Homeಮುಖಪುಟಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

ಕಾಂಗ್ರೆಸ್‌ನಲ್ಲಿ ಮೇಜರ್‌ ಸರ್ಜರಿ: ಯುಪಿ ಉಸ್ತುವಾರಿಯಿಂದ ಪ್ರಿಯಾಂಕ ಬಿಡುಗಡೆ, ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳ ನೇಮಕ

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಮೇಜರ್‌ ಸರ್ಜರಿ ಮಾಡಿದ್ದಾರೆ. ಕಾಂಗ್ರೆಸ್‌ಗೆ ಪ್ರಧಾನ ಕಾರ್ಯದರ್ಶಿಗಳನ್ನು ಮತ್ತು ವಿವಿಧ ರಾಜ್ಯಗಳಿಗೆ ಉಸ್ತುವಾರಿಗಳನ್ನು ನೇಮಿಸಲಾಗಿದ್ದು, ಉತ್ತರ ಪ್ರದೇಶದ ಉಸ್ತುವಾರಿಯಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಬಿಡುಗಡೆಗೊಳಿಸಿದ್ದಾರೆ. ಛತ್ತೀಸ್‌ಗಢದ ಉಸ್ತುವಾರಿಯಾಗಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. 12 ಪ್ರಧಾನ ಕಾರ್ಯದರ್ಶಿಗಳ ಜೊತೆಗೆ 11 ರಾಜ್ಯ ಉಸ್ತುವಾರಿಗಳನ್ನೂ ಪಕ್ಷ ನೇಮಿಸಿದೆ.

ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ನೇತೃತ್ವದ ಪ್ರಣಾಳಿಕೆ ಸಮಿತಿಯನ್ನು ಪಕ್ಷವು ನೇಮಿಸಿದ ಒಂದು ದಿನದ ನಂತರ ಈ ನೇಮಕಾತಿಗಳು ನಡೆದಿವೆ. ಗುರುವಾರ ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯೂಸಿ) ಸಭೆಯಲ್ಲಿ ಪಕ್ಷದ ಹಲವಾರು ಮುಖಂಡರು ಸಾರ್ವತ್ರಿಕ ಚುನಾವಣೆಗೆ ತಯಾರಿ ಆರಂಭಿಸುವಂತೆ ಕರೆ ನೀಡಿದ್ದರು.

ಪ್ರಿಯಾಂಕಾ ಗಾಂಧಿ ಅವರು ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದಾರೆ. ಆದರೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ ಉಸ್ತುವಾರಿಯಿಂದ ಬಿಡುಗಡೆಗೊಳಿಸಲಾಗಿದೆ. ಅವರಿಗೆ ಚುನಾವಣೆಯಲ್ಲಿ ದೊಡ್ಡ ಜವಾಬ್ಧಾರಿ ನೀಡಬಹುದು ಎಂದು ಹೇಳಲಾಗುತ್ತಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಸಚಿನ್‌ ಪೈಲಟ್‌ ಅವರನ್ನು ನೇಮಕ ಮಾಡಲಾಗಿದೆ. ರಾಜಸ್ಥಾನದಲ್ಲಿ ಪ್ರತಿಪಕ್ಷದ ನಾಯಕನ ಸ್ಥಾನಕ್ಕೆ ಕಾಂಗ್ರೆಸ್ ಹೊಸ ಮುಖವನ್ನು ಹುಡುಕಾಟ ನಡೆಸುತ್ತದೆ ಎಂಬುವುದನ್ನು ಈ ಬೆಳವಣಿಗೆ ಸ್ಪಷ್ಟಪಡಿಸುತ್ತದೆ.

ಪ್ರಿಯಾಂಕಾ ಗಾಂಧಿ ಬದಲಿಗೆ ಜಾರ್ಖಂಡ್ ಉಸ್ತುವಾರಿಯಾಗಿದ್ದ ಅವಿನಾಶ್ ಪಾಂಡೆ ಅವರನ್ನು ಉತ್ತರಪ್ರದೇಶ ಕಾಂಗ್ರೆಸ್‌ನ ಉಸ್ತುವಾರಿಯಾಗಿ ನೇಮಿಸಲಾಗಿದೆ. ಕಳೆದ ಉತ್ತರಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮಹಿಳಾ ಸಬಲೀಕರಣವನ್ನು ಮುಖ್ಯ ವಿಚಾರವಾಗಿ ಪ್ರಚಾರವನ್ನು ನಡೆಸಿದರೂ ಯಶಸ್ಸು ಕಾಣದ ಪ್ರಿಯಾಂಕ ಗಾಂಧಿ ಬಳಿಕ ಉತ್ತರಪ್ರದೇಶದಲ್ಲಿ ಉಸ್ತುವಾರಿಯಾಗಿ ಮುಂದುವರಿಯಲು ಉತ್ಸುಕತೆ ತೋರಲಿಲ್ಲ ಎನ್ನಲಾಗಿದೆ.

ಈ ಹಿಂದೆ ಹಲವು ರಾಜ್ಯಗಳ ಉಸ್ತುವಾರಿ ವಹಿಸಿದ್ದ ಮುಕುಲ್ ವಾಸ್ನಿಕ್ ಅವರನ್ನು ಗುಜರಾತ್ ಕಾಂಗ್ರೆಸ್‌ನ ಉಸ್ತುವಾರಿಯಾಗಿ, ಕುಮಾರಿ ಸೆಲ್ಜಾ ಅವರನ್ನು ಛತ್ತೀಸ್‌ಗಢದಿಂದ ಉತ್ತರಾಖಂಡಕ್ಕೆ, ದೇವೇಂದ್ರ ಯಾದವ್ ಉತ್ತರಾಖಂಡದಿಂದ ಪಂಜಾಬ್‌ಗೆ, ಮಾಣಿಕಂ ಟ್ಯಾಗೋರ್ ಗೋವಾದಿಂದ ಆಂಧ್ರಪ್ರದೇಶಕ್ಕೆ ಮತ್ತು ಮೋಹನ್ ಪ್ರಕಾಶ್‌ ಅವರನ್ನು ಬಿಹಾರ ಉಸ್ತುವಾರಿಯಾಗಿ ನೇಮಕ ಮಾಡಲಾಗಿದೆ.

ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು:

ಸಚಿನ್ ಪೈಲಟ್ ಹೊರತಾಗಿ ಪ್ರಧಾನ ಕಾರ್ಯದರ್ಶಿಗಳಾಗಿ ಹೊಸದಾಗಿ ಸೇರ್ಪಡೆಗೊಂಡವರು ಜಮ್ಮು ಮತ್ತು ಕಾಶ್ಮೀರದ ಮಾಜಿ ಕಾಂಗ್ರೆಸ್ ಅಧ್ಯಕ್ಷ ಗುಲಾಮ್ ಅಹ್ಮದ್ ಮಿರ್ ಅವರು ಪಶ್ಚಿಮ ಬಂಗಾಳದ ಹೆಚ್ಚುವರಿ ಉಸ್ತುವಾರಿಯೊಂದಿಗೆ ಜಾರ್ಖಂಡ್‌ನ ಉಸ್ತುವಾರಿ ಕೂಡ ವಹಿಸಿದ್ದಾರೆ. ದೀಪಾ ದಾಸ್ಮುನ್ಸಿ ಅವರನ್ನು ಕೇರಳ, ಲಕ್ಷದ್ವೀಪ್ ಮತ್ತು ಹೆಚ್ಚುವರಿಯಾಗಿ ತೆಲಂಗಾಣದ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೆವಾಲಾ ಅವರನ್ನು ಕರ್ನಾಟಕದ ಉಸ್ತುವಾರಿಯಾಗಿ ಮುಂದುವರಿಸಲಾಗಿದ್ದು, ದೀಪಕ್ ಬಬಾರಿಯಾ ಹರಿಯಾಣದ ಹೆಚ್ಚುವರಿ ಉಸ್ತುವಾರಿಯೊಂದಿಗೆ ದೆಹಲಿಯ ಉಸ್ತುವಾರಿಯನ್ನು  ವಹಿಸಲಿದ್ದಾರೆ. ಜೈರಾಮ್ ರಮೇಶ್ ಎಐಸಿಸಿ ಸಂವಹನ ವಿಭಾಗದ ಪ್ರಧಾನ ಕಾರ್ಯದರ್ಶಿಯಾಗಿ ಮುಂದುವರಿಯಲಿದ್ದು, ಕೆಸಿ ವೇಣುಗೋಪಾಲ್ ಎಐಸಿಸಿ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಜವಾಬ್ಧಾರಿಯಲ್ಲಿ ಮುಂದುವರಿಯಲಿದ್ದಾರೆ. ಅಸ್ಸಾಂ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದ ಜಿತೇಂದ್ರ ಸಿಂಗ್ ಅವರಿಗೆ ಮಧ್ಯಪ್ರದೇಶ ಕಾಂಗ್ರೆಸ್‌ನ ಹೆಚ್ಚುವರಿ ಉಸ್ತುವಾರಿಯನ್ನು ನೀಡಲಾಗಿದೆ.

ಅಚ್ಚರಿ ಎಂದರೆ ಹಿರಿಯ ಕಾಂಗ್ರೆಸ್ ನಾಯಕ ರಮೇಶ್ ಚೆನ್ನಿತ್ತಲ ಅವರನ್ನು ಮಹಾರಾಷ್ಟ್ರದ ಕಾಂಗ್ರೆಸ್‌ ಉಸ್ತುವಾರಿಯಾಗಿ ನೇಮಿಸಲಾಗಿದೆ. ಆದರೆ ಅವರನ್ನು ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿಲ್ಲ. ಒಡಿಶಾ ಉಸ್ತುವಾರಿ ವಹಿಸಿದ್ದ ಲೋಕಸಭಾ ಸಂಸದ ಚೆಲ್ಲಕುಮಾರ್ ಅವರನ್ನು ಮೇಘಾಲಯ, ಮಿಜೋರಾಂ ಮತ್ತು ಅರುಣಾಚಲ ಪ್ರದೇಶಕ್ಕೆ ವರ್ಗಾಯಿಸಲಾಗಿದೆ. ಸಿಕ್ಕಿಂ, ನಾಗಾಲ್ಯಾಂಡ್ ಮತ್ತು ತ್ರಿಪುರಾ ಉಸ್ತುವಾರಿ ವಹಿಸಿದ್ದ ಅಜೋಯ್ ಕುಮಾರ್ ಅವರನ್ನು ತಮಿಳುನಾಡು ಮತ್ತು ಪುದುಚೇರಿಯ ಹೆಚ್ಚುವರಿ ಉಸ್ತುವಾರಿಯೊಂದಿಗೆ ಒಡಿಶಾದ ಉಸ್ತುವಾರಿ ನಾಯಕರನ್ನಾಗಿ ನೇಮಿಸಲಾಗಿದೆ. ರಜನಿ ಪಾಟೀಲ್ ಬದಲಿಗೆ ಗುಜರಾತ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭರತ್ ಸಿಂಗ್ ಸೋಲಂಕಿ ಅವರಿಗೆ ಜಮ್ಮು ಮತ್ತು ಕಾಶ್ಮೀರದ ಉಸ್ತುವಾರಿ ನೀಡಲಾಗಿದೆ. ಸುಖಜಿಂದರ್ ಸಿಂಗ್ ರಾಂಧವಾ ಅವರು ರಾಜಸ್ಥಾನ ಉಸ್ತುವಾರಿಯಾಗಿ ಮುಂದುವರಿಯಲಿದ್ದಾರೆ.

ಅಚ್ಚರಿಯ ಸಂಗತಿಯೆಂದರೆ ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ ತೆಲಂಗಾಣದ ಉಸ್ತುವಾರಿ ಹೊತ್ತಿದ್ದ ಮಹಾರಾಷ್ಟ್ರದ ಕಾಂಗ್ರೆಸ್‌ ನಾಯಕ ಮಾಣಿಕ್ರಾವ್ ಠಾಕ್ರೆ ಅವರನ್ನು ಗೋವಾ, ದಮನ್ ಮತ್ತು ದಿಯು ಮತ್ತು ದಾದ್ರಾ ಮತ್ತು ನಗರ ಹವೇಲಿಗೆ ವರ್ಗಾಯಿಸಲಾಗಿದೆ. ಗೋವಾ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಗಿರೀಶ್ ಚೋಡಂಕರ್ ಅವರನ್ನು ತ್ರಿಪುರಾ, ಸಿಕ್ಕಿಂ, ಮಣಿಪುರ ಮತ್ತು ನಾಗಾಲ್ಯಾಂಡ್‌ಗೆ ಉಸ್ತುವಾರಿಯಾಗಿ ನೇಮಿಸಲಾಗಿದೆ.

ಇದನ್ನು ಓದಿ: ಕೇರಳ: ಕಾಂಗ್ರೆಸ್‌ ಆಯೋಜಿಸಿದ್ದ ಪ್ರತಿಭಟನೆ ವೇಳೆ ಉದ್ವಿಗ್ನ: ಪೊಲೀಸರಿಂದ ಅಶ್ರುವಾಯು ಪ್ರಯೋಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...