Homeಮುಖಪುಟಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ. ಆ ಸಭೆಗಳಲ್ಲಿ ಏನಾಗಿದೆ ಎಂಬುವುದರ ಸಂಪೂರ್ಣ ದಾಖಲೆ ನೀಡುವಂತೆ ಕೇಳಿದೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, “ಬಿಜೆಪಿಯು ಚೀನಾದೊಂದಿಗೆ ನಿಕಟ ಸಂಬಂಧ ಹೊಂದಿದೆಯೇ? ಉಭಯ ಪಕ್ಷಗಳ ನಡುವಿನ ಸಭೆಗಳ ಫಲಿತಾಂಶ ಏನು?” ಎಂದು ಪ್ರಶ್ನಿಸಿದ್ದಾರೆ.

“ಜೂನ್ 2020ರಿಂದ ಪ್ರಧಾನಿ ನರೇಂದ್ರ ಮೋದಿಯವರು ಚೀನಾವು ಲಡಾಖ್‌ನಲ್ಲಿ ಮಾಡಿದ ಕಾರ್ಯಗಳಿಗೆ ಕ್ಲೀನ್ ಚಿಟ್ ನೀಡಿದ ನಂತರ, ಚೀನಾದ ವಿರುದ್ಧ ನಿಲ್ಲಲು ಬಿಜೆಪಿಗೆ ಏಕೆ ಇಷ್ಟವಿರಲಿಲ್ಲ? ಎಂದು ಭಾರತದ ಜನರು ಕೇಳುತ್ತಿದ್ದಾರೆ. ಬಿಜೆಪಿ ಮತ್ತು ಚೀನಾದ ಕಮ್ಯುನಿಸ್ಟ್ ಪಕ್ಷದ ನಡುವಿನ ನಿಕಟ ಸಂಪರ್ಕಗಳು ಇದಕ್ಕೆ ಕಾರಣವೇ? ಎಂದು ಕಾಂಗ್ರೆಸ್ ಪವನ್ ಖೇರಾ ಕೇಳಿದ್ದಾರೆ.

“2008ರಿಂದ ಈವರೆಗೆ ಕನಿಷ್ಠ 12 ಸಭೆಗಳು ನಡೆದಿವೆ. ಬಿಜೆಪಿಯ ರಾಜಕಾರಣಿಗಳು ಚೀನಾದ ಕಮ್ಯುನಿಸ್ಟ್ ಪಕ್ಷದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಅದು ಕೂಡಾ ಬಹುತೇಕ ಸಭೆ, ಭೇಟಿ ಚೀನಾದಲ್ಲಿಯೇ ನಡೆದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಕೇಳಿರುವ ಪವನ್ ಖೇರಾ ‘ಪದೇ ಪದೇ ಸಭೆ’ ನಡೆಸುವ ಹಿಂದಿರುವ ಕಾರಣ ತಿಳಿಸುವಂತೆ ಹೇಳಿದ್ದಾರೆ. ಹಾಗೆಯೇ 2017ರಲ್ಲಿ ಡೋಕ್ಲಾಮ್ ಘರ್ಷಣೆಯ ನಂತರ ಈ ಭೇಟಿಗಳ ಹಿಂದಿರುವ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಭೆಗಳ ವಿವರಗಳನ್ನು ನೀಡುತ್ತಾ ಖೇರಾ ಅವರು, ಅಕ್ಟೋಬರ್ 2008ರಲ್ಲಿ 15 ಸದಸ್ಯರ ಚೀನಾದ ಕಮ್ಯುನಿಸ್ಟ್ ಪಕ್ಷದ ನಿಯೋಗ ಬಿಜೆಪಿಯ ಕೇಂದ್ರ ಕಚೇರಿಗೆ ಭೇಟಿ ನೀಡಿತ್ತು. ನಂತರ ರಾಜನಾಥ್ ಸಿಂಗ್ ಅವರು ‘”ಬಿಜೆಪಿ ಯಾವಾಗಲೂ ಚೀನಾದೊಂದಿಗೆ ಸಕಾರಾತ್ಮಕ ಸಂಬಂಧವನ್ನು ಬೆಳೆಸಲು ಒಲವು ಹೊಂದಿದೆ” ಎಂದಿದ್ದರು ಎಂದು ತಿಳಿಸಿದ್ದಾರೆ.

ಜನವರಿ 2009ರಲ್ಲಿ, ಬಿಜೆಪಿ-ಆರ್‌ಎಸ್‌ಎಸ್ ತಂಡವು ಬೀಜಿಂಗ್ ಮತ್ತು ಶಾಂಘೈಗೆ ಐದು ದಿನಗಳ ಪ್ರವಾಸ ಕೈಗೊಂಡು ಚೀನಾದ ಕಮ್ಯುನಿಸ್ಟ್‌ ಪಕ್ಷದ ಪಾಲಿಟ್‌ಬ್ಯೂರೊ ಸದಸ್ಯರು ಸೇರಿದಂತೆ ಪ್ರಮುಖರನ್ನು ಭೇಟಿ ಮಾಡಿತ್ತು. ಜನವರಿ 2011ರಲ್ಲಿ, ಆಗಿನ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಚೀನಾಕ್ಕೆ ತೆರಳಿ ಕಮ್ಯುನಿಸ್ಟ್ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು. ನವೆಂಬರ್ 2014ರಲ್ಲಿ 13 ಸದಸ್ಯರ ಬಿಜೆಪಿ ತಂಡ ಕಮ್ಯುನಿಸ್ಟ್ ‘ಪಾರ್ಟಿ ಸ್ಕೂಲ್’ ನಿಂದ ಕಲಿಯಲು ಚೀನಾಕ್ಕೆ ಭೇಟಿ ನೀಡಿತ್ತು. ಆಗ ಬಿಜೆಪಿ ಸಂಸದರಾಗಿದ್ದ ಭಗತ್ ಸಿಂಗ್ ಕೊಶ್ಯಾರಿ ಅವರು ಚೀನಾದ ಪೀಪಲ್ಸ್ ಪೊಲಿಟಿಕಲ್ ಕನ್ಸಲ್ಟೇಟಿವ್ ಕಾನ್ಫರೆನ್ಸ್‌ನ ರಾಷ್ಟ್ರೀಯ ಸಮಿತಿಯ ಉಪಾಧ್ಯಕ್ಷರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಹೇಳಿದ್ದಾರೆ.

ಫೆಬ್ರವರಿ 2015ರಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಸಚಿವರು ಅಮಿತ್ ಶಾ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿದ್ದರು. ಅಕ್ಟೋಬರ್ 2015 ರಲ್ಲಿ ಬಿಜೆಪಿ ಉಪಾಧ್ಯಕ್ಷ ವಿನಯ್ ಸಹಸ್ರಬುದ್ಧೆ ಚೀನಾದಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಮಂತ್ರಿ ಚೆನ್ ಫೆಂಗ್‌ಕ್ಸಿಯಾಂಗ್ ಅವರನ್ನು ಭೇಟಿಯಾಗಿದ್ದರು.

ಜೂನ್ 2017 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಫುಝೌನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಮೇ 2018 ರಲ್ಲಿ, ಬಿಜೆಪಿ ನಾಯಕ ಅನಿರ್ಬನ್ ಗಂಗೂಲಿ ಅವರು ಚೀನಾದ ಶೆನ್ಜೆನ್ನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಆಗಸ್ಟ್ 2018 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಬೀಜಿಂಗ್‌ನಲ್ಲಿ ಕಮ್ಯುನಿಸ್ಟ್ ಪಕ್ಷದ ಸಚಿವರನ್ನು ಭೇಟಿ ಮಾಡಿದ್ದರು. ಸೆಪ್ಟೆಂಬರ್ 2018 ರಲ್ಲಿ ಕಮ್ಯುನಿಸ್ಟ್ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಹುವಾಂಗ್ ಕುನ್ಮಿಂಗ್ ಅವರು ಬಿಜೆಪಿ ನಾಯಕ ಮತ್ತು ನಂತರ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಆಗಸ್ಟ್ 2019ರಲ್ಲಿ, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು. ಬಿಜೆಪಿ ಕೇಡರ್ ಅಧ್ಯಯನ ಗುಂಪು ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಸಚಿವ ಗುವೊ ಯೆಝೌ ಅವರೊಂದಿಗೆ ಮಾತುಕತೆ ನಡೆಸಿತ್ತು. ಸೆಪ್ಟೆಂಬರ್ 2019 ರಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಚೀನಾ ರಾಯಭಾರಿಯನ್ನು ಭೇಟಿ ಮಾಡಿದ್ದರು ಎಂದು ಪವನ್ ಖೇರಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...