Homeಮುಖಪುಟಬಿಜೆಪಿ ಸೋಲಿಸುವ ಉತ್ಸಾಹ ಹೊಂದಿರುವ ಯಾವುದೇ ಪಕ್ಷದ ಬೆಂಬಲ ಪಡೆಯಲು ಕಾಂಗ್ರೆಸ್ ಸಿದ್ಧ: ಪಿ. ಚಿದಂಬರಂ

ಬಿಜೆಪಿ ಸೋಲಿಸುವ ಉತ್ಸಾಹ ಹೊಂದಿರುವ ಯಾವುದೇ ಪಕ್ಷದ ಬೆಂಬಲ ಪಡೆಯಲು ಕಾಂಗ್ರೆಸ್ ಸಿದ್ಧ: ಪಿ. ಚಿದಂಬರಂ

- Advertisement -
- Advertisement -

’ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಉತ್ಸುಕವಾಗಿರುವ ಯಾವುದೇ ಪಕ್ಷದ ಬೆಂಬಲವನ್ನು ಸ್ವೀಕರಿಸಲು ಕಾಂಗ್ರೆಸ್ ಸಿದ್ಧವಿದೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಶನಿವಾರ ಹೇಳಿದ್ದಾರೆ.

 ತೃಣಮೂಲ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ಮಹುವಾ ಮೊಯಿತ್ರಾ ಅವರು ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಮತ್ತು ಕಾಂಗ್ರೆಸ್‌ನೊಂದಿಗೆ ಚುನಾವಣಾ ಪೂರ್ವ ಮೈತ್ರಿಗೆ ಮುಕ್ತವಾಗಿದೆ ಎಂದು ಸೂಚಿಸಿದ ಬೆನ್ನಲ್ಲೇ ಚಿದಂಬರಂ ಹೇಳಿಕೆ ಹೊರಬಿದ್ದಿದೆ.

“ಮೈತ್ರಿ ಕುರಿತ ಟಿಎಂಸಿ ಹೇಳಿಕೆಯನ್ನು ಇಂದು ಪತ್ರಿಕೆಯಲ್ಲಿ ಓದಿದ್ದೇನೆ, ಅಧಿಕೃತ ಹೇಳಿಕೆಗಾಗಿ ಕಾಯೋಣ. ಕಾಂಗ್ರೆಸ್ ಸ್ವಂತ ಬಲದಿಂದ ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯ ಹೊಂದಿದೆ, ಆದರೆ, ಯಾವುದೇ ಪಕ್ಷವು ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಅನ್ನು ಬೆಂಬಲಿಸಲು ಬಯಸಿದರೆ, ನಾನು ಏಕೆ ಬೇಡ ಎನ್ನಲಿ?” ಎಂದು ಮಾಜಿ ಕೇಂದ್ರ ಸಚಿವ ಚಿದಂಬರಂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ 2017 ರ ಚುನಾವಣೆಯಲ್ಲಿ ಗರಿಷ್ಠ 17 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಬಳಿಕೆ ಈ ಐದು ವರ್ಷಗಳಲ್ಲಿ ಪಕ್ಷದ ಬಲ ಕ್ಷೀಣಿಸಿದೆ. ತನ್ನ ಬಹುಪಾಲು ಶಾಸಕರನ್ನು ಕಳೆದುಕೊಂಡಿದೆ. ಅದರಲ್ಲೂ ಬಹುತೇಕರು ಬಿಜೆಪಿಗೆ ಇಬ್ಬರು ಟಿಎಂಸಿಗೆ ಪಕ್ಷಾಂತರವಾಗಿದ್ದಾರೆ. ಈಗ ಕಾಂಗ್ರೆಸ್‌ಗೆ ಸದನದಲ್ಲಿ ಕೇವಲ ಇಬ್ಬರು ಶಾಸಕರು ಮಾತ್ರ ಉಳಿದಿದ್ದಾರೆ.

ಕಾಂಗ್ರೆಸ್ ಈಗಾಗಲೇ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ)ಯೊಂದಿಗೆ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಘೋಷಿಸಿದೆ. ಇತ್ತ ಟಿಎಂಸಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಜೊತೆ ಮೈತ್ರಿ ಮಾಡಿಕೊಂಡಿದೆ.

“ಬಿಜೆಪಿಯನ್ನು ಸೋಲಿಸಲು ಸಾಧ್ಯವಿರುವ ಎಲ್ಲವನ್ನೂ ಟಿಎಂಸಿ ಮಾಡುತ್ತದೆ” ಎಂದು ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ಗೆ ಜಿಎಫ್‌ಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಟ್ಯಾಗ್ ಮಾಡಿದ್ದಾರೆ.

2017 ರ ಚುನಾವಣೆಯಲ್ಲಿ 40 ಸದಸ್ಯ ಬಲದ ಸದನದಲ್ಲಿ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಗೋವಾದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನಗಳನ್ನು ಗಳಿಸಿದ ಬಿಜೆಪಿ ಕೆಲವು ಸ್ವತಂತ್ರರು ಮತ್ತು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ.

ಸದ್ಯ ಗೋವಾ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಫೆಬ್ರವರಿ 14 ರಂದು ಚುನಾವಣೆ ಎದುರಿಸಲಿದೆ. ಮಾರ್ಚ್ 10ಕ್ಕೆ ಫಲಿತಾಂಶ ಹೊರ ಬೀಳಲಿದೆ.


ಇದನ್ನೂ ಓದಿ: ’ನಮ್ಮ ಜಿಲ್ಲೆಯನ್ನು ಹಾಳು ಮಾಡಿಬಿಟ್ಟ’: ಸಚಿವ ಮಾಧುಸ್ವಾಮಿ ವಿರುದ್ಧ ಕಿಡಿಕಾರಿದ ಬಿಜೆಪಿ ಸಂಸದ ಜಿ.ಎಸ್. ಬಸವರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಂಗ್ರೇಸ್ ಅನ್ನೋದು ಬಿಜೆಪಿ ಯ ಹೆತ್ತ ತಾಯಿ. ಅವ್ರುಗಳು ಝೇಂಡ ಮಾತ್ರ ಬೇರೆ ಬೇರೆ ಅಜೆಂಡಾ ಒಂದೇ…

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...