Homeಅಂಕಣಗಳುಕಾಂಗ್ರೆಸ್ ಪ್ರಣಾಳಿಕೆ: ಮಾಸಿದ ಗೋಡೆಯ ಮೇಲಿನ ಹಳೆ ಸಿನೆಮಾ ಪೋಸ್ಟರ್

ಕಾಂಗ್ರೆಸ್ ಪ್ರಣಾಳಿಕೆ: ಮಾಸಿದ ಗೋಡೆಯ ಮೇಲಿನ ಹಳೆ ಸಿನೆಮಾ ಪೋಸ್ಟರ್

- Advertisement -
- Advertisement -

| ಸುರೇಶ ಕೆ.ಪಿ |

ಕಾಂಗ್ರೆಸ್ ತನ್ನ ಪ್ರಣಾಲಿಕೆ ಬಿಡುಗಡೆ ಮಾಡಿದೆ. ಕಾಂಗ್ರೆಸ್ಸಿನ  ಸದ್ಯದ ದುಸ್ಥಿತಿ ನೋಡಿದರೆ ಈ ಪ್ರಣಾಳಿಕೆಯನ್ನು ಯಾರೂ  ಗಂಭೀರವಾಗಿ  ತೆಗೆದುಕೊಳ್ಳಲಾರರು..  ಭಾಜಪಕ್ಕೆ ಪ್ರಣಾಳಿಕೆಯ ಅಗತ್ಯವೇ ಇದ್ದಂತಿಲ್ಲ! ( ದಮನ ಮಾಡಲು ಯಾವ ಪ್ರಣಾಳಿಕೆ ಬೇಕು?) ಪ್ರಾದೇಶಿಕ ಪಕ್ಷಗಳ ಪ್ರಣಾಳಿಕೆ ಹೇಗಿದೆಯೆಂದು ನಮಗೆ ಗೊತ್ತಿಲ್ಲ.!!

ಆದರೆ ಈ ಕಾಂಗ್ರೆಸ್ ಪ್ರಣಾಳಿಕೆಯ ಕೆಲವೊಂದು ಅಂಶವನ್ನು ಅಕ್ಷರ ಶತ್ರು ಭಾಜಪ ಹಾಗೂ  ಮೋದಿ ಕಾಪಿ ಚೀಟಿ ಮಾಡಬಹುದು ಅಷ್ಟರ ಮಟ್ಟಿಗೆ ಈ ಪ್ರಣಾಳಿಕೆ ಭಾಜಪದ ಗಮನ ಸೆಳೆದೀತು!!

‘ಉದ್ಯೋಗ ಸೃಷ್ಠಿ’ ಮತ್ತು ‘ಕನಿಷ್ಠ  ಆದಾಯ ಬೆಂಬಲ’ಗಳೆರಡು ಕಾಂಗ್ರೆಸ್ಸಿನ ಈ  ಬಾರಿಯ ಪ್ರಮುಖ ಘೋಷಣೆಗಳು.

ಉದ್ಯೋಗ ಸೃಷ್ಟಿ ವಿಚಾರದಲ್ಲಿ ಕಾಂಗ್ರೆಸ್ ಕೆಲವು ಭರವಸೆಗಳನ್ನು ನೀಡಿದೆ.

*     ಖಾಲಿ ಇರುವ 4 ಲಕ್ಷ ಸರ್ಕಾರೀ ಹುದ್ದೆಗಳ ಭರ್ತಿ (ಮುಂದಿನ ಮಾರ್ಚ್ ಒಳಗೆ)

*     ಗ್ರಾಮ ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ 10 ಲಕ್ಷ ಹುದ್ದೆ ಸೃಷ್ಟಿ

ಇವೆರಡೂ ಕಣ್ಣು ಕೋರೈಸುವಂಥಾ ಸಂಗತಿಗಳು.  ಆದರೆ ಇವು ಮೂಲತಃ ರಾಜ್ಯ- ಕೇಂದ್ರ ಜಂಟಿ ಕಾರ್ಯಾಚರಣೆ!!  ಸರ್ಕಾರೀ ವೆಚ್ಚ ಕಡಿತಗೊಳಿಸುವ ವಚನ  ಕೊಟ್ಟ ಮೇಲೆಯೇ ವಿಶ್ವ ಬ್ಯಾಂಕ್ ನಮಗೆ ಸಾಲ ಕೊಟ್ಟಿದ್ದು!! ಜಗತ್ತಿನ ಯಾವ ದೇಶದಲ್ಲೂ  ಸರ್ಕಾರಗಳು ಆರೋಗ್ಯ ಮತ್ತು ಶಿಕ್ಷಣ  ಕ್ಷೇತ್ರ ಹೊರತುಪಡಿಸಿ  ಉಳಿದಂತೆ  ಹುದ್ದೆ ಹೆಚ್ಚಿಸುತ್ತಾ ಹೋದ ಉದಾಹರಣೆ ಇಲ್ಲ!!   ಆದ್ದರಿಂದ ಈ ಭರವಸೆ ಎಷ್ಟು ವಿಶ್ವಾಸಾರ್ಹ ಎಂಬುದು ಅವರವರಿಗೆ ಬಿಟ್ಟಿದ್ದು.

ಕಾಂಗ್ರೆಸ್ಸಿನ ಉಳಿದ ಉದ್ಯೋಗ ಸೃಷ್ಟಿಯ ವಿವರಗಳು ಜೊಲ್ಲು ತುಂಬಿದ ಬಾಯಲ್ಲಿ ವಾದ್ಯ ಊದಿದ ಹಾಗಿದೆ..!! ಉದಾ: ಕಡಿಮೆ ಕೌಶಲ್ಯದ ಉದ್ಯೋಗ ಸೃಷ್ಟಿಗಾಗಿ ‘ಜಲಾಶ್ರಯಗಳ  ಪುನಶ್ಚೇತನ ಮಿಷನ್’, ‘ಬೀಳುಭೂಮಿ ಪುನಶ್ಚೇತನ ಮಿಶನ್’ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಲಕ್ಷಾಂತರ ಉದ್ಯೋಗ ಸೃಷ್ಟಿಯ ನೀಲ ನಕ್ಷೆ ಕಾಂಗ್ರೆಸ್ ಮುಂದಿಟ್ಟಿದೆ. ಹಾಗೇ 2500 ಜನಸಂಖ್ಯೆ ಮೀರಿದ ಹಳ್ಳಿಗಳಲ್ಲಿ 2ನೇ ಆಶಾ ಕಾರ್ಯಕರ್ತೆಯರ ನೇಮಕ.

ಇವೆಲ್ಲವೂ ತಾತ್ಕಾಲಿಕ ಮತ್ತು ಅಭದ್ರ ಉದ್ಯೋಗಗಳು ಎಂದು ಕಾಂಗ್ರೆಸ್ಸಿಗೆ ಗೊತ್ತು.  ಅದು ಕೂರಲು ಆಶಿಸುತ್ತಿರುವುದು ಮೋದಿ ಕೂತ ಕುರ್ಚಿಯಲ್ಲೇ  ತಾನೇ.. ಆದ್ದರಿಂದ ಮೂಲತಃ ಉದ್ಯೋಗ ಸೃಷ್ಟಿಯ ಸೂಚಿಗಳನ್ನಿಟ್ಟಾಗಲೂ ಎಲ್ಲೂ ಸುಭದ್ರ ಖಾಯಂ ಉದ್ಯೋಗ ಅನ್ನುವುದನ್ನು ತಪ್ಪಿಯೂ ಹೇಳಿಲ್ಲ!!

ಆಟದ ಖದರು ಬದಲಾಗುತ್ತೆ ಅಂತ ಕಾಂಗ್ರೆಸ್  ನಂಬಿಕೆ ಇಟ್ಟುಕೊಂಡಿರುವುದು ರೂ 72000/-ದ  ಕನಿಷ್ಠ ಆದಾಯದ ಬೆಂಬಲ ಘೋಷಣೆ ಮೇಲೆ.

ಪ್ರಣಾಳಿಕೆಪ್ರಕಾರ ಐದು ಕೋಟಿ ಕುಟುಂಬಗಳಿಗೆ ಈ ಸಹಾಯ ಸಿಗಲಿದೆ. ಆದರೆ  ಯಥಾಪ್ರಕಾರದ ಜಾರಿಕೊಳ್ಳುವ ಜಾಣ ವಿವರಗಳು ತದನಂತರ ಕಾಣುತ್ತದೆ.  ಪ್ರಣಾಳಿಕೆ ಪ್ರಕಾರ ಇದು ರಾಜ್ಯ- ಕೇಂದ್ರದ ಜಂಟಿ ಕಾರ್ಯಕ್ರಮ. ‘ಕುಟುಂಬಗಳು ಬಡತನದಿಂದ ಹೊರಬಂದ ಮೇಲೆ ಸತತವಾಗಿ ಸರ್ಕಾರಕ್ಕೆ ಆರ್ಥಿಕವಾಗಿ ಹೊರೆಯಾಗದು’ ಎನ್ನುತ್ತೆ ಪ್ರಣಾಳಿಕೆ.   ಅಂದರೆ ಪ್ರಾಯಶಃ ಕಾಲಮಿತಿಯ ಬೆಂಬಲ ಅಥವಾ ಶರತ್ತುಗಳನ್ನಿಟ್ಟುಕೊಂಡು  ಕುಟುಂಬಗಳಿಗೆ ಸಹಾಯ ಸಿಗಬಹುದು.  ಉದಾ: ಕುಟುಂಬದ ಯಾರಿಗೂ ಉದ್ಯೋಗ ಇಲ್ಲ ಎಂಬ ಪ್ರಮಾಣ ಪತ್ರ. ಉದ್ಯೋಗ ಸಿಕ್ಕಿದ ತಕ್ಷಣ ಬೆಂಬಲ ಸ್ಥಗಿತ ಹೀಗೆ..

ಇಂಥಾ ಕೇವಿಯೆಟ್‍ಗಳಿಲ್ಲದೇ  ಈ ಸಾರ್ವತ್ರಿಕ ಬೆಂಬಲದ ಘೋಷಣೆ ಕಾಂಗ್ರೆಸ್ ಬಿಡಿ, ಸಾಕ್ಷಾತ್ ಲಕ್ಷ್ಮೀಪತಿ ತಿಮ್ಮಪ್ಪನೂ ಮಾಡಲಾರ. ಅಂದರೆ ಇಂಥಾ ಝಲಕ್ ಇರುವ ಯೋಜನೆಯೇ ಗಿಲೀಟು ಅನ್ನಿಸತೊಡಗಿದರೆ  ಉಳಿದವು ಹೇಗಿರಬಹುದು?

ಉಳಿದವು? ಕಾಂಗ್ರೆಸ್ಸಿನ ಬೌದ್ಧಿಕ ದಾರಿದ್ರ್ಯ  ನೋಡಬೇಕೆಂದಿದ್ದರೆ ಕೆಲವು ಹಾರು ಹೇಳಿಕೆಯ ಭಾಗಗಳನ್ನು ಗಮನಿಸಬೇಕು.

ಉದಾ:  ಕೈಮಗ್ಗ ಮತ್ತಿತರ ಪಾರಂಪರಿಕ ಉತ್ಪನ್ನಗಳ ಉತ್ಪಾದನೆ ಮತ್ತು ರಪ್ತಿಗೆ ವಿಶೇಷ ಪ್ರೋತ್ಸಾಹ ನೀಡಲಾಗುವುದು ‘ ಎಂಬ ವಾಕ್ಯ ಇದೆ. ಅದರಿಂದಾಚೆ ಯಾವ ಗಟ್ಟಿ ವಿವರಗಳೂ ಇಲ್ಲ! ಏನಿದರ ಅರ್ಥ?

ಹಾಗೇ ಮೋದಿಯವರ ‘ಮೇಕ್ ಇನ್ ಇಂಡಿಯಾ’ಕ್ಕೆ ಪ್ರತಿಯಾಗಿ ‘ಮೇಕ್ ಫಾರ್ ದಿ ವರ್ಲ್ಡ್’ ಎನ್ನುವ ಘೋಷಣೆ  ಕಾಂಗ್ರೆಸ್ ಪ್ರಣಾಳಿಕೆಯಲ್ಲಿದೆ. ಇದೇನಪ್ಪಾ ಅಂದರೆ ಅದೇ ಹಳೇ ಎಸ್.ಇ.ಜೆಡ್ ಬಾಟಲನ್ನು ತೊಳೆದು ಹೊಸ ಲೇಬಲ್ ಹಾಕಿ ಕೂತಿದೆ ಕಾಂಗ್ರೆಸ್. ಹಳೇ ಎಸ್.ಇ.ಜೆಡ್ ನ ಕಮಟು ವಾಸನೆ ಇದರಲ್ಲೂ ಮುಂದುವರಿದಿದೆ.

ಕೃಷಿಯಲ್ಲಿ ಏನಪ್ಪಾ ಅಂದರೆ ‘ಕೃಷಿ ಅಭಿವೃದ್ಧಿ ಮತ್ತು ಯೋಜನೆಯ ರಾಷ್ಟ್ರೀಯ ಆಯೋಗ’  ಹಾಗೂ ‘ಅತೀ ಸಣ್ಣ ರೈತ ಮತ್ತು ಕೃಷಿ ಕೂಲಿಕಾರ ಆಯೋಗ’ ಸ್ಥಾಪಿಸಲಾಗುವುದು ಎಂದು ಕಾಂಗ್ರೆಸ್ ಎದೆ ತಟ್ಟಿ ಹೇಳಿಕೊಂಡಿದೆ.!

ಈ  ಆಯೋಗ ಸ್ಥಾಪಿಸುವುದೆಂದರೆ  ಸಮಸ್ಯೆಗೆ ಪರಿಹಾರ ಹೊಳೆಯದೇ ಉಸುಕಲ್ಲಿ ತಲೆ ಹುದುಗಿಸುವುದು ಎಂದರ್ಥ

ಈಗಾಗಲೇ ಇಂಥಾ  ಬೋರ್ಡ್, ಸೀಟು ಕವರ್ ಬದಲಾಯಿಸಿ  ಹಳೇ ಬಸ್ಸಿಗೇ  ರಯ್ಯಾ ಎಂದ ಮೋದಿ ನಮ್ಮನ್ನು ಎಲ್ಲಿ ತಂದು ಕೆಡವಿದ್ದಾರೆ ಎಂಬುದನ್ನು ಗಮನಿಸಿದರೆ ಕಾಂಗ್ರೆಸ್ ಬಗ್ಗೆ ವಿಶ್ವಾಸ ಹುಟ್ಟುವುದಿಲ್ಲ.

ಕಾಂಗ್ರೆಸ್ಸಿನ ಸಮಸ್ಯೆ ಏನು? ಕೋಮುವಾದೀ ರಾಜಕೀಯ ಹೊರತುಪಡಿಸಿ ಕಾಂಗ್ರೆಸ್ಸಿಗೆ ಭಾಜಪದ ಜೊತೆ ತಕರಾರಿಲ್ಲ!! ಭಾಜಪ  ತನ್ನ ಕನ್ನಡಿ ಬಿಂಬದಂಥಾ ಎದುರಾಳಿಯಾಗಿ ತನ್ನ ಕುರ್ಚಿಯಲ್ಲಿ ಕೂತಿದೆ ಎಂಬುದಷ್ಟೇ ಬೇಗುದಿ. ಇಷ್ಟು ವರ್ಷ ತಾನು ಆಳುವಾಗ ಕೆಡಿಸಿ ಕೂತ ಸಂಗತಿಗಳನ್ನೆಲ್ಲಾ ಭಾಜಪ ಕೆದಕಿ ತನ್ನ ಮೇಲೆ ಎಸೆಯುವ ಪರಿಗೆ ಕಾಂಗ್ರೆಸ್ ಬ್ರೈನ್ ಡೆಡ್ ಆಗಿ ಕೂತಿದೆ. ಅದಕ್ಕೀಗ ಹೊಸ ಹೊಳಹುಗಳೂ ಇಲ್ಲ. ಅದನ್ನು ನೆಚ್ಚುವ ಕನಸುಗಣ್ಣಿನ ಯುವ ಪಡೆಯೂ ಇಲ್ಲ. ಉಳಿದ ಪಕ್ಷಗಳಿಗಿಂತ ಭಿನ್ನವಾದ ದೇಶದ ನಿಜ ಅಭಿವೃದ್ಧಿಯ ನೀಲನಕ್ಷೆ ತನ್ನಲ್ಲಿದೆ ಎಂದು ಕ್ಲೈಮ್ ಮಾಡುವ ಕಾಣ್ಕೆಯೂ ಇಲ್ಲ.  ಸಕಾರೀ ಉದ್ಯೋಗ ಕಡಿತ ಮಾಡಿ ಅಭದ್ರ ಗುತ್ತಿಗೆ  ಉದ್ಯೋಗದ ಪರ್ವ ಶುರು ಮಾಡಿದ ಕಾಂಗ್ರೆಸ್  ಸಂಪೂರ್ಣ ಭಿನ್ನವಾಗಿ ಯೋಚಿಸಲು ಸಾಧ್ಯವಿಲ್ಲ. ಕೃಷಿ ಮತ್ತು ಉದ್ಯೋಗ ಸೃಷ್ಟಿಯಲ್ಲಿ  ಇತ್ಯಾತ್ಮಕ ಬದಲಾವಣೆ ತರಲು ದೊಡ್ಡ ವಿವರಗಳ ದೀರ್ಘ ಕಾಲೀನ ಕಲ್ಪನೆ ಇರಬೇಕು. ಈಗ ಘೋಷಿಸಿರುವಂಥಾದ್ದು ಮೀನು ಕೊಡುವ ವಿಧಾನವೇ ಹೊರತು ಮೀನು ಹಿಡಿಯುವುದನ್ನು ಕಲಿಸುವ ವಿಧಾನ ಅಲ್ಲ. ಮೋದಿಯೇನೋ ತೊಲಗಬೇಕು. ಆದರೆ ಕಾಂಗ್ರೆಸ್ ಕೈಗೆ ಕೊಟ್ಟರೆ  ಪರಿಸ್ಥಿತಿ ಸುಧಾರಿಸಿತೆಂಬ ಭರವಸೆ ಇಲ್ಲಿ ಕಾಣಿಸುವುದಿಲ್ಲ.  ಅಷ್ಟಕ್ಕೂ ಕಾಂಗ್ರಸ್ಸಿಗೇ ಇಷ್ಟು ಸ್ಥಾನ ಬಂದೀತೆಂಬ ನಂಬಿಕೆ ಇಲ್ಲದಿರುವಾಗ ಪ್ರಣಾಳಿಕೆಯಲ್ಲಿ ಬರೆಯಲು ತೊಡಕೇನೂ ಇಲ್ಲ!!

ಕಳೆದ ಬಾರಿಯ  ರಾಜ್ಯದ ಪ್ರಣಾಳಿಕೆ ಎಷ್ಟು ಅಧ್ವಾನವಾಗಿತ್ತೆಂದರೆ ಥೇಟ್ ಮೊಯಿಲಿಯಂಥಾ ಕಲಸುಮೇಲೋಗರ ನಿಪುಣರೇ ಬರೆದಂತಿತ್ತು. ಈ ಪ್ರಣಾಲಿಕೆ ಸ್ಟಾಂಪ್ ಪೇಪರ್ ಮೇಲೆ ಗಾಳಿಯಲ್ಲಿ ಸಹಿ ಹಾಕುವ  ನಟನೆಯಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...