Homeಮುಖಪುಟಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ. ಆ ಸಭೆಗಳಲ್ಲಿ ಏನಾಗಿದೆ ಎಂಬುವುದರ ಸಂಪೂರ್ಣ ದಾಖಲೆ ನೀಡುವಂತೆ ಕೇಳಿದೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, “ಬಿಜೆಪಿಯು ಚೀನಾದೊಂದಿಗೆ ನಿಕಟ ಸಂಬಂಧ ಹೊಂದಿದೆಯೇ? ಉಭಯ ಪಕ್ಷಗಳ ನಡುವಿನ ಸಭೆಗಳ ಫಲಿತಾಂಶ ಏನು?” ಎಂದು ಪ್ರಶ್ನಿಸಿದ್ದಾರೆ.

“ಜೂನ್ 2020ರಿಂದ ಪ್ರಧಾನಿ ನರೇಂದ್ರ ಮೋದಿಯವರು ಚೀನಾವು ಲಡಾಖ್‌ನಲ್ಲಿ ಮಾಡಿದ ಕಾರ್ಯಗಳಿಗೆ ಕ್ಲೀನ್ ಚಿಟ್ ನೀಡಿದ ನಂತರ, ಚೀನಾದ ವಿರುದ್ಧ ನಿಲ್ಲಲು ಬಿಜೆಪಿಗೆ ಏಕೆ ಇಷ್ಟವಿರಲಿಲ್ಲ? ಎಂದು ಭಾರತದ ಜನರು ಕೇಳುತ್ತಿದ್ದಾರೆ. ಬಿಜೆಪಿ ಮತ್ತು ಚೀನಾದ ಕಮ್ಯುನಿಸ್ಟ್ ಪಕ್ಷದ ನಡುವಿನ ನಿಕಟ ಸಂಪರ್ಕಗಳು ಇದಕ್ಕೆ ಕಾರಣವೇ? ಎಂದು ಕಾಂಗ್ರೆಸ್ ಪವನ್ ಖೇರಾ ಕೇಳಿದ್ದಾರೆ.

“2008ರಿಂದ ಈವರೆಗೆ ಕನಿಷ್ಠ 12 ಸಭೆಗಳು ನಡೆದಿವೆ. ಬಿಜೆಪಿಯ ರಾಜಕಾರಣಿಗಳು ಚೀನಾದ ಕಮ್ಯುನಿಸ್ಟ್ ಪಕ್ಷದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಅದು ಕೂಡಾ ಬಹುತೇಕ ಸಭೆ, ಭೇಟಿ ಚೀನಾದಲ್ಲಿಯೇ ನಡೆದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಕೇಳಿರುವ ಪವನ್ ಖೇರಾ ‘ಪದೇ ಪದೇ ಸಭೆ’ ನಡೆಸುವ ಹಿಂದಿರುವ ಕಾರಣ ತಿಳಿಸುವಂತೆ ಹೇಳಿದ್ದಾರೆ. ಹಾಗೆಯೇ 2017ರಲ್ಲಿ ಡೋಕ್ಲಾಮ್ ಘರ್ಷಣೆಯ ನಂತರ ಈ ಭೇಟಿಗಳ ಹಿಂದಿರುವ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಭೆಗಳ ವಿವರಗಳನ್ನು ನೀಡುತ್ತಾ ಖೇರಾ ಅವರು, ಅಕ್ಟೋಬರ್ 2008ರಲ್ಲಿ 15 ಸದಸ್ಯರ ಚೀನಾದ ಕಮ್ಯುನಿಸ್ಟ್ ಪಕ್ಷದ ನಿಯೋಗ ಬಿಜೆಪಿಯ ಕೇಂದ್ರ ಕಚೇರಿಗೆ ಭೇಟಿ ನೀಡಿತ್ತು. ನಂತರ ರಾಜನಾಥ್ ಸಿಂಗ್ ಅವರು ‘”ಬಿಜೆಪಿ ಯಾವಾಗಲೂ ಚೀನಾದೊಂದಿಗೆ ಸಕಾರಾತ್ಮಕ ಸಂಬಂಧವನ್ನು ಬೆಳೆಸಲು ಒಲವು ಹೊಂದಿದೆ” ಎಂದಿದ್ದರು ಎಂದು ತಿಳಿಸಿದ್ದಾರೆ.

ಜನವರಿ 2009ರಲ್ಲಿ, ಬಿಜೆಪಿ-ಆರ್‌ಎಸ್‌ಎಸ್ ತಂಡವು ಬೀಜಿಂಗ್ ಮತ್ತು ಶಾಂಘೈಗೆ ಐದು ದಿನಗಳ ಪ್ರವಾಸ ಕೈಗೊಂಡು ಚೀನಾದ ಕಮ್ಯುನಿಸ್ಟ್‌ ಪಕ್ಷದ ಪಾಲಿಟ್‌ಬ್ಯೂರೊ ಸದಸ್ಯರು ಸೇರಿದಂತೆ ಪ್ರಮುಖರನ್ನು ಭೇಟಿ ಮಾಡಿತ್ತು. ಜನವರಿ 2011ರಲ್ಲಿ, ಆಗಿನ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಚೀನಾಕ್ಕೆ ತೆರಳಿ ಕಮ್ಯುನಿಸ್ಟ್ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು. ನವೆಂಬರ್ 2014ರಲ್ಲಿ 13 ಸದಸ್ಯರ ಬಿಜೆಪಿ ತಂಡ ಕಮ್ಯುನಿಸ್ಟ್ ‘ಪಾರ್ಟಿ ಸ್ಕೂಲ್’ ನಿಂದ ಕಲಿಯಲು ಚೀನಾಕ್ಕೆ ಭೇಟಿ ನೀಡಿತ್ತು. ಆಗ ಬಿಜೆಪಿ ಸಂಸದರಾಗಿದ್ದ ಭಗತ್ ಸಿಂಗ್ ಕೊಶ್ಯಾರಿ ಅವರು ಚೀನಾದ ಪೀಪಲ್ಸ್ ಪೊಲಿಟಿಕಲ್ ಕನ್ಸಲ್ಟೇಟಿವ್ ಕಾನ್ಫರೆನ್ಸ್‌ನ ರಾಷ್ಟ್ರೀಯ ಸಮಿತಿಯ ಉಪಾಧ್ಯಕ್ಷರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಹೇಳಿದ್ದಾರೆ.

ಫೆಬ್ರವರಿ 2015ರಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಸಚಿವರು ಅಮಿತ್ ಶಾ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿದ್ದರು. ಅಕ್ಟೋಬರ್ 2015 ರಲ್ಲಿ ಬಿಜೆಪಿ ಉಪಾಧ್ಯಕ್ಷ ವಿನಯ್ ಸಹಸ್ರಬುದ್ಧೆ ಚೀನಾದಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಮಂತ್ರಿ ಚೆನ್ ಫೆಂಗ್‌ಕ್ಸಿಯಾಂಗ್ ಅವರನ್ನು ಭೇಟಿಯಾಗಿದ್ದರು.

ಜೂನ್ 2017 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಫುಝೌನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಮೇ 2018 ರಲ್ಲಿ, ಬಿಜೆಪಿ ನಾಯಕ ಅನಿರ್ಬನ್ ಗಂಗೂಲಿ ಅವರು ಚೀನಾದ ಶೆನ್ಜೆನ್ನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಆಗಸ್ಟ್ 2018 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಬೀಜಿಂಗ್‌ನಲ್ಲಿ ಕಮ್ಯುನಿಸ್ಟ್ ಪಕ್ಷದ ಸಚಿವರನ್ನು ಭೇಟಿ ಮಾಡಿದ್ದರು. ಸೆಪ್ಟೆಂಬರ್ 2018 ರಲ್ಲಿ ಕಮ್ಯುನಿಸ್ಟ್ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಹುವಾಂಗ್ ಕುನ್ಮಿಂಗ್ ಅವರು ಬಿಜೆಪಿ ನಾಯಕ ಮತ್ತು ನಂತರ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಆಗಸ್ಟ್ 2019ರಲ್ಲಿ, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು. ಬಿಜೆಪಿ ಕೇಡರ್ ಅಧ್ಯಯನ ಗುಂಪು ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಸಚಿವ ಗುವೊ ಯೆಝೌ ಅವರೊಂದಿಗೆ ಮಾತುಕತೆ ನಡೆಸಿತ್ತು. ಸೆಪ್ಟೆಂಬರ್ 2019 ರಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಚೀನಾ ರಾಯಭಾರಿಯನ್ನು ಭೇಟಿ ಮಾಡಿದ್ದರು ಎಂದು ಪವನ್ ಖೇರಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...