Homeಮುಖಪುಟಬಿಜೆಪಿ ಸೋಲಿಸುವ ಉತ್ಸಾಹ ಹೊಂದಿರುವ ಯಾವುದೇ ಪಕ್ಷದ ಬೆಂಬಲ ಪಡೆಯಲು ಕಾಂಗ್ರೆಸ್ ಸಿದ್ಧ: ಪಿ. ಚಿದಂಬರಂ

ಬಿಜೆಪಿ ಸೋಲಿಸುವ ಉತ್ಸಾಹ ಹೊಂದಿರುವ ಯಾವುದೇ ಪಕ್ಷದ ಬೆಂಬಲ ಪಡೆಯಲು ಕಾಂಗ್ರೆಸ್ ಸಿದ್ಧ: ಪಿ. ಚಿದಂಬರಂ

- Advertisement -
- Advertisement -

’ಮುಂಬರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸಲು ಉತ್ಸುಕವಾಗಿರುವ ಯಾವುದೇ ಪಕ್ಷದ ಬೆಂಬಲವನ್ನು ಸ್ವೀಕರಿಸಲು ಕಾಂಗ್ರೆಸ್ ಸಿದ್ಧವಿದೆ’ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಶನಿವಾರ ಹೇಳಿದ್ದಾರೆ.

 ತೃಣಮೂಲ ಕಾಂಗ್ರೆಸ್ ಪಕ್ಷದ ಗೋವಾ ಉಸ್ತುವಾರಿ ಮಹುವಾ ಮೊಯಿತ್ರಾ ಅವರು ಮಮತಾ ಬ್ಯಾನರ್ಜಿ ನೇತೃತ್ವದ ಪಕ್ಷವು ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ) ಮತ್ತು ಕಾಂಗ್ರೆಸ್‌ನೊಂದಿಗೆ ಚುನಾವಣಾ ಪೂರ್ವ ಮೈತ್ರಿಗೆ ಮುಕ್ತವಾಗಿದೆ ಎಂದು ಸೂಚಿಸಿದ ಬೆನ್ನಲ್ಲೇ ಚಿದಂಬರಂ ಹೇಳಿಕೆ ಹೊರಬಿದ್ದಿದೆ.

“ಮೈತ್ರಿ ಕುರಿತ ಟಿಎಂಸಿ ಹೇಳಿಕೆಯನ್ನು ಇಂದು ಪತ್ರಿಕೆಯಲ್ಲಿ ಓದಿದ್ದೇನೆ, ಅಧಿಕೃತ ಹೇಳಿಕೆಗಾಗಿ ಕಾಯೋಣ. ಕಾಂಗ್ರೆಸ್ ಸ್ವಂತ ಬಲದಿಂದ ಬಿಜೆಪಿಯನ್ನು ಸೋಲಿಸುವ ಸಾಮರ್ಥ್ಯ ಹೊಂದಿದೆ, ಆದರೆ, ಯಾವುದೇ ಪಕ್ಷವು ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಅನ್ನು ಬೆಂಬಲಿಸಲು ಬಯಸಿದರೆ, ನಾನು ಏಕೆ ಬೇಡ ಎನ್ನಲಿ?” ಎಂದು ಮಾಜಿ ಕೇಂದ್ರ ಸಚಿವ ಚಿದಂಬರಂ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ನಕಲಿ ಅಬಿಯಾನ, ದ್ವೇಶ ರಾಜಕಾರಣಕ್ಕೆ ಬಿಜೆಪಿ ಬಳಸಿದ ಅಪ್ಲಿಕೇಶನ್‌ ಹೆಸರು ‘Tek Fog’: ‘ದಿ ವೈರ್‌’ ಸ್ಪೋಟಕ ವರದಿ

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ 2017 ರ ಚುನಾವಣೆಯಲ್ಲಿ ಗರಿಷ್ಠ 17 ಸ್ಥಾನಗಳನ್ನು ಕಾಂಗ್ರೆಸ್ ಗೆದ್ದಿತ್ತು. ಬಳಿಕೆ ಈ ಐದು ವರ್ಷಗಳಲ್ಲಿ ಪಕ್ಷದ ಬಲ ಕ್ಷೀಣಿಸಿದೆ. ತನ್ನ ಬಹುಪಾಲು ಶಾಸಕರನ್ನು ಕಳೆದುಕೊಂಡಿದೆ. ಅದರಲ್ಲೂ ಬಹುತೇಕರು ಬಿಜೆಪಿಗೆ ಇಬ್ಬರು ಟಿಎಂಸಿಗೆ ಪಕ್ಷಾಂತರವಾಗಿದ್ದಾರೆ. ಈಗ ಕಾಂಗ್ರೆಸ್‌ಗೆ ಸದನದಲ್ಲಿ ಕೇವಲ ಇಬ್ಬರು ಶಾಸಕರು ಮಾತ್ರ ಉಳಿದಿದ್ದಾರೆ.

ಕಾಂಗ್ರೆಸ್ ಈಗಾಗಲೇ ಗೋವಾ ಫಾರ್ವರ್ಡ್ ಪಾರ್ಟಿ (ಜಿಎಫ್‌ಪಿ)ಯೊಂದಿಗೆ ತನ್ನ ಚುನಾವಣಾ ಪೂರ್ವ ಮೈತ್ರಿಯನ್ನು ಘೋಷಿಸಿದೆ. ಇತ್ತ ಟಿಎಂಸಿ ಮಹಾರಾಷ್ಟ್ರವಾದಿ ಗೋಮಾಂತಕ್ ಪಾರ್ಟಿ (ಎಂಜಿಪಿ) ಜೊತೆ ಮೈತ್ರಿ ಮಾಡಿಕೊಂಡಿದೆ.

“ಬಿಜೆಪಿಯನ್ನು ಸೋಲಿಸಲು ಸಾಧ್ಯವಿರುವ ಎಲ್ಲವನ್ನೂ ಟಿಎಂಸಿ ಮಾಡುತ್ತದೆ” ಎಂದು ಮಹುವಾ ಮೊಯಿತ್ರಾ ಟ್ವೀಟ್ ಮಾಡಿದ್ದಾರೆ. ಈ ಟ್ವೀಟ್‌ಗೆ ಜಿಎಫ್‌ಪಿ ಮತ್ತು ಕಾಂಗ್ರೆಸ್ ಪಕ್ಷಗಳನ್ನು ಟ್ಯಾಗ್ ಮಾಡಿದ್ದಾರೆ.

2017 ರ ಚುನಾವಣೆಯಲ್ಲಿ 40 ಸದಸ್ಯ ಬಲದ ಸದನದಲ್ಲಿ 17 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಗೋವಾದಲ್ಲಿ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ 13 ಸ್ಥಾನಗಳನ್ನು ಗಳಿಸಿದ ಬಿಜೆಪಿ ಕೆಲವು ಸ್ವತಂತ್ರರು ಮತ್ತು ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡಿದ್ದರಿಂದ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಾಧ್ಯವಾಗಲಿಲ್ಲ.

ಸದ್ಯ ಗೋವಾ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಫೆಬ್ರವರಿ 14 ರಂದು ಚುನಾವಣೆ ಎದುರಿಸಲಿದೆ. ಮಾರ್ಚ್ 10ಕ್ಕೆ ಫಲಿತಾಂಶ ಹೊರ ಬೀಳಲಿದೆ.


ಇದನ್ನೂ ಓದಿ: ’ನಮ್ಮ ಜಿಲ್ಲೆಯನ್ನು ಹಾಳು ಮಾಡಿಬಿಟ್ಟ’: ಸಚಿವ ಮಾಧುಸ್ವಾಮಿ ವಿರುದ್ಧ ಕಿಡಿಕಾರಿದ ಬಿಜೆಪಿ ಸಂಸದ ಜಿ.ಎಸ್. ಬಸವರಾಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಾಂಗ್ರೇಸ್ ಅನ್ನೋದು ಬಿಜೆಪಿ ಯ ಹೆತ್ತ ತಾಯಿ. ಅವ್ರುಗಳು ಝೇಂಡ ಮಾತ್ರ ಬೇರೆ ಬೇರೆ ಅಜೆಂಡಾ ಒಂದೇ…

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...