Homeಕರ್ನಾಟಕಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

ಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

- Advertisement -
- Advertisement -

ಇದೊಂದ್ ಥರಾ ಪತ್ತೇದಾರಿ ಪಿಚ್ಚರ್ ರೂಪ ಪಡೆಯುತ್ತಿದೆ. ಭಿನ್ನಮತದ ಗುಂಪಿನಲ್ಲಿರುವ ಕಾಂಗ್ರೆಸ್‍ನ ಹಿರಿಯ ಮುಖಂಡ ಬಿಟಿಎಂ ಲೇ ಔಟ್ ಶಾಸಕ ರಾಮಲಿಂಗಾರೆಡ್ಡಿ ಅವರ ಪುತ್ರಿ, ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಒಂದು ತಾಸಿನ ಹಿಂದೆ ದೆಹಲಿಯಲ್ಲಿ ಕಾಣಿಸಿಕೊಂಡರು.

ಹಳದಿ ಚಹೂಡಿದಾರ್ ತೊಟ್ಟಿದ್ದ ಅವರು ಕಾಂಗ್ರೆಸ್‍ನ ಉನ್ನತ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸ ಇರುವ ಎದುರಿನ ಲೇನ್‍ನಿಂದ ಕಾರ್ ಹತ್ತಿ ವಾಪಸ್ ಹೋಗುತ್ತಿದ್ದ ವಿಶುವಲ್ಸ್ ಬಂದಿದೆ. ಅಲ್ಲಿ ಯಾರೋ ಕನ್ನಡ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಸುನಗುತ್ತ ಉತ್ತರಿಸಿದ ಸೌಮ್ಯಾರೆಡ್ಡಿ, ಏನಿಲ್ಲ ಸುಮ್ಮನೇ ದೆಹಲಿಗೆ ಬಂದಿದ್ದೆ ಎಂದು ಅವಸರವಾಗಿ ಕಾರ್ ಹತ್ತಿದ್ದರಲ್ಲೇ ಒಂದು ಏನೋ ಮಹತ್ತರ ಮೆಸೆಜ್ ಇದೆ.

ರಾಮಲಿಂಗಾರೆಡ್ಡಿ ಮತ್ತು ಅವರ ಸಹಚರರಾದ ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಇವರೆಲ್ಲರ ಅಸಮಾಧಾನ, ಇವರ ಬೇಡಿಕೆಗಳ ಸಂದೇಶವನ್ನು ಹೊತ್ತೊಯ್ದ ಸಂದೇಶವನ್ನು ಸೌಮ್ಯಾರೆಡ್ಡಿ ನೇರ ಸೋನಿಯಾ ಮೇಡಂಗೆ ತಲುಪಿಸಿ ಬಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ವಿಶ್ವಾಸ ಕಳೆದುಕೊಂಡಿರುವ ರಾಮಲಿಂಗಾರೆಡ್ಡಿ ತಮ್ಮ ದೆಹಲಿಯ ಸಂಪರ್ಕಗಳ ನೆರವು ಪಡೆದು ನೇರ ಸೋನಿಯಾರಿಗೆ ತಮ್ಮ ಅಳಲನ್ನು ತಲುಪಿಸಿದ್ದಾರೆ. ಈಗಲೂ ಕಾಂಗ್ರೆಸ್ ಬಗ್ಗೆ ಅವರು ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬುದೇನೂ ಗುಟ್ಟಲ್ಲ. ಆ ಕಾರಣಕ್ಕೆ ಅವರು ಮುಂಬೈಗೆ ಹೋಗಿಲ್ಲ.

ಎಐಸಿಸಿಯ ಮಹಿಳಾ ವಿಭಾಗದ ಸೆಕ್ರೆಟರಿ ಸುಷ್ಮಿತಾದೇವ್ ಅವರು ಈ ಭೇಟಿ ಏರ್ಪಡಿಸಿದ್ದೂ ಪಕ್ಕಾ ಆಗಿದೆ. ಸೌಮ್ಯಾರೆಡ್ಡಿ ಮಂದಹಾಸದಲ್ಲಿ ಕಾರ್ ಏರಿದ್ದು ನೋಡಿದರೆ ಸೋನಿಯಾ ಗಾಂಧಿ ನೇರ ರಾಮಲಿಂಗಾರೆಡ್ಡಿ ಜೊತೆ ಫೋನಿನಲ್ಲಿ ಮಾತಾಡಿ ಒಂದು ಇತ್ಯರ್ಥಕ್ಕೆ ಬಂದು ರೆಡ್ಡಿಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡಂತೆ ಕಾಣುತ್ತಿದೆ. ಅಥವಾ ಸೌಮ್ಯ ಇತ್ತ ದೆಹಲಿ ಬಿಟ್ಟು ಬೆಂಗಳೂರು ಕಡೆ ಹೊರಟ ಸ್ವಲ್ಪೇ ಹೊತ್ತಿನಲ್ಲಿ ಮುಂಬೈ ಕಡೆ ಹೊರಟಿದ್ದ ಡಿ ಕೆ ಶಿವಕುಮಾರ್ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ದೆಹಲಿ ಕಡೆ ಪ್ರಯಾಣ ಆರಂಭಿಸಿದ್ದಾರೆ. ಅಲ್ಲಿ ಅವರು ಸೋನಿಯಾರ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸೋನಿಯಾ ಗಾಂಧಿಯವರಿಗೆ ರಾಜ್ಯ ರಾಜಕಾರಣದ ಒಟ್ಟೂ ಚಿತ್ರಣ, ಸರ್ಕಾರ ಉಳಿಸಿಕೊಳ್ಳುವ ಯತ್ನಗಳ ಬಗ್ಗೆ ವಿವರಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸುಷ್ಮಿತಾ ದೇವ್

ನಿನ್ನೆ ಮಲ್ಲಿಕಾರ್ಜುನ ಖರ್ಗೆ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದಾಗ, ‘ನಾನು ತೋಡಿಕೊಂಡ ಅಳಲಿಗೆ ನಿಮ್ಮ ನಾಯಕರು ಸ್ಪಂದಿಸಲೇ ಇಲ್ಲವಲ್ಲ ಖರ್ಗೆ ಸಾಹೇಬರೇ. ಸಿದ್ದರಾಮಯ್ಯ ಸಾಹೇಬರು ಫೋನ್ ಮಾಡಿದ್ದರೆ ಸಾಕಿತ್ತಲ್ಲ? ನಾನು ಸದನಕ್ಕೆ ರಾಜಿನಾಮೆ ನೀಡಿದ್ದೇನೆ, ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ಸದ್ಯಕ್ಕೆ ತೀರ್ಮಾನ ಬದಲಿಸುವುದು ಕಷ್ಟ’ ಎಂದಿದ್ದನ್ನು ಇಲ್ಲಿ ಗಮನಿಸಬೇಕು. ಅಂದರೆ ರೆಡ್ಡಿ ಮತ್ತು ಇತರ ಮೂವರು ಬೆಂಗಳೂರು ಶಾಸಕರು ಪಕ್ಷದ ಮೇಲೆ ಪ್ರೆಶರ್ ಹಾಕಲು ಈ ತಂತ್ರ ಮಾಡಿದ್ದಾರೆ ಎನ್ನುವುದು.

ಹೀಗಾಗಿ ಸೋನಿಯಾ ಭೇಟಿಯ ಪರಿಣಮ ಏನಾಗಬಹುದು? ರಾಮಲಿಂಗಾರೆಡ್ಡಿ ಮತ್ತು ತಂಡ ( 4 ಪ್ಲಸ್ ಸೌಮ್ಯಾರೆಡ್ಡಿ, ಅಂದರೆ ಐದು ಜನ) ನಿಲುವು ಬದಲಿಸಿ ವಾಪಸ್ ಕಾಗ್ರಸ್‍ಗೆ ಬರಬಹುದೇ?

ಈ ಹೊತ್ತಿಗೇ ಸ್ಪೀಕರ್ ರಮೇಶಕುಮಾರ್ ಅವರ ಕಚೇರಿಗೆ ರಾಜಿನಾಮೆ ಸಲ್ಲಿಸಿದವರಿಗೆ ನಾಳೆ ಬಂದು ರಾಜಿನಾಮೆಯ ಕಾರಣದ ವಿವರಣೆ ನೀಡುವಂತೆ ಸೂಚಿಸಿದ್ದಾರಂತೆ. ಈಗ ಮುಂಬೈಯಲ್ಲಿರುವ ಶಾಸಕರು ಸಂಕಟದಲ್ಲಿದ್ದಾರೆ. ಸ್ಪೀಕರ್ ಆಹ್ವಾನ ತಿರಸ್ಕರಿಸಿದರೆ ಅವರ ರಾಜೀನಾಮೆ ಅಂಗೀಕಾರಕ್ಕೇ ತೊಡಕಾಗಬಹುದು.

ಇದೆಲ್ಲದರ ನಡುವೆ ಹಣ ಮತ್ತು ಅಧಿಕಾರದ ಬಲ ಇರುವ ಬಿಜೆಪಿ ತೆರೆಮರೆಯಲ್ಲಿ ಕಾರ್ಯಚರಣೆ ನಡೆಸುತ್ತಿದೆ. ನಮಗೆ ಸಿಕ್ಕ ಮಾಹಿತಿ ಪ್ರಕಾರ, ಆರು ತಿಂಗಳ ನಂತರ ಹೊಸ ಚುನಾವಣೆ ನಡೆದರೆ ದೊಡ್ಡ ಲಾಭ ಎಂದು ಬಿಜೆಪಿ ಹೈಕಮಾಂಡ್ ಲೆಕ್ಕ ಹಾಕಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...