Homeಕರ್ನಾಟಕಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

ಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

- Advertisement -
- Advertisement -

ಇದೊಂದ್ ಥರಾ ಪತ್ತೇದಾರಿ ಪಿಚ್ಚರ್ ರೂಪ ಪಡೆಯುತ್ತಿದೆ. ಭಿನ್ನಮತದ ಗುಂಪಿನಲ್ಲಿರುವ ಕಾಂಗ್ರೆಸ್‍ನ ಹಿರಿಯ ಮುಖಂಡ ಬಿಟಿಎಂ ಲೇ ಔಟ್ ಶಾಸಕ ರಾಮಲಿಂಗಾರೆಡ್ಡಿ ಅವರ ಪುತ್ರಿ, ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಒಂದು ತಾಸಿನ ಹಿಂದೆ ದೆಹಲಿಯಲ್ಲಿ ಕಾಣಿಸಿಕೊಂಡರು.

ಹಳದಿ ಚಹೂಡಿದಾರ್ ತೊಟ್ಟಿದ್ದ ಅವರು ಕಾಂಗ್ರೆಸ್‍ನ ಉನ್ನತ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸ ಇರುವ ಎದುರಿನ ಲೇನ್‍ನಿಂದ ಕಾರ್ ಹತ್ತಿ ವಾಪಸ್ ಹೋಗುತ್ತಿದ್ದ ವಿಶುವಲ್ಸ್ ಬಂದಿದೆ. ಅಲ್ಲಿ ಯಾರೋ ಕನ್ನಡ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಸುನಗುತ್ತ ಉತ್ತರಿಸಿದ ಸೌಮ್ಯಾರೆಡ್ಡಿ, ಏನಿಲ್ಲ ಸುಮ್ಮನೇ ದೆಹಲಿಗೆ ಬಂದಿದ್ದೆ ಎಂದು ಅವಸರವಾಗಿ ಕಾರ್ ಹತ್ತಿದ್ದರಲ್ಲೇ ಒಂದು ಏನೋ ಮಹತ್ತರ ಮೆಸೆಜ್ ಇದೆ.

ರಾಮಲಿಂಗಾರೆಡ್ಡಿ ಮತ್ತು ಅವರ ಸಹಚರರಾದ ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಇವರೆಲ್ಲರ ಅಸಮಾಧಾನ, ಇವರ ಬೇಡಿಕೆಗಳ ಸಂದೇಶವನ್ನು ಹೊತ್ತೊಯ್ದ ಸಂದೇಶವನ್ನು ಸೌಮ್ಯಾರೆಡ್ಡಿ ನೇರ ಸೋನಿಯಾ ಮೇಡಂಗೆ ತಲುಪಿಸಿ ಬಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ವಿಶ್ವಾಸ ಕಳೆದುಕೊಂಡಿರುವ ರಾಮಲಿಂಗಾರೆಡ್ಡಿ ತಮ್ಮ ದೆಹಲಿಯ ಸಂಪರ್ಕಗಳ ನೆರವು ಪಡೆದು ನೇರ ಸೋನಿಯಾರಿಗೆ ತಮ್ಮ ಅಳಲನ್ನು ತಲುಪಿಸಿದ್ದಾರೆ. ಈಗಲೂ ಕಾಂಗ್ರೆಸ್ ಬಗ್ಗೆ ಅವರು ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬುದೇನೂ ಗುಟ್ಟಲ್ಲ. ಆ ಕಾರಣಕ್ಕೆ ಅವರು ಮುಂಬೈಗೆ ಹೋಗಿಲ್ಲ.

ಎಐಸಿಸಿಯ ಮಹಿಳಾ ವಿಭಾಗದ ಸೆಕ್ರೆಟರಿ ಸುಷ್ಮಿತಾದೇವ್ ಅವರು ಈ ಭೇಟಿ ಏರ್ಪಡಿಸಿದ್ದೂ ಪಕ್ಕಾ ಆಗಿದೆ. ಸೌಮ್ಯಾರೆಡ್ಡಿ ಮಂದಹಾಸದಲ್ಲಿ ಕಾರ್ ಏರಿದ್ದು ನೋಡಿದರೆ ಸೋನಿಯಾ ಗಾಂಧಿ ನೇರ ರಾಮಲಿಂಗಾರೆಡ್ಡಿ ಜೊತೆ ಫೋನಿನಲ್ಲಿ ಮಾತಾಡಿ ಒಂದು ಇತ್ಯರ್ಥಕ್ಕೆ ಬಂದು ರೆಡ್ಡಿಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡಂತೆ ಕಾಣುತ್ತಿದೆ. ಅಥವಾ ಸೌಮ್ಯ ಇತ್ತ ದೆಹಲಿ ಬಿಟ್ಟು ಬೆಂಗಳೂರು ಕಡೆ ಹೊರಟ ಸ್ವಲ್ಪೇ ಹೊತ್ತಿನಲ್ಲಿ ಮುಂಬೈ ಕಡೆ ಹೊರಟಿದ್ದ ಡಿ ಕೆ ಶಿವಕುಮಾರ್ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ದೆಹಲಿ ಕಡೆ ಪ್ರಯಾಣ ಆರಂಭಿಸಿದ್ದಾರೆ. ಅಲ್ಲಿ ಅವರು ಸೋನಿಯಾರ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸೋನಿಯಾ ಗಾಂಧಿಯವರಿಗೆ ರಾಜ್ಯ ರಾಜಕಾರಣದ ಒಟ್ಟೂ ಚಿತ್ರಣ, ಸರ್ಕಾರ ಉಳಿಸಿಕೊಳ್ಳುವ ಯತ್ನಗಳ ಬಗ್ಗೆ ವಿವರಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸುಷ್ಮಿತಾ ದೇವ್

ನಿನ್ನೆ ಮಲ್ಲಿಕಾರ್ಜುನ ಖರ್ಗೆ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದಾಗ, ‘ನಾನು ತೋಡಿಕೊಂಡ ಅಳಲಿಗೆ ನಿಮ್ಮ ನಾಯಕರು ಸ್ಪಂದಿಸಲೇ ಇಲ್ಲವಲ್ಲ ಖರ್ಗೆ ಸಾಹೇಬರೇ. ಸಿದ್ದರಾಮಯ್ಯ ಸಾಹೇಬರು ಫೋನ್ ಮಾಡಿದ್ದರೆ ಸಾಕಿತ್ತಲ್ಲ? ನಾನು ಸದನಕ್ಕೆ ರಾಜಿನಾಮೆ ನೀಡಿದ್ದೇನೆ, ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ಸದ್ಯಕ್ಕೆ ತೀರ್ಮಾನ ಬದಲಿಸುವುದು ಕಷ್ಟ’ ಎಂದಿದ್ದನ್ನು ಇಲ್ಲಿ ಗಮನಿಸಬೇಕು. ಅಂದರೆ ರೆಡ್ಡಿ ಮತ್ತು ಇತರ ಮೂವರು ಬೆಂಗಳೂರು ಶಾಸಕರು ಪಕ್ಷದ ಮೇಲೆ ಪ್ರೆಶರ್ ಹಾಕಲು ಈ ತಂತ್ರ ಮಾಡಿದ್ದಾರೆ ಎನ್ನುವುದು.

ಹೀಗಾಗಿ ಸೋನಿಯಾ ಭೇಟಿಯ ಪರಿಣಮ ಏನಾಗಬಹುದು? ರಾಮಲಿಂಗಾರೆಡ್ಡಿ ಮತ್ತು ತಂಡ ( 4 ಪ್ಲಸ್ ಸೌಮ್ಯಾರೆಡ್ಡಿ, ಅಂದರೆ ಐದು ಜನ) ನಿಲುವು ಬದಲಿಸಿ ವಾಪಸ್ ಕಾಗ್ರಸ್‍ಗೆ ಬರಬಹುದೇ?

ಈ ಹೊತ್ತಿಗೇ ಸ್ಪೀಕರ್ ರಮೇಶಕುಮಾರ್ ಅವರ ಕಚೇರಿಗೆ ರಾಜಿನಾಮೆ ಸಲ್ಲಿಸಿದವರಿಗೆ ನಾಳೆ ಬಂದು ರಾಜಿನಾಮೆಯ ಕಾರಣದ ವಿವರಣೆ ನೀಡುವಂತೆ ಸೂಚಿಸಿದ್ದಾರಂತೆ. ಈಗ ಮುಂಬೈಯಲ್ಲಿರುವ ಶಾಸಕರು ಸಂಕಟದಲ್ಲಿದ್ದಾರೆ. ಸ್ಪೀಕರ್ ಆಹ್ವಾನ ತಿರಸ್ಕರಿಸಿದರೆ ಅವರ ರಾಜೀನಾಮೆ ಅಂಗೀಕಾರಕ್ಕೇ ತೊಡಕಾಗಬಹುದು.

ಇದೆಲ್ಲದರ ನಡುವೆ ಹಣ ಮತ್ತು ಅಧಿಕಾರದ ಬಲ ಇರುವ ಬಿಜೆಪಿ ತೆರೆಮರೆಯಲ್ಲಿ ಕಾರ್ಯಚರಣೆ ನಡೆಸುತ್ತಿದೆ. ನಮಗೆ ಸಿಕ್ಕ ಮಾಹಿತಿ ಪ್ರಕಾರ, ಆರು ತಿಂಗಳ ನಂತರ ಹೊಸ ಚುನಾವಣೆ ನಡೆದರೆ ದೊಡ್ಡ ಲಾಭ ಎಂದು ಬಿಜೆಪಿ ಹೈಕಮಾಂಡ್ ಲೆಕ್ಕ ಹಾಕಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...