Homeಮುಖಪುಟಲೋಕಸಭೆ ಚುನಾವಣೆ: ವಿವಿಧ ರಾಜ್ಯಗಳ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಲೋಕಸಭೆ ಚುನಾವಣೆ: ವಿವಿಧ ರಾಜ್ಯಗಳ 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದ ಕಾಂಗ್ರೆಸ್

ಆಂಧ್ರದ ಕಡಪದಿಂದ ವೈ.ಎಸ್‌ ಶರ್ಮಿಳಾ ಕಣಕ್ಕೆ

- Advertisement -
- Advertisement -

ಲೋಕಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ 11ನೇ ಪಟ್ಟಿ ಇಂದು (ಮಾ.2) ಪ್ರಕಟಗೊಂಡಿದೆ. ಆಂಧ್ರ ಪ್ರದೇಶದ ಐದು, ಬಿಹಾರದ ಮೂರು, ಒಡಿಶ್ಶಾದ ಎಂಟು ಮತ್ತು ಪಶ್ಚಿಮ ಬಂಗಾಳದ ಒಂದು ಸೇರಿ ಒಟ್ಟು 17 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿಲಾಗಿದೆ.

ಆಂಧ್ರ ಪ್ರದೇಶದ ಕಡಪ ಕ್ಷೇತ್ರದಿಂದ ರಾಜ್ಯ ಕಾಂಗ್ರೆಸ್ ಅಧ್ಯಕ್ಷೆ ವೈ.ಎಸ್ ಶರ್ಮಿಳಾ ಅವರನ್ನು ಕಣಕ್ಕಿಳಿಸಲಾಗಿದೆ. ಬಿಹಾರದಲ್ಲಿ ಮಹಾಮೈತ್ರಿಕೂಟದೊಂದಿಗೆ ಸೀಟು ಹಂಚಿಕೆ ಒಪ್ಪಂದದ ಭಾಗವಾಗಿ ಕಾಂಗ್ರೆಸ್ ಪಡೆದ ಒಂಬತ್ತು ಕ್ಷೇತ್ರಗಳ ಪೈಕಿ ಕಿಶನ್‌ಗಂಜ್, ಕತಿಹಾರ್ ಮತ್ತು ಭಾಗಲ್ಪುರದ ಅಭ್ಯರ್ಥಿಗಳನ್ನು ಘೋಷಿಸಿದೆ.

ಕಿಶನ್‌ಗಂಜ್‌ನಿಂದ ಹಾಲಿ ಸಂಸದ ಮೊಹಮ್ಮದ್ ಜಾವೇದ್ ಅವರನ್ನು ಕಣಕ್ಕಿಳಿಸಲಾಗಿದ್ದು, ಹಿರಿಯ ಕಾಂಗ್ರೆಸ್ ನಾಯಕ ತಾರಿಕ್ ಅನ್ವರ್ ಕತಿಹಾರ್‌ನಿಂದ ಕಣಕ್ಕಿಳಿದಿದ್ದಾರೆ. ಭಾಗಲ್ಪುರ ಲೋಕಸಭಾ ಕ್ಷೇತ್ರದಿಂದ ಶಾಸಕ ಅಜೀತ್ ಶರ್ಮಾ ಸ್ಪರ್ಧಿಸಲಿದ್ದಾರೆ.

ಆಂಧ್ರ ಪ್ರದೇಶದ ಕಾಕಿನಾಡದಿಂದ ಮಾಜಿ ಶಿಕ್ಷಣ ಸಚಿವ ಎಂ.ಎಂ.ಪಲ್ಲಂ ರಾಜು ಅವರನ್ನು ಕಣಕ್ಕಿಳಿಸಲಾಗಿದೆ. ಮಾಜಿ ಲೋಕಸಭಾ ಸದಸ್ಯ ಸಂಜಯ್ ಭೋಯ್ ಅವರು 2009 ರಿಂದ 2014 ರವರೆಗೆ ಪ್ರತಿನಿಧಿಸಿದ್ದ ಒಡಿಶಾದ ಬರ್ಗಢದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ನೀಡಿದೆ.

ಪಶ್ಚಿಮ ಬಂಗಾಳದಲ್ಲಿ ಡಾರ್ಜಿಲಿಂಗ್‌ ಕ್ಷೇತ್ರದ ಟಿಕೆಟ್ ಡಾ. ಮುನಿಶ್ ತಮಾಂಗ್ ಅವರಿಗೆ ನೀಡಲಾಗಿದೆ. ಇದರೊಂದಿಗೆ ಕಾಂಗ್ರೆಸ್‌ ಇದುವರೆಗೆ ಘೋಷಿರುವ ಒಟ್ಟು ಅಭ್ಯರ್ಥಿಗಳ ಸಂಖ್ಯೆ 228 ಆಗಿದೆ. ಆದರೆ, ಭಾರೀ ಕುತೂಹಲ ಕೆರಳಿಸಿರುವ ಅಮೇಥಿ ಕ್ಷೇತ್ರಕ್ಕೆ ಈ ಬಾರಿಯೂ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ.

ಸೋಮವಾರ, ಅಭ್ಯರ್ಥಿಗಳ ಹತ್ತನೇ ಪಟ್ಟಿಯನ್ನು ಕಾಂಗ್ರೆಸ್ ಬಿಡುಗಡೆ ಮಾಡಿತ್ತು. ಮಹಾರಾಷ್ಟ್ರದ ಅಕೋಲಾ ಮತ್ತು ತೆಲಂಗಾಣದ ವಾರಂಗಲ್ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಘೋಷಿಸಿತ್ತು.

ಮಹಾರಾಷ್ಟ್ರದಲ್ಲಿ ಪ್ರಕಾಶ್ ಅಂಬೇಡ್ಕರ್ ಅವರ ವಂಚಿತ್ ಬಹುಜನ ಅಘಾಡಿ (ವಿಬಿಎ) ನಡುವಿನ ಸಂಭವನೀಯ ಮೈತ್ರಿಯ ಊಹಾಪೋಹಗಳು ಅಂತ್ಯವಾಗುತ್ತಿದ್ದಂತೆ, ಅಕೋಲಾ ಕ್ಷೇತ್ರಕ್ಕೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ವಿಬಿಎ ಮುಖ್ಯಸ್ಥ ಪ್ರಕಾಶ್ ಅಂಬೇಡ್ಕರ್ ವಿರುದ್ಧ ಕಾಂಗ್ರೆಸ್ ಪಕ್ಷದ ಅಭಯ ಕಾಶಿನಾಥ್ ಪಾಟೀಲ್ ಸ್ಪರ್ಧಿಸಲಿದ್ದಾರೆ.

543 ಲೋಕಸಭಾ ಸ್ಥಾನಗಳಿಗೆ ಏಪ್ರಿಲ್ 19 ರಿಂದ ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಸುಮಾರು 97 ಕೋಟಿ ಮತದಾರರು ಸಾರ್ವತ್ರಿಕ ಚುನಾವಣೆಯಲ್ಲಿ ಮತ ಚಲಾಯಿಸಲು ಅರ್ಹರಾಗಿದ್ದಾರೆ.

ಇದನ್ನೂ ಓದಿ : ‘ಒಂದು ಪೈಸೆ ಪರಿಹಾರ ನೀಡಿಲ್ಲ; ಕನ್ನಡಿಗರ ಬಗ್ಗೆ ನಿಮಗೆ ಯಾಕಿಷ್ಟು ದ್ವೇಷ..’; ಅಮಿತ್ ಶಾ ಮುಂದೆ ಸರಣಿ ಪ್ರಶ್ನೆಗಳನ್ನಿಟ್ಟ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...