Homeಮುಖಪುಟಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ. ಆ ಸಭೆಗಳಲ್ಲಿ ಏನಾಗಿದೆ ಎಂಬುವುದರ ಸಂಪೂರ್ಣ ದಾಖಲೆ ನೀಡುವಂತೆ ಕೇಳಿದೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, “ಬಿಜೆಪಿಯು ಚೀನಾದೊಂದಿಗೆ ನಿಕಟ ಸಂಬಂಧ ಹೊಂದಿದೆಯೇ? ಉಭಯ ಪಕ್ಷಗಳ ನಡುವಿನ ಸಭೆಗಳ ಫಲಿತಾಂಶ ಏನು?” ಎಂದು ಪ್ರಶ್ನಿಸಿದ್ದಾರೆ.

“ಜೂನ್ 2020ರಿಂದ ಪ್ರಧಾನಿ ನರೇಂದ್ರ ಮೋದಿಯವರು ಚೀನಾವು ಲಡಾಖ್‌ನಲ್ಲಿ ಮಾಡಿದ ಕಾರ್ಯಗಳಿಗೆ ಕ್ಲೀನ್ ಚಿಟ್ ನೀಡಿದ ನಂತರ, ಚೀನಾದ ವಿರುದ್ಧ ನಿಲ್ಲಲು ಬಿಜೆಪಿಗೆ ಏಕೆ ಇಷ್ಟವಿರಲಿಲ್ಲ? ಎಂದು ಭಾರತದ ಜನರು ಕೇಳುತ್ತಿದ್ದಾರೆ. ಬಿಜೆಪಿ ಮತ್ತು ಚೀನಾದ ಕಮ್ಯುನಿಸ್ಟ್ ಪಕ್ಷದ ನಡುವಿನ ನಿಕಟ ಸಂಪರ್ಕಗಳು ಇದಕ್ಕೆ ಕಾರಣವೇ? ಎಂದು ಕಾಂಗ್ರೆಸ್ ಪವನ್ ಖೇರಾ ಕೇಳಿದ್ದಾರೆ.

“2008ರಿಂದ ಈವರೆಗೆ ಕನಿಷ್ಠ 12 ಸಭೆಗಳು ನಡೆದಿವೆ. ಬಿಜೆಪಿಯ ರಾಜಕಾರಣಿಗಳು ಚೀನಾದ ಕಮ್ಯುನಿಸ್ಟ್ ಪಕ್ಷದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಅದು ಕೂಡಾ ಬಹುತೇಕ ಸಭೆ, ಭೇಟಿ ಚೀನಾದಲ್ಲಿಯೇ ನಡೆದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಕೇಳಿರುವ ಪವನ್ ಖೇರಾ ‘ಪದೇ ಪದೇ ಸಭೆ’ ನಡೆಸುವ ಹಿಂದಿರುವ ಕಾರಣ ತಿಳಿಸುವಂತೆ ಹೇಳಿದ್ದಾರೆ. ಹಾಗೆಯೇ 2017ರಲ್ಲಿ ಡೋಕ್ಲಾಮ್ ಘರ್ಷಣೆಯ ನಂತರ ಈ ಭೇಟಿಗಳ ಹಿಂದಿರುವ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಭೆಗಳ ವಿವರಗಳನ್ನು ನೀಡುತ್ತಾ ಖೇರಾ ಅವರು, ಅಕ್ಟೋಬರ್ 2008ರಲ್ಲಿ 15 ಸದಸ್ಯರ ಚೀನಾದ ಕಮ್ಯುನಿಸ್ಟ್ ಪಕ್ಷದ ನಿಯೋಗ ಬಿಜೆಪಿಯ ಕೇಂದ್ರ ಕಚೇರಿಗೆ ಭೇಟಿ ನೀಡಿತ್ತು. ನಂತರ ರಾಜನಾಥ್ ಸಿಂಗ್ ಅವರು ‘”ಬಿಜೆಪಿ ಯಾವಾಗಲೂ ಚೀನಾದೊಂದಿಗೆ ಸಕಾರಾತ್ಮಕ ಸಂಬಂಧವನ್ನು ಬೆಳೆಸಲು ಒಲವು ಹೊಂದಿದೆ” ಎಂದಿದ್ದರು ಎಂದು ತಿಳಿಸಿದ್ದಾರೆ.

ಜನವರಿ 2009ರಲ್ಲಿ, ಬಿಜೆಪಿ-ಆರ್‌ಎಸ್‌ಎಸ್ ತಂಡವು ಬೀಜಿಂಗ್ ಮತ್ತು ಶಾಂಘೈಗೆ ಐದು ದಿನಗಳ ಪ್ರವಾಸ ಕೈಗೊಂಡು ಚೀನಾದ ಕಮ್ಯುನಿಸ್ಟ್‌ ಪಕ್ಷದ ಪಾಲಿಟ್‌ಬ್ಯೂರೊ ಸದಸ್ಯರು ಸೇರಿದಂತೆ ಪ್ರಮುಖರನ್ನು ಭೇಟಿ ಮಾಡಿತ್ತು. ಜನವರಿ 2011ರಲ್ಲಿ, ಆಗಿನ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಚೀನಾಕ್ಕೆ ತೆರಳಿ ಕಮ್ಯುನಿಸ್ಟ್ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು. ನವೆಂಬರ್ 2014ರಲ್ಲಿ 13 ಸದಸ್ಯರ ಬಿಜೆಪಿ ತಂಡ ಕಮ್ಯುನಿಸ್ಟ್ ‘ಪಾರ್ಟಿ ಸ್ಕೂಲ್’ ನಿಂದ ಕಲಿಯಲು ಚೀನಾಕ್ಕೆ ಭೇಟಿ ನೀಡಿತ್ತು. ಆಗ ಬಿಜೆಪಿ ಸಂಸದರಾಗಿದ್ದ ಭಗತ್ ಸಿಂಗ್ ಕೊಶ್ಯಾರಿ ಅವರು ಚೀನಾದ ಪೀಪಲ್ಸ್ ಪೊಲಿಟಿಕಲ್ ಕನ್ಸಲ್ಟೇಟಿವ್ ಕಾನ್ಫರೆನ್ಸ್‌ನ ರಾಷ್ಟ್ರೀಯ ಸಮಿತಿಯ ಉಪಾಧ್ಯಕ್ಷರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಹೇಳಿದ್ದಾರೆ.

ಫೆಬ್ರವರಿ 2015ರಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಸಚಿವರು ಅಮಿತ್ ಶಾ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿದ್ದರು. ಅಕ್ಟೋಬರ್ 2015 ರಲ್ಲಿ ಬಿಜೆಪಿ ಉಪಾಧ್ಯಕ್ಷ ವಿನಯ್ ಸಹಸ್ರಬುದ್ಧೆ ಚೀನಾದಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಮಂತ್ರಿ ಚೆನ್ ಫೆಂಗ್‌ಕ್ಸಿಯಾಂಗ್ ಅವರನ್ನು ಭೇಟಿಯಾಗಿದ್ದರು.

ಜೂನ್ 2017 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಫುಝೌನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಮೇ 2018 ರಲ್ಲಿ, ಬಿಜೆಪಿ ನಾಯಕ ಅನಿರ್ಬನ್ ಗಂಗೂಲಿ ಅವರು ಚೀನಾದ ಶೆನ್ಜೆನ್ನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಆಗಸ್ಟ್ 2018 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಬೀಜಿಂಗ್‌ನಲ್ಲಿ ಕಮ್ಯುನಿಸ್ಟ್ ಪಕ್ಷದ ಸಚಿವರನ್ನು ಭೇಟಿ ಮಾಡಿದ್ದರು. ಸೆಪ್ಟೆಂಬರ್ 2018 ರಲ್ಲಿ ಕಮ್ಯುನಿಸ್ಟ್ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಹುವಾಂಗ್ ಕುನ್ಮಿಂಗ್ ಅವರು ಬಿಜೆಪಿ ನಾಯಕ ಮತ್ತು ನಂತರ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಆಗಸ್ಟ್ 2019ರಲ್ಲಿ, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು. ಬಿಜೆಪಿ ಕೇಡರ್ ಅಧ್ಯಯನ ಗುಂಪು ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಸಚಿವ ಗುವೊ ಯೆಝೌ ಅವರೊಂದಿಗೆ ಮಾತುಕತೆ ನಡೆಸಿತ್ತು. ಸೆಪ್ಟೆಂಬರ್ 2019 ರಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಚೀನಾ ರಾಯಭಾರಿಯನ್ನು ಭೇಟಿ ಮಾಡಿದ್ದರು ಎಂದು ಪವನ್ ಖೇರಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...