Homeಮುಖಪುಟಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಮೇಜರ್‌ ಸರ್ಜರಿ ಮಾಡಿದ್ದಾರೆ. ಕಾಂಗ್ರೆಸ್‌ಗೆ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಉತ್ತರ ಪ್ರದೇಶದ ಉಸ್ತುವಾರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಿಡುಗಡೆಗೊಳಿಸಿದ್ದಾರೆ. ಛತ್ತೀಸ್‌ಗಢದ ಉಸ್ತುವಾರಿಯಾಗಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. 12 ಪ್ರಧಾನ ಕಾರ್ಯದರ್ಶಿಗಳ ಜೊತೆಗೆ 11 ರಾಜ್ಯ ಉಸ್ತುವಾರಿಗಳನ್ನೂ ಪಕ್ಷ ನೇಮಿಸಿದೆ.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ನೇತೃತ್ವದ ಪ್ರಣಾಳಿಕೆ ಸಮಿತಿಯನ್ನು ಪಕ್ಷವು ನೇಮಿಸಿದ ಒಂದು ದಿನದ ನಂತರ ಈ ನೇಮಕಾತಿಗಳು ನಡೆದಿವೆ. ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ ಹಲವಾರು ಮುಖಂಡರು ಸಾರ್ವತ್ರಿಕ ಚುನಾವಣೆಗೆ ತಯಾರಿ ಆರಂಭಿಸುವಂತೆ ಕರೆ ನೀಡಿದ್ದರು.

ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಆದರೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿಯಿಂದ ಬಿಡುಗಡೆಗೊಳಿಸಲಾಗಿದೆ. ಅವರಿಗೆ ಚುನಾವಣೆಯಲ್ಲಿ ದೊಡ್ಡ ಜವಾಬ್ಧಾರಿ ನೀಡಬಹುದು ಎಂದು ಹೇಳಲಾಗುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. ರಾಜಸ್ಥಾನದಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ಹೊಸ ಮುಖವನ್ನು ಹುಡುಕಾಟ ನಡೆಸುತ್ತದೆ ಎಂಬುವುದನ್ನು ಈ ಬೆಳವಣಿಗೆ ಸ್ಪಷ್ಟಪಡಿಸುತ್ತದೆ.

ಪ್ರಿಯಾಂಕಾ ಗಾಂಧಿ ಬದಲಿಗೆ ಜಾರ್ಖಂಡ್ ಉಸ್ತುವಾರಿಯಾಗಿದ್ದ ಅವಿನಾಶ್ ಪಾಂಡೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ನ ಉಸ್ತುವಾರಿಯಾಗಿ ನೇಮಿಸಲಾಗಿದೆ. ಕಳೆದ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಸಬಲೀಕರಣವನ್ನು ಮುಖ್ಯ ವಿಚಾರವಾಗಿ ಪ್ರಚಾರವನ್ನು ನಡೆಸಿದರೂ ಯಶಸ್ಸು ಕಾಣದ ಪ್ರಿಯಾಂಕ ಗಾಂಧಿ ಬಳಿಕ ಉತ್ತರಪ್ರದೇಶದಲ್ಲಿ ಉಸ್ತುವಾರಿಯಾಗಿ ಮುಂದುವರಿಯಲು ಉತ್ಸುಕತೆ ತೋರಲಿಲ್ಲ ಎನ್ನಲಾಗಿದೆ.

ಈ ಹಿಂದೆ ಹಲವು ರಾಜ್ಯಗಳ ಉಸ್ತುವಾರಿ ವಹಿಸಿದ್ದ ಮುಕುಲ್ ವಾಸ್ನಿಕ್ ಅವರನ್ನು ಗುಜರಾತ್ ಕಾಂಗ್ರೆಸ್‌ನ ಉಸ್ತುವಾರಿಯಾಗಿ, ಕುಮಾರಿ ಸೆಲ್ಜಾ ಅವರನ್ನು ಛತ್ತೀಸ್‌ಗಢದಿಂದ ಉತ್ತರಾಖಂಡಕ್ಕೆ, ದೇವೇಂದ್ರ ಯಾದವ್ ಉತ್ತರಾಖಂಡದಿಂದ ಪಂಜಾಬ್‌ಗೆ, ಮಾಣಿಕಂ ಟ್ಯಾಗೋರ್ ಗೋವಾದಿಂದ ಆಂಧ್ರಪ್ರದೇಶಕ್ಕೆ ಮತ್ತು ಮೋಹನ್ ಪ್ರಕಾಶ್‌ ಅವರನ್ನು ಬಿಹಾರ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು:

ಸಚಿನ್ ಪೈಲಟ್ ಹೊರತಾಗಿ ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಗುಲಾಮ್ ಅಹ್ಮದ್ ಮಿರ್ ಅವರು ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿಯೊಂದಿಗೆ ಜಾರ್ಖಂಡ್‌ನ ಉಸ್ತುವಾರಿ ಕೂಡ ವಹಿಸಿದ್ದಾರೆ. ದೀಪಾ ದಾಸ್ಮುನ್ಸಿ ಅವರನ್ನು ಕೇರಳ, ಲಕ್ಷದ್ವೀಪ್ ಮತ್ತು ಹೆಚ್ಚುವರಿಯಾಗಿ ತೆಲಂಗಾಣದ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರನ್ನು ಕರ್ನಾಟಕದ ಉಸ್ತುವಾರಿಯಾಗಿ ಮುಂದುವರಿಸಲಾಗಿದ್ದು, ದೀಪಕ್ ಬಬಾರಿಯಾ ಹರಿಯಾಣದ ಹೆಚ್ಚುವರಿ ಉಸ್ತುವಾರಿಯೊಂದಿಗೆ ದೆಹಲಿಯ ಉಸ್ತುವಾರಿಯನ್ನು  ವಹಿಸಲಿದ್ದಾರೆ. ಜೈರಾಮ್ ರಮೇಶ್ ಎಐಸಿಸಿ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದು, ಕೆಸಿ ವೇಣುಗೋಪಾಲ್ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಜವಾಬ್ಧಾರಿಯಲ್ಲಿ ಮುಂದುವರಿಯಲಿದ್ದಾರೆ. ಅಸ್ಸಾಂ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿತೇಂದ್ರ ಸಿಂಗ್ ಅವರಿಗೆ ಮಧ್ಯಪ್ರದೇಶ ಕಾಂಗ್ರೆಸ್‌ನ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ.

ಅಚ್ಚರಿ ಎಂದರೆ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರನ್ನು ಮಹಾರಾಷ್ಟ್ರದ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಿಸಲಾಗಿದೆ. ಆದರೆ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿಲ್ಲ. ಒಡಿಶಾ ಉಸ್ತುವಾರಿ ವಹಿಸಿದ್ದ ಲೋಕಸಭಾ ಸಂಸದ ಚೆಲ್ಲಕುಮಾರ್ ಅವರನ್ನು ಮೇಘಾಲಯ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಕ್ಕೆ ವರ್ಗಾಯಿಸಲಾಗಿದೆ. ಸಿಕ್ಕಿಂ, ನಾಗಾಲ್ಯಾಂಡ್ ಮತ್ತು ತ್ರಿಪುರಾ ಉಸ್ತುವಾರಿ ವಹಿಸಿದ್ದ ಅಜೋಯ್ ಕುಮಾರ್ ಅವರನ್ನು ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚುವರಿ ಉಸ್ತುವಾರಿಯೊಂದಿಗೆ ಒಡಿಶಾದ ಉಸ್ತುವಾರಿ ನಾಯಕರನ್ನಾಗಿ ನೇಮಿಸಲಾಗಿದೆ. ರಜನಿ ಪಾಟೀಲ್ ಬದಲಿಗೆ ಗುಜರಾತ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭರತ್ ಸಿಂಗ್ ಸೋಲಂಕಿ ಅವರಿಗೆ ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ನೀಡಲಾಗಿದೆ. ಸುಖಜಿಂದರ್ ಸಿಂಗ್ ರಾಂಧವಾ ಅವರು ರಾಜಸ್ಥಾನ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೆಲಂಗಾಣದ ಉಸ್ತುವಾರಿ ಹೊತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಮಾಣಿಕ್ರಾವ್ ಠಾಕ್ರೆ ಅವರನ್ನು ಗೋವಾ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿಗೆ ವರ್ಗಾಯಿಸಲಾಗಿದೆ. ಗೋವಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಗಿರೀಶ್ ಚೋಡಂಕರ್ ಅವರನ್ನು ತ್ರಿಪುರಾ, ಸಿಕ್ಕಿಂ, ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...