Homeಕರ್ನಾಟಕಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

ಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

- Advertisement -
- Advertisement -

ಇದೊಂದ್ ಥರಾ ಪತ್ತೇದಾರಿ ಪಿಚ್ಚರ್ ರೂಪ ಪಡೆಯುತ್ತಿದೆ. ಭಿನ್ನಮತದ ಗುಂಪಿನಲ್ಲಿರುವ ಕಾಂಗ್ರೆಸ್‍ನ ಹಿರಿಯ ಮುಖಂಡ ಬಿಟಿಎಂ ಲೇ ಔಟ್ ಶಾಸಕ ರಾಮಲಿಂಗಾರೆಡ್ಡಿ ಅವರ ಪುತ್ರಿ, ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಒಂದು ತಾಸಿನ ಹಿಂದೆ ದೆಹಲಿಯಲ್ಲಿ ಕಾಣಿಸಿಕೊಂಡರು.

ಹಳದಿ ಚಹೂಡಿದಾರ್ ತೊಟ್ಟಿದ್ದ ಅವರು ಕಾಂಗ್ರೆಸ್‍ನ ಉನ್ನತ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸ ಇರುವ ಎದುರಿನ ಲೇನ್‍ನಿಂದ ಕಾರ್ ಹತ್ತಿ ವಾಪಸ್ ಹೋಗುತ್ತಿದ್ದ ವಿಶುವಲ್ಸ್ ಬಂದಿದೆ. ಅಲ್ಲಿ ಯಾರೋ ಕನ್ನಡ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಸುನಗುತ್ತ ಉತ್ತರಿಸಿದ ಸೌಮ್ಯಾರೆಡ್ಡಿ, ಏನಿಲ್ಲ ಸುಮ್ಮನೇ ದೆಹಲಿಗೆ ಬಂದಿದ್ದೆ ಎಂದು ಅವಸರವಾಗಿ ಕಾರ್ ಹತ್ತಿದ್ದರಲ್ಲೇ ಒಂದು ಏನೋ ಮಹತ್ತರ ಮೆಸೆಜ್ ಇದೆ.

ರಾಮಲಿಂಗಾರೆಡ್ಡಿ ಮತ್ತು ಅವರ ಸಹಚರರಾದ ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಇವರೆಲ್ಲರ ಅಸಮಾಧಾನ, ಇವರ ಬೇಡಿಕೆಗಳ ಸಂದೇಶವನ್ನು ಹೊತ್ತೊಯ್ದ ಸಂದೇಶವನ್ನು ಸೌಮ್ಯಾರೆಡ್ಡಿ ನೇರ ಸೋನಿಯಾ ಮೇಡಂಗೆ ತಲುಪಿಸಿ ಬಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ವಿಶ್ವಾಸ ಕಳೆದುಕೊಂಡಿರುವ ರಾಮಲಿಂಗಾರೆಡ್ಡಿ ತಮ್ಮ ದೆಹಲಿಯ ಸಂಪರ್ಕಗಳ ನೆರವು ಪಡೆದು ನೇರ ಸೋನಿಯಾರಿಗೆ ತಮ್ಮ ಅಳಲನ್ನು ತಲುಪಿಸಿದ್ದಾರೆ. ಈಗಲೂ ಕಾಂಗ್ರೆಸ್ ಬಗ್ಗೆ ಅವರು ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬುದೇನೂ ಗುಟ್ಟಲ್ಲ. ಆ ಕಾರಣಕ್ಕೆ ಅವರು ಮುಂಬೈಗೆ ಹೋಗಿಲ್ಲ.

ಎಐಸಿಸಿಯ ಮಹಿಳಾ ವಿಭಾಗದ ಸೆಕ್ರೆಟರಿ ಸುಷ್ಮಿತಾದೇವ್ ಅವರು ಈ ಭೇಟಿ ಏರ್ಪಡಿಸಿದ್ದೂ ಪಕ್ಕಾ ಆಗಿದೆ. ಸೌಮ್ಯಾರೆಡ್ಡಿ ಮಂದಹಾಸದಲ್ಲಿ ಕಾರ್ ಏರಿದ್ದು ನೋಡಿದರೆ ಸೋನಿಯಾ ಗಾಂಧಿ ನೇರ ರಾಮಲಿಂಗಾರೆಡ್ಡಿ ಜೊತೆ ಫೋನಿನಲ್ಲಿ ಮಾತಾಡಿ ಒಂದು ಇತ್ಯರ್ಥಕ್ಕೆ ಬಂದು ರೆಡ್ಡಿಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡಂತೆ ಕಾಣುತ್ತಿದೆ. ಅಥವಾ ಸೌಮ್ಯ ಇತ್ತ ದೆಹಲಿ ಬಿಟ್ಟು ಬೆಂಗಳೂರು ಕಡೆ ಹೊರಟ ಸ್ವಲ್ಪೇ ಹೊತ್ತಿನಲ್ಲಿ ಮುಂಬೈ ಕಡೆ ಹೊರಟಿದ್ದ ಡಿ ಕೆ ಶಿವಕುಮಾರ್ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ದೆಹಲಿ ಕಡೆ ಪ್ರಯಾಣ ಆರಂಭಿಸಿದ್ದಾರೆ. ಅಲ್ಲಿ ಅವರು ಸೋನಿಯಾರ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸೋನಿಯಾ ಗಾಂಧಿಯವರಿಗೆ ರಾಜ್ಯ ರಾಜಕಾರಣದ ಒಟ್ಟೂ ಚಿತ್ರಣ, ಸರ್ಕಾರ ಉಳಿಸಿಕೊಳ್ಳುವ ಯತ್ನಗಳ ಬಗ್ಗೆ ವಿವರಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸುಷ್ಮಿತಾ ದೇವ್

ನಿನ್ನೆ ಮಲ್ಲಿಕಾರ್ಜುನ ಖರ್ಗೆ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದಾಗ, ‘ನಾನು ತೋಡಿಕೊಂಡ ಅಳಲಿಗೆ ನಿಮ್ಮ ನಾಯಕರು ಸ್ಪಂದಿಸಲೇ ಇಲ್ಲವಲ್ಲ ಖರ್ಗೆ ಸಾಹೇಬರೇ. ಸಿದ್ದರಾಮಯ್ಯ ಸಾಹೇಬರು ಫೋನ್ ಮಾಡಿದ್ದರೆ ಸಾಕಿತ್ತಲ್ಲ? ನಾನು ಸದನಕ್ಕೆ ರಾಜಿನಾಮೆ ನೀಡಿದ್ದೇನೆ, ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ಸದ್ಯಕ್ಕೆ ತೀರ್ಮಾನ ಬದಲಿಸುವುದು ಕಷ್ಟ’ ಎಂದಿದ್ದನ್ನು ಇಲ್ಲಿ ಗಮನಿಸಬೇಕು. ಅಂದರೆ ರೆಡ್ಡಿ ಮತ್ತು ಇತರ ಮೂವರು ಬೆಂಗಳೂರು ಶಾಸಕರು ಪಕ್ಷದ ಮೇಲೆ ಪ್ರೆಶರ್ ಹಾಕಲು ಈ ತಂತ್ರ ಮಾಡಿದ್ದಾರೆ ಎನ್ನುವುದು.

ಹೀಗಾಗಿ ಸೋನಿಯಾ ಭೇಟಿಯ ಪರಿಣಮ ಏನಾಗಬಹುದು? ರಾಮಲಿಂಗಾರೆಡ್ಡಿ ಮತ್ತು ತಂಡ ( 4 ಪ್ಲಸ್ ಸೌಮ್ಯಾರೆಡ್ಡಿ, ಅಂದರೆ ಐದು ಜನ) ನಿಲುವು ಬದಲಿಸಿ ವಾಪಸ್ ಕಾಗ್ರಸ್‍ಗೆ ಬರಬಹುದೇ?

ಈ ಹೊತ್ತಿಗೇ ಸ್ಪೀಕರ್ ರಮೇಶಕುಮಾರ್ ಅವರ ಕಚೇರಿಗೆ ರಾಜಿನಾಮೆ ಸಲ್ಲಿಸಿದವರಿಗೆ ನಾಳೆ ಬಂದು ರಾಜಿನಾಮೆಯ ಕಾರಣದ ವಿವರಣೆ ನೀಡುವಂತೆ ಸೂಚಿಸಿದ್ದಾರಂತೆ. ಈಗ ಮುಂಬೈಯಲ್ಲಿರುವ ಶಾಸಕರು ಸಂಕಟದಲ್ಲಿದ್ದಾರೆ. ಸ್ಪೀಕರ್ ಆಹ್ವಾನ ತಿರಸ್ಕರಿಸಿದರೆ ಅವರ ರಾಜೀನಾಮೆ ಅಂಗೀಕಾರಕ್ಕೇ ತೊಡಕಾಗಬಹುದು.

ಇದೆಲ್ಲದರ ನಡುವೆ ಹಣ ಮತ್ತು ಅಧಿಕಾರದ ಬಲ ಇರುವ ಬಿಜೆಪಿ ತೆರೆಮರೆಯಲ್ಲಿ ಕಾರ್ಯಚರಣೆ ನಡೆಸುತ್ತಿದೆ. ನಮಗೆ ಸಿಕ್ಕ ಮಾಹಿತಿ ಪ್ರಕಾರ, ಆರು ತಿಂಗಳ ನಂತರ ಹೊಸ ಚುನಾವಣೆ ನಡೆದರೆ ದೊಡ್ಡ ಲಾಭ ಎಂದು ಬಿಜೆಪಿ ಹೈಕಮಾಂಡ್ ಲೆಕ್ಕ ಹಾಕಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...