Homeಮುಖಪುಟಕಂಗಾನಾ ಮುಂಬೈಗೆ ಮರಳಿದ್ದಾರೆಂದು ಎನ್‌‌ಸಿಬಿಗೆ ನೆನಪಿಸಿದ ಕಾಂಗ್ರೆಸ್- ಕಾರಣವೇನು ಗೊತ್ತೇ?

ಕಂಗಾನಾ ಮುಂಬೈಗೆ ಮರಳಿದ್ದಾರೆಂದು ಎನ್‌‌ಸಿಬಿಗೆ ನೆನಪಿಸಿದ ಕಾಂಗ್ರೆಸ್- ಕಾರಣವೇನು ಗೊತ್ತೇ?

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಮಾದಕವಸ್ತು ಸಂಬಂಧಿತ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ಎನ್‌ಸಿಬಿ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿತ್ತು.

- Advertisement -
- Advertisement -

ದೇಶದಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಬಾಲಿವುಡ್‌ ಡ್ರಗ್‌ ಮಾಫಿಯಾ ಪ್ರಕರಣ ಕುರಿತು ಮಾದಕವಸ್ತು ವಿರೋಧಿ ನಿಯಂತ್ರಣ ವಿಭಾಗ(ಎನ್‌ಸಿಬಿ) ತನಿಖೆ ನಡೆಸುತ್ತಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಸಚಿನ್ ಸಾವಂತ್‌, ಕಂಗನಾ ರಾಣಾವತ್‌ ಮರಳಿ ಮುಂಬೈಗೆ ಬಂದಿದ್ದಾರೆಂದು ಎನ್‌ಸಿಬಿಗೆ ನೆನಪಿಸಿದ್ದು, ನಟಿ ಈ ಹಿಂದೆ ತನಗೆ ಚಲನಚಿತ್ರೋದ್ಯಮದಲ್ಲಿನ ಡ್ರಗ್ಸ್‌ ಬಗೆಗಿನ ಮಾಹಿತಿ ಇದೆ ಎಂದು ಹೇಳುತ್ತಿರುವ ವಿಡಿಯೋವನ್ನು ಟ್ವೀಟ್ ಮಾಡಿದ್ದಾರೆ. ಸಚಿನ್ ಸಾವಂತ್, ಕಂಗನಾ ಅವರನ್ನು ವಿಚಾರಣೆಗೆ ಯಾವಾಗ ಕರೆಸಿಕೊಳ್ಳುತ್ತೀರಿ ಎಂದು ಎನ್‌ಸಿಬಿಯನ್ನು ಪ್ರಶ್ನಿಸಿದ್ದಾರೆ.

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ನಂತರ ಮಾದಕವಸ್ತು ಸಂಬಂಧಿತ ಆರೋಪದ ಮೇಲೆ ಸೆಪ್ಟೆಂಬರ್ 9 ರಂದು ಎನ್‌ಸಿಬಿ ನಟಿ ರಿಯಾ ಚಕ್ರವರ್ತಿಯನ್ನು ಬಂಧಿಸಿತ್ತು. ಅಲ್ಲದೆ ನಟಿಯರಾದ ದೀಪಿಕಾ ಪಡುಕೋಣೆ, ಸಾರಾ ಅಲಿ ಖಾನ್, ಶ್ರದ್ಧಾ ಕಪೂರ್ ಸೇರಿದಂತೆ ಹಲವಾರು ಜನರನ್ನು ಎನ್‌ಸಿಬಿ ಇದುವರೆಗೂ ವಿಚಾರಣೆಗೆ ಕರೆಸಿಕೊಂಡಿದೆ. ಸಚಿನ್ ಸಾವಂತ್‌ ಟ್ವೀಟ್ ಮಾಡಿರುವ ವಿಡಿಯೋ ಈ ಹಿಂದೆಯೆ ವೈರಲ್ ಆಗಿತ್ತು. ಅದರಲ್ಲಿ ನಟಿ ಕಂಗನಾ ರಾಣಾವತ್‌ ತಾನು “ಮಾದಕ ವ್ಯಸನಿ” ಆಗಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಣಿಕರ್ಣಿಕಾ ವಿವಾದ: ಕಂಗನಾ ಕಾರಣಕ್ಕೆ ನಾನು ಜಗತ್ತಿಗೆ ಅಪರಿಚಿತನಾಗಿರಬಹುದು- ನಿರ್ದೇಶಕ

ಸಚಿನ್ ಸಾವಂತ್‌ ತನ್ನ ಟ್ವೀಟ್‌ನಲ್ಲಿ, “ಆತ್ಮೀಯ ಎನ್‌ಸಿಬಿ, ಕಂಗನಾ ರಾಣಾವತ್‌ ಬಂದಿದ್ದಾರೆ. ಈ ವಿಡಿಯೋಗಾಗಿ ಅವರನ್ನು ನೀವು ಯಾವಾಗ ವಿಚಾರಣೆ ನಡೆಸುತ್ತೀರಿ?. ಬಾಲಿವುಡ್‌ನಲ್ಲಿರುವ ಡ್ರಗ್‌ ಮಾಫಿಯಾದ ಬಗ್ಗೆ ಮಾಹಿತಿ ನೀಡುತ್ತೇನೆ ಎಂದಾಗ ಮೋದಿ ಸರ್ಕಾರ ಅವರಿಗೆ ವೈ ಕೆಟಗಿರಿಯ ಭದ್ರತೆ ನೀಡಿತು. ಅದನ್ನು ಕಂಗನಾ ಇನ್ನೂ ಅನುಭವಿಸುತ್ತಿದ್ದಾರೆ. ಆದರೆ ಅವರು ಅಪರಾಧದ ಮಾಹಿತಿಯನ್ನು ಈಗಲೂ ಮರೆ ಮಾಚುತ್ತಿದ್ದಾರೆ” ಎಂದು ಹೇಳಿದ್ದಾರೆ.

“ಬಿಜೆಪಿ ಕಂಗಾನಾರನ್ನು ಝಾನ್ಸಿಯ ರಾಣಿ ಎಂದು ಕರೆದು, ಮಹಾರಾಷ್ಟ್ರ ಸರ್ಕಾರ ಅವರು ಪೊಲೀಸರಿಗೆ ಮಾಹಿತಿ ನೀಡಲು ಬಿಡುತ್ತಿಲ್ಲ ಎಂದು ಆರೋಪಿಸಿತ್ತು. ಈಗ ಅವರು ಆ ಮಾಹಿತಿಯನ್ನು ಎನ್‌ಸಿಬೆಗೆ ಮಾಹಿತಿ ನೀಡಲು ವಿನಂತಿಸುತ್ತಾರೆಯೆ? ಮಹಾರಾಷ್ಟ್ರವನ್ನು ದೂಷಿಸಿದ್ದಕ್ಕಾಗಿ ಬಿಜೆಪಿ ಕ್ಷಮೆಯಾಚಿಸುತ್ತದೆಯೆ?” ಎಂದು ಸಚಿನ್ ಸಾವಂತ್‌ ಪ್ರಶ್ನಿಸಿದ್ದಾರೆ.

ಕಂಗನಾ ರಾಣಾವತ್‌, ತಾನು ಮುಂಬೈಗೆ ಮರಳಿ ಮುಂಬಾ ದೇವಿ ಹಾಗೂ ಸಿದ್ದಿ ವಿನಾಯಕ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ್ದನ್ನು ಫೋಟೋ ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಇವು ಮೀಸಲಾತಿಯ ಅಡ್ಡಪರಿಣಾಮಗಳು: ಮೀಸಲಾತಿ ವಿರುದ್ಧ ಮಾತನಾಡಿದ ಕಂಗನಾ ರಾಣಾವತ್!

ಇದನ್ನೂ ಓದಿ: ರೈತರ ಬಗ್ಗೆ ಅವಹೇಳನಕಾರಿ ಟ್ವೀಟ್: ನಟಿ ಕಂಗನಾಗೆ ಮತ್ತೊಂದು ಲೀಗಲ್ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...