Homeಮುಖಪುಟಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

ಅಮರ್‌ ಜವಾನ್ ಜ್ಯೋತಿ ವಿಲೀನ: ಕೆಲವರಿಗೆ ದೇಶಭಕ್ತಿ, ತ್ಯಾಗ ಅರ್ಥವಾಗುವುದಿಲ್ಲ ಎಂದ ರಾಹುಲ್

- Advertisement -
- Advertisement -

ಕಳೆದ 50 ವರ್ಷಗಳಿಂದ ದೆಹಲಿಯ ಇಂಡಿಯಾ ಗೇಟ್ ಬಳಿ ಉರಿಯುತ್ತಿರುವ ಅಮರ್‌ ಜವಾನ್ ಜ್ಯೋತಿಯನ್ನು ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಜ್ಯೋತಿಯೊಂದಿಗೆ ವಿಲೀನಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಅಮರ್ ಜವಾನ್ ಜ್ಯೋತಿಯನ್ನು ಕೇಂದ್ರ ಸರ್ಕಾರ ನಂದಿಸುತ್ತಿದೆ ಎಂದು ಆರೋಪಿಸಿರುವ ರಾಹುಲ್ ಗಾಂಧಿ, ‘ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗ ಅರ್ಥವಾಗುವುದಿಲ್ಲ’ ಎಂದು ಕೇಂದ್ರದ ವಿರುದ್ಧ ಕಿಡಿ ಕಾರಿದ್ದಾರೆ.

ಅಮರ್‌ ಜವಾನ್ ಜ್ಯೋತಿಯನ್ನು ನಂದಿಸುವುದಿಲ್ಲ. ಇಂಡಿಯಾ ಗೇಟ್‌ನಿಂದ 400 ಮೀಟರ್ ದೂರದಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿನ ಜ್ಯೋತಿಯೊಂದಿಗೆ ಇಂದು ನಡೆಯುವ ಸಮಾರಂಭದಲ್ಲಿ ವಿಲೀನಗೊಳಿಸಲಾಗುತ್ತದೆ. ಜ್ವಾಲೆಯ ಒಂದು ಭಾಗವನ್ನು ಇಂದು (ಜ.21) ಮಧ್ಯಾಹ್ನ ಯುದ್ಧ ಸ್ಮಾರಕಕ್ಕೆ ಕೊಂಡೊಯ್ಯಲಾಗುತ್ತದೆ ಎಂದು ಒಕ್ಕೂಟ ಸರ್ಕಾರ ತಿಳಿಸಿದೆ.

ಸರ್ಕಾರದ ಈ ಕ್ರಮಕ್ಕೆ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಸಾಕಷ್ಟು ತಪ್ಪು ಮಾಹಿತಿ ಪ್ರಸಾರವಾಗುತ್ತಿದೆ ಎಂದು ಸರ್ಕಾರ ಆರೋಪಿಸಿದೆ.

ಇದನ್ನೂ ಓದಿ: ಹೊಸ ಸಂಸತ್ತು ‘ಸೆಂಟ್ರಲ್‌ ವಿಸ್ಟಾ’ ನಿರ್ಮಾಣ ವೆಚ್ಚ ಯೋಜನೆಗಿಂತ 282 ಕೋಟಿ ರೂ. ಹೆಚ್ಚಳ

“ನಮ್ಮ ವೀರ ಸೈನಿಕರಿಗಾಗಿ ಉರಿಯುತ್ತಿದ್ದ ಅಮರ ಜ್ಯೋತಿಯನ್ನು ಇಂದು ನಂದಿಸಿರುವುದು ಅತೀವ ದುಃಖದ ಸಂಗತಿ. ಕೆಲವರಿಗೆ ದೇಶಭಕ್ತಿ ಮತ್ತು ತ್ಯಾಗವನ್ನು ಅರ್ಥಮಾಡಿಕೊಳ್ಳಲು ಸಾಧ್ಯವಿಲ್ಲ. ಪರವಾಗಿಲ್ಲ. ನಾವು ಮತ್ತೊಮ್ಮೆ ನಮ್ಮ ಸೈನಿಕರಿಗೆ ಅಮರ್ ಜವಾನ್ ಜ್ಯೋತಿಯನ್ನು ಬೆಳಗಿಸುತ್ತೇವೆ” ಎಂದು ರಾಹುಲ್ ಗಾಂಧಿ ಟ್ವಿಟರ್‌ನಲ್ಲಿ ಬರೆದಿದ್ದಾರೆ.

ಇಂದು ಮಧ್ಯಾಹ್ನ 3:30ಕ್ಕೆ ಇಂಡಿಯಾ ಗೇಟ್‌ನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಜ್ಯೋತಿಗಳ ವಿಲೀನ ಮಾಡಲಾಗುತ್ತದೆ. ಜ್ವಾಲೆಯನ್ನು ಗಾರ್ಡ್ ಕಾಂಟಿಜೆಂಟ್ ಜೊತೆಗೆ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಟಾರ್ಚ್‌ನಲ್ಲಿ ಸ್ಥಳಾಂತರಿಸಲಾಗುತ್ತದೆ. ಬಳಿಕ ಎರಡು ಜ್ವಾಲೆಗಳನ್ನು ವಿಲೀನಗೊಳಿಸಲಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮೊದಲನೆಯ ಮಹಾಯುದ್ಧದಲ್ಲಿ ಮಡಿದ ಬ್ರಿಟಿಷ್ ಭಾರತೀಯ ಸೇನೆಯ ಸೈನಿಕರ ನೆನಪಿಗಾಗಿ ಇಂಡಿಯಾ ಗೇಟ್ ಸ್ಮಾರಕವನ್ನು ಬ್ರಿಟಿಷರು ನಿರ್ಮಿಸಿದರು. 1971 ರಲ್ಲಿ ಇಂದಿರಾ ಗಾಂಧಿ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಪಾಕಿಸ್ತಾನದ ವಿರುದ್ಧ ಭಾರತದ ಬೃಹತ್ ವಿಜಯದ ನಂತರ ಅಮರ್ ಜವಾನ್ ಜ್ಯೋತಿಯನ್ನು ಇಂಡಿಯಾ ಗೇಟ್ ಅಡಿಯಲ್ಲಿ ಇರಿಸಲಾಗಿತ್ತು.

ಇನ್ನು ರಾಷ್ಟ್ರೀಯ ಯುದ್ಧ ಸ್ಮಾರಕವನ್ನು 2019 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಿದರು. ಈ ಸ್ಮಾರಕ ಸ್ವತಂತ್ರ ಭಾರತದ ಸಶಸ್ತ್ರ ಸಂಘರ್ಷಗಳಲ್ಲಿ ಹೋರಾಡಿದ ಭಾರತೀಯ ಮಿಲಿಟರಿ ಸೈನಿಕರನ್ನು ಗೌರವಿಸುತ್ತದೆ. ಇದರಲ್ಲಿ ಪಾಕಿಸ್ತಾನ ಮತ್ತು ಚೀನಾದೊಂದಿಗಿನ ಸಶಸ್ತ್ರ ಸಂಘರ್ಷಗಳು ಮತ್ತು 1961 ರ ಗೋವಾ ಯುದ್ಧ, ಶ್ರೀಲಂಕಾದಲ್ಲಿ ಆಪರೇಷನ್ ಪವನ್ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿನ ರಕ್ಷಕ್ ಸೇರಿದಂತೆ ಇತರ ಕಾರ್ಯಾಚರಣೆಗಳಲ್ಲಿ ಹೋರಾಡಿದ ಸೈನಿಕರ ನೆನಪಿನಲ್ಲಿ ನಿರ್ಮಿಸಲಾಗಿದೆ.

ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಹಲವು ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಎಸ್‌‌ಪಿ ನಾಯಕ ಮುಲಾಯಂ ಸೊಸೆ ಬಿಜೆಪಿಗೆ ಸೇರ್ಪಡೆ: ಮಾಧ್ಯಮಗಳಲ್ಲಿ ಮರೆಯಾದ ಒಂದು ಅಂಶ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...