Homeಮುಖಪುಟ8 ರಾಜ್ಯಗಳಿಗೆ ಚುನಾವಣಾ ಸಮಿತಿಗಳನ್ನು ನೇಮಿಸಿದ ಕಾಂಗ್ರೆಸ್‌

8 ರಾಜ್ಯಗಳಿಗೆ ಚುನಾವಣಾ ಸಮಿತಿಗಳನ್ನು ನೇಮಿಸಿದ ಕಾಂಗ್ರೆಸ್‌

- Advertisement -
- Advertisement -

ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಕಾಂಗ್ರೆಸ್‌ ಪಕ್ಷವು, ರಾಜಸ್ಥಾನ, ಮಧ್ಯಪ್ರದೇಶ, ಕೇರಳ, ಛತ್ತೀಸ್‌ಗಢ ಮತ್ತು ಹಿಮಾಚಲ ಪ್ರದೇಶ ಸೇರಿದಂತೆ 8 ರಾಜ್ಯಗಳಿಗೆ ಕಾಂಗ್ರೆಸ್ ಚುನಾವಣಾ ಸಮಿತಿಗಳನ್ನು ರಚಿಸಿದೆ.

ರಾಜಸ್ಥಾನ, ಕೇರಳ, ತೆಲಂಗಾಣ, ಛತ್ತೀಸ್‌ಗಢ, ಹಿಮಾಚಲ ಪ್ರದೇಶ, ನಾಗಾಲ್ಯಾಂಡ್, ಮಣಿಪುರ ಮತ್ತು ತ್ರಿಪುರಾ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್‌ ಚುನಾವಣಾ ಸಮಿತಿಗಳನ್ನು ರಚಿಸಿದ್ದು, ಇದಕ್ಕೆ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿದೆ.

ರಾಜಸ್ಥಾನ ಪ್ರದೇಶ ಕಾಂಗ್ರೆಸ್‌ ಸಮಿತಿ ಮುಖ್ಯಸ್ಥರಾದ ಗೋವಿಂದ್ ಸಿಂಗ್ ದೋತಸ್ರಾ ಅವರನ್ನು ರಾಜಸ್ಥಾನ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌, ಮಹೇಂದ್ರಜೀತ್ ಸಿಂಗ್ ಮಾಳವೀಯ, ಮೋಹನ್ ಪ್ರಕಾಶ್, ಸಿ ಪಿ ಜೋಶಿ, ಹರೀಶ್ ಚೌಧರಿ, ರಾಮಲಾಲ್ ಜಾಟ್, ಪ್ರಮೋದ್ ಜೈನ್ ಭಯ, ಪ್ರತಾಪ್ ಸಿಂಗ್ ಖಚರಿಯಾವಾಸ್, ಮಮತಾ ಭೂಪೇಶ್, ಭಜನ್ ಲಾಲ್ ಜಾತವ್, ಮುರಾರಿ ಲಾಲ್ ಮೀನಾ, ಅಶೋಕ್ ಚಂದನಾ, ನೀರಜ್ ಡಾಂಗಿ, ಜುಬೇರ್ ಖಾನ್, ಧೀರಜ್ ಶರ್ಜಾರ್, ರೋಹಿತ್ ಬೋಹ್ರಾ, ಇಂದ್ರ ಮೀನಾ, ಡುಂಗರ್ ರಾಮ್ ಗೆದರ್, ಶಿಮ್ಲಾ ದೇವಿ ನಾಯಕ್ ಮತ್ತು ಲಲಿತ್ ಯಾದವ್ ಅವರು ಸದಸ್ಯರಾಗಿದ್ದಾರೆ. ಇದಲ್ಲದೆ ಯುವ ಕಾಂಗ್ರೆಸ್ ಅಧ್ಯಕ್ಷರು, ಎನ್‌ಎಸ್‌ಯುಐ ಅಧ್ಯಕ್ಷರು, ಸೇವಾದಳದ ಮುಖ್ಯ ಸಂಘಟಕರು ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಸಮಿತಿಯ ಸದಸ್ಯರಾಗಿರಲಿದ್ದಾರೆ.

ಕೆ ಸುಧಾಕರ್ ಅವರನ್ನು ಕೇರಳ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಕೇರಳ ಪ್ರದೇಶ ಕಾಂಗ್ರೆಸ್‌ ಚುನಾವಣಾ ಸಮಿತಿಯ ಸಮಿತಿಯಲ್ಲಿ ಎ ಕೆ ಆಂಟನಿ, ಕೆ ಸಿ ವೇಣುಗೋಪಾಲ್, ರಮೇಶ್ ಚೆನ್ನಿತ್ತಲ, ವಯಲಾರ್ ರವಿ, ವಿ ಡಿ ಸತೀಶನ್, ಕೆ ಸುರೇಶ್, ಶಶಿ ತರೂರ್, ಮತ್ತು ಮುಲ್ಲಪಲ್ಲಿ ರಾಮಚಂದ್ರನ್ ಸೇರಿದಂತೆ ಹಿರಿಯ ನಾಯಕರು ಸದಸ್ಯತ್ವವನ್ನು ಪಡೆದುಕೊಂಡಿದ್ದಾರೆ.

ತೆಲಂಗಾಣದಲ್ಲಿ ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಚುನಾವಣಾ ಸಮಿತಿಯ ಅಧ್ಯಕ್ಷರಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಉಪಮುಖ್ಯಮಂತ್ರಿ ಭಟ್ಟಿವಿಕ್ರಮಾರ್ಕ ಮಲ್ಲು, ಉತ್ತಮ್ ಕುಮಾರ್ ರೆಡ್ಡಿ ಮತ್ತು ವಿ ಹನುಮಂತ ರಾವ್ ಅವರು ಕೂಡ ಸದಸ್ಯರಾಗಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಪ್ರದೇಶ ಕಾಂಗ್ರೆಸ್‌ ಸಮಿತಿಯ ಅಧ್ಯಕ್ಷೆ ಪ್ರತಿಭಾ ಸಿಂಗ್ ಅವರನ್ನು ಚುನಾವಣಾ ಸಮಿತಿ ಮುಖ್ಯಸ್ಥರಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖು, ಉಪ ಮುಖ್ಯಮಂತ್ರಿ ಮುಖೇಶ್ ಅಗ್ನಿಹೋತ್ರಿ, ಆನಂದ್ ಶರ್ಮಾ, ವಿಪ್ಲೋವ್ ಠಾಕೂರ್, ಆಶಾ ಕುಮಾರಿ, ರಾಮ್ ಲಾಲ್ ಠಾಕೂರ್, ಠಾಕೂರ್ ಕೌಲ್ ಮುಂತಾದ ಹಿರಿಯ ನಾಯಕರಿದ್ದಾರೆ.

ಜಿತು ಪಟ್ವಾರಿ ಅವರನ್ನು ಮಧ್ಯಪ್ರದೇಶದ ಪ್ರದೇಶ ಚುನಾವಣಾ ಸಮಿತಿಯ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ದಿಗ್ವಿಜಯ ಸಿಂಗ್, ವಿವೇಕ್ ಟಂಖಾ, ಸುರೇಶ್ ಪಚೌರಿ, ಕಾಂತಿಲಾಲ್ ಭೂರಿಯಾ ಮತ್ತು ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಸೇರಿದ್ದಾರೆ. ಇದಲ್ಲದೆ ಮಧ್ಯಪ್ರದೇಶಕ್ಕೆ ರಾಜಕೀಯ ವ್ಯವಹಾರಗಳ ಸಮಿತಿಯನ್ನು ಕೂಡ ನೇಮಕ ಮಾಡಲಾಗಿದೆ.

ಛತ್ತೀಸ್‌ಗಢದ ಪ್ರದೇಶ ಕಾಂಗ್ರೆಸ್‌ ಸಮಿತಿಯ ಮುಖ್ಯಸ್ಥ ದೀಪಕ್ ಬೈಜ್ ಅವರನ್ನು ಛತ್ತೀಸ್‌ಗಢದ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಮತ್ತು ಮಾಜಿ ಉಪಮುಖ್ಯಮಂತ್ರಿ ಟಿಎಸ್ ಸಿಂಗ್ ದೇವ್ ಅವರು ಸದಸ್ಯತ್ವವನ್ನು ಹೊಂದಿದ್ದಾರೆ.

ಮಣಿಪುರದಲ್ಲಿ ಕೆ ಮೇಘಚಂದ್ರ ಸಿಂಗ್ ಅವರನ್ನು ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಸಮಿತಿಯಲ್ಲಿ ಮಾಜಿ ಮುಖ್ಯಮಂತ್ರಿ ಇಬೋಬಿ ಸಿಂಗ್ ಮತ್ತು ಮಾಜಿ ಉಪಮುಖ್ಯಮಂತ್ರಿ ಗೈಖಾಂಗಮ್  ಅವರು ಸದಸ್ಯರಾಗಿರಲಿದ್ದಾರೆ.

ಎಸ್ ಸುಪೊಂಗ್ಮೆರೆನ್ ಜಮೀರ್ ಅವರನ್ನು ನಾಗಾಲ್ಯಾಂಡ್ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ಮತ್ತು ಆಶಿಶ್ ಕುಮಾರ್ ಸಾಹಾ ಅವರನ್ನು ತ್ರಿಪುರ ಪ್ರದೇಶ ಚುನಾವಣಾ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ.

ಇದನ್ನು ಓದಿ: ‘ಜೈಲಿನಲ್ಲಿ ಸತ್ತರೆ ಒಳ್ಳೆಯದು’: ಕೋರ್ಟ್‌ನಲ್ಲಿ ಕಣ್ಣೀರಿಟ್ಟ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್‌ ಗೋಯಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...