Homeಮುಖಪುಟ“10 ಸಾಲ್‌ ಅನ್ಯಾಯ್‌ ಕಾಲ್”: ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ 'ಕಪ್ಪುಪತ್ರ'ದಲ್ಲಿ ಏನಿದೆ?

“10 ಸಾಲ್‌ ಅನ್ಯಾಯ್‌ ಕಾಲ್”: ಮೋದಿ ಸರಕಾರದ ವಿರುದ್ಧ ಕಾಂಗ್ರೆಸ್‌ ಬಿಡುಗಡೆ ಮಾಡಿದ ‘ಕಪ್ಪುಪತ್ರ’ದಲ್ಲಿ ಏನಿದೆ?

- Advertisement -
- Advertisement -

ಹಿಂದಿನ ಯುಪಿಎ ಸರ್ಕಾರದ 10 ವರ್ಷಗಳ ಅಧಿಕಾರದ ವಿರುದ್ಧ ಕೇಂದ್ರ ಸರ್ಕಾರ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ‘ಶ್ವೇತಪತ್ರ’ ಮಂಡಿಸಲು ಮುಂದಾಗಿತ್ತು. ಇದರ ಬೆನ್ನಲ್ಲಿ ಕಾಂಗ್ರೆಸ್‌ ಕಳೆದ 10 ವರ್ಷಗಳಲ್ಲಿನ ಆರ್ಥಿಕ, ಸಾಮಾಜಿಕ ಮತ್ತು ರಾಜಕೀಯ ಅನ್ಯಾಯಗಳನ್ನು ಎತ್ತಿ ತೋರಿಸುವ ನರೇಂದ್ರ ಮೋದಿ ಸರಕಾರದ ವೈಫಲ್ಯಗಳ ಕುರಿತ ಕಪ್ಪು ಪತ್ರವನ್ನು ಬಿಡುಗಡೆ ಮಾಡಿದೆ.

ರಾಷ್ಟ್ರ ರಾಜಧಾನಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕಪ್ಪು  ಪತ್ರವನ್ನು ಬಿಡುಗಡೆ ಮಾಡಿದ್ದಾರೆ. “10 ಸಾಲ್‌ ಅನ್ಯಾಯ್‌ ಕಾಲ್” (10 ವರ್ಷ ಅನ್ಯಾಯದ ಕಾಲ) ಎಂಬ ಶೀರ್ಷಿಕೆಯ ಈ ಕಪ್ಪು ಪತ್ರವು 54 ಪುಟಗಳ ದಾಖಲೆಯನ್ನು ಹೊಂದಿದೆ. ಮೋದಿ ಸರ್ಕಾರವು ತನ್ನ 10 ವರ್ಷಗಳ ಅಧಿಕಾರದಲ್ಲಿ ದೇಶದ ಆರ್ಥಿಕತೆಯನ್ನು ನಾಶಪಡಿಸಿದೆ, ನಿರುದ್ಯೋಗ ಉಲ್ಭಣಕ್ಕೆ ಕಾರಣವಾಗಿದೆ, ದೇಶದ ಕೃಷಿ ಕ್ಷೇತ್ರವನ್ನು ನಾಶಪಡಿಸಿದೆ, ಮಹಿಳೆಯರ ವಿರುದ್ಧದ ಅಪರಾಧಗಳಿಗೆ ಕುಮ್ಮಕ್ಕು ನೀಡಿದೆ ಮತ್ತು ದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಘೋರ ಅನ್ಯಾಯವನ್ನು ಮಾಡಿದೆ ಎಂದು ಹೇಳಿದೆ.

ಇಂದು ನಾವು ಸರ್ಕಾರದ ವಿರುದ್ಧ ‘ಕಪ್ಪು ಪತ್ರವನ್ನು’ ಹೊರತರುತ್ತಿದ್ದೇವೆ. ಪ್ರಧಾನಿ ಮೋದಿ ಸಂಸತ್ತಿನಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದಾಗಲೆಲ್ಲಾ ತಮ್ಮ ವೈಫಲ್ಯಗಳನ್ನು ಮರೆಮಾಚುತ್ತಾರೆ. ಅದೇ ವೇಳೆ ಸರ್ಕಾರದ ವೈಫಲ್ಯಗಳ ಬಗ್ಗೆ ಮಾತನಾಡುವಾಗ ಅದಕ್ಕೆ ಪ್ರಾಮುಖ್ಯತೆ ನೀಡುವುದಿಲ್ಲ. ಹೀಗಾಗಿ ಕರಾಳ ಪತ್ರ ಹೊರತಂದು ಸರ್ಕಾರದ ವೈಫಲ್ಯಗಳ ಬಗ್ಗೆ ಸಾರ್ವಜನಿಕರಿಗೆ ತಿಳಿಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

2004 ಮತ್ತು 2014ರ ನಡುವಿನ ಯುಪಿಎ ಆರ್ಥಿಕ ವೈಫಲ್ಯಗಳನ್ನು ಎತ್ತಿ ತೋರಿಸಲು ಮೋದಿ ಸರ್ಕಾರವು ಸಂಸತ್ತಿನಲ್ಲಿ ಶ್ವೇತಪತ್ರವನ್ನು ತರುತ್ತದೆ ಎಂಬ ಊಹಾಪೋಹದ ನಡುವೆಯೇ ಕಪ್ಪು ಪತ್ರ ಬಿಡುಗಡೆಗೆ ನಡೆದಿದೆ.

ಭಾರತದ ಜಿಡಿಪಿ ಬೆಳವಣಿಗೆಯು 5%ಕ್ಕೆ ಇಳಿದಿತ್ತು, ಹಣದುಬ್ಬರವು 10% ಕ್ಕೆ ಏರಿತ್ತು, ದೇಶವು ಪಾವತಿಯ ಸಮತೋಲನ ಬಿಕ್ಕಟ್ಟನ್ನು ಎದುರಿಸುತ್ತಿತ್ತು. ಬ್ಯಾಂಕಿಂಗ್‌ ವ್ಯವಸ್ಥೆಯು ಬಿಕ್ಕಟ್ಟಿನಲ್ಲಿತ್ತು. ಎಲ್ಲರೂ ದೇಶವನ್ನು ತೊರೆಯುತ್ತಿದ್ದರು ಮತ್ತು ನಾವು ವಿಶ್ವದ ದುರ್ಬಲ ಆರ್ಥಿಕತೆಯಲ್ಲಿದ್ದೆವು. ಇದು ಯುಪಿಎ ನಮ್ಮನ್ನು ಬಿಟ್ಟು ಹೋಗಿರುವ ಸ್ಥಿತಿಯಾಗಿದೆ ಎಂದು ಎನ್‌ಡಿಎ ಸರಕಾರ ಹೇಳಿತ್ತು. ಶ್ವೇತಪತ್ರದಲ್ಲಿ 2014ರ ಮೊದಲು ಆರ್ಥಿಕತೆಯ ಸ್ಥಿತಿ ಹೇಗಿತ್ತು ಮತ್ತು ನಾವು ಆರ್ಥಿಕ ಸಮಸ್ಯೆಗಳನ್ನು ಹೇಗೆ ನಿಭಾಯಿಸಿದ್ದೇವೆ ಎಂಬುದನ್ನು ಸ್ಪಷ್ಟಪಡಿಸುತ್ತೇವೆ ಎಂದು ಹೇಳಾಗಿತ್ತು.

ಕಾಂಗ್ರೆಸ್‌ನ ‘ಕಪ್ಪು ಪತ್ರ’ :

ಕಾಂಗ್ರೆಸ್‌ನ ಕಪ್ಪು ಪತ್ರದಲ್ಲಿ ಮೋದಿ ಆಡಳಿತದಲ್ಲಿ ಹೆಚ್ಚಿನ ನಿರುದ್ಯೋಗ, ಆರ್ಥಿಕ ದುರಂತಗಳಾದ ನೋಟು ರದ್ದತಿ ಮತ್ತು ದೋಷಪೂರಿತ ಜಿಎಸ್‌ಟಿ, ಶ್ರೀಮಂತರು ಮತ್ತು ಬಡವರ ನಡುವಿನ ವಿಭಜನೆಯ ಹೆಚ್ಚಳವಾಗಿದೆ, ಲಕ್ಷಾಂತರ ರೈತರು ಮತ್ತು ದಿನಗೂಲಿ ಕಾರ್ಮಿಕರ ಭವಿಷ್ಯವನ್ನು ನಾಶಮಾಡಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಕಪ್ಪು ಪತ್ರದಲ್ಲಿ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗ ದರವನ್ನು ಎತ್ತಿ ತೋರಿಸಿದೆ, ಅಗತ್ಯ ವಸ್ತುಗಳ ಬೆಲೆಗಳು ಸಾರ್ವಕಾಲಿಕ ಗರಿಷ್ಠ ಮಟ್ಟದಲ್ಲಿದೆ ಮತ್ತು ರೈತರ ಆದಾಯವನ್ನು ದ್ವಿಗುಣಗೊಳಿಸುವ ಭರವಸೆಯ ಹೊರತಾಗಿಯೂ MSPನ್ನು ಹೆಚ್ಚಿಸುವಲ್ಲಿ ವಿಫಲವಾಗಿದೆ. ಮೋದಿ ಆಡಳಿತವನ್ನು ‘ಮೊದನಿ ರಾಜ್’ ಎಂದು ಕರೆದ ಕಾಂಗ್ರೆಸ್‌, ಆರ್ಥಿಕ ಅಪರಾಧಿಗಳಿಗೆ ಸುರಕ್ಷತೆ ನೀಡುತ್ತದೆ, ಮೋದಿ ಸರ್ಕಾರವು ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸುತ್ತದೆ ಎಂದು ಆರೋಪಿಸಿದ್ದಾರೆ.

ಸಾಮಾಜಿಕ ಅನ್ಯಾಯದ ಅಡಿಯಲ್ಲಿ ಕಳೆದ ದಶಕದಲ್ಲಿ ಮಹಿಳೆಯರು, ಎಸ್ಸಿ, ಎಸ್ಟಿಗಳು, ಒಬಿಸಿಗಳು ಮತ್ತು ಅಲ್ಪಸಂಖ್ಯಾತರ ವಿರುದ್ಧ ಸ್ಪಷ್ಟವಾದ ತಾರತಮ್ಯ ಮತ್ತು ತೀವ್ರ ದಬ್ಬಾಳಿಕೆ ಕಂಡು ಬಂದಿದೆ ಎಂದು ಪಕ್ಷವು ಹೇಳಿಕೊಂಡಿದೆ. ಮೋದಿ ಆಡಳಿತದಲ್ಲಿ ದ್ವೇಷ, ಧ್ರುವೀಕರಣ ಮತ್ತು ವಿಭಜನೆಯ ರಾಜಕೀಯವು ದೇಶದ ಸಾಮಾಜಿಕ ರಚನೆಯನ್ನು ನಾಶಪಡಿಸಿದೆ ಎಂದು ಹೇಳಲಾಗಿದೆ.

ರಾಜಕೀಯ ಅನ್ಯಾಯದ ಅಡಿಯಲ್ಲಿ, ಮೋದಿ ಸರ್ಕಾರವು ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಅತಿಕ್ರಮಣಗಳ ಬಗ್ಗೆ ಮೌನವಾಗಿದೆ, ಅಗ್ನಿಪಥ್ ಯೋಜನೆಯೊಂದಿಗೆ ಸೈನ್ಯವನ್ನು ದುರ್ಬಲಗೊಳಿಸಿದೆ ಮತ್ತು ತನಿಖಾ ಸಂಸ್ಥೆಗಳನ್ನು ವಿರೋಧಗಳನ್ನು ಹತ್ತಿಕ್ಕಲು ಬಯಸುತ್ತಿದೆ. ಮಾಧ್ಯಮಗಳ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತಿದೆ ಎಂದು ಕಪ್ಪು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ದೇಶದ ದೊಡ್ಡ ಸಮಸ್ಯೆಯಾದ ನಿರುದ್ಯೋಗದ ಬಗ್ಗೆ ಮೋದಿ ಸರ್ಕಾರ ಎಂದಿಗೂ ಮಾತನಾಡುವುದಿಲ್ಲ, ಅವರು ನೆಹರೂ ಬಗ್ಗೆ ಮಾತನಾಡುತ್ತಾರೆ ಆದರೆ ಸಾರ್ವಜನಿಕ ವಲಯದ ಉದ್ಯೋಗಗಳ ಮೂಲಕ ಎಷ್ಟು ಜನರಿಗೆ ಉದ್ಯೋಗ ನೀಡಲಾಗಿದೆ ಎಂಬುದರ ಬಗ್ಗೆ ಮಾತನಾಡುವುದಿಲ್ಲ. ಮೋದಿ ಸರ್ಕಾರವು ರಾಜ್ಯಗಳಿಗೆ ಹಣವನ್ನು ಬಿಡುಗಡೆ ಮಾಡುವುದಿಲ್ಲ ಎಂದು ಖರ್ಗೆ ವಾಗ್ದಾಳಿಯನ್ನು ನಡೆಸಿದ್ದಾರೆ.

ಬುಧವಾರ ರಾಜ್ಯಸಭೆಯಲ್ಲಿ ಮೋದಿ ಅವರು ಎಸ್ಸಿ, ಎಸ್ಟಿ, ಒಬಿಸಿಗಳಿಗೆ ಹಕ್ಕುಗಳನ್ನು ನೀಡಿರುವುದಾಗಿ ಹೇಳಿದ್ದಕ್ಕೆ ವ್ಯಂಗ್ಯವಾಡಿದ ಖರ್ಗೆ, ಯುಪಿಎ ಸರ್ಕಾರವು ಅವರಿಗೂ ಹಕ್ಕುಗಳನ್ನು ನೀಡಿದೆ ಆದರೆ ಅವುಗಳನ್ನು ಪಟ್ಟಿ ಮಾಡಲು ಬಯಸುವುದಿಲ್ಲ ಎಂದು ಹೇಳಿದರು. ಇವೆಲ್ಲ ಭಾವನಾತ್ಮಕ ಸಮಸ್ಯೆಗಳು. ಆದರೆ ಉದ್ಯೋಗ ನೀಡುವುದು ಮುಖ್ಯ. ಅವರು ಅದರ ಬಗ್ಗೆ ಮಾತನಾಡಬೇಕು. ಅಭಿವೃದ್ಧಿಯಲ್ಲಿ ಪ್ರತಿಯೊಬ್ಬರ ಪಾಲು ಇದ್ದಾಗ ನೀವು ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡಬಹುದು. ಕಾಂಗ್ರೆಸ್ ಭಾರತದ ಸ್ವಾತಂತ್ರ್ಯವನ್ನು ಖಾತ್ರಿಪಡಿಸಿದೆ ಮತ್ತು 2024ರಲ್ಲಿ ದೇಶವನ್ನು ಬಿಜೆಪಿಯ “ಅನ್ಯಾಯದ ಕತ್ತಲೆಯಿಂದ ಹೊರತರಲಿದೆ ಎಂದು ಖರ್ಗೆ ಹೇಳಿದ್ದಾರೆ.

ಇದನ್ನು ಓದಿ: ಭಾರತ್‌ ಜೋಡೋ ನ್ಯಾಯ ಯಾತ್ರೆ: ಮೋದಿ OBC ಅಲ್ಲ, ಅವರು ಜಾತಿ ಬಗ್ಗೆ ಸುಳ್ಳು ಹೇಳಿದ್ದಾರೆ: ರಾಹುಲ್‌ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಅಕ್ರಮಗಳ ವಿರುದ್ಧ ಜನಪರ ಒಕ್ಕೂಟದ ಸಮರ: ಸೆ.22ರಿಂದ ‘ಪರಿಶೋಧನೆ ಹಾಗೂ ಪ್ರತಿರೋಧ ಪ್ರವಾಸ’

ಎಸ್‌ಐಆರ್ (ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ) ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ಬಯಲಿಗೆ ತರಲು, ಸಂತ್ರಸ್ತರನ್ನು ನೇರವಾಗಿ ಭೇಟಿಯಾಗಿ ಸಾಕ್ಷ್ಯಗಳನ್ನು ಒಟ್ಟುಗೂಡಿಸುವ ಉದ್ದೇಶದಿಂದ ಸೆಪ್ಟೆಂಬರ್ 22ರಿಂದ 30ರವರೆಗೆ ಎಸ್‌ಐಆರ್ ವಿರೋಧಿ ಜನಪರ ಸಂಘಟನೆಗಳು...

ಮುಂಬೈನಲ್ಲಿ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನಕ್ಕೆ ತಡೆ ಆರೋಪ: ಪೊಲೀಸ್ ಕಣ್ಗಾವಲು, ಅಭಿವ್ಯಕ್ತಿ ಸ್ವಾತಂತ್ರ್ಯದ ಬಗ್ಗೆ ಕಳವಳ

ಮುಂಬೈ: ಜೈಲಿನಲ್ಲಿರುವ ವಿದ್ಯಾರ್ಥಿ ಹೋರಾಟಗಾರ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಸೇರಿದಂತೆ ರಾಜಕೀಯ ಕೈದಿಗಳೊಂದಿಗೆ ಒಗ್ಗಟ್ಟು ವ್ಯಕ್ತಪಡಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಖಾಸಗಿ ಸಾಕ್ಷ್ಯಚಿತ್ರ ಪ್ರದರ್ಶನವನ್ನು ರದ್ದುಗೊಳಿಸುವಂತೆ ಮುಂಬೈ ಪೊಲೀಸರು ಪ್ರದರ್ಶನಕ್ಕೆ ಸ್ಥಳ ನೀಡಿದ್ದ...

ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಮತ್ತು ಖಾಸಗಿ ಬಸ್ ನಡುವೆ ಢಿಕ್ಕಿ: ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಮಾಜಿ ಸಚಿವ ಬಿ. ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೀಡಾಗಿದ್ದು, ಘಟನೆಯಲ್ಲಿ ಮಾಜಿ ಸಚಿವರು ಹಾಗೂ ಅವರ ಕಾರು ಚಾಲಕ ಗಾಯಗೊಂಡಿದ್ದಾರೆ. ಕಾರ್ಕಳ-ಮೂಡುಬಿದ್ರೆ ಹೆದ್ದಾರಿಯ ಸಾಣೂರು...

ಮೋದಿ ಅಣಕ: ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ವಿರುದ್ಧ ಬಿಜೆಪಿ ಕಿಡಿ

ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದ ‘ಛಾತ್ರೋಂ ಕಿ ಗೂಂಜ್’ ಕಾರ್ಯಕ್ರಮದಲ್ಲಿ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ವೇದಿಕೆ ಹಂಚಿಕೊಂಡ ಸ್ಟ್ಯಾಂಡಪ್ ಕಾಮೆಡಿಯನ್‌ ಒಬ್ಬರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಣಕಿಸಿರುವ ವಿಚಾರ...

ಪ.ಬಂಗಾಳ: ನಂದಿಗ್ರಾಮದಲ್ಲಿ ಕಾಂಗ್ರೆಸ್‌ಗೆ ಮಮತಾ ಬೆಂಬಲ: ಬಂಗಾಳದ ವಿರೋಧ ಪಕ್ಷಗಳ ರಾಜಕೀಯದಲ್ಲಿ ಮರುಹೊಂದಾಣಿಕೆಯ ಸುಳಿವು

ಕೋಲ್ಕತ್ತಾ: ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನದಿಂದ ದಿನಕ್ಕೆ ಹೊಸ ರಾಜಕೀಯ ತಿರುವುಗಳನ್ನು ಪಡೆದುಕೊಳ್ಳುತ್ತಿದ್ದು, ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಬಣ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ ಅವರಿಗೆ...

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...