸ್‌ವೇಯ ಆಡಿಟ್ ವರದಿಯಲ್ಲಿ, ಭಾರತ ಮಾಲಾ ಪರಿಯೋಜನಾ ಹಂತ-1 ರ ಅಡಿಯಲ್ಲಿ ನಿರ್ಮಿಸಲಾದ ದ್ವಾರಕಾ ಹೆದ್ದಾರಿಯ ವೆಚ್ಚವು 2017ರಲ್ಲಿ ಆರ್ಥಿಕ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಅನುಮೋದಿಸಿದ ಮೊತ್ತವನ್ನು 14 ಪಟ್ಟು ಮೀರಿದೆ ಎಂದು ತಿಳಿಸಿದೆ.

”500 ಕೋಟಿ ರೂ. ವೆಚ್ಚದಲ್ಲಿ ಮಂಗಳಯಾನ [ಮಾರ್ಸ್ ಆರ್ಬಿಟರ್ ಮಿಷನ್] ಹೋಗಬಹುದಿತ್ತು… NHAIನ [ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ] ಐದು ಟೋಲ್ ಪ್ಲಾಜಾಗಳನ್ನು ಮಾತ್ರ ಆಡಿಟ್ ಮಾಡಿದಾಗ ದೇಶದ ಸಾಮಾನ್ಯ ನಾಗರಿಕರನ್ನು 132 ಕೋಟಿ ರೂಪಾಯಿ ಲೂಟಿ ಮಾಡಿರುವುದು ಗೊತ್ತಾಗಿದೆ. ಒಂದು ವೇಳೆ ಇಡೀ ದೇಶದ ಪ್ರತಿಯೊಂದು ಟೋಲ್ ಪ್ಲಾಜಾವನ್ನು ಲೆಕ್ಕಪರಿಶೋಧನೆ ಮಾಡಿದರೆ, ಈ ಹಗರಣದ ಮೊತ್ತ ಎಷ್ಟಾಗಬಹುದು?” ಎಂದು ಶ್ರೀನಾಟೆ ಪ್ರಶ್ನೆ ಮಾಡಿದ್ದಾರೆ.

ಇನ್ನು ಕೇಂದ್ರ ಸರ್ಕಾರದ ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯಲ್ಲಿ ಸುಮಾರು 7.5 ಲಕ್ಷ ಫಲಾನುಭವಿಗಳು ಒಂದೇ ಸೆಲ್‌ಫೋನ್ ಸಂಖ್ಯೆ – 9999999999 ಅಡಿಯಲ್ಲಿ ನೋಂದಾಯಿಸಿಕೊಂಡಿದ್ದಾರೆ ಎಂದು ಕಂಟ್ರೋಲರ್ ಮತ್ತು ಆಡಿಟರ್ ಜನರಲ್ ವರದಿ ಹೇಳಿರುವುದನ್ನು ಕಾಂಗ್ರೆಸ್ ಉಲ್ಲೇಖಿಸಿದೆ.

ಆಯುಷ್ಮಾನ್ ಭಾರತ್-ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯು ಬಡ ಜನರಿಗೆ ಆರೋಗ್ಯ ವಿಮೆಗಾಗಿ ಕೇಂದ್ರ ಸರ್ಕಾರದ ಪ್ರಮುಖ ಯೋಜನೆಯಾಗಿದೆ.

”ಏಳೂವರೆ ಲಕ್ಷ ಫಲಾನುಭವಿಗಳು, ಒಂದು ಫೋನ್ ಸಂಖ್ಯೆಯೊಂದಿಗೆ ನೋಂದಾಯಿಸಲಾಗಿದೆ, ಆದರೆ ಅಷ್ಟೆ ಅಲ್ಲ, ಸಾವನ್ನಪ್ಪಿದ 88,000ಕ್ಕೂ ಹೆಚ್ಚು ಜನರಿಗೂ ಹಣ ನೀಡಲಾಗಿದೆ. ಹಾಗಾದರೆ ಆ ಹಣ ಯಾರಿಗೆ ಹೋಗಿದೆ..? ಇದೊಂದು ದೊಡ್ಡ ಪ್ರಶ್ನೆಯಾಗಿದೆ” ಎಂದು ಶ್ರೀನಾಟೆ ಹೇಳಿದ್ದಾರೆ.

ಇದನ್ನೂ ಓದಿ: ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಬೃಹತ್ ಹಗರಣ: ಸಿಎಜಿ ವರದಿಯಲ್ಲಿ ಬಹಿರಂಗ

ಉತ್ತರ ಪ್ರದೇಶದ ಅಯೋಧ್ಯೆ ಅಭಿವೃದ್ಧಿ ಯೋಜನೆಯಲ್ಲಿನ ಅಕ್ರಮಗಳ ಬಗ್ಗೆ ಹೇಳುವುದಾದರೆ ಅಲ್ಲಿ ನೋಂದಾಯಿತವಲ್ಲದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ ಎಂದು ಹೇಳಿದೆ.

”ನೋಂದಣಿ ಮಾಡದ ಗುತ್ತಿಗೆದಾರರಿಗೆ ಹಣವನ್ನು ನೀಡಲಾಗಿದೆ. ಆ ಜನರು ಯಾರು? ಅವರು ಏನು ಮಾಡುತ್ತಿದ್ದಾರೆ? ಟೆಂಡರ್ ಪ್ರಕ್ರಿಯೆಯು ದೋಷಪೂರಿತವಾಗಿದ್ದು ಹೇಗೆ?” ಎಂದು ಅವರು ಪ್ರಶ್ನೆ ಮಾಡಿದ್ದಾರೆ.

ಗ್ರಾಮೀಣಾಭಿವೃದ್ಧಿ ಸಚಿವಾಲಯವು 19 ರಾಜ್ಯಗಳಲ್ಲಿ ಸ್ವಚ್ಛ ಭಾರತ ಅಭಿಯಾನವನ್ನು ಪ್ರಚಾರ ಮಾಡುವ ಹೋರ್ಡಿಂಗ್‌ಗಳನ್ನು ಹಾಕಲು ಬಡವರು, ದೈಹಿಕವಾಗಿ ಅಂಗವಿಕಲರು, ವಿಧವೆಯರು ಮತ್ತು ಹಿರಿಯ ನಾಗರಿಕರಿಗೆ ಪಿಂಚಣಿ ಹಣವನ್ನು ಬಳಸಲಾಗಿದೆ ಎಂದು ಶ್ರೀನಾಟೆ ಹೇಳಿದ್ದಾರೆ.

”ದೋಷಪೂರಿತ ಎಂಜಿನ್ ವಿನ್ಯಾಸಕ್ಕಾಗಿ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಅನ್ನು ಸಹ ಎಳೆಯಲಾಗಿದೆ, ಇದು ಸುಮಾರು 154 ಕೋಟಿ ರೂಪಾಯಿಗಳ ನಷ್ಟಕ್ಕೆ ಕಾರಣವಾಗಿದೆ” ಎಂದು ಅವರು ಹೇಳಿದರು.

”ಇದು ಬೊಕ್ಕಸವನ್ನು ಲೂಟಿ ಮಾಡುತ್ತಿದೆ; ಇದು ಭಾರತದ ಜನರನ್ನು ಲೂಟಿ ಮಾಡುತ್ತಿದೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು. ಆದರೆ ಕ್ರಮ ಕೈಗೊಳ್ಳುವ ಮೊದಲು, ಪ್ರಧಾನಿಯವರು ಈ ದೇಶಕ್ಕೆ ಹೇಳಬೇಕಾಗಿದೆ, ಬಡವರಿಗೆ, ದೈಹಿಕವಾಗಿ ವಿಕಲಚೇತನರಿಗೆ, ವೃದ್ಧರಿಗೆ ಮತ್ತು ವಿಧವೆಯರಿಗೆ ಉದ್ದೇಶಿಸಲಾದ ಯೋಜನೆಗಳ ಹಣವನ್ನು ಅನಗತ್ಯವಾಗಿ ಬಳಸಲು ಏಕೆ ಅನುಮತಿಸುತ್ತಿದ್ದಾರೆ?” ಎನ್ನುವುದನ್ನು ಎಂದು ಪ್ರಧಾನಿಗೆ ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಟೆ ತರಾಟೆ ತೆಗೆದುಕೊಮಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...

‘ಎಸ್‌ಐಆರ್ ಪ್ರಜಾಪ್ರಭುತ್ವಕ್ಕೆ ವಂಚನೆ’: 2025ಕ್ಕೆ ಹೋಲಿಸಿದರೆ ದೆಹಲಿಯ 58.60 ಲಕ್ಷ ಮತದಾರರ ಹೆಸರುಗಳು ಮಾಯ: ನಾಗರೀಕ ಸಂಘಟನೆಗಳ ಆಕ್ರೋಶ

ನವದೆಹಲಿ: ದೆಹಲಿಯಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಮತದಾರರ ಪಟ್ಟಿಯ ಶುದ್ಧೀಕರಣದ ಸಾಮಾನ್ಯ ಆಡಳಿತಾತ್ಮಕ ಕ್ರಮವಲ್ಲ, ಬದಲಾಗಿ ನಾಗರಿಕರ ಮತದಾನದ ಹಕ್ಕಿನ ಮೇಲೆ ಗಂಭೀರ ಪರಿಣಾಮ ಬೀರುವ...

ತೆಲಂಗಾಣ| ಕೆಸಿಆರ್‌ ಮನೆ ಮುಂದೆ ದಲಿತ ಮುಖಂಡರಿಂದ ಪ್ರತಿಭಟನೆ; ಬಿಆರ್‌ಎಸ್‌ ಕಾರ್ಯಕರ್ತರಿಂದ ನೀರು-ಅರಿಶಿನ ಬಳಸಿ ರಸ್ತೆ ಶುದ್ಧೀಕರಣ

ತೆಲಂಗಾಣದ ಸಿದ್ಧಾಪೇಟೆ ಜಿಲ್ಲೆಯ ಎರ್ರವಳ್ಳಿಯಲ್ಲಿರುವ ಬಿಆರ್‌ಎಸ್ ಅಧ್ಯಕ್ಷ ಕೆ. ಚಂದ್ರಶೇಖರ ರಾವ್ (ಕೆಸಿಆರ್) ಅವರ ಫಾರ್ಮ್ ಹೌಸ್ ಬಳಿ ದಲಿತ ಮುಖಂಡರು ಮತ್ತು ಕಾಂಗ್ರೆಸ್ ನಡೆಸಿದ ಪ್ರತಿಭಟನೆಯ ನಂತರ, ಬಿಆರ್‌ಎಸ್ ನಾಯಕರು ನಡೆಸಿದ...