Homeಕರ್ನಾಟಕಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

ಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

- Advertisement -
- Advertisement -

ಇದೊಂದ್ ಥರಾ ಪತ್ತೇದಾರಿ ಪಿಚ್ಚರ್ ರೂಪ ಪಡೆಯುತ್ತಿದೆ. ಭಿನ್ನಮತದ ಗುಂಪಿನಲ್ಲಿರುವ ಕಾಂಗ್ರೆಸ್‍ನ ಹಿರಿಯ ಮುಖಂಡ ಬಿಟಿಎಂ ಲೇ ಔಟ್ ಶಾಸಕ ರಾಮಲಿಂಗಾರೆಡ್ಡಿ ಅವರ ಪುತ್ರಿ, ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಒಂದು ತಾಸಿನ ಹಿಂದೆ ದೆಹಲಿಯಲ್ಲಿ ಕಾಣಿಸಿಕೊಂಡರು.

ಹಳದಿ ಚಹೂಡಿದಾರ್ ತೊಟ್ಟಿದ್ದ ಅವರು ಕಾಂಗ್ರೆಸ್‍ನ ಉನ್ನತ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸ ಇರುವ ಎದುರಿನ ಲೇನ್‍ನಿಂದ ಕಾರ್ ಹತ್ತಿ ವಾಪಸ್ ಹೋಗುತ್ತಿದ್ದ ವಿಶುವಲ್ಸ್ ಬಂದಿದೆ. ಅಲ್ಲಿ ಯಾರೋ ಕನ್ನಡ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಸುನಗುತ್ತ ಉತ್ತರಿಸಿದ ಸೌಮ್ಯಾರೆಡ್ಡಿ, ಏನಿಲ್ಲ ಸುಮ್ಮನೇ ದೆಹಲಿಗೆ ಬಂದಿದ್ದೆ ಎಂದು ಅವಸರವಾಗಿ ಕಾರ್ ಹತ್ತಿದ್ದರಲ್ಲೇ ಒಂದು ಏನೋ ಮಹತ್ತರ ಮೆಸೆಜ್ ಇದೆ.

ರಾಮಲಿಂಗಾರೆಡ್ಡಿ ಮತ್ತು ಅವರ ಸಹಚರರಾದ ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಇವರೆಲ್ಲರ ಅಸಮಾಧಾನ, ಇವರ ಬೇಡಿಕೆಗಳ ಸಂದೇಶವನ್ನು ಹೊತ್ತೊಯ್ದ ಸಂದೇಶವನ್ನು ಸೌಮ್ಯಾರೆಡ್ಡಿ ನೇರ ಸೋನಿಯಾ ಮೇಡಂಗೆ ತಲುಪಿಸಿ ಬಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ವಿಶ್ವಾಸ ಕಳೆದುಕೊಂಡಿರುವ ರಾಮಲಿಂಗಾರೆಡ್ಡಿ ತಮ್ಮ ದೆಹಲಿಯ ಸಂಪರ್ಕಗಳ ನೆರವು ಪಡೆದು ನೇರ ಸೋನಿಯಾರಿಗೆ ತಮ್ಮ ಅಳಲನ್ನು ತಲುಪಿಸಿದ್ದಾರೆ. ಈಗಲೂ ಕಾಂಗ್ರೆಸ್ ಬಗ್ಗೆ ಅವರು ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬುದೇನೂ ಗುಟ್ಟಲ್ಲ. ಆ ಕಾರಣಕ್ಕೆ ಅವರು ಮುಂಬೈಗೆ ಹೋಗಿಲ್ಲ.

ಎಐಸಿಸಿಯ ಮಹಿಳಾ ವಿಭಾಗದ ಸೆಕ್ರೆಟರಿ ಸುಷ್ಮಿತಾದೇವ್ ಅವರು ಈ ಭೇಟಿ ಏರ್ಪಡಿಸಿದ್ದೂ ಪಕ್ಕಾ ಆಗಿದೆ. ಸೌಮ್ಯಾರೆಡ್ಡಿ ಮಂದಹಾಸದಲ್ಲಿ ಕಾರ್ ಏರಿದ್ದು ನೋಡಿದರೆ ಸೋನಿಯಾ ಗಾಂಧಿ ನೇರ ರಾಮಲಿಂಗಾರೆಡ್ಡಿ ಜೊತೆ ಫೋನಿನಲ್ಲಿ ಮಾತಾಡಿ ಒಂದು ಇತ್ಯರ್ಥಕ್ಕೆ ಬಂದು ರೆಡ್ಡಿಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡಂತೆ ಕಾಣುತ್ತಿದೆ. ಅಥವಾ ಸೌಮ್ಯ ಇತ್ತ ದೆಹಲಿ ಬಿಟ್ಟು ಬೆಂಗಳೂರು ಕಡೆ ಹೊರಟ ಸ್ವಲ್ಪೇ ಹೊತ್ತಿನಲ್ಲಿ ಮುಂಬೈ ಕಡೆ ಹೊರಟಿದ್ದ ಡಿ ಕೆ ಶಿವಕುಮಾರ್ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ದೆಹಲಿ ಕಡೆ ಪ್ರಯಾಣ ಆರಂಭಿಸಿದ್ದಾರೆ. ಅಲ್ಲಿ ಅವರು ಸೋನಿಯಾರ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸೋನಿಯಾ ಗಾಂಧಿಯವರಿಗೆ ರಾಜ್ಯ ರಾಜಕಾರಣದ ಒಟ್ಟೂ ಚಿತ್ರಣ, ಸರ್ಕಾರ ಉಳಿಸಿಕೊಳ್ಳುವ ಯತ್ನಗಳ ಬಗ್ಗೆ ವಿವರಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸುಷ್ಮಿತಾ ದೇವ್

ನಿನ್ನೆ ಮಲ್ಲಿಕಾರ್ಜುನ ಖರ್ಗೆ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದಾಗ, ‘ನಾನು ತೋಡಿಕೊಂಡ ಅಳಲಿಗೆ ನಿಮ್ಮ ನಾಯಕರು ಸ್ಪಂದಿಸಲೇ ಇಲ್ಲವಲ್ಲ ಖರ್ಗೆ ಸಾಹೇಬರೇ. ಸಿದ್ದರಾಮಯ್ಯ ಸಾಹೇಬರು ಫೋನ್ ಮಾಡಿದ್ದರೆ ಸಾಕಿತ್ತಲ್ಲ? ನಾನು ಸದನಕ್ಕೆ ರಾಜಿನಾಮೆ ನೀಡಿದ್ದೇನೆ, ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ಸದ್ಯಕ್ಕೆ ತೀರ್ಮಾನ ಬದಲಿಸುವುದು ಕಷ್ಟ’ ಎಂದಿದ್ದನ್ನು ಇಲ್ಲಿ ಗಮನಿಸಬೇಕು. ಅಂದರೆ ರೆಡ್ಡಿ ಮತ್ತು ಇತರ ಮೂವರು ಬೆಂಗಳೂರು ಶಾಸಕರು ಪಕ್ಷದ ಮೇಲೆ ಪ್ರೆಶರ್ ಹಾಕಲು ಈ ತಂತ್ರ ಮಾಡಿದ್ದಾರೆ ಎನ್ನುವುದು.

ಹೀಗಾಗಿ ಸೋನಿಯಾ ಭೇಟಿಯ ಪರಿಣಮ ಏನಾಗಬಹುದು? ರಾಮಲಿಂಗಾರೆಡ್ಡಿ ಮತ್ತು ತಂಡ ( 4 ಪ್ಲಸ್ ಸೌಮ್ಯಾರೆಡ್ಡಿ, ಅಂದರೆ ಐದು ಜನ) ನಿಲುವು ಬದಲಿಸಿ ವಾಪಸ್ ಕಾಗ್ರಸ್‍ಗೆ ಬರಬಹುದೇ?

ಈ ಹೊತ್ತಿಗೇ ಸ್ಪೀಕರ್ ರಮೇಶಕುಮಾರ್ ಅವರ ಕಚೇರಿಗೆ ರಾಜಿನಾಮೆ ಸಲ್ಲಿಸಿದವರಿಗೆ ನಾಳೆ ಬಂದು ರಾಜಿನಾಮೆಯ ಕಾರಣದ ವಿವರಣೆ ನೀಡುವಂತೆ ಸೂಚಿಸಿದ್ದಾರಂತೆ. ಈಗ ಮುಂಬೈಯಲ್ಲಿರುವ ಶಾಸಕರು ಸಂಕಟದಲ್ಲಿದ್ದಾರೆ. ಸ್ಪೀಕರ್ ಆಹ್ವಾನ ತಿರಸ್ಕರಿಸಿದರೆ ಅವರ ರಾಜೀನಾಮೆ ಅಂಗೀಕಾರಕ್ಕೇ ತೊಡಕಾಗಬಹುದು.

ಇದೆಲ್ಲದರ ನಡುವೆ ಹಣ ಮತ್ತು ಅಧಿಕಾರದ ಬಲ ಇರುವ ಬಿಜೆಪಿ ತೆರೆಮರೆಯಲ್ಲಿ ಕಾರ್ಯಚರಣೆ ನಡೆಸುತ್ತಿದೆ. ನಮಗೆ ಸಿಕ್ಕ ಮಾಹಿತಿ ಪ್ರಕಾರ, ಆರು ತಿಂಗಳ ನಂತರ ಹೊಸ ಚುನಾವಣೆ ನಡೆದರೆ ದೊಡ್ಡ ಲಾಭ ಎಂದು ಬಿಜೆಪಿ ಹೈಕಮಾಂಡ್ ಲೆಕ್ಕ ಹಾಕಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...

ಟಿಎಂಸಿ ಬಂಡಾಯ : 20 ಸಂಸದರು ಪಕ್ಷ ತೊರೆದರೂ ಅನರ್ಹತೆ ತಪ್ಪಿದ್ದಲ್ಲ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಸುಮಾರು 20 ಲೋಕಸಭಾ ಸಂಸದರು ಪಕ್ಷದಿಂದ ಬೇರ್ಪಟ್ಟು ಪ್ರತ್ಯೇಕ ಗುಂಪು ರಚಿಸಲು ಸಜ್ಜಾಗಿದ್ದಾರೆ ಎಂಬ ವರದಿಗಳ ನಡುವೆ, ಕೇವಲ ಮೂರನೇ ಎರಡರಷ್ಟು ಸಂಸದರ ಬೆಂಬಲ ಹೊಂದಿರುವುದರಿಂದ ಮಾತ್ರ...

ಕಚ್ಚಿದ ಸೇಬನ್ನು ಅಭಿಮಾನಿಗಳತ್ತ ಎಸೆದ ಸಿಎಂ ಡಿ.ಕೆ. ಶಿವಕುಮಾರ್: ವಿಡಿಯೋ ವೈರಲ್

ರಾಜಕೀಯ ನಾಯಕರು ತಮಗೆ ಸಿಕ್ಕ ಹಾರ, ತುರಾಯಿ ಅಥವಾ ಹಣ್ಣುಗಳನ್ನು ಅಭಿಮಾನಿಗಳಿಗೆ ಹಂಚುವುದು ಹೊಸದೇನಲ್ಲ. ಆದರೆ, ತಾನು ಕಚ್ಚಿದ ಹಣ್ಣನ್ನು ಸಾರ್ವಜನಿಕವಾಗಿ ಜನರತ್ತ ಎಸೆಯುವುದು ಯಾವ ರೀತಿಯ ಸಂಸ್ಕೃತಿ ಎಂಬ ಪ್ರಶ್ನೆ ಮೂಡುತ್ತದೆ....

ವೈಜಾಗ್ ಸ್ಟೀಲ್ ಅಪಘಾತಕ್ಕೆ 8 ಮಂದಿ ಬಲಿ: ಸಿಬ್ಬಂದಿ ಕೊರತೆಯ ಬಗ್ಗೆ ಕಾರ್ಮಿಕ ಸಂಘಗಳ ಆರೋಪ: ಸಾವಿನ ಅಂಚಿನಲ್ಲೂ ಕುಟುಂಬಕ್ಕಾಗಿ ಮಿಡಿದ ಕಾರ್ಮಿಕ

ಆಂಧ್ರಪ್ರದೇಶದ ವಿಶಾಖಪಟ್ಟಣದಲ್ಲಿರುವ ಪ್ರಸಿದ್ಧ ರಾಷ್ಟ್ರೀಯ ಇಸ್ಪತ್ ನಿಗಮ್ ಲಿಮಿಟೆಡ್ (RINL) ಉಕ್ಕು ಸ್ಥಾವರದಲ್ಲಿ ಸೋಮವಾರ (ಜೂನ್ 8, 2026) ಸಂಜೆ ಭೀಕರ ಕೈಗಾರಿಕಾ ದುರಂತವೊಂದು ಸಂಭವಿಸಿದೆ. ಸ್ಥಾವರದ ಸ್ಟೀಲ್ ಮೆಲ್ಟ್ ಶಾಪ್-1 (SMS-1)...

ಅಂದು ಪಿಣರಾಯಿ ಮನೆ ಮೇಲೆ ದಾಳಿ; ಈಗ ವೀಣಾ ವಿಜಯನ್‌ಗೆ ಸಮನ್ಸ್‌: ಹಿರಿಯ ಕಮ್ಯುನಿಸ್ಟ್‌ ನಾಯಕನ ಕುಟುಂಬದ ಮೇಲೆ ಇಡಿ ಕಣ್ಣು

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಕೇರಳದ ಮಾಜಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮನೆ ಮೇಲೆ ಕಳೆದ ತಿಂಗಳು ಜಾರಿ ನಿರ್ದೇಶನಾಲಯ ದಾಳಿ ಮಾಡಿತ್ತು. ಕೊನೆಗೆ ಅಲ್ಲಿ ಏನೂ ಸಿಗದೆ ಬರಿಗೈನಲ್ಲಿ ಅಧಿಕಾರಿಗಳು...