Homeಕರ್ನಾಟಕಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

ಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

- Advertisement -
- Advertisement -

ಇದೊಂದ್ ಥರಾ ಪತ್ತೇದಾರಿ ಪಿಚ್ಚರ್ ರೂಪ ಪಡೆಯುತ್ತಿದೆ. ಭಿನ್ನಮತದ ಗುಂಪಿನಲ್ಲಿರುವ ಕಾಂಗ್ರೆಸ್‍ನ ಹಿರಿಯ ಮುಖಂಡ ಬಿಟಿಎಂ ಲೇ ಔಟ್ ಶಾಸಕ ರಾಮಲಿಂಗಾರೆಡ್ಡಿ ಅವರ ಪುತ್ರಿ, ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಒಂದು ತಾಸಿನ ಹಿಂದೆ ದೆಹಲಿಯಲ್ಲಿ ಕಾಣಿಸಿಕೊಂಡರು.

ಹಳದಿ ಚಹೂಡಿದಾರ್ ತೊಟ್ಟಿದ್ದ ಅವರು ಕಾಂಗ್ರೆಸ್‍ನ ಉನ್ನತ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸ ಇರುವ ಎದುರಿನ ಲೇನ್‍ನಿಂದ ಕಾರ್ ಹತ್ತಿ ವಾಪಸ್ ಹೋಗುತ್ತಿದ್ದ ವಿಶುವಲ್ಸ್ ಬಂದಿದೆ. ಅಲ್ಲಿ ಯಾರೋ ಕನ್ನಡ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಸುನಗುತ್ತ ಉತ್ತರಿಸಿದ ಸೌಮ್ಯಾರೆಡ್ಡಿ, ಏನಿಲ್ಲ ಸುಮ್ಮನೇ ದೆಹಲಿಗೆ ಬಂದಿದ್ದೆ ಎಂದು ಅವಸರವಾಗಿ ಕಾರ್ ಹತ್ತಿದ್ದರಲ್ಲೇ ಒಂದು ಏನೋ ಮಹತ್ತರ ಮೆಸೆಜ್ ಇದೆ.

ರಾಮಲಿಂಗಾರೆಡ್ಡಿ ಮತ್ತು ಅವರ ಸಹಚರರಾದ ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಇವರೆಲ್ಲರ ಅಸಮಾಧಾನ, ಇವರ ಬೇಡಿಕೆಗಳ ಸಂದೇಶವನ್ನು ಹೊತ್ತೊಯ್ದ ಸಂದೇಶವನ್ನು ಸೌಮ್ಯಾರೆಡ್ಡಿ ನೇರ ಸೋನಿಯಾ ಮೇಡಂಗೆ ತಲುಪಿಸಿ ಬಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ವಿಶ್ವಾಸ ಕಳೆದುಕೊಂಡಿರುವ ರಾಮಲಿಂಗಾರೆಡ್ಡಿ ತಮ್ಮ ದೆಹಲಿಯ ಸಂಪರ್ಕಗಳ ನೆರವು ಪಡೆದು ನೇರ ಸೋನಿಯಾರಿಗೆ ತಮ್ಮ ಅಳಲನ್ನು ತಲುಪಿಸಿದ್ದಾರೆ. ಈಗಲೂ ಕಾಂಗ್ರೆಸ್ ಬಗ್ಗೆ ಅವರು ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬುದೇನೂ ಗುಟ್ಟಲ್ಲ. ಆ ಕಾರಣಕ್ಕೆ ಅವರು ಮುಂಬೈಗೆ ಹೋಗಿಲ್ಲ.

ಎಐಸಿಸಿಯ ಮಹಿಳಾ ವಿಭಾಗದ ಸೆಕ್ರೆಟರಿ ಸುಷ್ಮಿತಾದೇವ್ ಅವರು ಈ ಭೇಟಿ ಏರ್ಪಡಿಸಿದ್ದೂ ಪಕ್ಕಾ ಆಗಿದೆ. ಸೌಮ್ಯಾರೆಡ್ಡಿ ಮಂದಹಾಸದಲ್ಲಿ ಕಾರ್ ಏರಿದ್ದು ನೋಡಿದರೆ ಸೋನಿಯಾ ಗಾಂಧಿ ನೇರ ರಾಮಲಿಂಗಾರೆಡ್ಡಿ ಜೊತೆ ಫೋನಿನಲ್ಲಿ ಮಾತಾಡಿ ಒಂದು ಇತ್ಯರ್ಥಕ್ಕೆ ಬಂದು ರೆಡ್ಡಿಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡಂತೆ ಕಾಣುತ್ತಿದೆ. ಅಥವಾ ಸೌಮ್ಯ ಇತ್ತ ದೆಹಲಿ ಬಿಟ್ಟು ಬೆಂಗಳೂರು ಕಡೆ ಹೊರಟ ಸ್ವಲ್ಪೇ ಹೊತ್ತಿನಲ್ಲಿ ಮುಂಬೈ ಕಡೆ ಹೊರಟಿದ್ದ ಡಿ ಕೆ ಶಿವಕುಮಾರ್ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ದೆಹಲಿ ಕಡೆ ಪ್ರಯಾಣ ಆರಂಭಿಸಿದ್ದಾರೆ. ಅಲ್ಲಿ ಅವರು ಸೋನಿಯಾರ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸೋನಿಯಾ ಗಾಂಧಿಯವರಿಗೆ ರಾಜ್ಯ ರಾಜಕಾರಣದ ಒಟ್ಟೂ ಚಿತ್ರಣ, ಸರ್ಕಾರ ಉಳಿಸಿಕೊಳ್ಳುವ ಯತ್ನಗಳ ಬಗ್ಗೆ ವಿವರಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸುಷ್ಮಿತಾ ದೇವ್

ನಿನ್ನೆ ಮಲ್ಲಿಕಾರ್ಜುನ ಖರ್ಗೆ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದಾಗ, ‘ನಾನು ತೋಡಿಕೊಂಡ ಅಳಲಿಗೆ ನಿಮ್ಮ ನಾಯಕರು ಸ್ಪಂದಿಸಲೇ ಇಲ್ಲವಲ್ಲ ಖರ್ಗೆ ಸಾಹೇಬರೇ. ಸಿದ್ದರಾಮಯ್ಯ ಸಾಹೇಬರು ಫೋನ್ ಮಾಡಿದ್ದರೆ ಸಾಕಿತ್ತಲ್ಲ? ನಾನು ಸದನಕ್ಕೆ ರಾಜಿನಾಮೆ ನೀಡಿದ್ದೇನೆ, ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ಸದ್ಯಕ್ಕೆ ತೀರ್ಮಾನ ಬದಲಿಸುವುದು ಕಷ್ಟ’ ಎಂದಿದ್ದನ್ನು ಇಲ್ಲಿ ಗಮನಿಸಬೇಕು. ಅಂದರೆ ರೆಡ್ಡಿ ಮತ್ತು ಇತರ ಮೂವರು ಬೆಂಗಳೂರು ಶಾಸಕರು ಪಕ್ಷದ ಮೇಲೆ ಪ್ರೆಶರ್ ಹಾಕಲು ಈ ತಂತ್ರ ಮಾಡಿದ್ದಾರೆ ಎನ್ನುವುದು.

ಹೀಗಾಗಿ ಸೋನಿಯಾ ಭೇಟಿಯ ಪರಿಣಮ ಏನಾಗಬಹುದು? ರಾಮಲಿಂಗಾರೆಡ್ಡಿ ಮತ್ತು ತಂಡ ( 4 ಪ್ಲಸ್ ಸೌಮ್ಯಾರೆಡ್ಡಿ, ಅಂದರೆ ಐದು ಜನ) ನಿಲುವು ಬದಲಿಸಿ ವಾಪಸ್ ಕಾಗ್ರಸ್‍ಗೆ ಬರಬಹುದೇ?

ಈ ಹೊತ್ತಿಗೇ ಸ್ಪೀಕರ್ ರಮೇಶಕುಮಾರ್ ಅವರ ಕಚೇರಿಗೆ ರಾಜಿನಾಮೆ ಸಲ್ಲಿಸಿದವರಿಗೆ ನಾಳೆ ಬಂದು ರಾಜಿನಾಮೆಯ ಕಾರಣದ ವಿವರಣೆ ನೀಡುವಂತೆ ಸೂಚಿಸಿದ್ದಾರಂತೆ. ಈಗ ಮುಂಬೈಯಲ್ಲಿರುವ ಶಾಸಕರು ಸಂಕಟದಲ್ಲಿದ್ದಾರೆ. ಸ್ಪೀಕರ್ ಆಹ್ವಾನ ತಿರಸ್ಕರಿಸಿದರೆ ಅವರ ರಾಜೀನಾಮೆ ಅಂಗೀಕಾರಕ್ಕೇ ತೊಡಕಾಗಬಹುದು.

ಇದೆಲ್ಲದರ ನಡುವೆ ಹಣ ಮತ್ತು ಅಧಿಕಾರದ ಬಲ ಇರುವ ಬಿಜೆಪಿ ತೆರೆಮರೆಯಲ್ಲಿ ಕಾರ್ಯಚರಣೆ ನಡೆಸುತ್ತಿದೆ. ನಮಗೆ ಸಿಕ್ಕ ಮಾಹಿತಿ ಪ್ರಕಾರ, ಆರು ತಿಂಗಳ ನಂತರ ಹೊಸ ಚುನಾವಣೆ ನಡೆದರೆ ದೊಡ್ಡ ಲಾಭ ಎಂದು ಬಿಜೆಪಿ ಹೈಕಮಾಂಡ್ ಲೆಕ್ಕ ಹಾಕಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್ ಬಳಿಕ 9 ರಾಜ್ಯ, ಕೇಂದ್ರಾಡಳಿತ ಪ್ರದೇಶಗಳ ಮತದಾರರ ಸಂಖ್ಯೆ 1.70 ಕೋಟಿ ಇಳಿಕೆ

ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಬಳಿಕ 9 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮತದಾರರ ಒಟ್ಟು ಸಂಖ್ಯೆಯಲ್ಲಿ 1.70 ಕೋಟಿ ಇಳಿಕೆ ಕಂಡಿದೆ. ಗುಜರಾತ್, ಪುದುಚೇರಿ, ಲಕ್ಷದ್ವೀಪ, ರಾಜಸ್ಥಾನ, ಛತ್ತೀಸ್‌ಗಢ, ಅಂಡಮಾನ್...

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...