Homeಕರ್ನಾಟಕಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

ಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

- Advertisement -
- Advertisement -

ಇದೊಂದ್ ಥರಾ ಪತ್ತೇದಾರಿ ಪಿಚ್ಚರ್ ರೂಪ ಪಡೆಯುತ್ತಿದೆ. ಭಿನ್ನಮತದ ಗುಂಪಿನಲ್ಲಿರುವ ಕಾಂಗ್ರೆಸ್‍ನ ಹಿರಿಯ ಮುಖಂಡ ಬಿಟಿಎಂ ಲೇ ಔಟ್ ಶಾಸಕ ರಾಮಲಿಂಗಾರೆಡ್ಡಿ ಅವರ ಪುತ್ರಿ, ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಒಂದು ತಾಸಿನ ಹಿಂದೆ ದೆಹಲಿಯಲ್ಲಿ ಕಾಣಿಸಿಕೊಂಡರು.

ಹಳದಿ ಚಹೂಡಿದಾರ್ ತೊಟ್ಟಿದ್ದ ಅವರು ಕಾಂಗ್ರೆಸ್‍ನ ಉನ್ನತ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸ ಇರುವ ಎದುರಿನ ಲೇನ್‍ನಿಂದ ಕಾರ್ ಹತ್ತಿ ವಾಪಸ್ ಹೋಗುತ್ತಿದ್ದ ವಿಶುವಲ್ಸ್ ಬಂದಿದೆ. ಅಲ್ಲಿ ಯಾರೋ ಕನ್ನಡ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಸುನಗುತ್ತ ಉತ್ತರಿಸಿದ ಸೌಮ್ಯಾರೆಡ್ಡಿ, ಏನಿಲ್ಲ ಸುಮ್ಮನೇ ದೆಹಲಿಗೆ ಬಂದಿದ್ದೆ ಎಂದು ಅವಸರವಾಗಿ ಕಾರ್ ಹತ್ತಿದ್ದರಲ್ಲೇ ಒಂದು ಏನೋ ಮಹತ್ತರ ಮೆಸೆಜ್ ಇದೆ.

ರಾಮಲಿಂಗಾರೆಡ್ಡಿ ಮತ್ತು ಅವರ ಸಹಚರರಾದ ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಇವರೆಲ್ಲರ ಅಸಮಾಧಾನ, ಇವರ ಬೇಡಿಕೆಗಳ ಸಂದೇಶವನ್ನು ಹೊತ್ತೊಯ್ದ ಸಂದೇಶವನ್ನು ಸೌಮ್ಯಾರೆಡ್ಡಿ ನೇರ ಸೋನಿಯಾ ಮೇಡಂಗೆ ತಲುಪಿಸಿ ಬಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ವಿಶ್ವಾಸ ಕಳೆದುಕೊಂಡಿರುವ ರಾಮಲಿಂಗಾರೆಡ್ಡಿ ತಮ್ಮ ದೆಹಲಿಯ ಸಂಪರ್ಕಗಳ ನೆರವು ಪಡೆದು ನೇರ ಸೋನಿಯಾರಿಗೆ ತಮ್ಮ ಅಳಲನ್ನು ತಲುಪಿಸಿದ್ದಾರೆ. ಈಗಲೂ ಕಾಂಗ್ರೆಸ್ ಬಗ್ಗೆ ಅವರು ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬುದೇನೂ ಗುಟ್ಟಲ್ಲ. ಆ ಕಾರಣಕ್ಕೆ ಅವರು ಮುಂಬೈಗೆ ಹೋಗಿಲ್ಲ.

ಎಐಸಿಸಿಯ ಮಹಿಳಾ ವಿಭಾಗದ ಸೆಕ್ರೆಟರಿ ಸುಷ್ಮಿತಾದೇವ್ ಅವರು ಈ ಭೇಟಿ ಏರ್ಪಡಿಸಿದ್ದೂ ಪಕ್ಕಾ ಆಗಿದೆ. ಸೌಮ್ಯಾರೆಡ್ಡಿ ಮಂದಹಾಸದಲ್ಲಿ ಕಾರ್ ಏರಿದ್ದು ನೋಡಿದರೆ ಸೋನಿಯಾ ಗಾಂಧಿ ನೇರ ರಾಮಲಿಂಗಾರೆಡ್ಡಿ ಜೊತೆ ಫೋನಿನಲ್ಲಿ ಮಾತಾಡಿ ಒಂದು ಇತ್ಯರ್ಥಕ್ಕೆ ಬಂದು ರೆಡ್ಡಿಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡಂತೆ ಕಾಣುತ್ತಿದೆ. ಅಥವಾ ಸೌಮ್ಯ ಇತ್ತ ದೆಹಲಿ ಬಿಟ್ಟು ಬೆಂಗಳೂರು ಕಡೆ ಹೊರಟ ಸ್ವಲ್ಪೇ ಹೊತ್ತಿನಲ್ಲಿ ಮುಂಬೈ ಕಡೆ ಹೊರಟಿದ್ದ ಡಿ ಕೆ ಶಿವಕುಮಾರ್ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ದೆಹಲಿ ಕಡೆ ಪ್ರಯಾಣ ಆರಂಭಿಸಿದ್ದಾರೆ. ಅಲ್ಲಿ ಅವರು ಸೋನಿಯಾರ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸೋನಿಯಾ ಗಾಂಧಿಯವರಿಗೆ ರಾಜ್ಯ ರಾಜಕಾರಣದ ಒಟ್ಟೂ ಚಿತ್ರಣ, ಸರ್ಕಾರ ಉಳಿಸಿಕೊಳ್ಳುವ ಯತ್ನಗಳ ಬಗ್ಗೆ ವಿವರಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸುಷ್ಮಿತಾ ದೇವ್

ನಿನ್ನೆ ಮಲ್ಲಿಕಾರ್ಜುನ ಖರ್ಗೆ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದಾಗ, ‘ನಾನು ತೋಡಿಕೊಂಡ ಅಳಲಿಗೆ ನಿಮ್ಮ ನಾಯಕರು ಸ್ಪಂದಿಸಲೇ ಇಲ್ಲವಲ್ಲ ಖರ್ಗೆ ಸಾಹೇಬರೇ. ಸಿದ್ದರಾಮಯ್ಯ ಸಾಹೇಬರು ಫೋನ್ ಮಾಡಿದ್ದರೆ ಸಾಕಿತ್ತಲ್ಲ? ನಾನು ಸದನಕ್ಕೆ ರಾಜಿನಾಮೆ ನೀಡಿದ್ದೇನೆ, ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ಸದ್ಯಕ್ಕೆ ತೀರ್ಮಾನ ಬದಲಿಸುವುದು ಕಷ್ಟ’ ಎಂದಿದ್ದನ್ನು ಇಲ್ಲಿ ಗಮನಿಸಬೇಕು. ಅಂದರೆ ರೆಡ್ಡಿ ಮತ್ತು ಇತರ ಮೂವರು ಬೆಂಗಳೂರು ಶಾಸಕರು ಪಕ್ಷದ ಮೇಲೆ ಪ್ರೆಶರ್ ಹಾಕಲು ಈ ತಂತ್ರ ಮಾಡಿದ್ದಾರೆ ಎನ್ನುವುದು.

ಹೀಗಾಗಿ ಸೋನಿಯಾ ಭೇಟಿಯ ಪರಿಣಮ ಏನಾಗಬಹುದು? ರಾಮಲಿಂಗಾರೆಡ್ಡಿ ಮತ್ತು ತಂಡ ( 4 ಪ್ಲಸ್ ಸೌಮ್ಯಾರೆಡ್ಡಿ, ಅಂದರೆ ಐದು ಜನ) ನಿಲುವು ಬದಲಿಸಿ ವಾಪಸ್ ಕಾಗ್ರಸ್‍ಗೆ ಬರಬಹುದೇ?

ಈ ಹೊತ್ತಿಗೇ ಸ್ಪೀಕರ್ ರಮೇಶಕುಮಾರ್ ಅವರ ಕಚೇರಿಗೆ ರಾಜಿನಾಮೆ ಸಲ್ಲಿಸಿದವರಿಗೆ ನಾಳೆ ಬಂದು ರಾಜಿನಾಮೆಯ ಕಾರಣದ ವಿವರಣೆ ನೀಡುವಂತೆ ಸೂಚಿಸಿದ್ದಾರಂತೆ. ಈಗ ಮುಂಬೈಯಲ್ಲಿರುವ ಶಾಸಕರು ಸಂಕಟದಲ್ಲಿದ್ದಾರೆ. ಸ್ಪೀಕರ್ ಆಹ್ವಾನ ತಿರಸ್ಕರಿಸಿದರೆ ಅವರ ರಾಜೀನಾಮೆ ಅಂಗೀಕಾರಕ್ಕೇ ತೊಡಕಾಗಬಹುದು.

ಇದೆಲ್ಲದರ ನಡುವೆ ಹಣ ಮತ್ತು ಅಧಿಕಾರದ ಬಲ ಇರುವ ಬಿಜೆಪಿ ತೆರೆಮರೆಯಲ್ಲಿ ಕಾರ್ಯಚರಣೆ ನಡೆಸುತ್ತಿದೆ. ನಮಗೆ ಸಿಕ್ಕ ಮಾಹಿತಿ ಪ್ರಕಾರ, ಆರು ತಿಂಗಳ ನಂತರ ಹೊಸ ಚುನಾವಣೆ ನಡೆದರೆ ದೊಡ್ಡ ಲಾಭ ಎಂದು ಬಿಜೆಪಿ ಹೈಕಮಾಂಡ್ ಲೆಕ್ಕ ಹಾಕಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...