Homeಮುಖಪುಟಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ. ಆ ಸಭೆಗಳಲ್ಲಿ ಏನಾಗಿದೆ ಎಂಬುವುದರ ಸಂಪೂರ್ಣ ದಾಖಲೆ ನೀಡುವಂತೆ ಕೇಳಿದೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, “ಬಿಜೆಪಿಯು ಚೀನಾದೊಂದಿಗೆ ನಿಕಟ ಸಂಬಂಧ ಹೊಂದಿದೆಯೇ? ಉಭಯ ಪಕ್ಷಗಳ ನಡುವಿನ ಸಭೆಗಳ ಫಲಿತಾಂಶ ಏನು?” ಎಂದು ಪ್ರಶ್ನಿಸಿದ್ದಾರೆ.

“ಜೂನ್ 2020ರಿಂದ ಪ್ರಧಾನಿ ನರೇಂದ್ರ ಮೋದಿಯವರು ಚೀನಾವು ಲಡಾಖ್‌ನಲ್ಲಿ ಮಾಡಿದ ಕಾರ್ಯಗಳಿಗೆ ಕ್ಲೀನ್ ಚಿಟ್ ನೀಡಿದ ನಂತರ, ಚೀನಾದ ವಿರುದ್ಧ ನಿಲ್ಲಲು ಬಿಜೆಪಿಗೆ ಏಕೆ ಇಷ್ಟವಿರಲಿಲ್ಲ? ಎಂದು ಭಾರತದ ಜನರು ಕೇಳುತ್ತಿದ್ದಾರೆ. ಬಿಜೆಪಿ ಮತ್ತು ಚೀನಾದ ಕಮ್ಯುನಿಸ್ಟ್ ಪಕ್ಷದ ನಡುವಿನ ನಿಕಟ ಸಂಪರ್ಕಗಳು ಇದಕ್ಕೆ ಕಾರಣವೇ? ಎಂದು ಕಾಂಗ್ರೆಸ್ ಪವನ್ ಖೇರಾ ಕೇಳಿದ್ದಾರೆ.

“2008ರಿಂದ ಈವರೆಗೆ ಕನಿಷ್ಠ 12 ಸಭೆಗಳು ನಡೆದಿವೆ. ಬಿಜೆಪಿಯ ರಾಜಕಾರಣಿಗಳು ಚೀನಾದ ಕಮ್ಯುನಿಸ್ಟ್ ಪಕ್ಷದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಅದು ಕೂಡಾ ಬಹುತೇಕ ಸಭೆ, ಭೇಟಿ ಚೀನಾದಲ್ಲಿಯೇ ನಡೆದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಕೇಳಿರುವ ಪವನ್ ಖೇರಾ ‘ಪದೇ ಪದೇ ಸಭೆ’ ನಡೆಸುವ ಹಿಂದಿರುವ ಕಾರಣ ತಿಳಿಸುವಂತೆ ಹೇಳಿದ್ದಾರೆ. ಹಾಗೆಯೇ 2017ರಲ್ಲಿ ಡೋಕ್ಲಾಮ್ ಘರ್ಷಣೆಯ ನಂತರ ಈ ಭೇಟಿಗಳ ಹಿಂದಿರುವ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಭೆಗಳ ವಿವರಗಳನ್ನು ನೀಡುತ್ತಾ ಖೇರಾ ಅವರು, ಅಕ್ಟೋಬರ್ 2008ರಲ್ಲಿ 15 ಸದಸ್ಯರ ಚೀನಾದ ಕಮ್ಯುನಿಸ್ಟ್ ಪಕ್ಷದ ನಿಯೋಗ ಬಿಜೆಪಿಯ ಕೇಂದ್ರ ಕಚೇರಿಗೆ ಭೇಟಿ ನೀಡಿತ್ತು. ನಂತರ ರಾಜನಾಥ್ ಸಿಂಗ್ ಅವರು ‘”ಬಿಜೆಪಿ ಯಾವಾಗಲೂ ಚೀನಾದೊಂದಿಗೆ ಸಕಾರಾತ್ಮಕ ಸಂಬಂಧವನ್ನು ಬೆಳೆಸಲು ಒಲವು ಹೊಂದಿದೆ” ಎಂದಿದ್ದರು ಎಂದು ತಿಳಿಸಿದ್ದಾರೆ.

ಜನವರಿ 2009ರಲ್ಲಿ, ಬಿಜೆಪಿ-ಆರ್‌ಎಸ್‌ಎಸ್ ತಂಡವು ಬೀಜಿಂಗ್ ಮತ್ತು ಶಾಂಘೈಗೆ ಐದು ದಿನಗಳ ಪ್ರವಾಸ ಕೈಗೊಂಡು ಚೀನಾದ ಕಮ್ಯುನಿಸ್ಟ್‌ ಪಕ್ಷದ ಪಾಲಿಟ್‌ಬ್ಯೂರೊ ಸದಸ್ಯರು ಸೇರಿದಂತೆ ಪ್ರಮುಖರನ್ನು ಭೇಟಿ ಮಾಡಿತ್ತು. ಜನವರಿ 2011ರಲ್ಲಿ, ಆಗಿನ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಚೀನಾಕ್ಕೆ ತೆರಳಿ ಕಮ್ಯುನಿಸ್ಟ್ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು. ನವೆಂಬರ್ 2014ರಲ್ಲಿ 13 ಸದಸ್ಯರ ಬಿಜೆಪಿ ತಂಡ ಕಮ್ಯುನಿಸ್ಟ್ ‘ಪಾರ್ಟಿ ಸ್ಕೂಲ್’ ನಿಂದ ಕಲಿಯಲು ಚೀನಾಕ್ಕೆ ಭೇಟಿ ನೀಡಿತ್ತು. ಆಗ ಬಿಜೆಪಿ ಸಂಸದರಾಗಿದ್ದ ಭಗತ್ ಸಿಂಗ್ ಕೊಶ್ಯಾರಿ ಅವರು ಚೀನಾದ ಪೀಪಲ್ಸ್ ಪೊಲಿಟಿಕಲ್ ಕನ್ಸಲ್ಟೇಟಿವ್ ಕಾನ್ಫರೆನ್ಸ್‌ನ ರಾಷ್ಟ್ರೀಯ ಸಮಿತಿಯ ಉಪಾಧ್ಯಕ್ಷರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಹೇಳಿದ್ದಾರೆ.

ಫೆಬ್ರವರಿ 2015ರಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಸಚಿವರು ಅಮಿತ್ ಶಾ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿದ್ದರು. ಅಕ್ಟೋಬರ್ 2015 ರಲ್ಲಿ ಬಿಜೆಪಿ ಉಪಾಧ್ಯಕ್ಷ ವಿನಯ್ ಸಹಸ್ರಬುದ್ಧೆ ಚೀನಾದಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಮಂತ್ರಿ ಚೆನ್ ಫೆಂಗ್‌ಕ್ಸಿಯಾಂಗ್ ಅವರನ್ನು ಭೇಟಿಯಾಗಿದ್ದರು.

ಜೂನ್ 2017 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಫುಝೌನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಮೇ 2018 ರಲ್ಲಿ, ಬಿಜೆಪಿ ನಾಯಕ ಅನಿರ್ಬನ್ ಗಂಗೂಲಿ ಅವರು ಚೀನಾದ ಶೆನ್ಜೆನ್ನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಆಗಸ್ಟ್ 2018 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಬೀಜಿಂಗ್‌ನಲ್ಲಿ ಕಮ್ಯುನಿಸ್ಟ್ ಪಕ್ಷದ ಸಚಿವರನ್ನು ಭೇಟಿ ಮಾಡಿದ್ದರು. ಸೆಪ್ಟೆಂಬರ್ 2018 ರಲ್ಲಿ ಕಮ್ಯುನಿಸ್ಟ್ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಹುವಾಂಗ್ ಕುನ್ಮಿಂಗ್ ಅವರು ಬಿಜೆಪಿ ನಾಯಕ ಮತ್ತು ನಂತರ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಆಗಸ್ಟ್ 2019ರಲ್ಲಿ, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು. ಬಿಜೆಪಿ ಕೇಡರ್ ಅಧ್ಯಯನ ಗುಂಪು ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಸಚಿವ ಗುವೊ ಯೆಝೌ ಅವರೊಂದಿಗೆ ಮಾತುಕತೆ ನಡೆಸಿತ್ತು. ಸೆಪ್ಟೆಂಬರ್ 2019 ರಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಚೀನಾ ರಾಯಭಾರಿಯನ್ನು ಭೇಟಿ ಮಾಡಿದ್ದರು ಎಂದು ಪವನ್ ಖೇರಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...