Homeಮುಖಪುಟಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

ಚೀನಾದ ಕಮ್ಯುನಿಸ್ಟ್ ಪಕ್ಷದೊಂದಿಗೆ ಬಿಜೆಪಿಯ12 ಸಭೆ: ದಾಖಲೆ ಕೇಳಿದ ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಚೀನಾದೊಂದಿಗೆ ನಿಕಟ ಸಂಪರ್ಕ ಹೊಂದಿದೆ ಎಂದು ಕಾಂಗ್ರೆಸ್ ಸೋಮವಾರ ಆರೋಪಿಸಿದ್ದು, 2008 ರಿಂದ ಬಿಜೆಪಿ ನಾಯಕರು ಮತ್ತು ಚೀನಾದ ಅಧಿಕಾರಿಗಳ ನಡುವೆ 12 ಉನ್ನತ ಮಟ್ಟದ ಸಭೆಗಳು ನಡೆದಿವೆ ಎಂದು ಆರೋಪಿಸಿದೆ. ಆ ಸಭೆಗಳಲ್ಲಿ ಏನಾಗಿದೆ ಎಂಬುವುದರ ಸಂಪೂರ್ಣ ದಾಖಲೆ ನೀಡುವಂತೆ ಕೇಳಿದೆ.

ಕಾಂಗ್ರೆಸ್ ನಾಯಕ ಪವನ್ ಖೇರಾ ಅವರು ಹೇಳಿಕೆ ಬಿಡುಗಡೆ ಮಾಡಿದ್ದು, “ಬಿಜೆಪಿಯು ಚೀನಾದೊಂದಿಗೆ ನಿಕಟ ಸಂಬಂಧ ಹೊಂದಿದೆಯೇ? ಉಭಯ ಪಕ್ಷಗಳ ನಡುವಿನ ಸಭೆಗಳ ಫಲಿತಾಂಶ ಏನು?” ಎಂದು ಪ್ರಶ್ನಿಸಿದ್ದಾರೆ.

“ಜೂನ್ 2020ರಿಂದ ಪ್ರಧಾನಿ ನರೇಂದ್ರ ಮೋದಿಯವರು ಚೀನಾವು ಲಡಾಖ್‌ನಲ್ಲಿ ಮಾಡಿದ ಕಾರ್ಯಗಳಿಗೆ ಕ್ಲೀನ್ ಚಿಟ್ ನೀಡಿದ ನಂತರ, ಚೀನಾದ ವಿರುದ್ಧ ನಿಲ್ಲಲು ಬಿಜೆಪಿಗೆ ಏಕೆ ಇಷ್ಟವಿರಲಿಲ್ಲ? ಎಂದು ಭಾರತದ ಜನರು ಕೇಳುತ್ತಿದ್ದಾರೆ. ಬಿಜೆಪಿ ಮತ್ತು ಚೀನಾದ ಕಮ್ಯುನಿಸ್ಟ್ ಪಕ್ಷದ ನಡುವಿನ ನಿಕಟ ಸಂಪರ್ಕಗಳು ಇದಕ್ಕೆ ಕಾರಣವೇ? ಎಂದು ಕಾಂಗ್ರೆಸ್ ಪವನ್ ಖೇರಾ ಕೇಳಿದ್ದಾರೆ.

“2008ರಿಂದ ಈವರೆಗೆ ಕನಿಷ್ಠ 12 ಸಭೆಗಳು ನಡೆದಿವೆ. ಬಿಜೆಪಿಯ ರಾಜಕಾರಣಿಗಳು ಚೀನಾದ ಕಮ್ಯುನಿಸ್ಟ್ ಪಕ್ಷದ ಅಧಿಕಾರಿಗಳನ್ನು ಭೇಟಿ ಮಾಡಿದ್ದಾರೆ. ಅದು ಕೂಡಾ ಬಹುತೇಕ ಸಭೆ, ಭೇಟಿ ಚೀನಾದಲ್ಲಿಯೇ ನಡೆದಿದೆ” ಎಂದು ಹೇಳುವ ಮೂಲಕ ಕಾಂಗ್ರೆಸ್ ನಾಯಕ ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಭೆಯಲ್ಲಿ ನಡೆದ ಚರ್ಚೆಗಳ ಬಗ್ಗೆ ಮಾಹಿತಿಯನ್ನು ನೀಡುವಂತೆ ಕೇಳಿರುವ ಪವನ್ ಖೇರಾ ‘ಪದೇ ಪದೇ ಸಭೆ’ ನಡೆಸುವ ಹಿಂದಿರುವ ಕಾರಣ ತಿಳಿಸುವಂತೆ ಹೇಳಿದ್ದಾರೆ. ಹಾಗೆಯೇ 2017ರಲ್ಲಿ ಡೋಕ್ಲಾಮ್ ಘರ್ಷಣೆಯ ನಂತರ ಈ ಭೇಟಿಗಳ ಹಿಂದಿರುವ ಕಾರಣವೇನು? ಎಂದು ಪ್ರಶ್ನಿಸಿದ್ದಾರೆ.

ಸಭೆಗಳ ವಿವರಗಳನ್ನು ನೀಡುತ್ತಾ ಖೇರಾ ಅವರು, ಅಕ್ಟೋಬರ್ 2008ರಲ್ಲಿ 15 ಸದಸ್ಯರ ಚೀನಾದ ಕಮ್ಯುನಿಸ್ಟ್ ಪಕ್ಷದ ನಿಯೋಗ ಬಿಜೆಪಿಯ ಕೇಂದ್ರ ಕಚೇರಿಗೆ ಭೇಟಿ ನೀಡಿತ್ತು. ನಂತರ ರಾಜನಾಥ್ ಸಿಂಗ್ ಅವರು ‘”ಬಿಜೆಪಿ ಯಾವಾಗಲೂ ಚೀನಾದೊಂದಿಗೆ ಸಕಾರಾತ್ಮಕ ಸಂಬಂಧವನ್ನು ಬೆಳೆಸಲು ಒಲವು ಹೊಂದಿದೆ” ಎಂದಿದ್ದರು ಎಂದು ತಿಳಿಸಿದ್ದಾರೆ.

ಜನವರಿ 2009ರಲ್ಲಿ, ಬಿಜೆಪಿ-ಆರ್‌ಎಸ್‌ಎಸ್ ತಂಡವು ಬೀಜಿಂಗ್ ಮತ್ತು ಶಾಂಘೈಗೆ ಐದು ದಿನಗಳ ಪ್ರವಾಸ ಕೈಗೊಂಡು ಚೀನಾದ ಕಮ್ಯುನಿಸ್ಟ್‌ ಪಕ್ಷದ ಪಾಲಿಟ್‌ಬ್ಯೂರೊ ಸದಸ್ಯರು ಸೇರಿದಂತೆ ಪ್ರಮುಖರನ್ನು ಭೇಟಿ ಮಾಡಿತ್ತು. ಜನವರಿ 2011ರಲ್ಲಿ, ಆಗಿನ ಬಿಜೆಪಿ ಅಧ್ಯಕ್ಷ ನಿತಿನ್ ಗಡ್ಕರಿ ಅವರು ಚೀನಾಕ್ಕೆ ತೆರಳಿ ಕಮ್ಯುನಿಸ್ಟ್ ಪಕ್ಷದ ನಾಯಕರನ್ನು ಭೇಟಿಯಾಗಿದ್ದರು. ನವೆಂಬರ್ 2014ರಲ್ಲಿ 13 ಸದಸ್ಯರ ಬಿಜೆಪಿ ತಂಡ ಕಮ್ಯುನಿಸ್ಟ್ ‘ಪಾರ್ಟಿ ಸ್ಕೂಲ್’ ನಿಂದ ಕಲಿಯಲು ಚೀನಾಕ್ಕೆ ಭೇಟಿ ನೀಡಿತ್ತು. ಆಗ ಬಿಜೆಪಿ ಸಂಸದರಾಗಿದ್ದ ಭಗತ್ ಸಿಂಗ್ ಕೊಶ್ಯಾರಿ ಅವರು ಚೀನಾದ ಪೀಪಲ್ಸ್ ಪೊಲಿಟಿಕಲ್ ಕನ್ಸಲ್ಟೇಟಿವ್ ಕಾನ್ಫರೆನ್ಸ್‌ನ ರಾಷ್ಟ್ರೀಯ ಸಮಿತಿಯ ಉಪಾಧ್ಯಕ್ಷರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಹೇಳಿದ್ದಾರೆ.

ಫೆಬ್ರವರಿ 2015ರಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಸಚಿವರು ಅಮಿತ್ ಶಾ ಅವರನ್ನು ಬಿಜೆಪಿ ಪ್ರಧಾನ ಕಚೇರಿಯಲ್ಲಿ ಭೇಟಿಯಾಗಿದ್ದರು. ಅಕ್ಟೋಬರ್ 2015 ರಲ್ಲಿ ಬಿಜೆಪಿ ಉಪಾಧ್ಯಕ್ಷ ವಿನಯ್ ಸಹಸ್ರಬುದ್ಧೆ ಚೀನಾದಲ್ಲಿ ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಮಂತ್ರಿ ಚೆನ್ ಫೆಂಗ್‌ಕ್ಸಿಯಾಂಗ್ ಅವರನ್ನು ಭೇಟಿಯಾಗಿದ್ದರು.

ಜೂನ್ 2017 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಫುಝೌನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಮೇ 2018 ರಲ್ಲಿ, ಬಿಜೆಪಿ ನಾಯಕ ಅನಿರ್ಬನ್ ಗಂಗೂಲಿ ಅವರು ಚೀನಾದ ಶೆನ್ಜೆನ್ನಲ್ಲಿ ಕಮ್ಯುನಿಸ್ಟ್ ಪಕ್ಷದ ಗುವೊ ಯೆಝೌ ಅವರನ್ನು ಭೇಟಿ ಮಾಡಿದ್ದರು. ಆಗಸ್ಟ್ 2018 ರಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಅವರು ಚೀನಾದ ಬೀಜಿಂಗ್‌ನಲ್ಲಿ ಕಮ್ಯುನಿಸ್ಟ್ ಪಕ್ಷದ ಸಚಿವರನ್ನು ಭೇಟಿ ಮಾಡಿದ್ದರು. ಸೆಪ್ಟೆಂಬರ್ 2018 ರಲ್ಲಿ ಕಮ್ಯುನಿಸ್ಟ್ ಪಕ್ಷದ ಪಾಲಿಟ್‌ಬ್ಯೂರೋ ಸದಸ್ಯ ಹುವಾಂಗ್ ಕುನ್ಮಿಂಗ್ ಅವರು ಬಿಜೆಪಿ ನಾಯಕ ಮತ್ತು ನಂತರ ಜಾರ್ಖಂಡ್ ಮುಖ್ಯಮಂತ್ರಿ ರಘುಬರ್ ದಾಸ್ ಅವರನ್ನು ಭೇಟಿಯಾಗಿದ್ದರು ಎಂದು ಪವನ್ ಖೇರಾ ಮಾಹಿತಿ ಬಿಚ್ಚಿಟ್ಟಿದ್ದಾರೆ.

ಆಗಸ್ಟ್ 2019ರಲ್ಲಿ, ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ನೇತೃತ್ವದ ಬಿಜೆಪಿ ನಿಯೋಗವು ಚೀನಾಕ್ಕೆ ಭೇಟಿ ನೀಡಿತ್ತು. ಬಿಜೆಪಿ ಕೇಡರ್ ಅಧ್ಯಯನ ಗುಂಪು ಕಮ್ಯುನಿಸ್ಟ್ ಪಕ್ಷದ ಕೇಂದ್ರ ಸಮಿತಿಯ ಅಂತಾರಾಷ್ಟ್ರೀಯ ವಿಭಾಗದ ಉಪ ಸಚಿವ ಗುವೊ ಯೆಝೌ ಅವರೊಂದಿಗೆ ಮಾತುಕತೆ ನಡೆಸಿತ್ತು. ಸೆಪ್ಟೆಂಬರ್ 2019 ರಲ್ಲಿ ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ ಅವರು ಚೀನಾ ರಾಯಭಾರಿಯನ್ನು ಭೇಟಿ ಮಾಡಿದ್ದರು ಎಂದು ಪವನ್ ಖೇರಾ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ : ‘ಬಿಜೆಪಿ ಟಿಕೆಟ್ ಆಮಿಷ ನೀಡಿ ರಾಜೀನಾಮೆ ಕೊಡಿಸಿ ವಂಚಿಸಿದ್ರು’: ಮಣಿಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಎಸ್‌ಐಟಿ ತಂಡದ ನೇತೃತ್ವ ವಹಿಸಿದ್ದ ಅಧಿಕಾರಿ ಸ್ಪೋಟಕ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...