Homeಕರ್ನಾಟಕಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

ಹೊಸ ಟ್ವಿಸ್ಟ್: ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಸೋನಿಯಾ ಭೇಟಿಯಾಗಿದ್ದೇಕೆ?

- Advertisement -
- Advertisement -

ಇದೊಂದ್ ಥರಾ ಪತ್ತೇದಾರಿ ಪಿಚ್ಚರ್ ರೂಪ ಪಡೆಯುತ್ತಿದೆ. ಭಿನ್ನಮತದ ಗುಂಪಿನಲ್ಲಿರುವ ಕಾಂಗ್ರೆಸ್‍ನ ಹಿರಿಯ ಮುಖಂಡ ಬಿಟಿಎಂ ಲೇ ಔಟ್ ಶಾಸಕ ರಾಮಲಿಂಗಾರೆಡ್ಡಿ ಅವರ ಪುತ್ರಿ, ಜಯನಗರ ಕ್ಷೇತ್ರದ ಶಾಸಕಿ ಸೌಮ್ಯಾರೆಡ್ಡಿ ಒಂದು ತಾಸಿನ ಹಿಂದೆ ದೆಹಲಿಯಲ್ಲಿ ಕಾಣಿಸಿಕೊಂಡರು.

ಹಳದಿ ಚಹೂಡಿದಾರ್ ತೊಟ್ಟಿದ್ದ ಅವರು ಕಾಂಗ್ರೆಸ್‍ನ ಉನ್ನತ ನಾಯಕಿ ಸೋನಿಯಾ ಗಾಂಧಿ ಅವರ ನಿವಾಸ ಇರುವ ಎದುರಿನ ಲೇನ್‍ನಿಂದ ಕಾರ್ ಹತ್ತಿ ವಾಪಸ್ ಹೋಗುತ್ತಿದ್ದ ವಿಶುವಲ್ಸ್ ಬಂದಿದೆ. ಅಲ್ಲಿ ಯಾರೋ ಕನ್ನಡ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಸುನಗುತ್ತ ಉತ್ತರಿಸಿದ ಸೌಮ್ಯಾರೆಡ್ಡಿ, ಏನಿಲ್ಲ ಸುಮ್ಮನೇ ದೆಹಲಿಗೆ ಬಂದಿದ್ದೆ ಎಂದು ಅವಸರವಾಗಿ ಕಾರ್ ಹತ್ತಿದ್ದರಲ್ಲೇ ಒಂದು ಏನೋ ಮಹತ್ತರ ಮೆಸೆಜ್ ಇದೆ.

ರಾಮಲಿಂಗಾರೆಡ್ಡಿ ಮತ್ತು ಅವರ ಸಹಚರರಾದ ಎಸ್‍ಟಿ ಸೋಮಶೇಖರ್, ಬೈರತಿ ಬಸವರಾಜ್, ಮುನಿರತ್ನ ಇವರೆಲ್ಲರ ಅಸಮಾಧಾನ, ಇವರ ಬೇಡಿಕೆಗಳ ಸಂದೇಶವನ್ನು ಹೊತ್ತೊಯ್ದ ಸಂದೇಶವನ್ನು ಸೌಮ್ಯಾರೆಡ್ಡಿ ನೇರ ಸೋನಿಯಾ ಮೇಡಂಗೆ ತಲುಪಿಸಿ ಬಂದಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ರಾಜ್ಯ ಕಾಂಗ್ರೆಸ್ ನಾಯಕರ ಬಗ್ಗೆ ವಿಶ್ವಾಸ ಕಳೆದುಕೊಂಡಿರುವ ರಾಮಲಿಂಗಾರೆಡ್ಡಿ ತಮ್ಮ ದೆಹಲಿಯ ಸಂಪರ್ಕಗಳ ನೆರವು ಪಡೆದು ನೇರ ಸೋನಿಯಾರಿಗೆ ತಮ್ಮ ಅಳಲನ್ನು ತಲುಪಿಸಿದ್ದಾರೆ. ಈಗಲೂ ಕಾಂಗ್ರೆಸ್ ಬಗ್ಗೆ ಅವರು ಸಾಫ್ಟ್ ಕಾರ್ನರ್ ಹೊಂದಿದ್ದಾರೆ ಎಂಬುದೇನೂ ಗುಟ್ಟಲ್ಲ. ಆ ಕಾರಣಕ್ಕೆ ಅವರು ಮುಂಬೈಗೆ ಹೋಗಿಲ್ಲ.

ಎಐಸಿಸಿಯ ಮಹಿಳಾ ವಿಭಾಗದ ಸೆಕ್ರೆಟರಿ ಸುಷ್ಮಿತಾದೇವ್ ಅವರು ಈ ಭೇಟಿ ಏರ್ಪಡಿಸಿದ್ದೂ ಪಕ್ಕಾ ಆಗಿದೆ. ಸೌಮ್ಯಾರೆಡ್ಡಿ ಮಂದಹಾಸದಲ್ಲಿ ಕಾರ್ ಏರಿದ್ದು ನೋಡಿದರೆ ಸೋನಿಯಾ ಗಾಂಧಿ ನೇರ ರಾಮಲಿಂಗಾರೆಡ್ಡಿ ಜೊತೆ ಫೋನಿನಲ್ಲಿ ಮಾತಾಡಿ ಒಂದು ಇತ್ಯರ್ಥಕ್ಕೆ ಬಂದು ರೆಡ್ಡಿಯವರನ್ನು ವಿಶ್ವಾಸಕ್ಕೆ ತೆಗೆದುಕೊಂಡಂತೆ ಕಾಣುತ್ತಿದೆ. ಅಥವಾ ಸೌಮ್ಯ ಇತ್ತ ದೆಹಲಿ ಬಿಟ್ಟು ಬೆಂಗಳೂರು ಕಡೆ ಹೊರಟ ಸ್ವಲ್ಪೇ ಹೊತ್ತಿನಲ್ಲಿ ಮುಂಬೈ ಕಡೆ ಹೊರಟಿದ್ದ ಡಿ ಕೆ ಶಿವಕುಮಾರ್ ಎಚ್‍ಎಎಲ್ ವಿಮಾನ ನಿಲ್ದಾಣದಿಂದ ದೆಹಲಿ ಕಡೆ ಪ್ರಯಾಣ ಆರಂಭಿಸಿದ್ದಾರೆ. ಅಲ್ಲಿ ಅವರು ಸೋನಿಯಾರ ಆಪ್ತ ಕಾರ್ಯದರ್ಶಿ ಅಹ್ಮದ್ ಪಟೇಲ್ ಅವರನ್ನು ಭೇಟಿಯಾಗಿ ಸೋನಿಯಾ ಗಾಂಧಿಯವರಿಗೆ ರಾಜ್ಯ ರಾಜಕಾರಣದ ಒಟ್ಟೂ ಚಿತ್ರಣ, ಸರ್ಕಾರ ಉಳಿಸಿಕೊಳ್ಳುವ ಯತ್ನಗಳ ಬಗ್ಗೆ ವಿವರಿಸಲಿದ್ದಾರೆ ಎಂಬ ಮಾಹಿತಿ ಇದೆ.

ಸುಷ್ಮಿತಾ ದೇವ್

ನಿನ್ನೆ ಮಲ್ಲಿಕಾರ್ಜುನ ಖರ್ಗೆ ರಾಮಲಿಂಗಾರೆಡ್ಡಿಯವರನ್ನು ಭೇಟಿಯಾದಾಗ, ‘ನಾನು ತೋಡಿಕೊಂಡ ಅಳಲಿಗೆ ನಿಮ್ಮ ನಾಯಕರು ಸ್ಪಂದಿಸಲೇ ಇಲ್ಲವಲ್ಲ ಖರ್ಗೆ ಸಾಹೇಬರೇ. ಸಿದ್ದರಾಮಯ್ಯ ಸಾಹೇಬರು ಫೋನ್ ಮಾಡಿದ್ದರೆ ಸಾಕಿತ್ತಲ್ಲ? ನಾನು ಸದನಕ್ಕೆ ರಾಜಿನಾಮೆ ನೀಡಿದ್ದೇನೆ, ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ. ಸದ್ಯಕ್ಕೆ ತೀರ್ಮಾನ ಬದಲಿಸುವುದು ಕಷ್ಟ’ ಎಂದಿದ್ದನ್ನು ಇಲ್ಲಿ ಗಮನಿಸಬೇಕು. ಅಂದರೆ ರೆಡ್ಡಿ ಮತ್ತು ಇತರ ಮೂವರು ಬೆಂಗಳೂರು ಶಾಸಕರು ಪಕ್ಷದ ಮೇಲೆ ಪ್ರೆಶರ್ ಹಾಕಲು ಈ ತಂತ್ರ ಮಾಡಿದ್ದಾರೆ ಎನ್ನುವುದು.

ಹೀಗಾಗಿ ಸೋನಿಯಾ ಭೇಟಿಯ ಪರಿಣಮ ಏನಾಗಬಹುದು? ರಾಮಲಿಂಗಾರೆಡ್ಡಿ ಮತ್ತು ತಂಡ ( 4 ಪ್ಲಸ್ ಸೌಮ್ಯಾರೆಡ್ಡಿ, ಅಂದರೆ ಐದು ಜನ) ನಿಲುವು ಬದಲಿಸಿ ವಾಪಸ್ ಕಾಗ್ರಸ್‍ಗೆ ಬರಬಹುದೇ?

ಈ ಹೊತ್ತಿಗೇ ಸ್ಪೀಕರ್ ರಮೇಶಕುಮಾರ್ ಅವರ ಕಚೇರಿಗೆ ರಾಜಿನಾಮೆ ಸಲ್ಲಿಸಿದವರಿಗೆ ನಾಳೆ ಬಂದು ರಾಜಿನಾಮೆಯ ಕಾರಣದ ವಿವರಣೆ ನೀಡುವಂತೆ ಸೂಚಿಸಿದ್ದಾರಂತೆ. ಈಗ ಮುಂಬೈಯಲ್ಲಿರುವ ಶಾಸಕರು ಸಂಕಟದಲ್ಲಿದ್ದಾರೆ. ಸ್ಪೀಕರ್ ಆಹ್ವಾನ ತಿರಸ್ಕರಿಸಿದರೆ ಅವರ ರಾಜೀನಾಮೆ ಅಂಗೀಕಾರಕ್ಕೇ ತೊಡಕಾಗಬಹುದು.

ಇದೆಲ್ಲದರ ನಡುವೆ ಹಣ ಮತ್ತು ಅಧಿಕಾರದ ಬಲ ಇರುವ ಬಿಜೆಪಿ ತೆರೆಮರೆಯಲ್ಲಿ ಕಾರ್ಯಚರಣೆ ನಡೆಸುತ್ತಿದೆ. ನಮಗೆ ಸಿಕ್ಕ ಮಾಹಿತಿ ಪ್ರಕಾರ, ಆರು ತಿಂಗಳ ನಂತರ ಹೊಸ ಚುನಾವಣೆ ನಡೆದರೆ ದೊಡ್ಡ ಲಾಭ ಎಂದು ಬಿಜೆಪಿ ಹೈಕಮಾಂಡ್ ಲೆಕ್ಕ ಹಾಕಿದೆ ಎನ್ನಲಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...