Homeಕರ್ನಾಟಕಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

ಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

- Advertisement -
- Advertisement -

ಇದೊಂದ್ ಥರಾ ಪತ್ತೇದಾರಿ ಪಿಚ್ಚರ್ ರೂಪ ಪಡೆಯುತ್ತಿದೆ. ಭಿನ್ನಮತದ ಗುಂಪಿನಲ್ಲಿರುವ ಕಾಂಗ್ರೆಸ್‍ನ ಹಿರಿಯ ಮುಖಂಡ ಬಿಟಿಎಂ ಲೇ ಔಟ್ ಶಾಸಕ ರಾಮಲಿಂಗಾರೆಡ್ಡಿ ಅವರ ಪುತ್ರಿ, ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಒಂದು ತಾಸಿನ ಹಿಂದೆ ದೆಹಲಿಯಲ್ಲಿ ಕಾಣಿಸಿಕೊಂಡರು.

ಹಳದಿ ಚಹೂಡಿದಾರ್ ತೊಟ್ಟಿದ್ದ ಅವರು ಕಾಂಗ್ರೆಸ್‍ನ ಉನ್ನತ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸ ಇರುವ ಎದುರಿನ ಲೇನ್‍ನಿಂದ ಕಾರ್ ಹತ್ತಿ ವಾಪಸ್ ಹೋಗುತ್ತಿದ್ದ ವಿಶುವಲ್ಸ್ ಬಂದಿದೆ. ಅಲ್ಲಿ ಯಾರೋ ಕನ್ನಡ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಸುನಗುತ್ತ ಉತ್ತರಿಸಿದ ಸೌಮ್ಯಾರೆಡ್ಡಿ, ಏನಿಲ್ಲ ಸುಮ್ಮನೇ ದೆಹಲಿಗೆ ಬಂದಿದ್ದೆ ಎಂದು ಅವಸರವಾಗಿ ಕಾರ್ ಹತ್ತಿದ್ದರಲ್ಲೇ ಒಂದು ಏನೋ ಮಹತ್ತರ ಮೆಸೆಜ್ ಇದೆ.

ರಾಮಲಿಂಗಾರೆಡ್ಡಿ ಮತ್ತು ಅವರ ಸಹಚರರಾದ ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಇವರೆಲ್ಲರ ಅಸಮಾಧಾನ, ಇವರ ಬೇಡಿಕೆಗಳ ಸಂದೇಶವನ್ನು ಹೊತ್ತೊಯ್ದ ಸಂದೇಶವನ್ನು ಸೌಮ್ಯಾರೆಡ್ಡಿ ನೇರ ಸೋನಿಯಾ ಮೇಡಂಗೆ ತಲುಪಿಸಿ ಬಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ವಿಶ್ವಾಸ ಕಳೆದುಕೊಂಡಿರುವ ರಾಮಲಿಂಗಾರೆಡ್ಡಿ ತಮ್ಮ ದೆಹಲಿಯ ಸಂಪರ್ಕಗಳ ನೆರವು ಪಡೆದು ನೇರ ಸೋನಿಯಾರಿಗೆ ತಮ್ಮ ಅಳಲನ್ನು ತಲುಪಿಸಿದ್ದಾರೆ. ಈಗಲೂ ಕಾಂಗ್ರೆಸ್ ಬಗ್ಗೆ ಅವರು ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬುದೇನೂ ಗುಟ್ಟಲ್ಲ. ಆ ಕಾರಣಕ್ಕೆ ಅವರು ಮುಂಬೈಗೆ ಹೋಗಿಲ್ಲ.

ಎಐಸಿಸಿಯ ಮಹಿಳಾ ವಿಭಾಗದ ಸೆಕ್ರೆಟರಿ ಸುಷ್ಮಿತಾದೇವ್ ಅವರು ಈ ಭೇಟಿ ಏರ್ಪಡಿಸಿದ್ದೂ ಪಕ್ಕಾ ಆಗಿದೆ. ಸೌಮ್ಯಾರೆಡ್ಡಿ ಮಂದಹಾಸದಲ್ಲಿ ಕಾರ್ ಏರಿದ್ದು ನೋಡಿದರೆ ಸೋನಿಯಾ ಗಾಂಧಿ ನೇರ ರಾಮಲಿಂಗಾರೆಡ್ಡಿ ಜೊತೆ ಫೋನಿನಲ್ಲಿ ಮಾತಾಡಿ ಒಂದು ಇತ್ಯರ್ಥಕ್ಕೆ ಬಂದು ರೆಡ್ಡಿಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡಂತೆ ಕಾಣುತ್ತಿದೆ. ಅಥವಾ ಸೌಮ್ಯ ಇತ್ತ ದೆಹಲಿ ಬಿಟ್ಟು ಬೆಂಗಳೂರು ಕಡೆ ಹೊರಟ ಸ್ವಲ್ಪೇ ಹೊತ್ತಿನಲ್ಲಿ ಮುಂಬೈ ಕಡೆ ಹೊರಟಿದ್ದ ಡಿ ಕೆ ಶಿವಕುಮಾರ್ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ದೆಹಲಿ ಕಡೆ ಪ್ರಯಾಣ ಆರಂಭಿಸಿದ್ದಾರೆ. ಅಲ್ಲಿ ಅವರು ಸೋನಿಯಾರ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸೋನಿಯಾ ಗಾಂಧಿಯವರಿಗೆ ರಾಜ್ಯ ರಾಜಕಾರಣದ ಒಟ್ಟೂ ಚಿತ್ರಣ, ಸರ್ಕಾರ ಉಳಿಸಿಕೊಳ್ಳುವ ಯತ್ನಗಳ ಬಗ್ಗೆ ವಿವರಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸುಷ್ಮಿತಾ ದೇವ್

ನಿನ್ನೆ ಮಲ್ಲಿಕಾರ್ಜುನ ಖರ್ಗೆ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದಾಗ, ‘ನಾನು ತೋಡಿಕೊಂಡ ಅಳಲಿಗೆ ನಿಮ್ಮ ನಾಯಕರು ಸ್ಪಂದಿಸಲೇ ಇಲ್ಲವಲ್ಲ ಖರ್ಗೆ ಸಾಹೇಬರೇ. ಸಿದ್ದರಾಮಯ್ಯ ಸಾಹೇಬರು ಫೋನ್ ಮಾಡಿದ್ದರೆ ಸಾಕಿತ್ತಲ್ಲ? ನಾನು ಸದನಕ್ಕೆ ರಾಜಿನಾಮೆ ನೀಡಿದ್ದೇನೆ, ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ಸದ್ಯಕ್ಕೆ ತೀರ್ಮಾನ ಬದಲಿಸುವುದು ಕಷ್ಟ’ ಎಂದಿದ್ದನ್ನು ಇಲ್ಲಿ ಗಮನಿಸಬೇಕು. ಅಂದರೆ ರೆಡ್ಡಿ ಮತ್ತು ಇತರ ಮೂವರು ಬೆಂಗಳೂರು ಶಾಸಕರು ಪಕ್ಷದ ಮೇಲೆ ಪ್ರೆಶರ್ ಹಾಕಲು ಈ ತಂತ್ರ ಮಾಡಿದ್ದಾರೆ ಎನ್ನುವುದು.

ಹೀಗಾಗಿ ಸೋನಿಯಾ ಭೇಟಿಯ ಪರಿಣಮ ಏನಾಗಬಹುದು? ರಾಮಲಿಂಗಾರೆಡ್ಡಿ ಮತ್ತು ತಂಡ ( 4 ಪ್ಲಸ್ ಸೌಮ್ಯಾರೆಡ್ಡಿ, ಅಂದರೆ ಐದು ಜನ) ನಿಲುವು ಬದಲಿಸಿ ವಾಪಸ್ ಕಾಗ್ರಸ್‍ಗೆ ಬರಬಹುದೇ?

ಈ ಹೊತ್ತಿಗೇ ಸ್ಪೀಕರ್ ರಮೇಶಕುಮಾರ್ ಅವರ ಕಚೇರಿಗೆ ರಾಜಿನಾಮೆ ಸಲ್ಲಿಸಿದವರಿಗೆ ನಾಳೆ ಬಂದು ರಾಜಿನಾಮೆಯ ಕಾರಣದ ವಿವರಣೆ ನೀಡುವಂತೆ ಸೂಚಿಸಿದ್ದಾರಂತೆ. ಈಗ ಮುಂಬೈಯಲ್ಲಿರುವ ಶಾಸಕರು ಸಂಕಟದಲ್ಲಿದ್ದಾರೆ. ಸ್ಪೀಕರ್ ಆಹ್ವಾನ ತಿರಸ್ಕರಿಸಿದರೆ ಅವರ ರಾಜೀನಾಮೆ ಅಂಗೀಕಾರಕ್ಕೇ ತೊಡಕಾಗಬಹುದು.

ಇದೆಲ್ಲದರ ನಡುವೆ ಹಣ ಮತ್ತು ಅಧಿಕಾರದ ಬಲ ಇರುವ ಬಿಜೆಪಿ ತೆರೆಮರೆಯಲ್ಲಿ ಕಾರ್ಯಚರಣೆ ನಡೆಸುತ್ತಿದೆ. ನಮಗೆ ಸಿಕ್ಕ ಮಾಹಿತಿ ಪ್ರಕಾರ, ಆರು ತಿಂಗಳ ನಂತರ ಹೊಸ ಚುನಾವಣೆ ನಡೆದರೆ ದೊಡ್ಡ ಲಾಭ ಎಂದು ಬಿಜೆಪಿ ಹೈಕಮಾಂಡ್ ಲೆಕ್ಕ ಹಾಕಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...