Homeಮುಖಪುಟಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ...

ಕಾಂಗ್ರೆಸ್ ಅಭ್ಯರ್ಥಿಗಳ 4ನೇ ಪಟ್ಟಿ ಬಿಡುಗಡೆ: ತಿರುವಳ್ಳೂರಿನಿಂದ ಸಸಿಕಾಂತ್ ಸೆಂಥಿಲ್‌, ಮೋದಿ ವಿರುದ್ಧ ಅಜಯ್ ರೈ ಸ್ಪರ್ಧೆ

- Advertisement -
- Advertisement -

ಮುಂಬರುವ ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ 46 ಅಭ್ಯರ್ಥಿಗಳ ನಾಲ್ಕನೇ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದ್ದು, ಮಧ್ಯಪ್ರದೇಶದ ರಾಜ್‌ಗಢದಿಂದ ಕಾಂಗ್ರೆಸ್‌ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಮತ್ತು ವಾರಣಾಸಿಯಿಂದ ಯುಪಿ ಕಾಂಗ್ರೆಸ್ ಅಧ್ಯಕ್ಷ ಅಜಯ್ ರೈ ಅವರನ್ನು ಕಣಕ್ಕಿಳಿಸಿದೆ.

ವಾರಣಾಸಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಅಜಯ್ ರೈ ಕಣಕ್ಕಿಳಿಯಲಿದ್ದಾರೆ. ಮಾಜಿ ಹಣಕಾಸು ಸಚಿವರ ಪುತ್ರ ಹಾಗೂ ಸಂಸದ ಕಾರ್ತಿ ಚಿದಂಬರಂ ಅವರನ್ನು ತಮಿಳುನಾಡಿನ ಶಿವಗಂಗಾ ಕ್ಷೇತ್ರದಿಂದ ಕಣಕ್ಕಿಳಿಸಲಾಗಿದೆ. ಇತ್ತೀಚೆಗಷ್ಟೇ ಕಾಂಗ್ರೆಸ್‌ಗೆ ಸೇರ್ಪಡೆಯಾಗಿರುವ ಬಿಎಸ್‌ಪಿ ಮಾಜಿ ನಾಯಕ ಡ್ಯಾನಿಶ್ ಅಲಿ ಉತ್ತರಪ್ರದೇಶದ ಅಮ್ರೋಹಾದಿಂದ ಸ್ಪರ್ಧಿಸಲಿದ್ದಾರೆ. ಇಮ್ರಾನ್ ಮಸೂದ್ ಸಹರಾನ್‌ಪುರ ಕ್ಷೇತ್ರದಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದು, ಅಲೋಕ್ ಮಿಶ್ರಾ ಕಾನ್ಪುರದಿಂದ ಕಣಕ್ಕಿಳಿದಿದ್ದಾರೆ. ಕರ್ನಾಟಕ ವಿಧಾನ ಸಭಾ ಚುನಾವಣೆಯಲ್ಲಿ ವಾರ್ ರೂಂ ನಿರ್ವಹಿಸಿ ಕಾಂಗ್ರೆಸ್ ಗೆಲುವಿನಲ್ಲಿ ಮಹತ್ತರ ಪಾತ್ರ ವಹಿಸಿದ್ದ ಸಸಿಕಾಂತ್ ಸೆಂಥಿಲ್ ಗೆ ತಮಿಳುನಾಡಿನ ತಿರುವಳ್ಳೂರಿನಿಂದ ಟಿಕೆಟ್ ನೀಡಲಾಗಿದೆ. ರಾಜಸ್ಥಾನದ ನಾಗೌರ್‌ ಕ್ಷೇತ್ರವನ್ನು ಮೈತ್ರಿಕೂಟದ ಲೋಕ ತಾಂತ್ರಿಕ್‌ ಪಾರ್ಟಿ (RLP) ಗೆ ನೀಡಲಾಗಿದೆ.

ಪಟ್ಟಿಯು ಅಸ್ಸಾಂ, ಅಂಡಮಾನ್, ಮಧ್ಯಪ್ರದೇಶ, ಛತ್ತೀಸ್‌ಗಢ, ಮಹಾರಾಷ್ಟ್ರ, ಮಿಜೋರಾಂ, ರಾಜಸ್ಥಾನ, ಮಣಿಪುರ, ತಮಿಳುನಾಡು, ಉತ್ತರಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಬಂಗಾಳದ ಅಭ್ಯರ್ಥಿಗಳ ಹೆಸರನ್ನು ಒಳಗೊಂಡಿದೆ.

ಅಸ್ಸಾಂನ ಲಖೀಂಪುರದಿಂದ ಉದಯ್‌ ಶಂಖರ್‌, ಜಮ್ಮು ಮತ್ತು ಕಾಶ್ಮೀರದ ಉಧಂಪುರದಿಂದ ಹೊಸದಾಗಿ ಸೇರ್ಪಡೆಗೊಂಡ ನಾಯಕ ಲಾಲ್ ಸಿಂಗ್ ಅವರನ್ನು ಕಣಕ್ಕಿಳಿಸಲಾಗಿದೆ. ವಿರುಧನಗರದಿಂದ ಮಾಣಿಕ್ಕಂ ಟ್ಯಾಗೋರ್ ಮತ್ತು ಕರೂರ್‌ನಿಂದ ಎಸ್‌ ಜೋತಿಮಣಿ ಅವರನ್ನು  ಕಾಂಗ್ರೆಸ್‌ ಕಣಕ್ಕಿಳಿಸಿದೆ.

ಅಮೇಥಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಗೆ ಕಾಂಗ್ರೆಸ್‌ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಇನ್ನೂ ಘೋಷಿಸಿಲ್ಲ. ಪ್ರಮುಖವಾಗಿ, ಸಮಾಜವಾದಿ ಪಕ್ಷದೊಂದಿಗೆ ಪಕ್ಷವು ಮೈತ್ರಿ ಮಾಡಿಕೊಂಡಿರುವ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ 17 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ.

ಎರಡು ದಿನಗಳ ಹಿಂದೆ ಗುರುವಾರ, ಕಾಂಗ್ರೆಸ್‌ ತನ್ನ 57 ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇದರಲ್ಲಿ ಪಶ್ಚಿಮ ಬಂಗಾಳದ ಬಹರಂಪುರದಿಂದ ಅಧೀರ್ ರಂಜನ್ ಚೌಧರಿ, ಚಿಕ್ಕೋಡಿಯಿಂದ ಕರ್ನಾಟಕದ ಸಚಿವ ಸತೀಶ್ ಜಾರಕಿಹೊಳಿ ಅವರ ಪುತ್ರಿ ಪ್ರಿಯಾಂಕಾ ಜಾರಕಿಹೊಳಿಗೆ ಟಿಕೆಟ್‌ ನೀಡಲಾಗಿದೆ, ಗುಲ್ಬರ್ಗದಿಂದ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮಾರ್ಚ್ 8ರಂದು ಬಿಡುಗಡೆಯಾದ ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ 39 ಅಭ್ಯರ್ಥಿಗಳಿಗೆ ಟಿಕೆಟ್‌ ಘೋಷಿಸಿತ್ತು. ಅದರಲ್ಲಿ ರಾಹುಲ್ ಗಾಂಧಿ, ಡಿಕೆ ಸುರೇಶ್ ಮತ್ತು ಶಶಿ ತರೂರ್ ಟಿಕೆಟ್‌ ಪಡೆದುಕೊಂಡಿದ್ದರು. ಮಾರ್ಚ್ 12ರಂದು ಕಾಂಗ್ರೆಸ್‌ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆಗೊಳಿಸಿತ್ತು. ಪಟ್ಟಿಯಲ್ಲಿ 43 ಕ್ಷೇತ್ರಗಳಿಗೆ ಅಭ್ಯರ್ಥಿಯನ್ನು ಘೋಷಿಸಲಾಗಿತ್ತು.

 

 

ಇದನ್ನು ಓದಿ:ಲೋಕಸಭೆ ಚುನಾವಣೆ: ಜೆಡಿಎಸ್‌ಗೆ ಮೂರು ಕ್ಷೇತ್ರಗಳನ್ನು ಬಿಟ್ಟು ಕೊಟ್ಟ ಬಿಜೆಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ನಿಯೋಗದಿಂದ ಕರ್ನಾಟಕ ರಾಜ್ಯಪಾಲರ ಭೇಟಿ: ‘ದ್ವೇಷ ಭಾಷಣ ತಡೆ’ ಮಸೂದೆಗೆ ಒಪ್ಪಿಗೆ ನೀಡದಂತೆ ಮನವಿ

ಬೆಂಗಳೂರು: ದ್ವೇಷ ಭಾಷಣ ಮಸೂದೆಯನ್ನು"ವಾಕ್ ಸ್ವಾತಂತ್ರ್ಯದ ಮೇಲಿನ ನೇರ ದಾಳಿ" ಮತ್ತು "ರಾಜಕೀಯ ಸೇಡಿನ ಸಾಧನ" ಎಂದು ಕರೆದಿರುವ ಬಿಜೆಪಿ ನಾಯಕರ ನಿಯೋಗವು ಸೋಮವಾರ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ...

ಟೆಕ್ಕಿ ಶರ್ಮಿಳಾ ಕೊಲೆ ಪ್ರಕರಣ : ಪಿಯು ವಿದ್ಯಾರ್ಥಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರಿನ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಬಡಾವಣೆಯಲ್ಲಿ 2026ರ ಜನವರಿ 3ರಂದು ರಾತ್ರಿ ನಡೆದ ಮಂಗಳೂರು ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಶರ್ಮಿಳಾ ಕುಶಾಲಪ್ಪ (34) ಅವರ ಕೊಲೆ ಪ್ರಕರಣವನ್ನು ಪೊಲೀಸರು ಬೇಧಿಸಿದ್ದಾರೆ. ಆರಂಭದಲ್ಲಿ, ಫ್ಲ್ಯಾಟ್‌ಗೆ ಬೆಂಕಿ...

ಎಸ್‌ಎಸ್‌ಎಲ್‌ಸಿ ಪ್ರಶ್ನೆ ಪತ್ರಿಕೆ ಸೋರಿಕೆ: ಸಾಮಾಜಿಕ ಮಾಧ್ಯಮದಲ್ಲಿ 200-500 ರೂ.ಗೆ ಮಾರಾಟ: ಆರು ಶಿಕ್ಷಕರು, ಇಬ್ಬರು ಅಪ್ರಾಪ್ತ ವಿದ್ಯಾರ್ಥಿಗಳ ಬಂಧನ

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆಯ ಸಂದರ್ಭದಲ್ಲಿ ಆಘಾತಕಾರಿ ಮಾಹಿತಿಗಳು ಹೊರಬಿದ್ದಿವೆ. ವಿದ್ಯಾರ್ಥಿಗಳು ಪ್ರಶ್ನೆಪತ್ರಿಕೆಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಬಹಿರಂಗವಾಗಿ ಜಾಹೀರಾತು ಮಾಡಿ ಖಾಸಗಿ ಸಂದೇಶಗಳ ಮೂಲಕ 200 ರಿಂದ...

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...